Homeಕರ್ನಾಟಕಗೋಕಾಕ್ ಉಪಚುನಾವಣೆ: ಅವರಿವರ ಜೊತೆ ಇದ್ದಾರೆಯೇ ಇಲ್ಲವೇ? ಸದ್ಯಕ್ಕೆ ವದಂತಿಗಳದ್ದೇ ಅಬ್ಬರ

ಗೋಕಾಕ್ ಉಪಚುನಾವಣೆ: ಅವರಿವರ ಜೊತೆ ಇದ್ದಾರೆಯೇ ಇಲ್ಲವೇ? ಸದ್ಯಕ್ಕೆ ವದಂತಿಗಳದ್ದೇ ಅಬ್ಬರ

- Advertisement -
- Advertisement -

ಸಮ್ಮಿಶ್ರ ಸರ್ಕಾರವನ್ನು ಅತಂತ್ರಗೊಳಿಸಲು ಸತತ ಪ್ರಯತ್ನಮಾಡಿ ಕಡೆಗೂ ಬಿಜೆಪಿ ಸರ್ಕಾರ ಬರಲು ಕಾರಣವಾದ ರಮೇಶ್ ಜಾರಕಿಹೊಳಿಯ ಗೋಕಾಕ್ ವಿಧಾನಸಭಾ ಕ್ಷೇತ್ರ ಈಗ ರಾಜ್ಯದ ಪ್ರತಿಷ್ಟಿತ ಕಣವಾಗಿ ಮಾರ್ಪಟ್ಟಿದೆ. ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಮತ್ತೆ ಗೋಕಾಕ್ ಕ್ಷೇತ್ರದಿಂದ ಆರಿಸಿ ಬರಲು ಯತ್ನಿಸುತ್ತಿದ್ದು,ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿದ್ದಾರೆ. ಆದರೆ ಈತನಿಗೆ ಎದುರಾಳಿಯಾಗಿ ಕಾಂಗ್ರೆಸ್‍ನಿಂದ ಈತನ ಸಹೋದರ ಲಖನ್ ಜಾರಕಿಹೊಳಿ ಕಣಕ್ಕಿಳಿದಿದ್ದು ಲಖನ್‍ಗೆ ಸತೀಶ್ ಜಾರಕಿಹೊಳಿಯ ಸಂಪೂರ್ಣ ಬೆಂಬಲವಿದೆ. ಇವರಿಬ್ಬರಿಗೂ ಪೈಪೋಟಿಯಾಗಿ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ಕಣದಲ್ಲಿದ್ದಾರೆ. ಲಖನ್ ಜಾರಕಿಹೊಳಿ ಜೊತೆ ಸತೀಶ್ ಜಾರಕಿಹೊಳಿಯು ಸಹ ನಾಮಪತ್ರ ಸಲ್ಲಿಸಿ ಹುಬ್ಬೇರಿಸುವಂತೆ ಮಾಡಿದ್ದರು. ಲಖನ್ ನಾಮಪತ್ರವೇನಾದರೂ ಕೊನೆಕ್ಷಣದಲ್ಲಿ ತಿರಸ್ಕೃತವಾದರೆ ಇರಲಿ ಎನ್ನುವ ತಂತ್ರ ಇದಾಗಿದೆ ಎನ್ನಲಾಗಿದೆ. ಆದ್ದರಿಂದ ಈ ಕ್ಷೇತ್ರ ಸದ್ಯಕ್ಕೆ ತ್ರಿಕೋನ ಸ್ಪರ್ಧೆಯಾಗಿ ಮಾರ್ಪಡುವ ಸಾಧ್ಯತೆಯೇ ಹೆಚ್ಚು. ರಮೇಶ್ ಮತ್ತು ಸತೀಶ್ ಜಾರಕಿಹೊಳಿ ಸಹೋದರರ ನಡುವೆ ಬಿರುಕು ಉಂಟಾಗಿದ್ದು ರಮೇಶ್‍ರನ್ನು ಸೋಲಿಸಲೇಬೇಕಿಂದ ಸತೀಶ್, ಲಖನ್ ಜಾರಕಿಹೊಳಿಯನ್ನು ನಿಲ್ಲಿಸಿ ಶತಾಯಗತಾಯ ಗೆಲ್ಲಿಸಲು ಪ್ರಯತ್ನ ಪಡುತ್ತಿದ್ದಾರೆ. ಸತತ ಮೂರು ಬಾರಿ ರಮೇಶ್ ಜಾರಕಿಹೊಳಿ ವಿರುದ್ಧ ಇದೇ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದ ಅಶೋಕ ಪೂಜಾರಿ ಬಿಜೆಪಿಯಲ್ಲಿ ಟಿಕೆಟ್ ಸಿಗದ ಕಾರಣ ಜೆಡಿಎಸ್ ಅಭ್ಯರ್ಥಿಯಾಗಿ ಮತಯಾಚನೆಗೆ ಸಿದ್ಧರಾಗಿದ್ದಾರೆ.

ಬೆಳಗಾವಿಯು ರಮೇಶ್ ಜಾರಕಿಹೊಳಿಯ ಹಲವು ಪ್ರಹಸನಗಳಿಂದ ಗಮನಸೆಳೆಯುವ ಜೊತೆಗೆ ಸಹೋದರರ ಜಗಳ, ಜಾರಕಿಹೊಳಿ ಕುಟುಂಬ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಜೊತೆ ಜಗಳ, ಡಿಕೆಶಿ ವರ್ಸಸ್ ಜಾರಕಿಹೊಳಿ ಕುಟುಂಬ, ಉಮೇಶ್ ಕತ್ತಿ ವರ್ಸಸ್ ಲಕ್ಷ್ಮಣ ಸವದಿ ಈ ರೀತಿಯ ಜಗಳಗಳಿಗೂ ಸಹ ಗಮನ ಸೆಳೆಯುತ್ತಿತ್ತು. ಈಗ ಈ ಎಲ್ಲಾ ಒಳ ಮತ್ತು ಹೊರ ಜಗಳಗಳೂ ಸಹ ಗೋಕಾಕ್ ವಿಧಾನಸಭಾ ಉಪಚುನಾವಣೆಯ ಮೇಲೆ ದಟ್ಟವಾದಂತಹ ಪ್ರಭಾವವನ್ನು ಬೀರುವುದು ಖಚಿತವಾಗಿದೆ. ಶತ್ರುಗಳ ಶತ್ರು ಮಿತ್ರ ಎನ್ನುವಂತೆ ಮೂವರು ಅಭ್ಯರ್ಥಿಗಳಿಗೂ ಊಹಿಸದ ರೀತಿಯಲ್ಲಿ ಸ್ವಪಕ್ಷದಿಂದ ಅಲ್ಲದೇ ಹೊರಗಿನಿಂದಲೂ ಸಹ ಬೆಂಬಲ ವ್ಯಕ್ತವಾಗುತ್ತಿದೆ ಮತ್ತು ಸ್ವಪಕ್ಷದವರೇ ಕಾಲೆಳೆಯುವ ಸಾಧ್ಯತೆಗಳು ಹೆಚ್ಚಾಗಿರುವುದು ವಿಚಿತ್ರವಾದ ಸಂಗತಿಯಾಗಿದೆ. ರಮೇಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಮಧ್ಯೆ ಅಷ್ಟೊಂದು ಜಗಳಗಳಿದ್ದರೂ, ಸತೀಶ್ ಜಾರಕಿಹೊಳಿಯ ಜೊತೆಗೆ ಇಬ್ಬರಿಗೂ ತಗಾದೆ ಇರುವುದರಿಂದ ಲಕ್ಷ್ಮೀ ಹೆಬ್ಬಾಳಕರ್ ರಮೇಶ್‍ಗೆ ಬೆಂಬಲಿಸುವ ಒಳ ಒಪ್ಪಂದವಾಗಿದೆಯೆಂದು ಕ್ಷೇತ್ರದ ಜನ ಮಾತಾಡಿಕೊಳ್ಳುತ್ತಿದ್ದಾರೆ. ಹಾಗಾಗಿಯೇ ಲಕ್ಷ್ಮೀ ಒಬ್ಬರಿಗೇ ಕಾಂಗ್ರೆಸ್‍ನಿಂದ ಗೋಕಾಕ್ ಉಸ್ತುವಾರಿ ನೀಡಲಾಯಿತು, ಆದರೂ ನಾಮಪತ್ರ ಸಲ್ಲಿಕೆಗೆ ಅವರು ಹೋಗಿರದಿದ್ದು ವದಂತಿಗಳಿಗೆ ಕಾರಣವಾಗಿದೆ.

ಇತ್ತೀಚಿಗೆ ಕನಕಪುರದ ಹತ್ತಿರ ಕೆಲವು ಮುಖಂಡರು ಮತ್ತು ಸ್ವಾಮೀಜಿಯ ಜೊತೆ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ಚರ್ಚೆ ಮಾಡಿರುವ ಫೋಟೋ ಹರಿದಾಡುತ್ತಿದ್ದು ಇದು ಡಿಕೆ ಶಿವಕುಮಾರ್ ಅಣತಿಯಂತೆ ಗೋಕಾಕ್ ಮತಕ್ಷೇತ್ರದ ಕುರಿತು ನಡೆದ ಪ್ಲಾನಿಂಗ್ ಮೀಟಿಂಗ್ ಎಂದು ಹೇಳಲಾಗುತ್ತಿದೆ. ಡಿಕೆಶಿ ಜಾರಕಿಹೊಳಿ ಕುಟುಂಬದ ನಡುವೆ ಒಳ ಜಗಳಗಳಿದ್ದು ಡಿಕೆಶಿ ತಮ್ಮದೇ ಪಕ್ಷದ ಅಭ್ಯರ್ಥಿ ಲಖನ್ ಜಾರಕಿಹೊಳಿಗೆ ಬೆಂಬಲಿಸದೆ ಅಶೋಕ್ ಪೂಜಾರಿಗೆ ಬೆಂಬಲಿಸುವ ಸಾಧ್ಯತೆ ಇದೆಯೆಂದು ಈ ಫೋಟೋ ಇಟ್ಟುಕೊಂಡು ಚರ್ಚೆ ಶುರುಮಾಡಿದ್ದಾರೆ. ಡಿಕೆಶಿ ಮತ್ತು ಲಕ್ಷ್ಮಿ ಬೇರೆ ಬೇರೆ ಅಭ್ಯರ್ಥಿಗಳಿಗೆ ಬೆಂಬಲಿಸುವ ಸಾಧ್ಯತೆ ಇರದಿದ್ದರೂ, ವದಂತಿಗಳಿಗೆ ಅದರದ್ದೇ ಆದ ತರ್ಕಗಳಿವೆ.
ಹಾಗೆಯೇ ಅರಭಾವಿ ಶಾಸಕ ಜಾರಕಿಹೊಳಿ ಸೋದರರಲ್ಲೊಬ್ಬರಾದ ಬಾಲಚಂದ್ರ ಮೇಲ್ನೋಟಕ್ಕೆ ಪಕ್ಷದ ಅಭ್ಯರ್ಥಿ ರಮೇಶ್ ಪರ ಒಂದು ಹೇಳಿಕೆ ನೀಡಿದ್ದರೂ, ವಿರುದ್ಧವಾಗಿ ಕೆಲಸ ಮಾಡುತ್ತಾರೆಂಬ ಗುಮಾನಿಯೂ ಹರಿದಾಡುತ್ತಿದೆ.

ಇತ್ತ ಉಪ ಮುಖ್ಯಮಂತ್ರಿ ಸ್ಥಾನ ತನಗೆ ಸಿಗದೇ ಲಕ್ಷ್ಮಣ ಸವದಿಗೆ ಸಿಕ್ಕಿತೆಂದು ಉಮೇಶ್ ಕತ್ತಿ ಸಹಾ ಬಿಜೆಪಿ ಮೇಲೆ ಗರಂ ಆಗಿದ್ದರು. ಜಾರಕಿಹೊಳಿ ಕುಟುಂಬದ ಜೊತೆ ತಗಾದೆ ಇರುವ ಲಕ್ಷ್ಮಣ ಸವದಿಯನ್ನು ದುರ್ಬಲಗೊಳಿಸಬೇಕೆಂದರೆ ರಮೇಶ್ ಜಾರಕಿಹೊಳಿಯ ಬೆಂಬಲಕ್ಕೆ ನಿಲ್ಲಲೇಬೇಕು ಎನ್ನುವ ತೀರ್ಮಾನಕ್ಕೆ ಉಮೇಶ್ ಕತ್ತಿ ಬಂದಿದ್ದಾರೆ ಎನ್ನಲಾಗುತ್ತಿದೆ.

ಇನ್ನು ಈ ಕ್ಷೇತ್ರದಲ್ಲಿ ಲಿಂಗಾಯತ ಮತದಾರರು ನಿರ್ಣಾಯಕ ವಾಗಿದ್ದು ಲಿಂಗಾಯತರ ಮತಗಳು ಯಾರಿಗೆ ಬೀಳಲಿದೆ ಎಂಬುದು ಬಹಳ ಮುಖ್ಯವಾಗುತ್ತದೆ. ಹಾಗೆ ನೋಡಿದರೆ ಸಾಂಪ್ರದಾಯಿಕ ವಾಗಿ ಬಿಜೆಪಿಗೆ ಈ ಸಮುದಾಯದ ಮತಗಳು ಬೀಳುತ್ತವೆ. ಆದರೆ ರಮೇಶ್ ಜಾರಕಿಹೊಳಿ ಲಿಂಗಾಯಿತರ ಜೊತೆ ಅಷ್ಟೇನು ಚೆನ್ನಾಗಿಲ್ಲ ಎಂಬ ಮಾತುಗಳು ಕೇಳಿಬರುತ್ತಿದ್ದು ಇವು ಲಿಂಗಾಯತ ಸಮುದಾಯದ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿಯ ಮಡಿಲು ಸೇರಲಿವೆಯಾ ಎಂಬುದು ಸಹ ಒಂದು ಯಕ್ಷಪ್ರಶ್ನೆಯಾಗಿದೆ.

ಗೋಕಾಕ್ ವಿಧಾನಸಭಾ ಕ್ಷೇತ್ರ ಈ ಬಾರಿ ಕ್ಷೇತ್ರದ ಜನತೆಯ ರಾಜಕೀಯ ಪ್ರಜ್ಞೆಯನ್ನು ಪರೀಕ್ಷೆಗೆ ಒಳಪಡಿಸುವಂತೆ ಭಾಸವಾಗುತ್ತಿದೆ. ಯಾಕೆಂದರೆ ಗೆದ್ದು ಕ್ಷೇತ್ರದ ಹಿತಾಸಕ್ತಿಗಾಗಿ ಕೆಲಸ ಮಾಡದೆ ಸ್ವಲಾಭಕ್ಕಾಗಿ ಪದೇ ಪದೇ ರೇಸಾರ್ಟ್‍ಗೆ ಹೋದಂತಹ ರಮೇಶ್ ಜಾರಕಿಹೊಳಿ ಮತ್ತೆ ಗೆಲ್ಲದಂತೆ ಮಾಡುತ್ತಾರೋ, ಮತ್ತೆ ಗೆಲ್ಲಿಸಿ ವಿಧಾನ ಸಭೆಗೆ ಕಳುಹಿಸುತ್ತಾರೋ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...