Homeಕರ್ನಾಟಕಕೋವಿಡ್ ಹಗರಣ : ತನಿಖೆಯ ಹೊಣೆಯನ್ನು ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

ಕೋವಿಡ್ ಹಗರಣ : ತನಿಖೆಯ ಹೊಣೆಯನ್ನು ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

- Advertisement -
- Advertisement -

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಸಂದರ್ಭದಲ್ಲಿ ನಡೆದಿದೆ ಎನ್ನಲಾದ ಹಣಕಾಸಿನ ಅಕ್ರಮಗಳ ಕುರಿತು ಎಫ್‌ಐಆರ್ ದಾಖಲಾದ ಸುಮಾರು ಎರಡು ತಿಂಗಳ ನಂತರ, ರಾಜ್ಯ ಸರ್ಕಾರ 167 ಕೋಟಿ ರೂಪಾಯಿ ಹಗರಣ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವರ್ಗಾಯಿಸಿದೆ.

ಸಿಐಡಿ ಎಸ್‌ಪಿ ರಾಘವೇಂದ್ರ ಹೆಗಡೆ, ಮೂವರು ಡಿವೈಎಸ್ಪಿಗಳನ್ನು ಒಳಗೊಂಡ ತಂಡವು ತನಿಖೆ ನಡೆಸಲಿದೆ. ಎನ್‌95 ಮಾಸ್ಕ್‌ ಪಿಪಿಇ ಕಿಟ್‌ಗಳ ಖರೀದಿ ಮತ್ತು ಕೋವಿಡ್ ಪರೀಕ್ಷೆಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.

ನವೆಂಬರ್ 2024ರಲ್ಲಿ ರಾಜ್ಯ ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರದ ಪ್ರಕಾರ, ಈ ಪ್ರಕರಣವನ್ನು ಆರಂಭದಲ್ಲಿ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ತನಿಖೆ ಮಾಡಿಸಲು ನಿರ್ಧರಿಸಲಾಗಿತ್ತು. ಆದರೆ, 5 ಕೋಟಿ ರೂ.ಗಿಂತ ಹೆಚ್ಚಿನ ಆರ್ಥಿಕ ವಂಚನೆಗಳನ್ನು ಸಿಐಡಿಯ ಆರ್ಥಿಕ ಅಪರಾಧಗಳ ವಿಭಾಗವು ತನಿಖೆ ಮಾಡಬೇಕು ಎನ್ನುವುದನ್ನು ಕಡ್ಡಾಯಗೊಳಿಸುವ ಸ್ಥಾಪಿತ ಶಿಷ್ಟಾಚಾರವನ್ನು ಉಲ್ಲೇಖಿಸಿ ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಿದೆ.

ಪ್ರಕರಣದ ಎಫ್‌ಐಆರ್‌ನಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ಮಾಜಿ ನಿರ್ದೇಶಕ ಪಿ.ಜಿ. ಗಿರೀಶ್, ಅಧಿಕಾರಿಗಳಾದ ರಘು ಜಿ.ಪಿ. ಮತ್ತು ಎನ್. ಮುನಿರಾಜು ಅವರ ವಿರುದ್ಧ ಆರೋಪ ಹೊರಿಸಲಾಗಿದೆ. ಇವರು ಇತರ ಸರ್ಕಾರಿ ಅಧಿಕಾರಿಗಳು ಮತ್ತು ಸಾರ್ವಜನಿಕ ಪ್ರತಿನಿಧಿಗಳೊಂದಿಗೆ ಸೇರಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಕಾಯ್ದೆ- 1999 ಅನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ದುರುಪಯೋಗದಿಂದ ಒಟ್ಟು 167 ಕೋಟಿ ರೂ. ರಾಜ್ಯ ಖಜಾನೆಗೆ ನಷ್ಟವಾಗಿದೆ ಎಂದು ವರದಿಯಾಗಿದೆ.

ಸಿಐಡಿ ಅಧಿಕಾರಿಗಳು ತಮ್ಮ ತನಿಖೆಯನ್ನು ಪ್ರಾರಂಭಿಸಿದ್ದಾರೆ ಮತ್ತು 1988ರ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17(1)(A)ಅಡಿಯಲ್ಲಿ ಆರೋಪಿತ ಅಧಿಕಾರಿಗಳನ್ನು ಪ್ರಾಥಮಿಕ ವಿಚಾರಣೆಗೆ ಒಳಪಡಿಸಲು ರಾಜ್ಯ ಸರ್ಕಾರದ ಅನುಮೋದನೆಯನ್ನು ಕೋರಿದ್ದಾರೆ.

ಪ್ರಕರಣವನ್ನು ಪರಿಶೀಲಿಸುವ ಸಂಪುಟ ಉಪಸಮಿತಿಯ ನೇತೃತ್ವ ವಹಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ನೇತೃತ್ವದ ಆಯೋಗದ ವರದಿಯ ಪ್ರಮುಖ ಅಂಶಗಳನ್ನು ಉಲ್ಲೇಖಿಸಿದ್ದಾರೆ. ವರದಿಯು ದೊಡ್ಡ ಮಟ್ಟದ ಆರ್ಥಿಕ ಅಕ್ರಮವನ್ನು ಎತ್ತಿ ತೋರಿಸಿದೆ ಎಂದು ವರದಿಯಾಗಿದೆ.

ಕೋವಿಡ್-19 ಪರೀಕ್ಷಾ ವೆಚ್ಚದಲ್ಲಿ ಗಂಭೀರ ಅಕ್ರಮಗಳನ್ನು ಡಿ.ಕೆ ಶಿವಕುಮಾರ್ ಉಲ್ಲೇಖಿಸಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲೇ 84 ಲಕ್ಷ ಆರ್‌ಟಿ-ಪಿಸಿಆರ್ ಪರೀಕ್ಷೆಗಳನ್ನು ನಡೆಸಲಾಗಿದ್ದು, 502 ಕೋಟಿ ರೂ. ಬಿಲ್‌ ಮಾಡಲಾಗಿದೆ. ಅದರಲ್ಲಿ 400 ಕೋಟಿ ರೂ.ಗಳನ್ನು ಈಗಾಗಲೇ ಪಾವತಿಸಲಾಗಿದೆ. ಇಷ್ಟೊಂದು ಹಣ ಖರ್ಚಾಗಲು ಸಾಧ್ಯವಿಲ್ಲ. ಬಿಲ್ ಮೊತ್ತ ನೋಡಿದರೆ ಪ್ರತಿ ಮನೆಗೆ ಸರಾಸರಿ ಎರಡು ಪರೀಕ್ಷೆಗಳು ನಡೆಯುತ್ತವೆ ಎಂದು ಡಿಕೆಶಿ ಹೇಳಿದ್ದಾರೆ.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯಿಂದ (ICMR) ಅಗತ್ಯವಾದ ತಾಂತ್ರಿಕ ಸಾಮರ್ಥ್ಯ ಮತ್ತು ಅನುಮೋದನೆಯ ಕೊರತೆಯಿದ್ದರೂ, 24 ಲಕ್ಷ ಪರೀಕ್ಷೆಗಳನ್ನು ನಡೆಸಲು 146 ಕೋಟಿ ರೂ. ಬಿಲ್ ಮಾಡಿದ ಕಿದ್ವಾಯಿ ಆಸ್ಪತ್ರೆಯ ಬಗ್ಗೆ ಮತ್ತಷ್ಟು ಅನುಮಾನಗಳು ಹುಟ್ಟಿಕೊಂಡಿದೆ.

ಸಿದ್ರಾಮುಲ್ಲಾ ಖಾನ್‌ ಪ್ರಕರಣ | ಬಿಜೆಪಿ ನಾಯಕರ ವಿರುದ್ಧ ಮೇಲ್ಮನವಿ ಸಲ್ಲಿಸದಿರಲು ಕಾಂಗ್ರೆಸ್‌ ಸರ್ಕಾರ ನಿರ್ಧಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...