Homeಮುಖಪುಟಶಬೇ ಬರಾಅತ್ ದಿನವೇ ಪ್ರಸಿದ್ದ ಮಸೀದಿಗೆ ಬೀಗ : ಸತತ ಆರನೇ ವರ್ಷವೂ ವಿಶೇಷ ಪ್ರಾರ್ಥನೆಗೆ...

ಶಬೇ ಬರಾಅತ್ ದಿನವೇ ಪ್ರಸಿದ್ದ ಮಸೀದಿಗೆ ಬೀಗ : ಸತತ ಆರನೇ ವರ್ಷವೂ ವಿಶೇಷ ಪ್ರಾರ್ಥನೆಗೆ ನಿರ್ಬಂಧ

- Advertisement -
- Advertisement -

ಮುಸ್ಲಿಮರ ಪವಿತ್ರ ‘ಶಬೇ ಬರಾಅತ್’ ದಿನವಾದ ಗುರುವಾರ (ಫೆ.13) ಶ್ರೀನಗರದ ಪ್ರಸಿದ್ದ ಜಾಮಿಯಾ ಮಸೀದಿಯಲ್ಲಿ ರಾತ್ರಿಯ ವಿಶೇಷ ಪ್ರಾರ್ಥನೆಗೆ ಅವಕಾಶ ನಿರಾಕರಿಸಿದ ಆಡಳಿತ, ಮಸೀದಿಗೆ ಬೀಗ ಜಡಿದಿದೆ. ಅಲ್ಲದೆ, ಪ್ರಾರ್ಥನೆಗೆ ನೇತೃತ್ವ ವಹಿಸಬೇಕಿದ್ದ ಕಾಶ್ಮೀರದ ಮುಖ್ಯ ಧರ್ಮಗುರು ಮಿರ್ವೈಝ್ ಉಮರ್ ಫಾರೂಕ್ ಅವರನ್ನು ಗೃಹ ಬಂಧನದಲ್ಲಿಟ್ಟಿದೆ ಎಂದು ವರದಿಯಾಗಿದೆ.

“ಗುರುವಾರ ಅಧಿಕಾರಿಗಳು ಹಠಾತ್ ಮಸೀದಿಯ ದ್ವಾರಗಳನ್ನು ಮುಚ್ಚಿದರು ಮತ್ತು ಪೊಲೀಸ್ ಸಿಬ್ಬಂದಿ ಜನರನ್ನು ಮಸೀದಿಯಿಂದ ಹೊರ ಹೋಗುವಂತೆ ಸೂಚಿಸಿದರು” ಎಂದು ಮಸೀದಿಯ ಉಸ್ತುವಾರಿ ವಹಿಸಿರುವ ಅಂಜುಮನ್ ಔಕಾಫ್ ಹೇಳಿದೆ.

“ಜಾಮಿಯಾ ಮಸೀದಿಯಲ್ಲಿ ಶಬೇ ಬರಾತ್ ಆಚರಣೆಗೆ ಅನುಮತಿ ನೀಡುವುದಿಲ್ಲ” ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುರುವಾರ ಬೆಳಿಗ್ಗೆಯಿಂದ ಧರ್ಮಗುರು ಮಿರ್ವೈಝ್ ಉಮರ್ ಫಾರೂಕ್ ಅವರನ್ನು ಗೃಹ ಬಂಧನದಲ್ಲಿಡಲಾಗಿದೆ. ಅವರು ತನ್ನ ಧಾರ್ಮಿಕ ಕರ್ತವ್ಯಗಳನ್ನು ನಿರ್ವಹಿಸದಂತೆ ತಡೆಯಲಾಗಿದೆ” ಎಂದು ಔಕಾಫ್ ಆರೋಪಿಸಿದೆ.

ವಿಶೇಷ ಧಾರ್ಮಿಕ ದಿನಗಳಂದು ಹೆಚ್ಚಿನ ಜನರು ಮಸೀದಿಗಳಿಗೆ ಭೇಟಿ ನೀಡುತ್ತಾರೆ. ಆದರೆ, ಎಲ್ಲಾ ವಿಶೇಷ ದಿನಗಳಂದು ಜಾಮಿಯಾ ಮಸೀದಿಯನ್ನು ಮುಚ್ಚಲಾಗ್ತಿದೆ. ಅಲ್ಲದೆ, ಪ್ರಾರ್ಥನೆಗೆ ನೇತೃತ್ವ ವಹಿಸಬೇಕಿದ್ದ ಧಾರ್ಮಿಕ ಗುರು ಮಿರ್ವೈಝ್ ಉಮರ್ ಫಾರೂಕ್ ಅವರನ್ನು ಗೃಹ ಬಂಧನದಲ್ಲಿಡಲಾಗುತ್ತಿದೆ. ಇದು ಬಹಳ ದುರದೃಷ್ಟಕರ. ಇಂತಹ ಪುನರಾವರ್ತಿತ ನಿರ್ಬಂಧಗಳು ಜನರ ಭಾವನೆಗಳಿಗೆ ನೋವುಂಟು ಮಾಡುವುದಲ್ಲದೆ, ಅವರ ಮೂಲಭೂತ ಧಾರ್ಮಿಕ ಹಕ್ಕುನ್ನು ತಡೆದಂತೆಯಾಗುತ್ತದೆ ಎಂದು ಅಂಜುಮನ್ ಔಕಾಫ್ ಹೇಳಿದೆ.

ದುರದೃಷ್ಟಕರ : ಸಿಎಂ ಉಮರ್ ಅಬ್ದುಲ್ಲಾ

“ಶಬೇ ಬರಾಅತ್ ದಿನವೇ ಶ್ರೀನಗರದ ಜಾಮಿಯಾ ಮಸೀದಿಯನ್ನು ಮುಚ್ಚಿರುವುದು ದುರದೃಷ್ಟಕರ. ಈ ಕ್ರಮ ಜನರಿಗೆ ಕಾನೂನು ಸುವ್ಯವಸ್ಥೆಯ ಮೇಲೆ ನಂಬಿಕೆ ಕಡಿಮೆಯಾಗುವಂತೆ ಮಾಡುತ್ತದೆ. ಕಾಶ್ಮೀರದ ಜನರು ಈ ಪರಿಸ್ಥಿತಿ ಎದುರಿಸಬೇಕಾದವರಲ್ಲ. ಅವರು ಇದಕ್ಕಿಂತ ಉತ್ತಮ ಪರಿಸ್ಥಿತಿ ಅನುಭವಿಸಬೇಕಾದವರು” ಎಂದು ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಸಾಮಾಜಿಕ ಜಾಲತಾಣ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ನಾಯಕಿ ಇಲ್ತಿಜಾ ಮುಫ್ತಿ ಕೂಡ ಆಡಳಿತದ ಕ್ರಮವನ್ನು ಖಂಡಿಸಿದ್ದಾರೆ. “ಶಬೇ ಬರಾಅತ್ ಹಬ್ಬದ ಪವಿತ್ರ ದಿನದಂದು ಮಿರ್ವೈಝ್ ಸಾಹಬ್ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಮತ್ತು ಜಾಮಿಯಾ ಮಸೀದಿಯ ದ್ವಾರಗಳನ್ನು ಹಠಾತ್ತನೆ ಮುಚ್ಚಲಾಗಿದೆ. ಕಾಶ್ಮೀರದಲ್ಲಿ ನಮ್ಮ ಮೂಲಭೂತ ವಾಕ್ ಮತ್ತು ಅಭಿವ್ಯಕ್ತಿ ಹಕ್ಕುಗಳನ್ನು ಮಾತ್ರವಲ್ಲದೆ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಕೂಡ ತಡೆಯಲಾಗುತ್ತಿದೆ. ಇದು ಅಪರಾಧ ಮತ್ತು ದುಃಖಕರ. ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಸರ್ಕಾರ ಚರ್ಚ್ ಇಲಿಯಂತೆ ಮೌನವಾಗಿರುವುದು ಆಘಾತಕಾರಿ. ನೀವು ಯಾವ ಸಂವಿಧಾನವನ್ನು ಅನುಸರಿಸುತ್ತಿದ್ದೀರಿ?” ಎಂದು ಇಲ್ತಿಜಾ ಮುಫ್ತಿ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ ಪೋಸ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಆರನೇ ವರ್ಷವೂ ಮಸೀದಿ ಬಂದ್

ಶಬೇ ಬರಾಅತ್ ದಿನ ಸತತ ಆರನೇ ವರ್ಷವೂ ಜಾಮಿಯಾ ಮಸೀದಿಗೆ ಬೀಗ ಜಡಿಯಲಾಗಿದೆ ಎಂದು ವರದಿಗಳು ಹೇಳಿವೆ. ಆದರೆ, ಯಾವ ಕಾರಣಕ್ಕೆ ಶಬೇ ಬರಾಅತ್ ದಿನ ಮಸೀದಿಯನ್ನು ಬಂದ್ ಮಾಡಲಾಗಿದೆ ಎಂಬುವುದು ಸ್ಪಷ್ಟವಾಗಿಲ್ಲ.

ಮಣಿಪುರ | ಇಬ್ಬರು ಸಹೋದ್ಯೋಗಿಗಳನ್ನು ಕೊಂದು, ಗುಂಡು ಹಾರಿಸಿ ಆತ್ಮಹತ್ಯೆ ಮಾಡಿದ ಯೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...