Homeಕರ್ನಾಟಕಗೋಕಾಕ್ ಉಪಚುನಾವಣೆ: ಅವರಿವರ ಜೊತೆ ಇದ್ದಾರೆಯೇ ಇಲ್ಲವೇ? ಸದ್ಯಕ್ಕೆ ವದಂತಿಗಳದ್ದೇ ಅಬ್ಬರ

ಗೋಕಾಕ್ ಉಪಚುನಾವಣೆ: ಅವರಿವರ ಜೊತೆ ಇದ್ದಾರೆಯೇ ಇಲ್ಲವೇ? ಸದ್ಯಕ್ಕೆ ವದಂತಿಗಳದ್ದೇ ಅಬ್ಬರ

- Advertisement -
- Advertisement -

ಸಮ್ಮಿಶ್ರ ಸರ್ಕಾರವನ್ನು ಅತಂತ್ರಗೊಳಿಸಲು ಸತತ ಪ್ರಯತ್ನಮಾಡಿ ಕಡೆಗೂ ಬಿಜೆಪಿ ಸರ್ಕಾರ ಬರಲು ಕಾರಣವಾದ ರಮೇಶ್ ಜಾರಕಿಹೊಳಿಯ ಗೋಕಾಕ್ ವಿಧಾನಸಭಾ ಕ್ಷೇತ್ರ ಈಗ ರಾಜ್ಯದ ಪ್ರತಿಷ್ಟಿತ ಕಣವಾಗಿ ಮಾರ್ಪಟ್ಟಿದೆ. ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಮತ್ತೆ ಗೋಕಾಕ್ ಕ್ಷೇತ್ರದಿಂದ ಆರಿಸಿ ಬರಲು ಯತ್ನಿಸುತ್ತಿದ್ದು,ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿದ್ದಾರೆ. ಆದರೆ ಈತನಿಗೆ ಎದುರಾಳಿಯಾಗಿ ಕಾಂಗ್ರೆಸ್‍ನಿಂದ ಈತನ ಸಹೋದರ ಲಖನ್ ಜಾರಕಿಹೊಳಿ ಕಣಕ್ಕಿಳಿದಿದ್ದು ಲಖನ್‍ಗೆ ಸತೀಶ್ ಜಾರಕಿಹೊಳಿಯ ಸಂಪೂರ್ಣ ಬೆಂಬಲವಿದೆ. ಇವರಿಬ್ಬರಿಗೂ ಪೈಪೋಟಿಯಾಗಿ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ಕಣದಲ್ಲಿದ್ದಾರೆ. ಲಖನ್ ಜಾರಕಿಹೊಳಿ ಜೊತೆ ಸತೀಶ್ ಜಾರಕಿಹೊಳಿಯು ಸಹ ನಾಮಪತ್ರ ಸಲ್ಲಿಸಿ ಹುಬ್ಬೇರಿಸುವಂತೆ ಮಾಡಿದ್ದರು. ಲಖನ್ ನಾಮಪತ್ರವೇನಾದರೂ ಕೊನೆಕ್ಷಣದಲ್ಲಿ ತಿರಸ್ಕೃತವಾದರೆ ಇರಲಿ ಎನ್ನುವ ತಂತ್ರ ಇದಾಗಿದೆ ಎನ್ನಲಾಗಿದೆ. ಆದ್ದರಿಂದ ಈ ಕ್ಷೇತ್ರ ಸದ್ಯಕ್ಕೆ ತ್ರಿಕೋನ ಸ್ಪರ್ಧೆಯಾಗಿ ಮಾರ್ಪಡುವ ಸಾಧ್ಯತೆಯೇ ಹೆಚ್ಚು. ರಮೇಶ್ ಮತ್ತು ಸತೀಶ್ ಜಾರಕಿಹೊಳಿ ಸಹೋದರರ ನಡುವೆ ಬಿರುಕು ಉಂಟಾಗಿದ್ದು ರಮೇಶ್‍ರನ್ನು ಸೋಲಿಸಲೇಬೇಕಿಂದ ಸತೀಶ್, ಲಖನ್ ಜಾರಕಿಹೊಳಿಯನ್ನು ನಿಲ್ಲಿಸಿ ಶತಾಯಗತಾಯ ಗೆಲ್ಲಿಸಲು ಪ್ರಯತ್ನ ಪಡುತ್ತಿದ್ದಾರೆ. ಸತತ ಮೂರು ಬಾರಿ ರಮೇಶ್ ಜಾರಕಿಹೊಳಿ ವಿರುದ್ಧ ಇದೇ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದ ಅಶೋಕ ಪೂಜಾರಿ ಬಿಜೆಪಿಯಲ್ಲಿ ಟಿಕೆಟ್ ಸಿಗದ ಕಾರಣ ಜೆಡಿಎಸ್ ಅಭ್ಯರ್ಥಿಯಾಗಿ ಮತಯಾಚನೆಗೆ ಸಿದ್ಧರಾಗಿದ್ದಾರೆ.

ಬೆಳಗಾವಿಯು ರಮೇಶ್ ಜಾರಕಿಹೊಳಿಯ ಹಲವು ಪ್ರಹಸನಗಳಿಂದ ಗಮನಸೆಳೆಯುವ ಜೊತೆಗೆ ಸಹೋದರರ ಜಗಳ, ಜಾರಕಿಹೊಳಿ ಕುಟುಂಬ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಜೊತೆ ಜಗಳ, ಡಿಕೆಶಿ ವರ್ಸಸ್ ಜಾರಕಿಹೊಳಿ ಕುಟುಂಬ, ಉಮೇಶ್ ಕತ್ತಿ ವರ್ಸಸ್ ಲಕ್ಷ್ಮಣ ಸವದಿ ಈ ರೀತಿಯ ಜಗಳಗಳಿಗೂ ಸಹ ಗಮನ ಸೆಳೆಯುತ್ತಿತ್ತು. ಈಗ ಈ ಎಲ್ಲಾ ಒಳ ಮತ್ತು ಹೊರ ಜಗಳಗಳೂ ಸಹ ಗೋಕಾಕ್ ವಿಧಾನಸಭಾ ಉಪಚುನಾವಣೆಯ ಮೇಲೆ ದಟ್ಟವಾದಂತಹ ಪ್ರಭಾವವನ್ನು ಬೀರುವುದು ಖಚಿತವಾಗಿದೆ. ಶತ್ರುಗಳ ಶತ್ರು ಮಿತ್ರ ಎನ್ನುವಂತೆ ಮೂವರು ಅಭ್ಯರ್ಥಿಗಳಿಗೂ ಊಹಿಸದ ರೀತಿಯಲ್ಲಿ ಸ್ವಪಕ್ಷದಿಂದ ಅಲ್ಲದೇ ಹೊರಗಿನಿಂದಲೂ ಸಹ ಬೆಂಬಲ ವ್ಯಕ್ತವಾಗುತ್ತಿದೆ ಮತ್ತು ಸ್ವಪಕ್ಷದವರೇ ಕಾಲೆಳೆಯುವ ಸಾಧ್ಯತೆಗಳು ಹೆಚ್ಚಾಗಿರುವುದು ವಿಚಿತ್ರವಾದ ಸಂಗತಿಯಾಗಿದೆ. ರಮೇಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಮಧ್ಯೆ ಅಷ್ಟೊಂದು ಜಗಳಗಳಿದ್ದರೂ, ಸತೀಶ್ ಜಾರಕಿಹೊಳಿಯ ಜೊತೆಗೆ ಇಬ್ಬರಿಗೂ ತಗಾದೆ ಇರುವುದರಿಂದ ಲಕ್ಷ್ಮೀ ಹೆಬ್ಬಾಳಕರ್ ರಮೇಶ್‍ಗೆ ಬೆಂಬಲಿಸುವ ಒಳ ಒಪ್ಪಂದವಾಗಿದೆಯೆಂದು ಕ್ಷೇತ್ರದ ಜನ ಮಾತಾಡಿಕೊಳ್ಳುತ್ತಿದ್ದಾರೆ. ಹಾಗಾಗಿಯೇ ಲಕ್ಷ್ಮೀ ಒಬ್ಬರಿಗೇ ಕಾಂಗ್ರೆಸ್‍ನಿಂದ ಗೋಕಾಕ್ ಉಸ್ತುವಾರಿ ನೀಡಲಾಯಿತು, ಆದರೂ ನಾಮಪತ್ರ ಸಲ್ಲಿಕೆಗೆ ಅವರು ಹೋಗಿರದಿದ್ದು ವದಂತಿಗಳಿಗೆ ಕಾರಣವಾಗಿದೆ.

ಇತ್ತೀಚಿಗೆ ಕನಕಪುರದ ಹತ್ತಿರ ಕೆಲವು ಮುಖಂಡರು ಮತ್ತು ಸ್ವಾಮೀಜಿಯ ಜೊತೆ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ಚರ್ಚೆ ಮಾಡಿರುವ ಫೋಟೋ ಹರಿದಾಡುತ್ತಿದ್ದು ಇದು ಡಿಕೆ ಶಿವಕುಮಾರ್ ಅಣತಿಯಂತೆ ಗೋಕಾಕ್ ಮತಕ್ಷೇತ್ರದ ಕುರಿತು ನಡೆದ ಪ್ಲಾನಿಂಗ್ ಮೀಟಿಂಗ್ ಎಂದು ಹೇಳಲಾಗುತ್ತಿದೆ. ಡಿಕೆಶಿ ಜಾರಕಿಹೊಳಿ ಕುಟುಂಬದ ನಡುವೆ ಒಳ ಜಗಳಗಳಿದ್ದು ಡಿಕೆಶಿ ತಮ್ಮದೇ ಪಕ್ಷದ ಅಭ್ಯರ್ಥಿ ಲಖನ್ ಜಾರಕಿಹೊಳಿಗೆ ಬೆಂಬಲಿಸದೆ ಅಶೋಕ್ ಪೂಜಾರಿಗೆ ಬೆಂಬಲಿಸುವ ಸಾಧ್ಯತೆ ಇದೆಯೆಂದು ಈ ಫೋಟೋ ಇಟ್ಟುಕೊಂಡು ಚರ್ಚೆ ಶುರುಮಾಡಿದ್ದಾರೆ. ಡಿಕೆಶಿ ಮತ್ತು ಲಕ್ಷ್ಮಿ ಬೇರೆ ಬೇರೆ ಅಭ್ಯರ್ಥಿಗಳಿಗೆ ಬೆಂಬಲಿಸುವ ಸಾಧ್ಯತೆ ಇರದಿದ್ದರೂ, ವದಂತಿಗಳಿಗೆ ಅದರದ್ದೇ ಆದ ತರ್ಕಗಳಿವೆ.
ಹಾಗೆಯೇ ಅರಭಾವಿ ಶಾಸಕ ಜಾರಕಿಹೊಳಿ ಸೋದರರಲ್ಲೊಬ್ಬರಾದ ಬಾಲಚಂದ್ರ ಮೇಲ್ನೋಟಕ್ಕೆ ಪಕ್ಷದ ಅಭ್ಯರ್ಥಿ ರಮೇಶ್ ಪರ ಒಂದು ಹೇಳಿಕೆ ನೀಡಿದ್ದರೂ, ವಿರುದ್ಧವಾಗಿ ಕೆಲಸ ಮಾಡುತ್ತಾರೆಂಬ ಗುಮಾನಿಯೂ ಹರಿದಾಡುತ್ತಿದೆ.

ಇತ್ತ ಉಪ ಮುಖ್ಯಮಂತ್ರಿ ಸ್ಥಾನ ತನಗೆ ಸಿಗದೇ ಲಕ್ಷ್ಮಣ ಸವದಿಗೆ ಸಿಕ್ಕಿತೆಂದು ಉಮೇಶ್ ಕತ್ತಿ ಸಹಾ ಬಿಜೆಪಿ ಮೇಲೆ ಗರಂ ಆಗಿದ್ದರು. ಜಾರಕಿಹೊಳಿ ಕುಟುಂಬದ ಜೊತೆ ತಗಾದೆ ಇರುವ ಲಕ್ಷ್ಮಣ ಸವದಿಯನ್ನು ದುರ್ಬಲಗೊಳಿಸಬೇಕೆಂದರೆ ರಮೇಶ್ ಜಾರಕಿಹೊಳಿಯ ಬೆಂಬಲಕ್ಕೆ ನಿಲ್ಲಲೇಬೇಕು ಎನ್ನುವ ತೀರ್ಮಾನಕ್ಕೆ ಉಮೇಶ್ ಕತ್ತಿ ಬಂದಿದ್ದಾರೆ ಎನ್ನಲಾಗುತ್ತಿದೆ.

ಇನ್ನು ಈ ಕ್ಷೇತ್ರದಲ್ಲಿ ಲಿಂಗಾಯತ ಮತದಾರರು ನಿರ್ಣಾಯಕ ವಾಗಿದ್ದು ಲಿಂಗಾಯತರ ಮತಗಳು ಯಾರಿಗೆ ಬೀಳಲಿದೆ ಎಂಬುದು ಬಹಳ ಮುಖ್ಯವಾಗುತ್ತದೆ. ಹಾಗೆ ನೋಡಿದರೆ ಸಾಂಪ್ರದಾಯಿಕ ವಾಗಿ ಬಿಜೆಪಿಗೆ ಈ ಸಮುದಾಯದ ಮತಗಳು ಬೀಳುತ್ತವೆ. ಆದರೆ ರಮೇಶ್ ಜಾರಕಿಹೊಳಿ ಲಿಂಗಾಯಿತರ ಜೊತೆ ಅಷ್ಟೇನು ಚೆನ್ನಾಗಿಲ್ಲ ಎಂಬ ಮಾತುಗಳು ಕೇಳಿಬರುತ್ತಿದ್ದು ಇವು ಲಿಂಗಾಯತ ಸಮುದಾಯದ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿಯ ಮಡಿಲು ಸೇರಲಿವೆಯಾ ಎಂಬುದು ಸಹ ಒಂದು ಯಕ್ಷಪ್ರಶ್ನೆಯಾಗಿದೆ.

ಗೋಕಾಕ್ ವಿಧಾನಸಭಾ ಕ್ಷೇತ್ರ ಈ ಬಾರಿ ಕ್ಷೇತ್ರದ ಜನತೆಯ ರಾಜಕೀಯ ಪ್ರಜ್ಞೆಯನ್ನು ಪರೀಕ್ಷೆಗೆ ಒಳಪಡಿಸುವಂತೆ ಭಾಸವಾಗುತ್ತಿದೆ. ಯಾಕೆಂದರೆ ಗೆದ್ದು ಕ್ಷೇತ್ರದ ಹಿತಾಸಕ್ತಿಗಾಗಿ ಕೆಲಸ ಮಾಡದೆ ಸ್ವಲಾಭಕ್ಕಾಗಿ ಪದೇ ಪದೇ ರೇಸಾರ್ಟ್‍ಗೆ ಹೋದಂತಹ ರಮೇಶ್ ಜಾರಕಿಹೊಳಿ ಮತ್ತೆ ಗೆಲ್ಲದಂತೆ ಮಾಡುತ್ತಾರೋ, ಮತ್ತೆ ಗೆಲ್ಲಿಸಿ ವಿಧಾನ ಸಭೆಗೆ ಕಳುಹಿಸುತ್ತಾರೋ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ BJP ಗೆಲುವು SIR ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...