Homeಕರ್ನಾಟಕಮೆಟ್ರೋ ದರ ಅಸಹಜ ಏರಿಕೆ; ಸರಿಪಡಿಸುವಂತೆ ಸಿಎಂ ಸೂಚನೆ

ಮೆಟ್ರೋ ದರ ಅಸಹಜ ಏರಿಕೆ; ಸರಿಪಡಿಸುವಂತೆ ಸಿಎಂ ಸೂಚನೆ

- Advertisement -
- Advertisement -

‘ನಮ್ಮ ಮೆಟ್ರೋ’ ಪ್ರಯಾಣ ದರ ಅಸಹಜ ಏರಿಕೆಯಾದ ಕಡೆಗಳಲ್ಲಿ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿ, ಪ್ರಯಾಣಿಕರ ಹಿತ ಕಾಪಾಡಬೇಕು ಎಂದು ಸೂಚಿಸಿದ್ದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ. ಮೆಟ್ರೋ ದರ ಅಸಹಜ ಏರಿಕೆ

ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಸಿದ್ದರಾಮಯ್ಯ ಅವರು, “ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್‌ ಬೆಂಗಳೂರು ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಜಾರಿಯಲ್ಲಿ ಕೆಲವು ಸ್ಟೇಜ್‌ಗಳಲ್ಲಿ ದರಗಳು ದ್ವಿಗುಣಗೊಂಡಿವೆ. ಇದು ವೈಪರೀತ್ಯಗಳಿಗೆ ಕಾರಣವಾಗಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಈ ಅಸಹಜ ಏರಿಕೆ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿ, ಪ್ರಯಾಣಿಕರ ಹಿತ ಕಾಪಾಡಬೇಕು ಎಂದು ಸೂಚಿಸಿದ್ದೇನೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ಬೆಂಗಳೂರು ಮೆಟ್ರೊ ರೈಲು ನಿಗಮ ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಏರಿಕೆ ಕೆಲವು ಕಡೆಗಳಲ್ಲಿ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಮೆಟ್ರೋ ರೈಲು ವ್ಯವಸ್ಥೆ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಬೇಕಾಗಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿರುವ ಕಾರಣ ಪ್ರಯಾಣ ದರ ಪರಿಷ್ಕರಣೆ ಅನಿವಾರ್ಯವಾಗಿತ್ತು ಎನ್ನುವುದು ನಿಜವಾದರೂ ಅಂತಿಮವಾಗಿ ಪ್ರಯಾಣಿಕರ ಹಿತರಕ್ಷಣೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯ ಎನ್ನುವುದನ್ನು ಬಿಎಂಆರ್‌ಸಿಎಲ್ ಗಮನಕ್ಕೆ ತಂದಿದ್ದೇನೆ” ಎಂದು ಅವರು ಹೇಳಿದ್ದಾರೆ.

ಪ್ರಯಾಣ ದರ ಏರಿಕೆ ಹೆಸರಲ್ಲಿ ಬೆಂಗಳೂರು ಮೆಟ್ರೋ (ನಮ್ಮ ಮೆಟ್ರೋ) ಅಕ್ಷರಶಃ ಹಗಲು ದರೋಡೆಗೆ ಇಳಿದಿದ್ದು, 47%ದಷ್ಟು ದರ ಹೆಚ್ಚಳ ಎಂದು ಬಿಎಂಆರ್‌ಸಿಎಲ್‌ ಹೇಳಿದ್ದರೂ ಹಲವು ಕಡೆಗಳಲ್ಲಿ ಹಿಂದಿನ ದರಕ್ಕಿಂತ ದುಪ್ಪಟ್ಟು ಅಂದರೆ 100%ದಷ್ಟು ಅಧಿಕ ಮೊತ್ತ ನೀಡಬೇಕಾಗಿ ಬಂದಿದೆ. ಮೆಟ್ರೋ ದರ ಅಸಹಜ ಏರಿಕೆ

ಪ್ರಯಾಣ ದರ ಏರಿಕೆ ಹೆಚ್ಚಳದೊಂದಿಗೆ ದೇಶದಲ್ಲಿಯೇ ಅತಿ ದುಬಾರಿ ಪ್ರಯಾಣ ದರವನ್ನು ಹೊಂದಿರುವ ಮೆಟ್ರೋ ಎಂಬ ಕುಖ್ಯಾತಿಗೆ ‘ನಮ್ಮ ಮೆಟ್ರೋ’ ಪಾತ್ರವಾಗಿದೆ. ಪ್ರಯಾಣಿಕರಿಂದ ಪ್ರಯಾಣ ದರವನ್ನು ಪಡೆಯುವ ಬದಲು ಬೃಹತ್ ಆದಾಯ ಸಂಗ್ರಹದ ಉದ್ದೇಶದಿಂದ ದರ ಹೆಚ್ಚಳ ಮಾಡಲಾಗಿದೆ ಎಂಬ ಆರೋಪಕ್ಕೆ ನಿಗಮ ಗುರಿಯಾಗಿದೆ.‌

ಮೆಟ್ರೋ ದರ ಏರಿಕೆ ನಮ್ಮ ತೀರ್ಮಾನವಲ್ಲ

ಮೆಟ್ರೋ ಟಿಕೆಟ್ ದರ ಏರಿಕೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡಿದೆ ಎನ್ನುವ ಬಿಜೆಪಿಯವರ ಆರೋಪದ ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್‌ “ಬಿಜೆಪಿಯವರಿಗೆ ರಾಜಕೀಯ ಹೊರತಾಗಿ ಬೇರೇನೂ ಗೊತ್ತಿಲ್ಲ. ಸುಳ್ಳು ಹೇಳುವುದು ಅವರ ಕಾಯಿಲೆ. ಮೆಟ್ರೋ ಯೋಜನೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಶೇ 50:50 ಅನುಪಾತದಲ್ಲಿ ಮಾಡಲಾಗಿರುತ್ತದೆ.

ದರ ಏರಿಕೆಗೆ ಒಂದು ಸಮಿತಿ ಮಾಡಲಾಗಿದೆ. ಕೇಂದ್ರ ಸರ್ಕಾರ ಹೈಕೋರ್ಟ್ ನ್ಯಾಯಧೀಶರ ನೇತೃತ್ವದಲ್ಲಿ ಸಮಿತಿ ಮಾಡಿರುತ್ತಾರೆ. ಆ ಸಮಿತಿಯ ತೀರ್ಮಾನ ನಮ್ಮ ಗಮನಕ್ಕೂ ಬರುವುದಿಲ್ಲ, ದರ ಏರಿಕೆ ತೀರ್ಮಾನ ಅವರು ಮಾಡಿದ್ದಾರೆ. ಇದರಲ್ಲಿ ರಾಜ್ಯ ಸರ್ಕಾರದ ಪಾತ್ರವಿಲ್ಲ” ಎಂದು ಹೇಳಿದ್ದರು.

ಇದನ್ನೂಓದಿ:  ನನ್ನ ಮಗ ರಾಮ್ ಚರಣ್‌ಗೆ ಮತ್ತೊಂದು ಹೆಣ್ಣು ಮಗು ಜನಿಸುವ ಬಗ್ಗೆ ಭಯವಿದೆ – ಸ್ತ್ರೀ ವಿರೋಧಿ ಹೇಳಿಕೆ ನೀಡಿದ ನಟ ಚಿರಂಜೀವಿ

ನನ್ನ ಮಗ ರಾಮ್ ಚರಣ್‌ಗೆ ಮತ್ತೊಂದು ಹೆಣ್ಣು ಮಗು ಜನಿಸುವ ಬಗ್ಗೆ ಭಯವಿದೆ – ಸ್ತ್ರೀ ವಿರೋಧಿ ಹೇಳಿಕೆ ನೀಡಿದ ನಟ ಚಿರಂಜೀವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...