Homeಮುಖಪುಟಏಕರೂಪ ನಾಗರಿಕ ಸಂಹಿತೆಯಡಿ ಕ್ರಮ ಎದುರಿಸುತ್ತಿರುವವರು ನಮ್ಮನ್ನು ಸಂಪರ್ಕಿಸಬಹುದು : ಉತ್ತರಾಖಂಡ ಹೈಕೋರ್ಟ್

ಏಕರೂಪ ನಾಗರಿಕ ಸಂಹಿತೆಯಡಿ ಕ್ರಮ ಎದುರಿಸುತ್ತಿರುವವರು ನಮ್ಮನ್ನು ಸಂಪರ್ಕಿಸಬಹುದು : ಉತ್ತರಾಖಂಡ ಹೈಕೋರ್ಟ್

- Advertisement -
- Advertisement -

ರಾಜ್ಯದ ಏಕರೂಪ ನಾಗರಿಕ ಸಂಹಿತೆಯಿಂದ (ಯುಸಿಸಿ) ಸಮಸ್ಯೆಗೆ ಒಳಗಾದವರು ಅಥವಾ ಅಧಿಕಾರಿಗಳಿಂದ ಸಂಬಂಧಿತ ಕ್ರಮವನ್ನು ಎದುರಿಸುತ್ತಿರುವ ವ್ಯಕ್ತಿಗಳು ನಮ್ಮನ್ನು (ನ್ಯಾಯಾಲಯ) ಸಂಪರ್ಕಿಸಿದರೆ, ಅವರ ಸಮಸ್ಯೆಯನ್ನು ಆಲಿಸಲಾಗುವುದು ಎಂದು ಉತ್ತರಾಖಂಡ ಹೈಕೋರ್ಟ್ ಶುಕ್ರವಾರ (ಫೆ.14) ಹೇಳಿರುವುದಾಗಿ ಲೈವ್ ಲಾ ವರದಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಜಿ. ನರೇಂದರ್ ಮತ್ತು ನ್ಯಾಯಮೂರ್ತಿ ಅಲೋಕ್ ಮಹ್ರಾ ಅವರ ಪೀಠವು 2024ರ ಏಕರೂಪ ನಾಗರಿಕ ಸಂಹಿತೆ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿದೆ. ಜನವರಿ 27, 2025ರಂದು ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಂದಿದೆ.

ಏಕರೂಪ ನಾಗರಿಕ ಸಂಹಿತೆ ಜಾರಿಯಾದ ಬಳಿಕ ರಾಜ್ಯದ ಎಲ್ಲಾ ನಾಗರಿಕರ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ದತ್ತು ಸ್ವೀಕಾರಕ್ಕೆ ಏಕರೂಪದ ನಿಯಮಗಳನ್ನು ಅನ್ವಯಿಸಲಾಗುತ್ತಿದೆ. ಇದಕ್ಕೂ ಮುನ್ನ, ವಿವಿಧ ಧಾರ್ಮಿಕ ಮತ್ತು ಬುಡಕಟ್ಟು ಗುಂಪುಗಳು ಅವುಗಳ ನಿರ್ದಿಷ್ಟ ನಿಯಮಗಳನ್ನು ಪಾಲಿಸುತ್ತಿತ್ತು. ಈ ನಿಯಮಗಳು ಹೆಚ್ಚಾಗಿ ಧಾರ್ಮಿಕ ಗ್ರಂಥಗಳನ್ನು ಅನುಸರಿಸಿವೆ.

ಉತ್ತರಾಖಂಡದ ಏಕರೂಪ ನಾಗರಿಕ ಸಂಹಿತೆಯ ಪ್ರಕಾರ, ಎಲ್ಲಾ ಸ್ಥಳೀಯರು ತಮ್ಮ ಲಿವ್-ಇನ್ ಸಂಬಂಧಗಳನ್ನು ರಾಜ್ಯದ ಒಳಗೆ ಅಥವಾ ಹೊರಗೆ ನೋಂದಾಯಿಸಿಕೊಳ್ಳಬೇಕು. ಹಾಗೆ ಮಾಡಲು ವಿಫಲವಾದರೆ ಮೂರು ತಿಂಗಳವರೆಗೆ ಜೈಲು ಶಿಕ್ಷೆ ಮತ್ತು 10,000 ರೂ.ಗಳವರೆಗೆ ದಂಡ ವಿಧಿಸಬಹುದು.

ಲೀವ್-ಇನ್ ಸಂಬಂಧಗಳನ್ನು ನೋಂದಾಯಿಸುವುದರಿಂದ ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯಾಗುತ್ತದೆ ಎಂದು ಹೇಳಲಾಗಿದೆ. ಆದರೆ, ಕಾನೂನು ತಜ್ಞರು ಈ ಹಿಂದಿನ ಕಾನೂನಗಳೇ ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳನ್ನು ರಕ್ಷಿಸಲು ಸುರಕ್ಷತಾ ಕ್ರಮಗಳನ್ನು ಹೊಂದಿತ್ತು ಎಂದಿದ್ದಾರೆ.

ಶುಕ್ರವಾರ ನಡೆದ ವಿಚಾರಣೆಯಲ್ಲಿ, ಅರ್ಜಿದಾರರಾದ ಮುಹಮ್ಮದ್ ಮುಕೀಮ್ ಅವರನ್ನು ಪ್ರತಿನಿಧಿಸಿದ್ದ ವಕೀಲ ಕಪಿಲ್ ಸಿಬಲ್ ಅವರು, 2024ರ ಏಕರೂಪ ನಾಗರಿಕ ಸಂಹಿತೆ ಕಾಯ್ದೆಗೆ ತಡೆ ಕೋರಿ ವಾದ ಮಂಡಿಸಲು ದಿನಾಂಕ ನಿಗದಿಪಡಿಸುವಂತೆ ಪೀಠವನ್ನು ಕೋರಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ.

ಸಂವಿಧಾನದ 21 ಮತ್ತು 25ನೇ ವಿಧಿಗಳ ಅಡಿಯಲ್ಲಿ ಖಾತರಿಪಡಿಸಲಾದ ಮೂಲಭೂತ ಹಕ್ಕುಗಳನ್ನು ಏಕರೂಪ ನಾಗರಿಕ ಸಂಹಿತೆ ಉಲ್ಲಂಘಿಸುತ್ತದೆ ಎಂದು ಕಪಿಲ್ ಸಿಬಲ್ ವಾದಿಸಿದ್ದಾರೆ. ಸಂವಿಧಾನದ 21ನೇ ವಿಧಿಯು ಬದುಕುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯವನ್ನು ರಕ್ಷಿಸಿದರೆ, 25ನೇ ವಿಧಿಯು ಒಬ್ಬರು ವ್ಯಕ್ತಿಗೆ ಅವರ ಧರ್ಮವನ್ನು ಆಚರಿಸುವ, ಪ್ರಚಾರ ಮಾಡುವ ಮತ್ತು ಪ್ರತಿಪಾದಿಸುವ ಸ್ವಾತಂತ್ರ್ಯವನ್ನು ಖಾತರಿಪಡಿಸುತ್ತದೆ.

ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ರಾಜ್ಯ ಸರ್ಕಾರಕ್ಕೆ ಅಗತ್ಯವಾದ ಅರ್ಹತೆಯ ಕೊರತೆಯಿದೆ ಎಂದೂ ಸಿಬಲ್ ಹೇಳಿದ್ದಾರೆ.

“ರಾಜ್ಯ ಸರ್ಕಾರವು ಅಧಿಕಾರದ ವ್ಯಾಪ್ತಿಯನ್ನು ಮೀರಿ ಏಕರೂಪ ನಾಗರಿಕ ಸಂಹಿತೆಯಲ್ಲಿ ಲಿವ್-ಇನ್ ಸಂಬಂಧವನ್ನು ಸೇರಿಸಿದೆ. ಇದನ್ನು ಮಾಡುವ ಯಾವುದೇ ಅರ್ಹತೆ ರಾಜ್ಯ ಸರ್ಕಾರಕ್ಕೆ ಇಲ್ಲ. ಏಕೆಂದರೆ ಸಂವಿಧಾನದ ಸಮಕಾಲೀನ ಪಟ್ಟಿಯ ನಮೂದು 5ರಲ್ಲಿ ಮದುವೆ ಮತ್ತು ವಿಚ್ಛೇದನಕ್ಕೆ ಸಂಬಂಧಿಸಿದಂತೆ ಮಾತ್ರ ರಾಜ್ಯ ಸರ್ಕಾರ ಶಾಸನವನ್ನು ಅಂಗೀಕರಿಸಲು ಅವಕಾಶವಿದೆ” ಎಂದು ಸಿಬಲ್ ವಾದಿಸಿದ್ದಾರೆ.

ಲಿವ್-ಇನ್ ಸಂಬಂಧಗಳ ಕುರಿತು ನಿರ್ಣಯ ತೆಗೆದುಕೊಳ್ಳುವುದು ರಾಜ್ಯದ ವ್ಯಾಪ್ತಿಗೆ ಬರುವುದಿಲ್ಲ. ಪಟ್ಟಿ 1ರ ನಮೂದು 97ರ ಅಡಿಯಲ್ಲಿ ಈ ವಿಚಾರ ಸಂಸತ್ತಿನ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಸಿಬಲ್ ಹೇಳಿದ್ದಾರೆ.

ಸಿಬಲ್ ವಾದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, ಏಕರೂಪ ನಾಗರಿಕ ಸಂಹಿತೆಯ ವಿರುದ್ಧದ ಇತರ ಎರಡು ಅರ್ಜಿಗಳ ಕುರಿತು ರಾಜ್ಯ ಸರ್ಕಾರಕ್ಕೆ ಈಗಾಗಲೇ ನೋಟಿಸ್ ಜಾರಿ ಮಾಡಲಾಗಿದೆ. ಏಪ್ರಿಲ್ 1ಕ್ಕೆ ಮುಂದಿನ ವಿಚಾರಣೆಯನ್ನು ನಿಗದಿಪಡಿಸಲಾಗಿದೆ ಎಂದು ತಿಳಿಸಿದೆ.

ಈ ವೇಳೆ ಪ್ರತಿಕ್ರಿಯಿಸಿದ ಕಪಿಲ್ ಸಿಬಲ್, ಅರ್ಜಿದಾರರು ಸೇರಿದಂತೆ ಸಂಹಿತೆಯಿಂದ ಸಮಸ್ಯೆಗೆ ಒಳಗಾದ ವ್ಯಕ್ತಿಗಳು ಈ ನಡುವೆ ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಜಿ. ನರೇಂದರ್ ಅವರು, ಹೊಸ ಕಾನೂನಿಂದ ಸಮಸ್ಯೆಗೆ ಒಳಗಾದ ಯಾವುದೇ ವ್ಯಕ್ತಿ ನಮ್ಮನ್ನು ಸಂಪರ್ಕಿಸಬಹುದು. ಅವರ ಸಮಸ್ಯೆ ಆಳಿಸಲಾಗುವುದು ಎಂದು ತಿಳಿಸಿದ್ದಾರೆ.

ಬುಧವಾರ ಇತರ ಅರ್ಜಿಗಳ ವಿಚಾರಣೆ ವೇಳೆ, ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ವಿಚಾರದಲ್ಲಿ ‘ಏನು ತಪ್ಪಾಗಿದೆ’ ಎಂದು ನ್ಯಾಯಾಲಯ ಕೇಳಿತ್ತು.

ಏಕರೂಪ ನಾಗರಿಕ ಸಂಹಿತೆ ಮುಸ್ಲಿಮರು ಮತ್ತು ಇತರ ನಾಗರಿಕರ ಮೂಲಭೂತ ಹಕ್ಕುಗಳನ್ನು ಹಾಗೂ ಮುಸ್ಲಿಂ ಸಮುದಾಯದ ಅಗತ್ಯ ಧಾರ್ಮಿಕ ಆಚರಣೆಗಳ ಹಕ್ಕುಗಳನ್ನು ತಡೆಯುತ್ತದೆ ಎಂದು ಆರೋಪಿಸಿ ಅಲ್ಮಾಸುದ್ದೀನ್ ಸಿದ್ದಿಕಿ ಮತ್ತು ಇಕ್ರಮ್ ಎಂಬ ಇಬ್ಬರು ವ್ಯಕ್ತಿಗಳು ಸಲ್ಲಿಸಿರುವ ಇತರ ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

ವರದಕ್ಷಿಣೆ ಕಿರುಕುಳ ದೂರೊಂದನ್ನು ರದ್ದುಗೊಳಿಸಲು ದೆಹಲಿ ಹೈಕೋರ್ಟ್ ಕೊಟ್ಟ ಕಾರಣವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...