Homeಮುಖಪುಟಎಐಸಿಸಿ ಆಂತರಿಕ ಬದಲಾವಣೆ : ಹರಿಪ್ರಸಾದ್‌, ನಾಸಿರ್‌ಗೆ ಉತ್ತರ ರಾಜ್ಯಗಳ ಉಸ್ತುವಾರಿ

ಎಐಸಿಸಿ ಆಂತರಿಕ ಬದಲಾವಣೆ : ಹರಿಪ್ರಸಾದ್‌, ನಾಸಿರ್‌ಗೆ ಉತ್ತರ ರಾಜ್ಯಗಳ ಉಸ್ತುವಾರಿ

- Advertisement -
- Advertisement -

ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಯಲ್ಲಿ ಕೆಲವೊಂದು ಮಹತ್ವದ ಆಂತರಿಕ ಬದಲಾವಣೆಗಳನ್ನು ಮಾಡಲಾಗಿದೆ. ಒಂದರ್ಥದಲ್ಲಿ ಎಐಸಿಸಿಯನ್ನು ಪುನಾರಚಿಸಲಾಗಿದೆ. ಬಹು ರಾಜ್ಯಗಳ ಪಕ್ಷದ ಉಸ್ತುವಾರಿಯಲ್ಲೂ ಗಮನಾರ್ಹ ಬದಲಾವಣೆಗಳಾಗಿವೆ.

ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರನ್ನು ಪಂಜಾಬ್‌ನ ಉಸ್ತುವಾರಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದ್ದು, ರಾಜ್ಯಸಭಾ ಸಂಸದ ಸೈಯದ್ ನಾಸೀರ್ ಹುಸೇನ್ ಅವರನ್ನು ಜಮ್ಮು ಕಾಶ್ಮೀರ, ಲಡಾಖ್‌ನ ಉಸ್ತುವಾರಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ರಜನಿ ಪಾಟೀಲ್ ಅವರನ್ನು ಹಿಮಾಚಲ ಪ್ರದೇಶ ಮತ್ತು ಚಂಡೀಗಢದ ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಹಿರಿಯ ಕಾಂಗ್ರೆಸ್ ನಾಯಕ ಹರೀಶ್ ಚೌಧರಿ ಅವರಿಗೆ ಮಧ್ಯಪ್ರದೇಶದ ಉಸ್ತುವಾರಿ ನೀಡಲಾಗಿದೆ.

ಕರ್ನಾಟಕದ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಹರಿಯಾಣದ ಜವಾಬ್ದಾರಿ ವಹಿಸಲಾಗಿದ್ದು, ರಾಹುಲ್ ಗಾಂಧಿ ಅವರ ಆಪ್ತ ಸಹಾಯಕ ಕೃಷ್ಣ ಅಲ್ಲಾವರು ಚುನಾವಣೆ ನಡೆಯಲಿರುವ ಪ್ರಮುಖ ರಾಜ್ಯವಾದ ಬಿಹಾರದ ಜವಾಬ್ದಾರಿಯನ್ನು ಹೊತ್ತುಕೊಳ್ಳಲಿದ್ದಾರೆ.

ಇನ್ನುಳಿದಂತೆ, ಒಡಿಶಾದ ಉಸ್ತುವಾರಿಯಾಗಿ ಅಜಯ್ ಕುಮಾರ್ ಲಲ್ಲು, ಜಾರ್ಖಂಡ್‌ಗೆ ಕೆ ರಾಜು, ತೆಲಂಗಾಣಕ್ಕೆ ಮೀನಾಕ್ಷಿ ನಟರಾಜನ್, ತಮಿಳುನಾಡು ಹಾಗೂ ಪುದುಚೇರಿಗೆ ಗಿರೀಶ್ ಚೋಡಂಕರ್, ಮಣಿಪುರ, ತ್ರಿಪುರಾ, ಸಿಕ್ಕಿಂ ಮತ್ತು ನಾಗಾಲ್ಯಾಂಡ್‌ಗೆ ಸಪ್ತಗಿರಿ ಶಂಕರ್ ಉಲಕಾ ಅವರನ್ನು ಉಸ್ತುವಾರಿಗಳನ್ನಾಗಿ ನೇಮಿಸಲಾಗಿದೆ.

ಪುನಾರಚನೆ ವೇಳೆ ದೀಪಕ್ ಬಬಾರಿಯಾ, ಮೋಹನ್ ಪ್ರಕಾಶ್, ಭರತ್ ಸಿನ್ಹ್ ಸೋಲಂಕಿ, ರಾಜೀವ್ ಶುಕ್ಲಾ, ಅಜೋಯ್ ಕುಮಾರ್ ಮತ್ತು ದೇವೇಂದ್ರ ಯಾದವ್ ಸೇರಿದಂತೆ ಹಲವಾರು ಹಿರಿಯ ನಾಯಕರನ್ನು ಹೊರಗಿಡಲಾಗಿದೆ. ಅವರ ಕೊಡುಗೆಗಳನ್ನು ಪಕ್ಷ ಗುರುತಿಸಿದೆ.

ಹೊಸದಾಗಿ ನೇಮಕಗೊಂಡ ಉಸ್ತುವಾರಿಗಳು ತಕ್ಷಣದಿಂದ ಜಾರಿಗೆ ಬರುವಂತೆ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎಂದು ಶುಕ್ರವಾರ (ಫೆ.14) ಹೊರಡಿಸಿದ ಕಾಂಗ್ರೆಸ್‌ನ ಅಧಿಕೃತ ಪ್ರಕಟಣೆ ತಿಳಿಸಿದೆ.

ಹಲವು ರಾಜ್ಯಗಳಲ್ಲಿ ಚುನಾವಣೆಗಳನ್ನು ಎದುರಿಸಲು ಪಕ್ಷ ತಯಾರಿ ನಡೆಸುತ್ತಿರುವಾಗ ನಾಯಕತ್ವದಲ್ಲಿ ಬದಲಾವಣೆಗಳಾಗಿರುವುದು ಮಹತ್ವ ಪಡೆದುಕೊಂಡಿದೆ. ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಪಕ್ಷದ ಸಂಘಟನೆಯ ಪುನಾರಚನೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಮುಖ್ಯ ಚುನಾವಣಾ ಆಯುಕ್ತರ ಆಯ್ಕೆಗೆ ಸಭೆ ಸೇರಲಿರುವ ಮೋದಿ, ರಾಹುಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...