Homeಚಳವಳಿದೆಹಲಿ | ಜಾಮಿಯಾ ವಿದ್ಯಾರ್ಥಿಗಳ ಮೇಲೆ ಮತ್ತೆ ದಾಳಿ, 14 ವಿದ್ಯಾರ್ಥಿಗಳ ಬಂಧನ

ದೆಹಲಿ | ಜಾಮಿಯಾ ವಿದ್ಯಾರ್ಥಿಗಳ ಮೇಲೆ ಮತ್ತೆ ದಾಳಿ, 14 ವಿದ್ಯಾರ್ಥಿಗಳ ಬಂಧನ

- Advertisement -
- Advertisement -

ವಿದ್ಯಾರ್ಥಿಗಳ ವಿರುದ್ಧ ದೌರ್ಜನ್ಯ ಸೇರಿದಂತೆ ಹಲವಾರು ವಿಚಾರಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಸುತ್ತಿದ್ದ ಜಾಮಿಯಾ ಮಿಲಿಯಾ ಇಸ್ಲಾಮಿಯಾದ ಕನಿಷ್ಠ 14 ವಿದ್ಯಾರ್ಥಿಗಳನ್ನು ದೆಹಲಿ ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಜೊತೆಗೆ, ವಿಶ್ವವಿದ್ಯಾಲಯ ಆಡಳಿತ ಮಂಡಳಿಯು ಅನೇಕ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ್ದು, ಅವರು ಕ್ಯಾಂಪಸ್‌ಗೆ ಪ್ರವೇಶಿಸುವುದನ್ನು ನಿಷೇಧಿಸಿದೆ ಎಂದು ವಿದ್ಯಾರ್ಥಿ ಸಂಘಟನೆಗಳು ತಿಳಿಸಿವೆ. ದೆಹಲಿ | ಜಾಮಿಯಾ

ಇಬ್ಬರು ಪಿಎಚ್‌ಡಿ ವಿದ್ಯಾರ್ಥಿಗಳ ವಿರುದ್ಧ ವಿಶ್ವವಿದ್ಯಾಲಯದ ಶಿಸ್ತು ಕ್ರಮವನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಇದರೊಂದಿಗೆ, ಇತರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಫೆಬ್ರವರಿ 10 ರಿಂದ ಕ್ಯಾಂಪಸ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದರು. ಅದಾಗ್ಯೂ, ವಿಶ್ವವಿದ್ಯಾಲಯ ಆಡಳಿತ ಮಂಡಳಿಯು ತಮ್ಮೊಂದಿಗೆ ಯಾವುದೆ ಮಾತುಕತೆ ನಡೆಸದೆ ನೇರವಾಗಿ ಅಮಾನತು ಕ್ರಮ ಕೈಗೊಂಡಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಫೆಬ್ರವರಿ 13 ರ ಗುರುವಾರ ಬೆಳಗಿನ ಜಾವ ದೆಹಲಿ ಪೊಲೀಸರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ ಎಂದು ವಿದ್ಯಾರ್ಥಿಗಳ ಹೇಳಿದ್ದಾರೆ ಎಂದು ನ್ಯೂಸ್ ಕ್ಲಿಕ್ ವರದಿ ಮಾಡಿದೆ. ವಿಶ್ವವಿದ್ಯಾಲಯ ಆಡಳಿತ ಮಂಡಳಿಯು ಸ್ವತಃ “ಈ ವಿದ್ಯಾರ್ಥಿಗಳನ್ನು ದೆಹಲಿ ಪೊಲೀಸರಿಗೆ ಹಸ್ತಾಂತರಿಸಿದೆ” ಎಂದು ಅವರು ಆರೋಪಿಸಿದ್ದಾರೆ. ಪೊಲೀಸರು ಬಂಧಿತ ವಿದ್ಯಾರ್ಥಿಗಳನ್ನು ಎಲ್ಲಿ ಇರಿಸಿದ್ದಾರೆ ಎಂಬುದು ಇನ್ನೂ ತಿಳಿದಿಲ್ಲ, ಜೊತೆಗೆ ಬಂಧನಕ್ಕೊಳಗಾದವರಲ್ಲಿ ಅನೇಕ ಮಹಿಳಾ ವಿದ್ಯಾರ್ಥಿಗಳಿದ್ದಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿ ಸಂಘಟನೆಗಳು ವಿಶ್ವವಿದ್ಯಾಲಯ ಆಡಳಿತ ಮಂಡಳಿ ಮತ್ತು ದೆಹಲಿ ಪೊಲೀಸರ ಈ ಕ್ರಮವನ್ನು ಖಂಡಿಸಿದ್ದು, ಇದು ಕಾನೂನುಬಾಹಿರ ಮತ್ತು ವಿದ್ಯಾರ್ಥಿಗಳ ಹಕ್ಕುಗಳ ದಮನ ಎಂದು ಕರೆದಿವೆ.

ಫೆಬ್ರವರಿ 10 ರಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ವಿದ್ಯಾರ್ಥಿಗಳು ಆರು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ:

— ಪಿಎಚ್‌ಡಿ ವಿದ್ಯಾರ್ಥಿಗಳಾದ ಸೌರಭ್ ಮತ್ತು ಜ್ಯೋತಿ ವಿರುದ್ಧ ಶಿಸ್ತು ಸಮಿತಿ ಸಭೆಯ ನಿರ್ಧಾರವನ್ನು ರದ್ದುಗೊಳಿಸಬೇಕು.

– ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ನಂತರ ಹೊರಡಿಸಲಾದ ಎಲ್ಲಾ ಶೋಕಾಸ್ ನೋಟಿಸ್‌ಗಳನ್ನು ಹಿಂಪಡೆಯಬೇಕು. ದೆಹಲಿ | ಜಾಮಿಯಾ

– ಆಗಸ್ಟ್ 29, 2022 ಮತ್ತು ನವೆಂಬರ್ 29, 2024 ರಂದು ಹೊರಡಿಸಲಾದ ಕಚೇರಿ ಜ್ಞಾಪಕ ಪತ್ರವನ್ನು ರದ್ದುಗೊಳಿಸಬೇಕು.

— ವಿದ್ಯಾರ್ಥಿಗಳು ಧ್ವನಿ ಎತ್ತಿದ್ದಕ್ಕಾಗಿ ತೆಗೆದುಕೊಳ್ಳಲಾಗುತ್ತಿರುವ ಎಲ್ಲಾ ರೀತಿಯ ದಮನಕಾರಿ ಕ್ರಮಗಳನ್ನು ನಿಲ್ಲಿಸಬೇಕು.

— ಜಾಮಿಯಾ ಗೋಡೆಗಳ ಮೇಲೆ ಪೋಸ್ಟರ್‌ಗಳನ್ನು ಹಾಕಿದ್ದಕ್ಕಾಗಿ ಮತ್ತು ಘೋಷಣಾ ಬರಹ ಬರೆದಿದ್ದಕ್ಕಾಗಿ ವಿದ್ಯಾರ್ಥಿಗಳನ್ನು ಶಿಕ್ಷಿಸುವ ಸೂಚನೆಯನ್ನು ರದ್ದುಗೊಳಿಸಬೇಕು.

— ಅಭಿವ್ಯಕ್ತಿ ಸ್ವಾತಂತ್ರ್ಯ, ಶಾಂತಿಯುತ ಸಭೆ ಮತ್ತು ಸಂಘಟನಾ ಸ್ವಾತಂತ್ರ್ಯವನ್ನು ಉಲ್ಲಂಘಿಸಿ ಸಭೆ ಸೇರಿ ಪ್ರತಿಭಟಿಸಿದ್ದಕ್ಕಾಗಿ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಶೋಕಾಸ್ ನೋಟಿಸ್‌ಗಳನ್ನು ಕಳುಹಿಸಬಾರದು.

ವಿಶ್ವವಿದ್ಯಾಲಯ ಆಡಳಿತ ಮಂಡಳಿಯೊಂದಿಗೆ ಸಂವಾದಕ್ಕಾಗಿ ನಿರಂತರ ಪ್ರಯತ್ನಗಳನ್ನು ಮಾಡಿದ್ದೇವೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಆದರೆ, ಅವರು ಅದರಲ್ಲಿ ಯಾವುದೇ ಆಸಕ್ತಿ ತೋರಿಸಲಿಲ್ಲ. ಹಾಗಾಗಿ ನಾವು ಕ್ಯಾಂಪಸ್‌ನಲ್ಲಿ ಧರಣಿ ಪ್ರಾರಂಭಿಸುವಂತೆ ಆಯಿತು. ಜೊತೆಗೆ ನಮ್ಮ ಪ್ರತಿಭಟನೆ ಸಂಪೂರ್ಣವಾಗಿ ಶಾಂತಿಯುತವಾಗಿ ನಡೆಯುತ್ತಿತ್ತು ಎಂದು ಅವರು ಹೇಳಿದ್ದಾರೆ.

ಘಟನೆಯ ವೀಡಿಯೊ ಜೊತೆಗೆ ಎಕ್ಸ್‌ನಲ್ಲಿ ಬರೆದಿರುವ ಭಾರತ ವಿದ್ಯಾರ್ಥಿ ಫಡರೇಷನ್ (SFI), “ದಿಲ್ಲಿ ಪೊಲೀಸರು JMI ಮೇಲೆ ಮಧ್ಯರಾತ್ರಿ ದಾಳಿ ನಡೆಸಿದ್ದಾರೆ. JMI ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ದೆಹಲಿ ಪೊಲೀಸರು ಕ್ರೂರವಾಗಿ ಬಂಧಿಸಿದ್ದಾರೆ. JMI ಪ್ರೊಕ್ಟೋರಿಯಲ್ ಸಿಬ್ಬಂದಿ ಕ್ಯಾಂಪಸ್‌ನಿಂದ ಬಲವಂತವಾಗಿ ಹೊರಗೆಳೆದಿದ್ದಾರೆ. ಬಂಧಿಸಿ ಅಜ್ಞಾತ ಸ್ಥಳಕ್ಕೆ ಕರೆದೊಯ್ಯಲಾಗಿದೆ.” ಎಂದು ಹೇಳಿದೆ.

ಧರಣಿ ನೇತೃತ್ವವನ್ನು ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ ​​(AISA), ದಯಾರ್-ಎ-ಶೌಕ್ ಸ್ಟೂಡೆಂಟ್ ಕೇಡರ್ (DISC), ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ (SFI) ಮತ್ತು ಆಲ್ ಇಂಡಿಯಾ ರೆವಲ್ಯೂಷನರಿ ಸ್ಟೂಡೆಂಟ್ಸ್ ಆರ್ಗನೈಸೇಶನ್ (AIRSO) ಸೇರಿದಂತೆ ಅನೇಕ ಎಡಪಂಥೀಯ ಮತ್ತು ಇತರ ವಿದ್ಯಾರ್ಥಿ ಸಂಘಟನೆಗಳು ವಹಿಸಿದ್ದವು.

ಆದಾಗ್ಯೂ, ಜಾಮಿಯಾ ಆಡಳಿತ ಮಂಡಳಿಯು, ವಿದ್ಯಾರ್ಥಿಗಳು ಕಾಲೇಜು ಶಿಸ್ತನ್ನು “ಉಲ್ಲಂಘಿಸಿದ್ದಾರೆ” ಎಂದು ಹೇಳಿದೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ. ಪ್ರತಿಭಟನಾ ನಿರತ ವಿದ್ಯಾರ್ಥಿಗಳು ವಾತಾವರಣವನ್ನು “ಹಾಳು ಮಾಡಿದ್ದಾರೆ”, ವಿದ್ಯಾರ್ಥಿಗಳು ತರಗತಿಗೆ ಹೋಗದಂತೆ “ತಡೆದಿದ್ದಾರೆ” ಮತ್ತು ವಿಶ್ವವಿದ್ಯಾಲಯದ ಆಸ್ತಿಯನ್ನು “ಧ್ವಂಸಗೊಳಿಸಿದ್ದಾರೆ” ಎಂದು ಅದು ಹೇಳಿಕೊಂಡಿದೆ.

ಪ್ರಾಸಂಗಿಕವಾಗಿ, ಶಿಸ್ತು ಕ್ರಮ ಕೈಗೊಳ್ಳಲಾದ ಪಿಎಚ್‌ಡಿ ವಿದ್ಯಾರ್ಥಿಗಳು 2024 ರಲ್ಲಿ ಪ್ರತಿಭಟನೆಯನ್ನು ಆಯೋಜಿಸಿದ್ದರು ಎಂದು ಆರೋಪಿಸಲಾಗಿದೆ. 2019 ರ ಸಿಎಎ (ಪೌರತ್ವ ತಿದ್ದುಪಡಿ ಕಾಯ್ದೆ) ಕಾಯ್ದೆ ವಿರೋಧಿಸಿ ದೇಶಾದ್ಯಂತ ನಡೆದ ಪ್ರತಿಭಟನೆಗಳ ಸ್ಮರಣಾರ್ಥ ಪ್ರತಿರೋಧ ದಿನವೆಂದು ಈ ಪ್ರತಿಭಟನೆಯನ್ನು ನಡೆಸಲಾಗಿತ್ತು.

ಡಿಸೆಂಬರ್ 15, 2019 ರಂದು ದೆಹಲಿ ಪೊಲೀಸರು ವಿಶ್ವವಿದ್ಯಾಲಯದ ಆವರಣಕ್ಕೆ ಪ್ರವೇಶಿಸಿ ಗ್ರಂಥಾಲಯದೊಳಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಕ್ರೂರವಾಗಿ ಲಾಠಿಚಾರ್ಜ್ ನಡೆಸಿದ್ದರು. ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆಗಿತ್ತು. ನಂತರ ಇದನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆದಿದ್ದವು.

ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಪಿಎಚ್‌ಡಿ ವಿದ್ಯಾರ್ಥಿಗಳ ವಿರುದ್ಧ ಕ್ರಮ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದರು. ಶಿಸ್ತು ಸಮಿತಿಯ ಸಭೆಯನ್ನು ಫೆಬ್ರವರಿ 25 ರಂದು ನಿಗದಿಪಡಿಸಲಾಗಿತ್ತು, ಆದರೆ ವಿಶ್ವವಿದ್ಯಾಲಯ ಆಡಳಿತವು ಇನ್ನೂ ತಮ್ಮ ಬೇಡಿಕೆಗಳಿಗೆ ಸ್ಪಂದಿಸಿಲ್ಲ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

ಮತ್ತೊಂದು ಘಟನೆಯಲ್ಲಿ, ಫೆಬ್ರವರಿ 11 ರ ಮಂಗಳವಾರ, ಎಐಎಸ್ಎ ರಾಷ್ಟ್ರೀಯ ಅಧ್ಯಕ್ಷೆ ನೇಹಾ ಅವರನ್ನು ಜಾಮಿಯಾ ಆಡಳಿತ ಮಂಡಳಿಯು ಬಲವಂತವಾಗಿ ಕ್ಯಾಂಪಸ್‌ನಿಂದ ಹೊರಹಾಕಿದೆ ಎಂದು ಆರೋಪಿಸಲಾಗಿದೆ. ವಿದ್ಯಾರ್ಥಿಗಳ ಬೇಡಿಕೆಗಳನ್ನು ಬೆಂಬಲಿಸಿ ನೇಹಾ ಜಾಮಿಯಾಕ್ಕೆ ಬಂದಿದ್ದರು.

ಇದನ್ನೂಓದಿ:  ಸಿದ್ದರಾಮಯ್ಯ ಬಗ್ಗೆ ಸುಳ್ಳು ಸುದ್ದಿ – ಅರ್ನಾಬ್ ಗೋಸ್ವಾಮಿ ವಿರುದ್ಧದ ಪ್ರಕರಣ ರದ್ದು ಮಾಡಿದ ಕರ್ನಾಟಕ ಹೈಕೋರ್ಟ್

ಸಿದ್ದರಾಮಯ್ಯ ಬಗ್ಗೆ ಸುಳ್ಳು ಸುದ್ದಿ – ಅರ್ನಾಬ್ ಗೋಸ್ವಾಮಿ ವಿರುದ್ಧದ ಪ್ರಕರಣ ರದ್ದು ಮಾಡಿದ ಕರ್ನಾಟಕ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...