Homeಚಳವಳಿಚಂಡೀಗಢ | ಪ್ರತಿಭಟನಾ ನಿರತ ರೈತರೊಂದಿಗಿನ ಕೇಂದ್ರದ ಮಾತುಕತೆ ವಿಫಲ : ಫೆ.22ಕ್ಕೆ ಮತ್ತೊಂದು ಸಭೆ

ಚಂಡೀಗಢ | ಪ್ರತಿಭಟನಾ ನಿರತ ರೈತರೊಂದಿಗಿನ ಕೇಂದ್ರದ ಮಾತುಕತೆ ವಿಫಲ : ಫೆ.22ಕ್ಕೆ ಮತ್ತೊಂದು ಸಭೆ

- Advertisement -
- Advertisement -

ಕಳೆದ ವರ್ಷದ (2024) ಫೆಬ್ರವರಿಯಿಂದ ಪಂಜಾಬ್ ಮತ್ತು ಹರಿಯಾಣ ನಡುವಿನ ಖಾನೌರಿ ಮತ್ತು ಶಂಭು ಗಡಿ ಬಿಂದುಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ಶುಕ್ರವಾರ (ಫೆ.14) ಕೇಂದ್ರ ಸರ್ಕಾರ ನಡೆಸಿದ ಸಂಧಾನ ಸಭೆ ವಿಫಲವಾಗಿದೆ.

ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಆಗಮಿಸಿದ್ದ ಸಚಿವ ಪ್ರಲ್ಹಾದ್ ಜೋಶಿ ರೈತ ನಾಯಕರ ಜೊತೆ ಸಭೆ ನಡೆಸಿದ್ದಾರೆ. ಆದರೆ, ರೈತರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನುಬದ್ಧ ಖಾತರಿ ಸೇರಿದಂತೆ ತಮ್ಮ ಬೇಡಿಕೆಗಳನ್ನು ಸಚಿವ ಮುಂದಿಟ್ಟಿದ್ದಾರೆ. ಇದರಿಂದ ಸಭೆಯಲ್ಲಿ ಯಾವುದೇ ಅಂತಿಮ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ.

ಕೇಂದ್ರ ಸಚಿವರ ಸಭೆಯಲ್ಲಿ ಭಾಗವಹಿಸಿದ್ದ 28 ಸದಸ್ಯರ ರೈತ ನಾಯಕರ ನಿಯೋಗ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ), ಸಾಲ ಮನ್ನಾ, ಪ್ರತಿಭಟನಾ ನಿರತ ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು, ರೈತರು ಮತ್ತು ಕಾರ್ಮಿಕರಿಗೆ ಪಿಂಚಣಿ ಮತ್ತು 2021ರ ಲಖಿಂಪುರ ಖೇರಿ ಹಿಂಸಾಚಾರದ ಬಲಿಪಶುಗಳಿಗೆ ನ್ಯಾಯ ಒದಗಿಸಿಕೊಡಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟಿದೆ ಎಂದು ರೈತ ನಾಯಕ ಅಭಿಮನ್ಯು ಕೊಹರ್ ಹೇಳಿದ್ದಾರೆ.

ಕಳೆದ ವರ್ಷದ (2024) ನವೆಂಬರ್ 26ರಿಂದ ಆಮರಣಾಂತ ಉಪವಾಸ ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾದ (ರಾಜಕೀಯೇತರ) ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಕೂಡ ಸಭೆಯಲ್ಲಿ ಭಾಗವಹಿಸಿದ್ದರು. ಮೊಮ್ಮಗಳ ಮರಣದ ನಡುವೆಯೂ ಅವರು ಸಭೆಯಲ್ಲಿ ಉಪಸ್ಥಿತರಿದ್ದರು ಎಂದು ರೈತ ಮುಖಂಡರೊಬ್ಬರು ತಿಳಿಸಿದ್ದಾರೆ.

“ನಾವು ನಮ್ಮ ಬೇಡಿಕೆಗಳನ್ನು ಮುಂದಿಟ್ಟಿದ್ದೇವೆ. ಅದಕ್ಕೆ ಕೇಂದ್ರ ಸಚಿವರ ಬಳಿ ಸಮರ್ಪಕರ ಉತ್ತರ ಸಿಕ್ಕಿಲ್ಲ. ಸಾಧ್ಯವಾದಷ್ಟು ಬೇಗ ಈ ಸಮಸ್ಯೆಯನ್ನು ಪರಿಹರಿಸುವಂತೆ ನಾವು ಪ್ರಧಾನಿ ಮತ್ತು ಗೃಹ ಸಚಿವರನ್ನು ಒತ್ತಾಯಿಸುತ್ತೇವೆ” ಎಂದು ರೈತ ನಾಯಕ ಸರ್ವಾನ್ ಸಿಂಗ್ ಪಂಧೇರ್ ಸಭೆಯ ನಂತರ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದಾರೆ.

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕುರಿತು ಕೃಷಿ ಸಚಿವರ ಸಮ್ಮುಖದಲ್ಲಿ ಚರ್ಚಿಸಬೇಕಷ್ಟೆ ಎಂದು ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾಗಿ ಪಂಧೇರ್ ತಿಳಿಸಿದ್ದಾರೆ.

ಸರ್ಕಾರವು ಶಂಭು ಗಡಿಯನ್ನು ತೆರೆಯಬೇಕೆಂದು ಪಂಧೇರ್ ಒತ್ತಾಯಿಸಿದ್ದು, ಇನ್ನೊಂದು ಬದಿಯಲ್ಲಿರುವ ಉದ್ಯಮಿಗಳು ಮತ್ತು ವ್ಯಾಪಾರಿಗಳು ತೊಂದರೆ ಅನುಭವಿಸುತ್ತಿದ್ದಾರೆ ಎಂದಿದ್ದಾರೆ.

“ದೇಶದ ವಿವಿಧ ಕಡೆಗಳಿಂದ ಹಲವಾರು ರೈತ ಮುಖಂಡರು ಇಲ್ಲಿಗೆ (ಚಂಡೀಗಢ) ಬಂದಿರುವುದರಿಂದ ನಾವು ದೆಹಲಿಗೆ ಹೋಗಲು ಬಯಸಿದ್ದೇವೆ. ಪ್ರಯಾಣದ ವಿಷಯದಲ್ಲೂ ದೆಹಲಿ ಹೋಗುವುದು ಸುಲಭ” ಎಂದು ಪಂಧೇರ್ ಹೇಳಿದ್ದಾರೆ.

ಈ ನಡುವೆ, ತಮ್ಮ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸುವಂತೆ ದಲ್ಲೇವಾಲ್ ಅವರಿಗೆ ಪ್ರಹ್ಲಾದ್ ಜೋಶಿ ಮನವಿ ಮಾಡಿದ್ದಾರೆ. ಆದರೆ ಕೇಂದ್ರ ಸರ್ಕಾರ ಎಂಎಸ್‌ಪಿಗೆ ಕಾನೂನುಬದ್ಧ ಖಾತರಿ ನೀಡುವವರೆಗೆ ಉಪವಾಸ ಮುಂದುವರಿಸುವುದಾಗಿ ದಲ್ಲೇವಾಲ್ ತಿಳಿಸಿದ್ದಾರೆ.

ರೈತರು ಮತ್ತು ಕೇಂದ್ರದ ನಡುವಿನ ಮುಂದಿನ ಸಭೆ ಫೆಬ್ರವರಿ 22ರಂದು ನಿಗದಿಯಾಗಿದ್ದು, ರೈತರು ದೆಹಲಿಯಲ್ಲಿ ಸಭೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಪ್ರಲ್ಹಾದ್ ಜೋಶಿ ಹೇಳಿದ್ದೇನು? 

ರೈತ ನಾಯಕರೊಂದಿಗಿನ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಪ್ರಲ್ಹಾದ್ ಜೋಶಿ, ಚಂಡೀಗಢದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಜೊತೆ ಮಹತ್ವದ ಸಭೆ ನಡೆಸಿ, ರೈತ ಪ್ರತಿನಿಧಿಗಳೊಂದಿಗೆ ಚರ್ಚೆ ಮಾಡಿದೆವು.

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ರೈತರ ಕಲ್ಯಾಣಕ್ಕಾಗಿ ನಾವು ತೆಗೆದುಕೊಂಡಿರುವ ಪ್ರಮುಖ ನಿರ್ಧಾರಗಳನ್ನು ಸಭೆಯಲ್ಲಿ ಎತ್ತಿ ತೋರಿಸಿದ್ದೇವೆ. ರೈತರೊಂದಿಗೆ ಮಾತುಕತೆಗೆ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದ್ದೇವೆ. ಮಾತುಕತೆಗಳು ಸಕಾರಾತ್ಮಕವಾಗಿ ಪ್ರಾರಂಭವಾಗಿರುವುದರಿಂದ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ತಮ್ಮ ಉಪವಾಸ ಸತ್ಯಾಗ್ರಹವನ್ನು ಕೈಬಿಡುವಂತೆ ನಾನು ಮನವಿ ಮಾಡಿದ್ದೇನೆ.

ಮುಂದಿನ ನಿರ್ಣಾಯಕ ಸಭೆ ಫೆಬ್ರವರಿ 22ರಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರ
ನೇತೃತ್ವದಲ್ಲಿ ನಡೆಯಲಿದೆ. ರೈತರ ಕಳವಳಗಳನ್ನು ಪ್ರಾಮಾಣಿಕತೆ ಮತ್ತು ಅತ್ಯಂತ ದೃಢ ನಿಶ್ಚಯದಿಂದ ಪರಿಹರಿಸಲು ನಾವು ಬದ್ಧರಾಗಿದ್ದೇವೆ ಎಂದಿದ್ದಾರೆ.

ಭದ್ರತಾ ಪಡೆಗಳು ದೆಹಲಿಗೆ ಮೆರವಣಿಗೆ ನಡೆಸಲು ಅವಕಾಶ ನೀಡದಿರುವ ಹಿನ್ನೆಲೆ, ಕಳೆದ ವರ್ಷದ (2024) ಫೆಬ್ರವರಿ 13ರಿಂದ ರೈತರು ಎಸ್‌ಕೆಎಂ (ರಾಜಕೀಯೇತರ) ಮತ್ತು ಕೆಎಂಎಂ ಬ್ಯಾನರ್ ಅಡಿಯಲ್ಲಿ ಶಂಭು ಮತ್ತು ಖಾನೌರಿ ಗಡಿ ಬಿಂದುಗಳಲ್ಲಿ ಮೊಕ್ಕಾಂ ಹೂಡಿ ಪ್ರತಿಭಟಿಸುತ್ತಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತರ ಆಯ್ಕೆಗೆ ಸಭೆ ಸೇರಲಿರುವ ಮೋದಿ, ರಾಹುಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...