Homeಮುಖಪುಟಸಂಸ್ಕೃತ ಪ್ರಾಧ್ಯಾಪಕ ಫಿರೋಜ್‌ ಖಾನ್ ನೇಮಕಕ್ಕೆ ವಿರೋಧ: ವಿದ್ಯಾರ್ಥಿಗಳ ನಡೆಗೆ ಬಿಜೆಪಿಯ ಪರೇಶ್‌ ಖಂಡನೆ

ಸಂಸ್ಕೃತ ಪ್ರಾಧ್ಯಾಪಕ ಫಿರೋಜ್‌ ಖಾನ್ ನೇಮಕಕ್ಕೆ ವಿರೋಧ: ವಿದ್ಯಾರ್ಥಿಗಳ ನಡೆಗೆ ಬಿಜೆಪಿಯ ಪರೇಶ್‌ ಖಂಡನೆ

- Advertisement -
- Advertisement -

ಫಿರೋಜ್‌ ಖಾನ್‌ ಅವರನ್ನು ಸಂಸ್ಕೃತ ಸಹಾಯಕ ಪ್ರಾಧ್ಯಾಪಕರಾಗಿ ನೇಮಕ ಮಾಡಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳ ಗುಂಪೊಂದು, 12 ದಿನಗಳಿಂದ ಬನಾರಸ್‌ ಹಿಂದೂ ವಿಶ್ವವಿದ್ಯಾಲಯದ ಉಪಕುಲಪತಿ ಕಚೇರಿ ಹೊರಗೆ ಪ್ರತಿಭಟನೆ ನಡೆಸುತ್ತಿದೆ.

ಸಂಸ್ಕೃತ ಪ್ರಾಧ್ಯಾಪಕ ಫಿರೋಜ್ ಖಾನ್ ಅವರ ನೇಮಕವನ್ನು ವಿರೋಧಿಸಿ, ವಿದ್ಯಾರ್ಥಿಗಳ ಗುಂಪು ನಡೆಸುತ್ತಿರುವ ಪ್ರತಿಭಟನೆಯನ್ನು ನಟ ಮತ್ತು ಬಿಜೆಪಿಯ ಮಾಜಿ ಸಂಸದ ಪರೇಶ್ ರಾವಲ್ ಖಂಡಿಸಿದ್ದಾರೆ. ಫಿರೋಜ್ ಖಾನ್ ವಿರುದ್ಧ ವಿದ್ಯಾರ್ಥಿಗಳ ಗುಂಪಿನ ವಿರೋಧದಿಂದ ದಿಗ್ಭ್ರಮೆಗೊಂಡಿದ್ದೇನೆ. ಧರ್ಮಕ್ಕೂ, ಭಾಷೆಗೆ ಏನು ಸಂಬಂಧ..? ಪ್ರಾಧ್ಯಾಪಕ ಫಿರೋಜ್ ಖಾನ್, ತಮ್ಮ ಸ್ನಾತಕೋತ್ತರ ಮತ್ತು ಪಿಎಚ್‌ಡಿ ಪದವಿಯನ್ನು ಸಂಸ್ಕೃತದಲ್ಲೇ ಮಾಡಿದ್ದಾರೆ ಎಂದು ಪರೇಶ್ ರಾವಲ್ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್‌ ಮಾಡಿರುವ ಪರೇಶ್‌ ರಾವಲ್‌, ಇದೇ ತರ್ಕವನ್ನು ಸಂಗೀತದಲ್ಲೂ ಅಳವಡಿಸಿದ್ದಿದ್ದರೆ, ಶ್ರೇಷ್ಠ ಗಾಯಕ ದಿ. ಮೊಹಮ್ಮದ್ ರಫಿ ಅವರು ಯಾವುದೇ ಭಜನೆಗಳನ್ನು ಹಾಡಬಾರದು ಮತ್ತು ನೌಶಾದ್ ಸಾಬ್ ಗೀತೆ ರಚಿಸಬಾರದು ಎಂದಾಗಿರುತ್ತಿದ್ದರೆ ಹೇಗಿರುತ್ತಿತ್ತು..? ಎಂದು ಬರೆದಿದ್ದಾರೆ.

ಇನ್ನು ಉಪ ಪ್ರಾಧ್ಯಾಪಕ ಫಿರೋಜ್‌ ಖಾನ್‌ ಬೆನ್ನಿಗೆ ವಿಶ್ವವಿದ್ಯಾನಿಲಯದ ಆಡಳಿತ ವರ್ಗವೇ ನಿಂತಿದೆ. ಸಂಸ್ಕೃತದಲ್ಲಿ ಫಿರೋಜ್‌ಗೆ ಒಳ್ಳೆಯ ಜ್ಞಾನವಿದೆ. ಪಾಂಡಿತ್ಯ ಪಡೆದಿದ್ದಾರೆ. ಈ ಕೆಲಸಕ್ಕೆ ಫಿರೋಜ್‌ ಸೂಕ್ತ ಅಭ್ಯರ್ಥಿ. ನೇಮಕಾತಿ ವೇಳೆ ಎಲ್ಲಾ ಕಾರ್ಯ ವಿಧಾನಗಳನ್ನು ಅಚ್ಚುಕಟ್ಟಾಗಿ ಅನುಸರಿಸಿದ್ದಾರೆ ಎಂದು ಆಡಳಿತ ವರ್ಗ ಹೇಳಿದೆ.

ಆದರೆ ಇದ್ಯಾವುದನ್ನೂ ಗಮನಿಸದೇ, ಕೇವಲ ಧರ್ಮದ ಆಧಾರದ ಮೇಲೆ ವಿದ್ಯಾರ್ಥಿಗಳು ಫಿರೋಜ್‌ ಖಾನ್‌ ಅವರನ್ನು ವಿರೋಧಿಸುತ್ತಿದೆ. ಅಲ್ಲದೇ ವಿಶ್ವವಿದ್ಯಾನಿಲಯವು ಕಳೆದ ವಾರದಲ್ಲಿ ಎರಡು ಹೇಳಿಕೆಗಳನ್ನು ಬಿಡುಗಡೆ ಮಾಡಿದೆ. ಶೈಕ್ಷಣಿಕ ವಿಚಾರದಲ್ಲಿ ಧರ್ಮವನ್ನು ಬದಿಗಿಟ್ಟು ನೋಡಬೇಕು. ಶಿಕ್ಷಣ ಮತ್ತು ಸಮಾನ ಶಿಕ್ಷಣದಲ್ಲಿ ಎಲ್ಲರಿಗೂ ಹಕ್ಕಿದೆ. ಸಮಾನ ಬೋಧನಾ ಅವಕಾಶಗಳಿವೆ ಎಂದು ಹೇಳಿದೆ. ಇನ್ನು ಫಿರೋಜ್‌ ನೇಮಕಾತಿ ನಂತರ ಕ್ಯಾಂಪಸ್‌ನಲ್ಲಿ ಕಾಣಿಸಿಕೊಂಡಿಲ್ಲ. ಅವರ ಮೊಬೈಲ್‌ಗೆ ಅನೇಕ ಬಾರಿ ಕರೆ ಮಾಡಿದ್ರೂ, ಸಂದೇಶ ಕಳುಹಿಸಿದ್ರೂ ಉತ್ತರಿಸಿಲ್ಲ.

ಇತ್ತ ಫಿರೋಜ್ ಖಾನ್ ವಿರುದ್ಧ ಸಂಸ್ಕೃತ ವಿಷಯದ 30 ವಿದ್ಯಾರ್ಥಿಗಳ ಗುಂಪು 12 ದಿನಗಳಿಂದ ಉಪಕುಲಪತಿ ರಾಕೇಶ್ ಭಟ್ನಾಗರ್ ಅವರ ಕಚೇರಿಯ ಹೊರಗೆ ಕುಳಿತು ಪ್ರತಿಭಟನೆ ನಡೆಸುತ್ತಿದೆ. ತಮ್ಮ ಬೇಡಿಕೆ ಈಡೇರುವವರೆಗೆ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ವಿದ್ಯಾರ್ಥಿಗಳಿಗೆ ಒಬ್ಬ ಪ್ರಾಧ್ಯಾಪಕರು ಪ್ರಚೋದನೆ ನೀಡುತ್ತಿದ್ದಾರೆ. ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ಎಬಿವಿಪಿ, ಹಿಂದೂ ಮಹಾಸಭಾ, ಹಿಂದೂ ಮುಖ್ಯವಾಹಿನಿಯೊಂದಿಗೆ ಸಂಬಂಧಪಟ್ಟವರು. ಇವರಿಗೆ ಪ್ರಚೋದನೆ ನೀಡಲಾಗ್ತಿದೆ ಅಂತಾ ಪ್ರೊಫೆಸರ್‌ ಅಹಿರ್ವಾರ್‌ ಹೇಳಿದ್ದಾರೆ.

ಅಂದಹಾಗೆ, ಪ್ರೊಫೆಸರ್ ಖಾನ್ ಮೂಲತಃ ರಾಜಸ್ಥಾನ ಮೂಲದವರು. ಅವರ ತಂದೆ ಸಂಸ್ಕೃತ ಅಧ್ಯಯನ ಮಾಡಿದವರು. ಅವರ ಮನೆಗೆ ಹತ್ತಿರವಿರುವ ದೇವಾಲಯದಲ್ಲಿ ಭಜನೆಯನ್ನು ಹಾಡಿದ್ದಾರೆ ಎಂದಯ ಟೈಮ್ಸ್ ಆಫ್ ಇಂಡಿಯಾದ ವರದಿಯಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...