Homeಮುಖಪುಟಸಂಸ್ಕೃತ ಪ್ರಾಧ್ಯಾಪಕ ಫಿರೋಜ್‌ ಖಾನ್ ನೇಮಕಕ್ಕೆ ವಿರೋಧ: ವಿದ್ಯಾರ್ಥಿಗಳ ನಡೆಗೆ ಬಿಜೆಪಿಯ ಪರೇಶ್‌ ಖಂಡನೆ

ಸಂಸ್ಕೃತ ಪ್ರಾಧ್ಯಾಪಕ ಫಿರೋಜ್‌ ಖಾನ್ ನೇಮಕಕ್ಕೆ ವಿರೋಧ: ವಿದ್ಯಾರ್ಥಿಗಳ ನಡೆಗೆ ಬಿಜೆಪಿಯ ಪರೇಶ್‌ ಖಂಡನೆ

- Advertisement -
- Advertisement -

ಫಿರೋಜ್‌ ಖಾನ್‌ ಅವರನ್ನು ಸಂಸ್ಕೃತ ಸಹಾಯಕ ಪ್ರಾಧ್ಯಾಪಕರಾಗಿ ನೇಮಕ ಮಾಡಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳ ಗುಂಪೊಂದು, 12 ದಿನಗಳಿಂದ ಬನಾರಸ್‌ ಹಿಂದೂ ವಿಶ್ವವಿದ್ಯಾಲಯದ ಉಪಕುಲಪತಿ ಕಚೇರಿ ಹೊರಗೆ ಪ್ರತಿಭಟನೆ ನಡೆಸುತ್ತಿದೆ.

ಸಂಸ್ಕೃತ ಪ್ರಾಧ್ಯಾಪಕ ಫಿರೋಜ್ ಖಾನ್ ಅವರ ನೇಮಕವನ್ನು ವಿರೋಧಿಸಿ, ವಿದ್ಯಾರ್ಥಿಗಳ ಗುಂಪು ನಡೆಸುತ್ತಿರುವ ಪ್ರತಿಭಟನೆಯನ್ನು ನಟ ಮತ್ತು ಬಿಜೆಪಿಯ ಮಾಜಿ ಸಂಸದ ಪರೇಶ್ ರಾವಲ್ ಖಂಡಿಸಿದ್ದಾರೆ. ಫಿರೋಜ್ ಖಾನ್ ವಿರುದ್ಧ ವಿದ್ಯಾರ್ಥಿಗಳ ಗುಂಪಿನ ವಿರೋಧದಿಂದ ದಿಗ್ಭ್ರಮೆಗೊಂಡಿದ್ದೇನೆ. ಧರ್ಮಕ್ಕೂ, ಭಾಷೆಗೆ ಏನು ಸಂಬಂಧ..? ಪ್ರಾಧ್ಯಾಪಕ ಫಿರೋಜ್ ಖಾನ್, ತಮ್ಮ ಸ್ನಾತಕೋತ್ತರ ಮತ್ತು ಪಿಎಚ್‌ಡಿ ಪದವಿಯನ್ನು ಸಂಸ್ಕೃತದಲ್ಲೇ ಮಾಡಿದ್ದಾರೆ ಎಂದು ಪರೇಶ್ ರಾವಲ್ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್‌ ಮಾಡಿರುವ ಪರೇಶ್‌ ರಾವಲ್‌, ಇದೇ ತರ್ಕವನ್ನು ಸಂಗೀತದಲ್ಲೂ ಅಳವಡಿಸಿದ್ದಿದ್ದರೆ, ಶ್ರೇಷ್ಠ ಗಾಯಕ ದಿ. ಮೊಹಮ್ಮದ್ ರಫಿ ಅವರು ಯಾವುದೇ ಭಜನೆಗಳನ್ನು ಹಾಡಬಾರದು ಮತ್ತು ನೌಶಾದ್ ಸಾಬ್ ಗೀತೆ ರಚಿಸಬಾರದು ಎಂದಾಗಿರುತ್ತಿದ್ದರೆ ಹೇಗಿರುತ್ತಿತ್ತು..? ಎಂದು ಬರೆದಿದ್ದಾರೆ.

ಇನ್ನು ಉಪ ಪ್ರಾಧ್ಯಾಪಕ ಫಿರೋಜ್‌ ಖಾನ್‌ ಬೆನ್ನಿಗೆ ವಿಶ್ವವಿದ್ಯಾನಿಲಯದ ಆಡಳಿತ ವರ್ಗವೇ ನಿಂತಿದೆ. ಸಂಸ್ಕೃತದಲ್ಲಿ ಫಿರೋಜ್‌ಗೆ ಒಳ್ಳೆಯ ಜ್ಞಾನವಿದೆ. ಪಾಂಡಿತ್ಯ ಪಡೆದಿದ್ದಾರೆ. ಈ ಕೆಲಸಕ್ಕೆ ಫಿರೋಜ್‌ ಸೂಕ್ತ ಅಭ್ಯರ್ಥಿ. ನೇಮಕಾತಿ ವೇಳೆ ಎಲ್ಲಾ ಕಾರ್ಯ ವಿಧಾನಗಳನ್ನು ಅಚ್ಚುಕಟ್ಟಾಗಿ ಅನುಸರಿಸಿದ್ದಾರೆ ಎಂದು ಆಡಳಿತ ವರ್ಗ ಹೇಳಿದೆ.

ಆದರೆ ಇದ್ಯಾವುದನ್ನೂ ಗಮನಿಸದೇ, ಕೇವಲ ಧರ್ಮದ ಆಧಾರದ ಮೇಲೆ ವಿದ್ಯಾರ್ಥಿಗಳು ಫಿರೋಜ್‌ ಖಾನ್‌ ಅವರನ್ನು ವಿರೋಧಿಸುತ್ತಿದೆ. ಅಲ್ಲದೇ ವಿಶ್ವವಿದ್ಯಾನಿಲಯವು ಕಳೆದ ವಾರದಲ್ಲಿ ಎರಡು ಹೇಳಿಕೆಗಳನ್ನು ಬಿಡುಗಡೆ ಮಾಡಿದೆ. ಶೈಕ್ಷಣಿಕ ವಿಚಾರದಲ್ಲಿ ಧರ್ಮವನ್ನು ಬದಿಗಿಟ್ಟು ನೋಡಬೇಕು. ಶಿಕ್ಷಣ ಮತ್ತು ಸಮಾನ ಶಿಕ್ಷಣದಲ್ಲಿ ಎಲ್ಲರಿಗೂ ಹಕ್ಕಿದೆ. ಸಮಾನ ಬೋಧನಾ ಅವಕಾಶಗಳಿವೆ ಎಂದು ಹೇಳಿದೆ. ಇನ್ನು ಫಿರೋಜ್‌ ನೇಮಕಾತಿ ನಂತರ ಕ್ಯಾಂಪಸ್‌ನಲ್ಲಿ ಕಾಣಿಸಿಕೊಂಡಿಲ್ಲ. ಅವರ ಮೊಬೈಲ್‌ಗೆ ಅನೇಕ ಬಾರಿ ಕರೆ ಮಾಡಿದ್ರೂ, ಸಂದೇಶ ಕಳುಹಿಸಿದ್ರೂ ಉತ್ತರಿಸಿಲ್ಲ.

ಇತ್ತ ಫಿರೋಜ್ ಖಾನ್ ವಿರುದ್ಧ ಸಂಸ್ಕೃತ ವಿಷಯದ 30 ವಿದ್ಯಾರ್ಥಿಗಳ ಗುಂಪು 12 ದಿನಗಳಿಂದ ಉಪಕುಲಪತಿ ರಾಕೇಶ್ ಭಟ್ನಾಗರ್ ಅವರ ಕಚೇರಿಯ ಹೊರಗೆ ಕುಳಿತು ಪ್ರತಿಭಟನೆ ನಡೆಸುತ್ತಿದೆ. ತಮ್ಮ ಬೇಡಿಕೆ ಈಡೇರುವವರೆಗೆ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ವಿದ್ಯಾರ್ಥಿಗಳಿಗೆ ಒಬ್ಬ ಪ್ರಾಧ್ಯಾಪಕರು ಪ್ರಚೋದನೆ ನೀಡುತ್ತಿದ್ದಾರೆ. ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ಎಬಿವಿಪಿ, ಹಿಂದೂ ಮಹಾಸಭಾ, ಹಿಂದೂ ಮುಖ್ಯವಾಹಿನಿಯೊಂದಿಗೆ ಸಂಬಂಧಪಟ್ಟವರು. ಇವರಿಗೆ ಪ್ರಚೋದನೆ ನೀಡಲಾಗ್ತಿದೆ ಅಂತಾ ಪ್ರೊಫೆಸರ್‌ ಅಹಿರ್ವಾರ್‌ ಹೇಳಿದ್ದಾರೆ.

ಅಂದಹಾಗೆ, ಪ್ರೊಫೆಸರ್ ಖಾನ್ ಮೂಲತಃ ರಾಜಸ್ಥಾನ ಮೂಲದವರು. ಅವರ ತಂದೆ ಸಂಸ್ಕೃತ ಅಧ್ಯಯನ ಮಾಡಿದವರು. ಅವರ ಮನೆಗೆ ಹತ್ತಿರವಿರುವ ದೇವಾಲಯದಲ್ಲಿ ಭಜನೆಯನ್ನು ಹಾಡಿದ್ದಾರೆ ಎಂದಯ ಟೈಮ್ಸ್ ಆಫ್ ಇಂಡಿಯಾದ ವರದಿಯಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...