Homeಮುಖಪುಟಮಹಾರಾಷ್ಟ್ರ ಸರ್ಕಾರ ರಚನೆ ಬಿಕ್ಕಟ್ಟು: ಮೋದಿ ಭೇಟಿಯಾದ ಶರದ್ ಪವಾರ್‌

ಮಹಾರಾಷ್ಟ್ರ ಸರ್ಕಾರ ರಚನೆ ಬಿಕ್ಕಟ್ಟು: ಮೋದಿ ಭೇಟಿಯಾದ ಶರದ್ ಪವಾರ್‌

- Advertisement -
- Advertisement -

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿದ್ದು, ಇನ್ನೂ ಯಾವುದೇ ಪಕ್ಷಗಳು ಸರ್ಕಾರ ರಚಿಸುವಲ್ಲಿ ಯಶಸ್ವಿಯಾಗಿಲ್ಲ. ಈ ಮಧ್ಯೆ ಇಂದು ಪ್ರಧಾನಿ ಮೋದಿ ಅವರನ್ನು ಎನ್‌ಸಿಪಿ ನಾಯಕ ಶರದ್ ಪವಾರ್ ಭೇಟಿಯಾಗಲಿದ್ದಾರೆ. ಮಹಾರಾಷ್ಟ್ರ ರೈತರು ಬಿಕ್ಕಟ್ಟು ಎದುರಿಸುತ್ತಿದ್ದಾರೆ. ಹೀಗಾಗಿ ಶರದ್‌ ಪವಾರ್‌ ಮೋದಿ ಅವರೊಂದಿಗೆ ಮಧ್ಯಾಹ್ನ ಚರ್ಚೆ ನಡೆಸಲಿದ್ದಾರೆ.

ಮಹಾರಾಷ್ಟ್ರ ರೈತರ ಸಂಕಷ್ಟ, ಹಾನಿ, ನೆರೆ, ಮಳೆಯಿಂದ ಬೆಳೆ ನಷ್ಟ ಆಗಿದೆ. ಇದೆಲ್ಲ ಸಂಕಷ್ಟಗಳಿಂದ  ಅನ್ನದಾತರು ಹೈರಾಣಾಗಿದ್ದಾರೆ. ಉಭಯ ನಾಯಕರು ಮಧ್ಯಾಹ್ನ ಸಂಸತ್ತಿನಲ್ಲಿ ಸಭೆ ನಡೆಸಲಿದ್ದಾರೆ. ರಾಜ್ಯದಲ್ಲಿ ಯಾವುದೇ ಪಕ್ಷ ಅಧಕಾರಕ್ಕೆ ಬರಬೇಕಾದ್ರೂ ಎನ್‌ಸಿಪಿ ಬೆಂಬಲ ಬೇಕೇ ಬೇಕು. ಈಗ ಎನ್‌ಸಿಪಿಗೆ ಹೆಚ್ಚು ಬೇಡಿಕೆಯಿದೆ. ಹೀಗಾಗಿ ಸಭೆ ಹೆಚ್ಚು ಮಹತ್ವ ಪಡೆದುಕೊಂಡಿದೆ.

ಸರ್ಕಾರ ರಚನೆಯಲ್ಲಿ ಹೊಂದಾಣಿಕೆಯಾಗದೇ ತನ್ನ ದೀರ್ಘಕಾಲದ ಸ್ನೇಹಿತ ಬಿಜೆಪಿ ಜತೆ ಶಿವಸೇನೆ ಮೈತ್ರಿ ಕೊನೆಗೊಳಿಸಿತು. ಇನ್ನು ಶಿವಸೇನೆ ಜತೆ ಸರ್ಕಾರ ರಚಿಸಲು ಈಗಾಗಲೇ ರೂಪುರೇಷೆ ತಯಾರಿಸಿ, ಪಾಲುದಾರಿಕೆ ಮಾಡಿಕೊಳ್ಳಲು ಎನ್‌ಸಿಪಿ, ಶಿವಸೇನೆ, ಕಾಂಗ್ರೆಸ್ ರೆಡಿ ಆಗಿವೆ. ಇಂದು ಸಂಜೆ ಎನ್‌ಸಿಪಿ ಮತ್ತು ಕಾಂಗ್ರೆಸ್ ಸಂಜೆ ಸಭೆ ಸೇರಲಿವೆ.

ಇದನ್ನೂ ಓದಿ: ಮುಂದುವರೆದ ಮಹಾರಾಷ್ಟ್ರ ಸರ್ಕಾರ ರಚನೆ ಹಗ್ಗ-ಜಗ್ಗಾಟ: ಯಾವ ಪಕ್ಷ ಅಧಿಕಾರಕ್ಕೆ..!?

ಸೇನಾ ಪ್ರತಿಸ್ಪರ್ಧಿ ಎನ್‌ಸಿಪಿ ಮತ್ತು ಕಾಂಗ್ರೆಸ್ ಬೆಂಬಲ ಹಾಗೂ ಮೈತ್ರಿ ಮೂಲಕ ಸರ್ಕಾರ ರಚಿಸುವ ಆಶಯ ಹೊಂದಿದೆ. ಆದರೆ ಎರಡು ವಿರೋಧ ಪಕ್ಷಗಳು ತಮ್ಮ ನಿರ್ಧಾರ ಪ್ರಕಟಿಸುವಲ್ಲಿ ವಿಳಂಬ ಮಾಡುತ್ತಿವೆ.

ಇತ್ತ ರಾಜ್ಯಸಭೆಯ 250 ನೇ ಅಧಿವೇಶನ ಹಿನ್ನೆಲೆ ನಡೆದ ಚರ್ಚೆಯ ವೇಳೆ ಪ್ರಧಾನಿ ಮೋದಿ, ಎನ್‌ಸಿಪಿಯನ್ನು ಶ್ಲಾಘಿಸಿದರು. ಎನ್‌ಸಿಪಿ ಮತ್ತು ಬಿಜೆಡಿ (ನವೀನ್ ಪಟ್ನಾಯಕ್‌ನ ಬಿಜು ಜನತಾದಳ) ಪಕ್ಷಗಳನ್ನು ನಾನು ಪ್ರಶಂಸಿಸುತ್ತೇನೆ. ಸಂಸತ್ತಿನ ಮಾನದಂಡಗಳನ್ನು ಎರಡೂ ಪಕ್ಷಗಳೂ ಅತ್ಯಧ್ಬುತವಾಗಿ ಪಾಲಿಸಿವೆ. ಪ್ರತಿಭಟಿಸದೇ, ತಮ್ಮ ತಮ್ಮ ಅಭಿಪ್ರಾಯಗಳನ್ನು ಪರಿಣಾಮಕಾರಿಯಾಗಿ ಹೇಳಿದ್ದಾರೆ. ಬಿಜೆಪಿ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳೂ ಅವರಿಂದ ಕಲಿಯಬೇಕು ಎಂದು ಶ್ಲಾಘಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...