Homeಮುಖಪುಟಏಕರೂಪ ನಾಗರಿಕ ಸಂಹಿತೆಯಡಿ ಕ್ರಮ ಎದುರಿಸುತ್ತಿರುವವರು ನಮ್ಮನ್ನು ಸಂಪರ್ಕಿಸಬಹುದು : ಉತ್ತರಾಖಂಡ ಹೈಕೋರ್ಟ್

ಏಕರೂಪ ನಾಗರಿಕ ಸಂಹಿತೆಯಡಿ ಕ್ರಮ ಎದುರಿಸುತ್ತಿರುವವರು ನಮ್ಮನ್ನು ಸಂಪರ್ಕಿಸಬಹುದು : ಉತ್ತರಾಖಂಡ ಹೈಕೋರ್ಟ್

- Advertisement -
- Advertisement -

ರಾಜ್ಯದ ಏಕರೂಪ ನಾಗರಿಕ ಸಂಹಿತೆಯಿಂದ (ಯುಸಿಸಿ) ಸಮಸ್ಯೆಗೆ ಒಳಗಾದವರು ಅಥವಾ ಅಧಿಕಾರಿಗಳಿಂದ ಸಂಬಂಧಿತ ಕ್ರಮವನ್ನು ಎದುರಿಸುತ್ತಿರುವ ವ್ಯಕ್ತಿಗಳು ನಮ್ಮನ್ನು (ನ್ಯಾಯಾಲಯ) ಸಂಪರ್ಕಿಸಿದರೆ, ಅವರ ಸಮಸ್ಯೆಯನ್ನು ಆಲಿಸಲಾಗುವುದು ಎಂದು ಉತ್ತರಾಖಂಡ ಹೈಕೋರ್ಟ್ ಶುಕ್ರವಾರ (ಫೆ.14) ಹೇಳಿರುವುದಾಗಿ ಲೈವ್ ಲಾ ವರದಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಜಿ. ನರೇಂದರ್ ಮತ್ತು ನ್ಯಾಯಮೂರ್ತಿ ಅಲೋಕ್ ಮಹ್ರಾ ಅವರ ಪೀಠವು 2024ರ ಏಕರೂಪ ನಾಗರಿಕ ಸಂಹಿತೆ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿದೆ. ಜನವರಿ 27, 2025ರಂದು ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಂದಿದೆ.

ಏಕರೂಪ ನಾಗರಿಕ ಸಂಹಿತೆ ಜಾರಿಯಾದ ಬಳಿಕ ರಾಜ್ಯದ ಎಲ್ಲಾ ನಾಗರಿಕರ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ದತ್ತು ಸ್ವೀಕಾರಕ್ಕೆ ಏಕರೂಪದ ನಿಯಮಗಳನ್ನು ಅನ್ವಯಿಸಲಾಗುತ್ತಿದೆ. ಇದಕ್ಕೂ ಮುನ್ನ, ವಿವಿಧ ಧಾರ್ಮಿಕ ಮತ್ತು ಬುಡಕಟ್ಟು ಗುಂಪುಗಳು ಅವುಗಳ ನಿರ್ದಿಷ್ಟ ನಿಯಮಗಳನ್ನು ಪಾಲಿಸುತ್ತಿತ್ತು. ಈ ನಿಯಮಗಳು ಹೆಚ್ಚಾಗಿ ಧಾರ್ಮಿಕ ಗ್ರಂಥಗಳನ್ನು ಅನುಸರಿಸಿವೆ.

ಉತ್ತರಾಖಂಡದ ಏಕರೂಪ ನಾಗರಿಕ ಸಂಹಿತೆಯ ಪ್ರಕಾರ, ಎಲ್ಲಾ ಸ್ಥಳೀಯರು ತಮ್ಮ ಲಿವ್-ಇನ್ ಸಂಬಂಧಗಳನ್ನು ರಾಜ್ಯದ ಒಳಗೆ ಅಥವಾ ಹೊರಗೆ ನೋಂದಾಯಿಸಿಕೊಳ್ಳಬೇಕು. ಹಾಗೆ ಮಾಡಲು ವಿಫಲವಾದರೆ ಮೂರು ತಿಂಗಳವರೆಗೆ ಜೈಲು ಶಿಕ್ಷೆ ಮತ್ತು 10,000 ರೂ.ಗಳವರೆಗೆ ದಂಡ ವಿಧಿಸಬಹುದು.

ಲೀವ್-ಇನ್ ಸಂಬಂಧಗಳನ್ನು ನೋಂದಾಯಿಸುವುದರಿಂದ ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯಾಗುತ್ತದೆ ಎಂದು ಹೇಳಲಾಗಿದೆ. ಆದರೆ, ಕಾನೂನು ತಜ್ಞರು ಈ ಹಿಂದಿನ ಕಾನೂನಗಳೇ ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳನ್ನು ರಕ್ಷಿಸಲು ಸುರಕ್ಷತಾ ಕ್ರಮಗಳನ್ನು ಹೊಂದಿತ್ತು ಎಂದಿದ್ದಾರೆ.

ಶುಕ್ರವಾರ ನಡೆದ ವಿಚಾರಣೆಯಲ್ಲಿ, ಅರ್ಜಿದಾರರಾದ ಮುಹಮ್ಮದ್ ಮುಕೀಮ್ ಅವರನ್ನು ಪ್ರತಿನಿಧಿಸಿದ್ದ ವಕೀಲ ಕಪಿಲ್ ಸಿಬಲ್ ಅವರು, 2024ರ ಏಕರೂಪ ನಾಗರಿಕ ಸಂಹಿತೆ ಕಾಯ್ದೆಗೆ ತಡೆ ಕೋರಿ ವಾದ ಮಂಡಿಸಲು ದಿನಾಂಕ ನಿಗದಿಪಡಿಸುವಂತೆ ಪೀಠವನ್ನು ಕೋರಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ.

ಸಂವಿಧಾನದ 21 ಮತ್ತು 25ನೇ ವಿಧಿಗಳ ಅಡಿಯಲ್ಲಿ ಖಾತರಿಪಡಿಸಲಾದ ಮೂಲಭೂತ ಹಕ್ಕುಗಳನ್ನು ಏಕರೂಪ ನಾಗರಿಕ ಸಂಹಿತೆ ಉಲ್ಲಂಘಿಸುತ್ತದೆ ಎಂದು ಕಪಿಲ್ ಸಿಬಲ್ ವಾದಿಸಿದ್ದಾರೆ. ಸಂವಿಧಾನದ 21ನೇ ವಿಧಿಯು ಬದುಕುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯವನ್ನು ರಕ್ಷಿಸಿದರೆ, 25ನೇ ವಿಧಿಯು ಒಬ್ಬರು ವ್ಯಕ್ತಿಗೆ ಅವರ ಧರ್ಮವನ್ನು ಆಚರಿಸುವ, ಪ್ರಚಾರ ಮಾಡುವ ಮತ್ತು ಪ್ರತಿಪಾದಿಸುವ ಸ್ವಾತಂತ್ರ್ಯವನ್ನು ಖಾತರಿಪಡಿಸುತ್ತದೆ.

ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ರಾಜ್ಯ ಸರ್ಕಾರಕ್ಕೆ ಅಗತ್ಯವಾದ ಅರ್ಹತೆಯ ಕೊರತೆಯಿದೆ ಎಂದೂ ಸಿಬಲ್ ಹೇಳಿದ್ದಾರೆ.

“ರಾಜ್ಯ ಸರ್ಕಾರವು ಅಧಿಕಾರದ ವ್ಯಾಪ್ತಿಯನ್ನು ಮೀರಿ ಏಕರೂಪ ನಾಗರಿಕ ಸಂಹಿತೆಯಲ್ಲಿ ಲಿವ್-ಇನ್ ಸಂಬಂಧವನ್ನು ಸೇರಿಸಿದೆ. ಇದನ್ನು ಮಾಡುವ ಯಾವುದೇ ಅರ್ಹತೆ ರಾಜ್ಯ ಸರ್ಕಾರಕ್ಕೆ ಇಲ್ಲ. ಏಕೆಂದರೆ ಸಂವಿಧಾನದ ಸಮಕಾಲೀನ ಪಟ್ಟಿಯ ನಮೂದು 5ರಲ್ಲಿ ಮದುವೆ ಮತ್ತು ವಿಚ್ಛೇದನಕ್ಕೆ ಸಂಬಂಧಿಸಿದಂತೆ ಮಾತ್ರ ರಾಜ್ಯ ಸರ್ಕಾರ ಶಾಸನವನ್ನು ಅಂಗೀಕರಿಸಲು ಅವಕಾಶವಿದೆ” ಎಂದು ಸಿಬಲ್ ವಾದಿಸಿದ್ದಾರೆ.

ಲಿವ್-ಇನ್ ಸಂಬಂಧಗಳ ಕುರಿತು ನಿರ್ಣಯ ತೆಗೆದುಕೊಳ್ಳುವುದು ರಾಜ್ಯದ ವ್ಯಾಪ್ತಿಗೆ ಬರುವುದಿಲ್ಲ. ಪಟ್ಟಿ 1ರ ನಮೂದು 97ರ ಅಡಿಯಲ್ಲಿ ಈ ವಿಚಾರ ಸಂಸತ್ತಿನ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಸಿಬಲ್ ಹೇಳಿದ್ದಾರೆ.

ಸಿಬಲ್ ವಾದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, ಏಕರೂಪ ನಾಗರಿಕ ಸಂಹಿತೆಯ ವಿರುದ್ಧದ ಇತರ ಎರಡು ಅರ್ಜಿಗಳ ಕುರಿತು ರಾಜ್ಯ ಸರ್ಕಾರಕ್ಕೆ ಈಗಾಗಲೇ ನೋಟಿಸ್ ಜಾರಿ ಮಾಡಲಾಗಿದೆ. ಏಪ್ರಿಲ್ 1ಕ್ಕೆ ಮುಂದಿನ ವಿಚಾರಣೆಯನ್ನು ನಿಗದಿಪಡಿಸಲಾಗಿದೆ ಎಂದು ತಿಳಿಸಿದೆ.

ಈ ವೇಳೆ ಪ್ರತಿಕ್ರಿಯಿಸಿದ ಕಪಿಲ್ ಸಿಬಲ್, ಅರ್ಜಿದಾರರು ಸೇರಿದಂತೆ ಸಂಹಿತೆಯಿಂದ ಸಮಸ್ಯೆಗೆ ಒಳಗಾದ ವ್ಯಕ್ತಿಗಳು ಈ ನಡುವೆ ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಜಿ. ನರೇಂದರ್ ಅವರು, ಹೊಸ ಕಾನೂನಿಂದ ಸಮಸ್ಯೆಗೆ ಒಳಗಾದ ಯಾವುದೇ ವ್ಯಕ್ತಿ ನಮ್ಮನ್ನು ಸಂಪರ್ಕಿಸಬಹುದು. ಅವರ ಸಮಸ್ಯೆ ಆಳಿಸಲಾಗುವುದು ಎಂದು ತಿಳಿಸಿದ್ದಾರೆ.

ಬುಧವಾರ ಇತರ ಅರ್ಜಿಗಳ ವಿಚಾರಣೆ ವೇಳೆ, ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ವಿಚಾರದಲ್ಲಿ ‘ಏನು ತಪ್ಪಾಗಿದೆ’ ಎಂದು ನ್ಯಾಯಾಲಯ ಕೇಳಿತ್ತು.

ಏಕರೂಪ ನಾಗರಿಕ ಸಂಹಿತೆ ಮುಸ್ಲಿಮರು ಮತ್ತು ಇತರ ನಾಗರಿಕರ ಮೂಲಭೂತ ಹಕ್ಕುಗಳನ್ನು ಹಾಗೂ ಮುಸ್ಲಿಂ ಸಮುದಾಯದ ಅಗತ್ಯ ಧಾರ್ಮಿಕ ಆಚರಣೆಗಳ ಹಕ್ಕುಗಳನ್ನು ತಡೆಯುತ್ತದೆ ಎಂದು ಆರೋಪಿಸಿ ಅಲ್ಮಾಸುದ್ದೀನ್ ಸಿದ್ದಿಕಿ ಮತ್ತು ಇಕ್ರಮ್ ಎಂಬ ಇಬ್ಬರು ವ್ಯಕ್ತಿಗಳು ಸಲ್ಲಿಸಿರುವ ಇತರ ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

ವರದಕ್ಷಿಣೆ ಕಿರುಕುಳ ದೂರೊಂದನ್ನು ರದ್ದುಗೊಳಿಸಲು ದೆಹಲಿ ಹೈಕೋರ್ಟ್ ಕೊಟ್ಟ ಕಾರಣವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...