Homeಕರ್ನಾಟಕಶಾಸಕರು, ಪರಿಷತ್ ಸದಸ್ಯರಿಗೆ ಸಂಪುಟ ದರ್ಜೆ ಸ್ಥಾನಮಾನ ಪ್ರಶ್ನಿಸಿ ಪಿಐಎಲ್ : ಫೆ.21ಕ್ಕೆ ವಿಚಾರಣೆ

ಶಾಸಕರು, ಪರಿಷತ್ ಸದಸ್ಯರಿಗೆ ಸಂಪುಟ ದರ್ಜೆ ಸ್ಥಾನಮಾನ ಪ್ರಶ್ನಿಸಿ ಪಿಐಎಲ್ : ಫೆ.21ಕ್ಕೆ ವಿಚಾರಣೆ

- Advertisement -
- Advertisement -

ಶಾಸಕರು ಮತ್ತು ವಿಧಾನಪರಿಷತ್‌ ಸದಸ್ಯರಿಗೆ ಸಚಿವ ಸಂಪುಟ ದರ್ಜೆ ಸ್ಥಾನಮಾನ ನೀಡಿ ವಿವಿಧ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಸಲ್ಲಿಕೆಯಾಗಿದೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ (ಕೆಸ್‌ಪಿಸಿಬಿ) ಕೆಲಸ ಮಾಡುತ್ತಿರುವ ಬೆಂಗಳೂರು ನಗರದ ನಿವಾಸಿ ಸೂರಿ ಪಾಯಲ ಅವರು ಪಿಐಎಲ್‌ ಸಲ್ಲಿಸಿದ್ದಾರೆ.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ.ಐ.ಅರುಣ್ ಅವರನ್ನೊಳಗೊಂಡ ವಿಭಾಗೀಯ ಪೀಠ ಗುರುವಾರ (ಫೆ13) ಪಿಐಎಲ್‌ ವಿಚಾರಣೆಯನ್ನು ಫೆಬ್ರವರಿ 21ಕ್ಕೆ ಮುಂದೂಡಿದೆ.

ಅರ್ಜಿದಾರರ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲ ಸಾಯಿ ದೀಪಕ್ ಅವರು, “ಶಾಸಕರು, ವಿಧಾನಪರಿಷತ್ ಸದಸ್ಯರನ್ನು ನಿಗಮ-ಮಂಡಳಿಗಳಿಗೆ ನೇಮಕ ಮಾಡಿರುವುದು ಸಮಸ್ಯೆಯಲ್ಲದಿದ್ದರೂ, ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡುತ್ತಿರುವುದು ಸಾಂವಿಧಾನಿಕ ನಿಬಂಧನೆಗಳ ಉಲ್ಲಂಘನೆಯಾಗಿದೆ” ಎಂದು ವಾದಿಸಿದ್ದಾರೆ.

“ಅರ್ಜಿದಾರರಿಗೆ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರನ್ನು ನಿಗಮ-ಮಂಡಳಿ ಹುದ್ದೆಗಳಿಗೆ ನೇಮಕ ಮಾಡುವುದರಿಂದ ಯಾವುದೇ ಸಮಸ್ಯೆ ಇಲ್ಲ” ಎಂದಿದ್ದಾರೆ.

“ಸಂವಿಧಾನದ ವಿಧಿ 164 (1ಎ) ಅಡಿಯಲ್ಲಿ ಶಾಸಕಾಂಗ ಸಭೆಯ ಒಟ್ಟು ಸದಸ್ಯರಲ್ಲಿ ಕೇವಲ 15 ಪ್ರತಿಶತದಷ್ಟು ಮಂದಿಗೆ ಮಾತ್ರ ಸಂಪುಟ ದರ್ಜೆಯ ಸ್ಥಾನಮಾನ ನೀಡಬೇಕು. ಕರ್ನಾಟಕಕ್ಕೆ ಸಂಬಂಧಿಸಿದಂತೆ 34 ಜನರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಬಹುದು. ಸಚಿವ ಸಂಪುಟದಲ್ಲಿ ಈಗಾಗಲೇ 33 ಸದಸ್ಯರಿದ್ದಾರೆ” ಎಂದು ವಕೀಲ ಸಾಯಿ ದೀಪಕ್ ಹೇಳಿದ್ದಾರೆ.

ಅರ್ಜಿದಾರರು ತನ್ನ ಅರ್ಜಿಯಲ್ಲಿ ಆರ್‌ವಿ ದೇಶಪಾಂಡೆ, ಎ.ಎಸ್ ಪೊನ್ನಣ್ಣ, ವಿನಯ್ ಕುಲಕರ್ಣಿ, ಎನ್‌.ಎ ಹ್ಯಾರಿಸ್ ಮತ್ತು ಇತರರು ಸೇರಿದಂತೆ 42 ಜನರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ನೇಮಕ ಮಾಡಿರುವುದನ್ನು ಉಲ್ಲೇಖಿಸಿದ್ದಾರೆ. ಅವರ ನೇಮಕಾತಿಗಳನ್ನು ರದ್ದುಗೊಳಿಸಲು ನಿರ್ದೇಶನ ನೀಡುವಂತೆ ಕೋರಿದ್ದಾರೆ. ಈ ಶಾಸಕರು ಮತ್ತು ಪರಿಷತ್ ಸದಸ್ಯರು ನಿಗಮ-ಮಂಡಳಿಗಳ ಅಧ್ಯಕ್ಷರಾಗಿ, ಮುಖ್ಯಮಂತ್ರಿಯ ಕಾನೂನು ಸಲಹೆಗಾರರಾಗಿ, ಮುಖ್ಯಮಂತ್ರಿಯ ಸಲಹೆಗಾರರಾಗಿ, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಗಳಾಗಿ ಮತ್ತು ನವದೆಹಲಿ ವಿಶೇಷ ಪ್ರತಿನಿಧಿಯಾಗಿ ಹುದ್ದೆಗಳನ್ನು ಹೊಂದಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಈ ಎಲ್ಲಾ ಹುದ್ದೆಗಳಿಗೆ ಸಂಪುಟ ದರ್ಜೆಯ ಸ್ಥಾನಮಾನ ಮತ್ತು ಸಂಬಂಧಿತ ಸವಲತ್ತುಗಳು ನೀಡುವ ಮೂಲಕ ಸಂವಿಧಾನದ ವಿಧಿ 102 (ಲಾಭದಾಯಕ ಹುದ್ದೆ ಹೊಂದಿರುವ ಸದಸ್ಯರನ್ನು ಅನರ್ಹಗೊಳಿಸುವುದು) ಮತ್ತು ವಿಧಿ 191 (ಲಾಭದಾಯಕ ಹುದ್ದೆ)ರಲ್ಲಿ ಪ್ರತಿಪಾದಿಸಲಾದ ನಿಬಂಧನೆಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಲಾಗಿದೆ.

ಈ ಹುದ್ದೆಗಳಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡುವುದು ಮಂತ್ರಿ ಮಂಡಳಿಯ ಗಾತ್ರವನ್ನು ನಿರ್ಬಂಧಿಸುವ ವಿಧಿ 164 (1ಎ) ಮತ್ತು ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 10ರ ಉಲ್ಲಂಘನೆಯಾಗಿದೆ. ಇದು ಸರ್ಕಾರದ ಅಡಿಯಲ್ಲಿ ಲಾಭದಾಯಕ ಹುದ್ದೆ ಹೊಂದಿರುವ ಸದಸ್ಯರನ್ನು ಅನರ್ಹಗೊಳಿಸುತ್ತದೆ ಎಂದು ಹೇಳಲಾಗಿದೆ.

“ಅಧ್ಯಕ್ಷರಾಗಿ ನೇಮಕಗೊಂಡ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರು ಹೆಚ್ಚಾಗಿ ಬೆಂಗಳೂರಿನ ಹೊರಗೆ ವಾಸಿಸುವುದರಿಂದ ಅವರ ಕ್ಷೇತ್ರದ ಕರ್ತವ್ಯಗಳನ್ನು ನಿರ್ವಹಿಸುವುದು ಅಪ್ರಾಯೋಗಿಕವಾಗುತ್ತದೆ. ಹೆಚ್ಚಿನ ಪ್ರಯಾಣ ಸಮಸ್ಯೆಗಳು ಎರಡೂ ಹುದ್ದೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸಾಧ್ಯವಾಗದಂತೆ ಮಾಡುತ್ತದೆ. ನೇಮಕಾತಿಗಳು ಮತ್ತು ಈ ಸದಸ್ಯರಿಗೆ ನೀಡಲಾಗುವ ಹೆಚ್ಚುವರಿ ಸವಲತ್ತುಗಳು ನೀಡುವುದು ಶಾಸಕಾಂಗ ಪ್ರಕ್ರಿಯೆ ಮೇಲಿನ ಸಾರ್ವಜನಿಕರ ನಂಬಿಕೆ ಕ್ಷೀಣಿಸುವಂತೆ ಮಾಡುತ್ತದೆ” ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಮೈಕ್ರೋ ಫೈನಾನ್ಸ್ ದೌರ್ಜನ್ಯ ತಡೆಗೆ ಕಾನೂನು ಜಾರಿ : ಮುಖ್ಯಾಂಶಗಳು ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...