Homeಅಂತರಾಷ್ಟ್ರೀಯಮುಖೇಶ್‌ ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್ ಲಿ. ವಿಶ್ವದ 6ನೇ ಅತಿದೊಡ್ಡ ತೈಲ ಕಂಪನಿ...!

ಮುಖೇಶ್‌ ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್ ಲಿ. ವಿಶ್ವದ 6ನೇ ಅತಿದೊಡ್ಡ ತೈಲ ಕಂಪನಿ…!

- Advertisement -
- Advertisement -

ಏಷ್ಯಾದ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ ನಡೆಸುತ್ತಿರುವ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಈಗ ವಿಶ್ವದ 6 ನೇ ಅತಿದೊಡ್ಡ ತೈಲ ಕಂಪನಿಯಾಗಿ ಬೆಳೆದು ನಿಂತಿದೆ.

ಮಂಗಳವಾರದ ವಹಿವಾಟಿನ ಮುಕ್ತಾಯದ ವೇಳೆ, ಬ್ರಿಟಿಷ್ ಎನರ್ಜಿ ಜೈಂಟ್ಸ್‌ನದು 132 ಬಿಲಿಯನ್ ಡಾಲರ್‌ ಮೌಲ್ಯವಿದ್ದರೆ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮೌಲ್ಯ 138 ಬಿಲಿಯನ್ ಡಾಲರ್‌ಗೇರಿದೆ. ಈ ಮೂಲಕ ರಿಲಯನ್ಸ್‌ $138 ಬಿಲಿಯನ್ ತಲುಪಿದ ಮೊದಲ ಭಾರತೀಯ ಕಂಪನಿ ಆಗಿದೆ.

ರಿಲಯನ್ಸ್‌ ಷೇರುಗಳು ಬೆಲೆ 3 ಪಟ್ಟು ಹೆಚ್ಚಳಗೊಂಡಿವೆ. ಆಗಸ್ಟ್‌ನಲ್ಲಿ ರಿಲಯನ್ಸ್‌ ಮಾಲೀಕರು ಕಂಪನಿಯ ನಿವ್ವಳ ಸಾಲವನ್ನು 18 ತಿಂಗಳಲ್ಲಿ ಶೂನ್ಯಕ್ಕೆ ಇಳಿಸುವ ಯೋಜನೆ ಘೋಷಿಸಿದ್ದರು. ನಂತರದಲ್ಲಿ ರಿಲಯನ್ಸ್‌ ಷೇರುಗಳನ್ನು ತೈಲದಿಂದ ರಾಸಯನಿಕಕ್ಕೆ ಪರಿವರ್ತಿಸುವ ಸೌದಿಯ ಅರಾಮ್ಕೋಗೆ ಮಾರುವುದಾಗಿ ಹೇಳಿದ್ದರು. ಆನಂತರ ರಿಲೆಯನ್ಸ್‌ ಷೇರುಗಳ ಬೆಲೆ ಏರುತ್ತಲೇ ಇದೆ.

ಷೇರುಗಳ ಬೆಲೆ ಹೆಚ್ಚುತ್ತಿರುವುದು ಅಂಬಾನಿಗೆ 56 ಬಿಲಿಯನ್ ಡಾಲರ್‌ ನಿವ್ವಳ ಲಾಭ‍ ತಂದು ಕೊಟ್ಟಿದೆ. ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಸೂಚ್ಯಂಕದ ಪ್ರಕಾರ, ಅಲಿಬಾಬಾ ಗ್ರೂಪ್‌ನ ಜ್ಯಾಕ್ ಮಾರನ್ನು ಮೀರಿಸಿ ಈಗ ಮುಖೇಶ್ ಅಂಬಾನಿ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಈಗ 10 ಟ್ರಿಲಿಯನ್ ರೂಪಾಯಿ ಮಾರುಕಟ್ಟೆ ತಲುಪಿದ ಮೊದಲ ಭಾರತೀಯ ಕಂಪನಿ ಎಂಬ ಹೆಗ್ಗಳಿಕೆಗೆ ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ ಪಾತ್ರವಾಗಿದೆ.

ಬಿಪಿಯ ಶೇ. 1.2 ಲಾಭಕ್ಕೆ ಹೋಲಿಸಿದರೆ, ರಿಲಯನ್ಸ್ ಈ ವರ್ಷ ಶೇ. 40 ರಷ್ಟು ಹೆಚ್ಚಿದೆ. ಕಚ್ಚಾ ಬೆಲೆಯಲ್ಲಿನ ಬದಲಾವಣೆಗಳಿಂದಾಗಿ ಮತ್ತು ಭವಿಷ್ಯದ ಇಂಧನ ಬೇಡಿಕೆಯ ಮೇಲೆ ಅನಿಶ್ಚಿತತೆ ಮುಂದುವರಿದಿದ್ದರಿಂದ ಹಲವಾರು ತೈಲ ಕಂಪನಿಗಳು ಹೆಣಗಾಡುತ್ತಿವೆ. ಆದರೆ ರಿಲೆಯನ್ಸ್‌ ಮಾತ್ರ ಸತತವಾಗಿ ಲಾಭ ಗಳಿಸುತ್ತಿದೆ.

ಪಶ್ಚಿಮ ಭಾರತದಲ್ಲಿ ವಿಶ್ವದ ಅತಿದೊಡ್ಡ ತೈಲ-ಸಂಸ್ಕರಣಾ ಸಂಕೀರ್ಣವನ್ನು ರಿಲಯನ್ಸ್‌ ನಿರ್ವಹಿಸುತ್ತಿದೆ. ಇದರಲ್ಲಿ ಕಡಿಮೆ-ಗುಣಮಟ್ಟದ ಕಚ್ಚಾ ಪದಾರ್ಥಗಳ್ನು ಸಂಸ್ಕರಿಸಬಹುದು ಮತ್ತು ಸಂಸ್ಕರಿಸಿದ ಪದಾರ್ಥಗಳನ್ನು ಉನ್ನತ ದರ್ಜೆಯ ಇಂಧನವಾಗಿ ಪರಿವರ್ತಿಸಬಹುದು. ಇದು ಬೆಲೆಯಲ್ಲಿ ಆಗುವ ಏರಿಳಿತದಿಂದ ಕಂಪನಿಯನ್ನು ರಕ್ಷಿಸುತ್ತದೆ.

ಇನ್ನು ರಿಲಯನ್ಸ್‌ ತನ್ನ ಆದಾಯದ ಮೂರನೇ ಎರಡರಷ್ಟನ್ನು ಇಂಧನ ಉದ್ಯಮದಿಂದಲೇ ಪಡೆಯುತ್ತಿದೆ. ಜೊತೆಗೆ ವಿಶ್ವದ ಎರಡನೇ ಅತಿದೊಡ್ಡ ಉದ್ಯಮವಾದ ಟೆಲಿಕಾಂ ಮತ್ತು ಡಿಜಿಟಲ್‌ ಸೇವೆಯಲ್ಲಿಯೂ ಸಹ ಭಾರಿ ಪ್ರಮಾಣದ ಹೂಡಿಕೆಯನ್ನು ಮಾಡಿದೆ. ಮುಂದೆ ಅದು ಚಿಲ್ಲರೆ ವ್ಯಾಪಾರ ಕ್ಷೇತ್ರಕ್ಕೂ ಸಹ ವಿಸ್ತರಿಸಲಿದ್ದು ಅಮೆಜಾನ್.ಕಾಮ್ ಇಂಕ್. ಮತ್ತು ವಾಲ್ಮಾರ್ಟ್ ಇಂಕ್. ನೊಡನೆ ಪೈಪೋಟಿ ನಡೆಸಲು ಸಿದ್ದತೆ ನಡೆಸಿದೆ.

ಸದ್ಯ ಇಂಧನ ಉದ್ಯಮದಲ್ಲಿ ರಿಲೆಯನ್ಸ್‌ 6ನೇ ಸ್ಥಾನದಲ್ಲಿದೆ. ಎಕ್ಸಲಾ‌ ಮೊಬಿಲ್‌ ಕಾರ್ಪೋ ಮತ್ತು ಸೌದಿಯ ಆರಾಮ್ಕೋ ಮೊದಲೆರಡು ಸ್ಥಾನಗಳಲ್ಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...