Homeಕರ್ನಾಟಕಗೋಕಾಕ್ ಉಪಚುನಾವಣೆ: ಅವರಿವರ ಜೊತೆ ಇದ್ದಾರೆಯೇ ಇಲ್ಲವೇ? ಸದ್ಯಕ್ಕೆ ವದಂತಿಗಳದ್ದೇ ಅಬ್ಬರ

ಗೋಕಾಕ್ ಉಪಚುನಾವಣೆ: ಅವರಿವರ ಜೊತೆ ಇದ್ದಾರೆಯೇ ಇಲ್ಲವೇ? ಸದ್ಯಕ್ಕೆ ವದಂತಿಗಳದ್ದೇ ಅಬ್ಬರ

- Advertisement -
- Advertisement -

ಸಮ್ಮಿಶ್ರ ಸರ್ಕಾರವನ್ನು ಅತಂತ್ರಗೊಳಿಸಲು ಸತತ ಪ್ರಯತ್ನಮಾಡಿ ಕಡೆಗೂ ಬಿಜೆಪಿ ಸರ್ಕಾರ ಬರಲು ಕಾರಣವಾದ ರಮೇಶ್ ಜಾರಕಿಹೊಳಿಯ ಗೋಕಾಕ್ ವಿಧಾನಸಭಾ ಕ್ಷೇತ್ರ ಈಗ ರಾಜ್ಯದ ಪ್ರತಿಷ್ಟಿತ ಕಣವಾಗಿ ಮಾರ್ಪಟ್ಟಿದೆ. ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಮತ್ತೆ ಗೋಕಾಕ್ ಕ್ಷೇತ್ರದಿಂದ ಆರಿಸಿ ಬರಲು ಯತ್ನಿಸುತ್ತಿದ್ದು,ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿದ್ದಾರೆ. ಆದರೆ ಈತನಿಗೆ ಎದುರಾಳಿಯಾಗಿ ಕಾಂಗ್ರೆಸ್‍ನಿಂದ ಈತನ ಸಹೋದರ ಲಖನ್ ಜಾರಕಿಹೊಳಿ ಕಣಕ್ಕಿಳಿದಿದ್ದು ಲಖನ್‍ಗೆ ಸತೀಶ್ ಜಾರಕಿಹೊಳಿಯ ಸಂಪೂರ್ಣ ಬೆಂಬಲವಿದೆ. ಇವರಿಬ್ಬರಿಗೂ ಪೈಪೋಟಿಯಾಗಿ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ಕಣದಲ್ಲಿದ್ದಾರೆ. ಲಖನ್ ಜಾರಕಿಹೊಳಿ ಜೊತೆ ಸತೀಶ್ ಜಾರಕಿಹೊಳಿಯು ಸಹ ನಾಮಪತ್ರ ಸಲ್ಲಿಸಿ ಹುಬ್ಬೇರಿಸುವಂತೆ ಮಾಡಿದ್ದರು. ಲಖನ್ ನಾಮಪತ್ರವೇನಾದರೂ ಕೊನೆಕ್ಷಣದಲ್ಲಿ ತಿರಸ್ಕೃತವಾದರೆ ಇರಲಿ ಎನ್ನುವ ತಂತ್ರ ಇದಾಗಿದೆ ಎನ್ನಲಾಗಿದೆ. ಆದ್ದರಿಂದ ಈ ಕ್ಷೇತ್ರ ಸದ್ಯಕ್ಕೆ ತ್ರಿಕೋನ ಸ್ಪರ್ಧೆಯಾಗಿ ಮಾರ್ಪಡುವ ಸಾಧ್ಯತೆಯೇ ಹೆಚ್ಚು. ರಮೇಶ್ ಮತ್ತು ಸತೀಶ್ ಜಾರಕಿಹೊಳಿ ಸಹೋದರರ ನಡುವೆ ಬಿರುಕು ಉಂಟಾಗಿದ್ದು ರಮೇಶ್‍ರನ್ನು ಸೋಲಿಸಲೇಬೇಕಿಂದ ಸತೀಶ್, ಲಖನ್ ಜಾರಕಿಹೊಳಿಯನ್ನು ನಿಲ್ಲಿಸಿ ಶತಾಯಗತಾಯ ಗೆಲ್ಲಿಸಲು ಪ್ರಯತ್ನ ಪಡುತ್ತಿದ್ದಾರೆ. ಸತತ ಮೂರು ಬಾರಿ ರಮೇಶ್ ಜಾರಕಿಹೊಳಿ ವಿರುದ್ಧ ಇದೇ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದ ಅಶೋಕ ಪೂಜಾರಿ ಬಿಜೆಪಿಯಲ್ಲಿ ಟಿಕೆಟ್ ಸಿಗದ ಕಾರಣ ಜೆಡಿಎಸ್ ಅಭ್ಯರ್ಥಿಯಾಗಿ ಮತಯಾಚನೆಗೆ ಸಿದ್ಧರಾಗಿದ್ದಾರೆ.

ಬೆಳಗಾವಿಯು ರಮೇಶ್ ಜಾರಕಿಹೊಳಿಯ ಹಲವು ಪ್ರಹಸನಗಳಿಂದ ಗಮನಸೆಳೆಯುವ ಜೊತೆಗೆ ಸಹೋದರರ ಜಗಳ, ಜಾರಕಿಹೊಳಿ ಕುಟುಂಬ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಜೊತೆ ಜಗಳ, ಡಿಕೆಶಿ ವರ್ಸಸ್ ಜಾರಕಿಹೊಳಿ ಕುಟುಂಬ, ಉಮೇಶ್ ಕತ್ತಿ ವರ್ಸಸ್ ಲಕ್ಷ್ಮಣ ಸವದಿ ಈ ರೀತಿಯ ಜಗಳಗಳಿಗೂ ಸಹ ಗಮನ ಸೆಳೆಯುತ್ತಿತ್ತು. ಈಗ ಈ ಎಲ್ಲಾ ಒಳ ಮತ್ತು ಹೊರ ಜಗಳಗಳೂ ಸಹ ಗೋಕಾಕ್ ವಿಧಾನಸಭಾ ಉಪಚುನಾವಣೆಯ ಮೇಲೆ ದಟ್ಟವಾದಂತಹ ಪ್ರಭಾವವನ್ನು ಬೀರುವುದು ಖಚಿತವಾಗಿದೆ. ಶತ್ರುಗಳ ಶತ್ರು ಮಿತ್ರ ಎನ್ನುವಂತೆ ಮೂವರು ಅಭ್ಯರ್ಥಿಗಳಿಗೂ ಊಹಿಸದ ರೀತಿಯಲ್ಲಿ ಸ್ವಪಕ್ಷದಿಂದ ಅಲ್ಲದೇ ಹೊರಗಿನಿಂದಲೂ ಸಹ ಬೆಂಬಲ ವ್ಯಕ್ತವಾಗುತ್ತಿದೆ ಮತ್ತು ಸ್ವಪಕ್ಷದವರೇ ಕಾಲೆಳೆಯುವ ಸಾಧ್ಯತೆಗಳು ಹೆಚ್ಚಾಗಿರುವುದು ವಿಚಿತ್ರವಾದ ಸಂಗತಿಯಾಗಿದೆ. ರಮೇಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಮಧ್ಯೆ ಅಷ್ಟೊಂದು ಜಗಳಗಳಿದ್ದರೂ, ಸತೀಶ್ ಜಾರಕಿಹೊಳಿಯ ಜೊತೆಗೆ ಇಬ್ಬರಿಗೂ ತಗಾದೆ ಇರುವುದರಿಂದ ಲಕ್ಷ್ಮೀ ಹೆಬ್ಬಾಳಕರ್ ರಮೇಶ್‍ಗೆ ಬೆಂಬಲಿಸುವ ಒಳ ಒಪ್ಪಂದವಾಗಿದೆಯೆಂದು ಕ್ಷೇತ್ರದ ಜನ ಮಾತಾಡಿಕೊಳ್ಳುತ್ತಿದ್ದಾರೆ. ಹಾಗಾಗಿಯೇ ಲಕ್ಷ್ಮೀ ಒಬ್ಬರಿಗೇ ಕಾಂಗ್ರೆಸ್‍ನಿಂದ ಗೋಕಾಕ್ ಉಸ್ತುವಾರಿ ನೀಡಲಾಯಿತು, ಆದರೂ ನಾಮಪತ್ರ ಸಲ್ಲಿಕೆಗೆ ಅವರು ಹೋಗಿರದಿದ್ದು ವದಂತಿಗಳಿಗೆ ಕಾರಣವಾಗಿದೆ.

ಇತ್ತೀಚಿಗೆ ಕನಕಪುರದ ಹತ್ತಿರ ಕೆಲವು ಮುಖಂಡರು ಮತ್ತು ಸ್ವಾಮೀಜಿಯ ಜೊತೆ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ಚರ್ಚೆ ಮಾಡಿರುವ ಫೋಟೋ ಹರಿದಾಡುತ್ತಿದ್ದು ಇದು ಡಿಕೆ ಶಿವಕುಮಾರ್ ಅಣತಿಯಂತೆ ಗೋಕಾಕ್ ಮತಕ್ಷೇತ್ರದ ಕುರಿತು ನಡೆದ ಪ್ಲಾನಿಂಗ್ ಮೀಟಿಂಗ್ ಎಂದು ಹೇಳಲಾಗುತ್ತಿದೆ. ಡಿಕೆಶಿ ಜಾರಕಿಹೊಳಿ ಕುಟುಂಬದ ನಡುವೆ ಒಳ ಜಗಳಗಳಿದ್ದು ಡಿಕೆಶಿ ತಮ್ಮದೇ ಪಕ್ಷದ ಅಭ್ಯರ್ಥಿ ಲಖನ್ ಜಾರಕಿಹೊಳಿಗೆ ಬೆಂಬಲಿಸದೆ ಅಶೋಕ್ ಪೂಜಾರಿಗೆ ಬೆಂಬಲಿಸುವ ಸಾಧ್ಯತೆ ಇದೆಯೆಂದು ಈ ಫೋಟೋ ಇಟ್ಟುಕೊಂಡು ಚರ್ಚೆ ಶುರುಮಾಡಿದ್ದಾರೆ. ಡಿಕೆಶಿ ಮತ್ತು ಲಕ್ಷ್ಮಿ ಬೇರೆ ಬೇರೆ ಅಭ್ಯರ್ಥಿಗಳಿಗೆ ಬೆಂಬಲಿಸುವ ಸಾಧ್ಯತೆ ಇರದಿದ್ದರೂ, ವದಂತಿಗಳಿಗೆ ಅದರದ್ದೇ ಆದ ತರ್ಕಗಳಿವೆ.
ಹಾಗೆಯೇ ಅರಭಾವಿ ಶಾಸಕ ಜಾರಕಿಹೊಳಿ ಸೋದರರಲ್ಲೊಬ್ಬರಾದ ಬಾಲಚಂದ್ರ ಮೇಲ್ನೋಟಕ್ಕೆ ಪಕ್ಷದ ಅಭ್ಯರ್ಥಿ ರಮೇಶ್ ಪರ ಒಂದು ಹೇಳಿಕೆ ನೀಡಿದ್ದರೂ, ವಿರುದ್ಧವಾಗಿ ಕೆಲಸ ಮಾಡುತ್ತಾರೆಂಬ ಗುಮಾನಿಯೂ ಹರಿದಾಡುತ್ತಿದೆ.

ಇತ್ತ ಉಪ ಮುಖ್ಯಮಂತ್ರಿ ಸ್ಥಾನ ತನಗೆ ಸಿಗದೇ ಲಕ್ಷ್ಮಣ ಸವದಿಗೆ ಸಿಕ್ಕಿತೆಂದು ಉಮೇಶ್ ಕತ್ತಿ ಸಹಾ ಬಿಜೆಪಿ ಮೇಲೆ ಗರಂ ಆಗಿದ್ದರು. ಜಾರಕಿಹೊಳಿ ಕುಟುಂಬದ ಜೊತೆ ತಗಾದೆ ಇರುವ ಲಕ್ಷ್ಮಣ ಸವದಿಯನ್ನು ದುರ್ಬಲಗೊಳಿಸಬೇಕೆಂದರೆ ರಮೇಶ್ ಜಾರಕಿಹೊಳಿಯ ಬೆಂಬಲಕ್ಕೆ ನಿಲ್ಲಲೇಬೇಕು ಎನ್ನುವ ತೀರ್ಮಾನಕ್ಕೆ ಉಮೇಶ್ ಕತ್ತಿ ಬಂದಿದ್ದಾರೆ ಎನ್ನಲಾಗುತ್ತಿದೆ.

ಇನ್ನು ಈ ಕ್ಷೇತ್ರದಲ್ಲಿ ಲಿಂಗಾಯತ ಮತದಾರರು ನಿರ್ಣಾಯಕ ವಾಗಿದ್ದು ಲಿಂಗಾಯತರ ಮತಗಳು ಯಾರಿಗೆ ಬೀಳಲಿದೆ ಎಂಬುದು ಬಹಳ ಮುಖ್ಯವಾಗುತ್ತದೆ. ಹಾಗೆ ನೋಡಿದರೆ ಸಾಂಪ್ರದಾಯಿಕ ವಾಗಿ ಬಿಜೆಪಿಗೆ ಈ ಸಮುದಾಯದ ಮತಗಳು ಬೀಳುತ್ತವೆ. ಆದರೆ ರಮೇಶ್ ಜಾರಕಿಹೊಳಿ ಲಿಂಗಾಯಿತರ ಜೊತೆ ಅಷ್ಟೇನು ಚೆನ್ನಾಗಿಲ್ಲ ಎಂಬ ಮಾತುಗಳು ಕೇಳಿಬರುತ್ತಿದ್ದು ಇವು ಲಿಂಗಾಯತ ಸಮುದಾಯದ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿಯ ಮಡಿಲು ಸೇರಲಿವೆಯಾ ಎಂಬುದು ಸಹ ಒಂದು ಯಕ್ಷಪ್ರಶ್ನೆಯಾಗಿದೆ.

ಗೋಕಾಕ್ ವಿಧಾನಸಭಾ ಕ್ಷೇತ್ರ ಈ ಬಾರಿ ಕ್ಷೇತ್ರದ ಜನತೆಯ ರಾಜಕೀಯ ಪ್ರಜ್ಞೆಯನ್ನು ಪರೀಕ್ಷೆಗೆ ಒಳಪಡಿಸುವಂತೆ ಭಾಸವಾಗುತ್ತಿದೆ. ಯಾಕೆಂದರೆ ಗೆದ್ದು ಕ್ಷೇತ್ರದ ಹಿತಾಸಕ್ತಿಗಾಗಿ ಕೆಲಸ ಮಾಡದೆ ಸ್ವಲಾಭಕ್ಕಾಗಿ ಪದೇ ಪದೇ ರೇಸಾರ್ಟ್‍ಗೆ ಹೋದಂತಹ ರಮೇಶ್ ಜಾರಕಿಹೊಳಿ ಮತ್ತೆ ಗೆಲ್ಲದಂತೆ ಮಾಡುತ್ತಾರೋ, ಮತ್ತೆ ಗೆಲ್ಲಿಸಿ ವಿಧಾನ ಸಭೆಗೆ ಕಳುಹಿಸುತ್ತಾರೋ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...