Homeಮುಖಪುಟಏಕರೂಪ ನಾಗರಿಕ ಸಂಹಿತೆಯಡಿ ಕ್ರಮ ಎದುರಿಸುತ್ತಿರುವವರು ನಮ್ಮನ್ನು ಸಂಪರ್ಕಿಸಬಹುದು : ಉತ್ತರಾಖಂಡ ಹೈಕೋರ್ಟ್

ಏಕರೂಪ ನಾಗರಿಕ ಸಂಹಿತೆಯಡಿ ಕ್ರಮ ಎದುರಿಸುತ್ತಿರುವವರು ನಮ್ಮನ್ನು ಸಂಪರ್ಕಿಸಬಹುದು : ಉತ್ತರಾಖಂಡ ಹೈಕೋರ್ಟ್

- Advertisement -
- Advertisement -

ರಾಜ್ಯದ ಏಕರೂಪ ನಾಗರಿಕ ಸಂಹಿತೆಯಿಂದ (ಯುಸಿಸಿ) ಸಮಸ್ಯೆಗೆ ಒಳಗಾದವರು ಅಥವಾ ಅಧಿಕಾರಿಗಳಿಂದ ಸಂಬಂಧಿತ ಕ್ರಮವನ್ನು ಎದುರಿಸುತ್ತಿರುವ ವ್ಯಕ್ತಿಗಳು ನಮ್ಮನ್ನು (ನ್ಯಾಯಾಲಯ) ಸಂಪರ್ಕಿಸಿದರೆ, ಅವರ ಸಮಸ್ಯೆಯನ್ನು ಆಲಿಸಲಾಗುವುದು ಎಂದು ಉತ್ತರಾಖಂಡ ಹೈಕೋರ್ಟ್ ಶುಕ್ರವಾರ (ಫೆ.14) ಹೇಳಿರುವುದಾಗಿ ಲೈವ್ ಲಾ ವರದಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಜಿ. ನರೇಂದರ್ ಮತ್ತು ನ್ಯಾಯಮೂರ್ತಿ ಅಲೋಕ್ ಮಹ್ರಾ ಅವರ ಪೀಠವು 2024ರ ಏಕರೂಪ ನಾಗರಿಕ ಸಂಹಿತೆ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿದೆ. ಜನವರಿ 27, 2025ರಂದು ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಂದಿದೆ.

ಏಕರೂಪ ನಾಗರಿಕ ಸಂಹಿತೆ ಜಾರಿಯಾದ ಬಳಿಕ ರಾಜ್ಯದ ಎಲ್ಲಾ ನಾಗರಿಕರ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ದತ್ತು ಸ್ವೀಕಾರಕ್ಕೆ ಏಕರೂಪದ ನಿಯಮಗಳನ್ನು ಅನ್ವಯಿಸಲಾಗುತ್ತಿದೆ. ಇದಕ್ಕೂ ಮುನ್ನ, ವಿವಿಧ ಧಾರ್ಮಿಕ ಮತ್ತು ಬುಡಕಟ್ಟು ಗುಂಪುಗಳು ಅವುಗಳ ನಿರ್ದಿಷ್ಟ ನಿಯಮಗಳನ್ನು ಪಾಲಿಸುತ್ತಿತ್ತು. ಈ ನಿಯಮಗಳು ಹೆಚ್ಚಾಗಿ ಧಾರ್ಮಿಕ ಗ್ರಂಥಗಳನ್ನು ಅನುಸರಿಸಿವೆ.

ಉತ್ತರಾಖಂಡದ ಏಕರೂಪ ನಾಗರಿಕ ಸಂಹಿತೆಯ ಪ್ರಕಾರ, ಎಲ್ಲಾ ಸ್ಥಳೀಯರು ತಮ್ಮ ಲಿವ್-ಇನ್ ಸಂಬಂಧಗಳನ್ನು ರಾಜ್ಯದ ಒಳಗೆ ಅಥವಾ ಹೊರಗೆ ನೋಂದಾಯಿಸಿಕೊಳ್ಳಬೇಕು. ಹಾಗೆ ಮಾಡಲು ವಿಫಲವಾದರೆ ಮೂರು ತಿಂಗಳವರೆಗೆ ಜೈಲು ಶಿಕ್ಷೆ ಮತ್ತು 10,000 ರೂ.ಗಳವರೆಗೆ ದಂಡ ವಿಧಿಸಬಹುದು.

ಲೀವ್-ಇನ್ ಸಂಬಂಧಗಳನ್ನು ನೋಂದಾಯಿಸುವುದರಿಂದ ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯಾಗುತ್ತದೆ ಎಂದು ಹೇಳಲಾಗಿದೆ. ಆದರೆ, ಕಾನೂನು ತಜ್ಞರು ಈ ಹಿಂದಿನ ಕಾನೂನಗಳೇ ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳನ್ನು ರಕ್ಷಿಸಲು ಸುರಕ್ಷತಾ ಕ್ರಮಗಳನ್ನು ಹೊಂದಿತ್ತು ಎಂದಿದ್ದಾರೆ.

ಶುಕ್ರವಾರ ನಡೆದ ವಿಚಾರಣೆಯಲ್ಲಿ, ಅರ್ಜಿದಾರರಾದ ಮುಹಮ್ಮದ್ ಮುಕೀಮ್ ಅವರನ್ನು ಪ್ರತಿನಿಧಿಸಿದ್ದ ವಕೀಲ ಕಪಿಲ್ ಸಿಬಲ್ ಅವರು, 2024ರ ಏಕರೂಪ ನಾಗರಿಕ ಸಂಹಿತೆ ಕಾಯ್ದೆಗೆ ತಡೆ ಕೋರಿ ವಾದ ಮಂಡಿಸಲು ದಿನಾಂಕ ನಿಗದಿಪಡಿಸುವಂತೆ ಪೀಠವನ್ನು ಕೋರಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ.

ಸಂವಿಧಾನದ 21 ಮತ್ತು 25ನೇ ವಿಧಿಗಳ ಅಡಿಯಲ್ಲಿ ಖಾತರಿಪಡಿಸಲಾದ ಮೂಲಭೂತ ಹಕ್ಕುಗಳನ್ನು ಏಕರೂಪ ನಾಗರಿಕ ಸಂಹಿತೆ ಉಲ್ಲಂಘಿಸುತ್ತದೆ ಎಂದು ಕಪಿಲ್ ಸಿಬಲ್ ವಾದಿಸಿದ್ದಾರೆ. ಸಂವಿಧಾನದ 21ನೇ ವಿಧಿಯು ಬದುಕುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯವನ್ನು ರಕ್ಷಿಸಿದರೆ, 25ನೇ ವಿಧಿಯು ಒಬ್ಬರು ವ್ಯಕ್ತಿಗೆ ಅವರ ಧರ್ಮವನ್ನು ಆಚರಿಸುವ, ಪ್ರಚಾರ ಮಾಡುವ ಮತ್ತು ಪ್ರತಿಪಾದಿಸುವ ಸ್ವಾತಂತ್ರ್ಯವನ್ನು ಖಾತರಿಪಡಿಸುತ್ತದೆ.

ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ರಾಜ್ಯ ಸರ್ಕಾರಕ್ಕೆ ಅಗತ್ಯವಾದ ಅರ್ಹತೆಯ ಕೊರತೆಯಿದೆ ಎಂದೂ ಸಿಬಲ್ ಹೇಳಿದ್ದಾರೆ.

“ರಾಜ್ಯ ಸರ್ಕಾರವು ಅಧಿಕಾರದ ವ್ಯಾಪ್ತಿಯನ್ನು ಮೀರಿ ಏಕರೂಪ ನಾಗರಿಕ ಸಂಹಿತೆಯಲ್ಲಿ ಲಿವ್-ಇನ್ ಸಂಬಂಧವನ್ನು ಸೇರಿಸಿದೆ. ಇದನ್ನು ಮಾಡುವ ಯಾವುದೇ ಅರ್ಹತೆ ರಾಜ್ಯ ಸರ್ಕಾರಕ್ಕೆ ಇಲ್ಲ. ಏಕೆಂದರೆ ಸಂವಿಧಾನದ ಸಮಕಾಲೀನ ಪಟ್ಟಿಯ ನಮೂದು 5ರಲ್ಲಿ ಮದುವೆ ಮತ್ತು ವಿಚ್ಛೇದನಕ್ಕೆ ಸಂಬಂಧಿಸಿದಂತೆ ಮಾತ್ರ ರಾಜ್ಯ ಸರ್ಕಾರ ಶಾಸನವನ್ನು ಅಂಗೀಕರಿಸಲು ಅವಕಾಶವಿದೆ” ಎಂದು ಸಿಬಲ್ ವಾದಿಸಿದ್ದಾರೆ.

ಲಿವ್-ಇನ್ ಸಂಬಂಧಗಳ ಕುರಿತು ನಿರ್ಣಯ ತೆಗೆದುಕೊಳ್ಳುವುದು ರಾಜ್ಯದ ವ್ಯಾಪ್ತಿಗೆ ಬರುವುದಿಲ್ಲ. ಪಟ್ಟಿ 1ರ ನಮೂದು 97ರ ಅಡಿಯಲ್ಲಿ ಈ ವಿಚಾರ ಸಂಸತ್ತಿನ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಸಿಬಲ್ ಹೇಳಿದ್ದಾರೆ.

ಸಿಬಲ್ ವಾದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, ಏಕರೂಪ ನಾಗರಿಕ ಸಂಹಿತೆಯ ವಿರುದ್ಧದ ಇತರ ಎರಡು ಅರ್ಜಿಗಳ ಕುರಿತು ರಾಜ್ಯ ಸರ್ಕಾರಕ್ಕೆ ಈಗಾಗಲೇ ನೋಟಿಸ್ ಜಾರಿ ಮಾಡಲಾಗಿದೆ. ಏಪ್ರಿಲ್ 1ಕ್ಕೆ ಮುಂದಿನ ವಿಚಾರಣೆಯನ್ನು ನಿಗದಿಪಡಿಸಲಾಗಿದೆ ಎಂದು ತಿಳಿಸಿದೆ.

ಈ ವೇಳೆ ಪ್ರತಿಕ್ರಿಯಿಸಿದ ಕಪಿಲ್ ಸಿಬಲ್, ಅರ್ಜಿದಾರರು ಸೇರಿದಂತೆ ಸಂಹಿತೆಯಿಂದ ಸಮಸ್ಯೆಗೆ ಒಳಗಾದ ವ್ಯಕ್ತಿಗಳು ಈ ನಡುವೆ ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಜಿ. ನರೇಂದರ್ ಅವರು, ಹೊಸ ಕಾನೂನಿಂದ ಸಮಸ್ಯೆಗೆ ಒಳಗಾದ ಯಾವುದೇ ವ್ಯಕ್ತಿ ನಮ್ಮನ್ನು ಸಂಪರ್ಕಿಸಬಹುದು. ಅವರ ಸಮಸ್ಯೆ ಆಳಿಸಲಾಗುವುದು ಎಂದು ತಿಳಿಸಿದ್ದಾರೆ.

ಬುಧವಾರ ಇತರ ಅರ್ಜಿಗಳ ವಿಚಾರಣೆ ವೇಳೆ, ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ವಿಚಾರದಲ್ಲಿ ‘ಏನು ತಪ್ಪಾಗಿದೆ’ ಎಂದು ನ್ಯಾಯಾಲಯ ಕೇಳಿತ್ತು.

ಏಕರೂಪ ನಾಗರಿಕ ಸಂಹಿತೆ ಮುಸ್ಲಿಮರು ಮತ್ತು ಇತರ ನಾಗರಿಕರ ಮೂಲಭೂತ ಹಕ್ಕುಗಳನ್ನು ಹಾಗೂ ಮುಸ್ಲಿಂ ಸಮುದಾಯದ ಅಗತ್ಯ ಧಾರ್ಮಿಕ ಆಚರಣೆಗಳ ಹಕ್ಕುಗಳನ್ನು ತಡೆಯುತ್ತದೆ ಎಂದು ಆರೋಪಿಸಿ ಅಲ್ಮಾಸುದ್ದೀನ್ ಸಿದ್ದಿಕಿ ಮತ್ತು ಇಕ್ರಮ್ ಎಂಬ ಇಬ್ಬರು ವ್ಯಕ್ತಿಗಳು ಸಲ್ಲಿಸಿರುವ ಇತರ ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

ವರದಕ್ಷಿಣೆ ಕಿರುಕುಳ ದೂರೊಂದನ್ನು ರದ್ದುಗೊಳಿಸಲು ದೆಹಲಿ ಹೈಕೋರ್ಟ್ ಕೊಟ್ಟ ಕಾರಣವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...