Homeಮುಖಪುಟಸಂಸ್ಕೃತ ಪ್ರಾಧ್ಯಾಪಕ ಫಿರೋಜ್‌ ಖಾನ್ ನೇಮಕಕ್ಕೆ ವಿರೋಧ: ವಿದ್ಯಾರ್ಥಿಗಳ ನಡೆಗೆ ಬಿಜೆಪಿಯ ಪರೇಶ್‌ ಖಂಡನೆ

ಸಂಸ್ಕೃತ ಪ್ರಾಧ್ಯಾಪಕ ಫಿರೋಜ್‌ ಖಾನ್ ನೇಮಕಕ್ಕೆ ವಿರೋಧ: ವಿದ್ಯಾರ್ಥಿಗಳ ನಡೆಗೆ ಬಿಜೆಪಿಯ ಪರೇಶ್‌ ಖಂಡನೆ

- Advertisement -
- Advertisement -

ಫಿರೋಜ್‌ ಖಾನ್‌ ಅವರನ್ನು ಸಂಸ್ಕೃತ ಸಹಾಯಕ ಪ್ರಾಧ್ಯಾಪಕರಾಗಿ ನೇಮಕ ಮಾಡಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳ ಗುಂಪೊಂದು, 12 ದಿನಗಳಿಂದ ಬನಾರಸ್‌ ಹಿಂದೂ ವಿಶ್ವವಿದ್ಯಾಲಯದ ಉಪಕುಲಪತಿ ಕಚೇರಿ ಹೊರಗೆ ಪ್ರತಿಭಟನೆ ನಡೆಸುತ್ತಿದೆ.

ಸಂಸ್ಕೃತ ಪ್ರಾಧ್ಯಾಪಕ ಫಿರೋಜ್ ಖಾನ್ ಅವರ ನೇಮಕವನ್ನು ವಿರೋಧಿಸಿ, ವಿದ್ಯಾರ್ಥಿಗಳ ಗುಂಪು ನಡೆಸುತ್ತಿರುವ ಪ್ರತಿಭಟನೆಯನ್ನು ನಟ ಮತ್ತು ಬಿಜೆಪಿಯ ಮಾಜಿ ಸಂಸದ ಪರೇಶ್ ರಾವಲ್ ಖಂಡಿಸಿದ್ದಾರೆ. ಫಿರೋಜ್ ಖಾನ್ ವಿರುದ್ಧ ವಿದ್ಯಾರ್ಥಿಗಳ ಗುಂಪಿನ ವಿರೋಧದಿಂದ ದಿಗ್ಭ್ರಮೆಗೊಂಡಿದ್ದೇನೆ. ಧರ್ಮಕ್ಕೂ, ಭಾಷೆಗೆ ಏನು ಸಂಬಂಧ..? ಪ್ರಾಧ್ಯಾಪಕ ಫಿರೋಜ್ ಖಾನ್, ತಮ್ಮ ಸ್ನಾತಕೋತ್ತರ ಮತ್ತು ಪಿಎಚ್‌ಡಿ ಪದವಿಯನ್ನು ಸಂಸ್ಕೃತದಲ್ಲೇ ಮಾಡಿದ್ದಾರೆ ಎಂದು ಪರೇಶ್ ರಾವಲ್ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್‌ ಮಾಡಿರುವ ಪರೇಶ್‌ ರಾವಲ್‌, ಇದೇ ತರ್ಕವನ್ನು ಸಂಗೀತದಲ್ಲೂ ಅಳವಡಿಸಿದ್ದಿದ್ದರೆ, ಶ್ರೇಷ್ಠ ಗಾಯಕ ದಿ. ಮೊಹಮ್ಮದ್ ರಫಿ ಅವರು ಯಾವುದೇ ಭಜನೆಗಳನ್ನು ಹಾಡಬಾರದು ಮತ್ತು ನೌಶಾದ್ ಸಾಬ್ ಗೀತೆ ರಚಿಸಬಾರದು ಎಂದಾಗಿರುತ್ತಿದ್ದರೆ ಹೇಗಿರುತ್ತಿತ್ತು..? ಎಂದು ಬರೆದಿದ್ದಾರೆ.

ಇನ್ನು ಉಪ ಪ್ರಾಧ್ಯಾಪಕ ಫಿರೋಜ್‌ ಖಾನ್‌ ಬೆನ್ನಿಗೆ ವಿಶ್ವವಿದ್ಯಾನಿಲಯದ ಆಡಳಿತ ವರ್ಗವೇ ನಿಂತಿದೆ. ಸಂಸ್ಕೃತದಲ್ಲಿ ಫಿರೋಜ್‌ಗೆ ಒಳ್ಳೆಯ ಜ್ಞಾನವಿದೆ. ಪಾಂಡಿತ್ಯ ಪಡೆದಿದ್ದಾರೆ. ಈ ಕೆಲಸಕ್ಕೆ ಫಿರೋಜ್‌ ಸೂಕ್ತ ಅಭ್ಯರ್ಥಿ. ನೇಮಕಾತಿ ವೇಳೆ ಎಲ್ಲಾ ಕಾರ್ಯ ವಿಧಾನಗಳನ್ನು ಅಚ್ಚುಕಟ್ಟಾಗಿ ಅನುಸರಿಸಿದ್ದಾರೆ ಎಂದು ಆಡಳಿತ ವರ್ಗ ಹೇಳಿದೆ.

ಆದರೆ ಇದ್ಯಾವುದನ್ನೂ ಗಮನಿಸದೇ, ಕೇವಲ ಧರ್ಮದ ಆಧಾರದ ಮೇಲೆ ವಿದ್ಯಾರ್ಥಿಗಳು ಫಿರೋಜ್‌ ಖಾನ್‌ ಅವರನ್ನು ವಿರೋಧಿಸುತ್ತಿದೆ. ಅಲ್ಲದೇ ವಿಶ್ವವಿದ್ಯಾನಿಲಯವು ಕಳೆದ ವಾರದಲ್ಲಿ ಎರಡು ಹೇಳಿಕೆಗಳನ್ನು ಬಿಡುಗಡೆ ಮಾಡಿದೆ. ಶೈಕ್ಷಣಿಕ ವಿಚಾರದಲ್ಲಿ ಧರ್ಮವನ್ನು ಬದಿಗಿಟ್ಟು ನೋಡಬೇಕು. ಶಿಕ್ಷಣ ಮತ್ತು ಸಮಾನ ಶಿಕ್ಷಣದಲ್ಲಿ ಎಲ್ಲರಿಗೂ ಹಕ್ಕಿದೆ. ಸಮಾನ ಬೋಧನಾ ಅವಕಾಶಗಳಿವೆ ಎಂದು ಹೇಳಿದೆ. ಇನ್ನು ಫಿರೋಜ್‌ ನೇಮಕಾತಿ ನಂತರ ಕ್ಯಾಂಪಸ್‌ನಲ್ಲಿ ಕಾಣಿಸಿಕೊಂಡಿಲ್ಲ. ಅವರ ಮೊಬೈಲ್‌ಗೆ ಅನೇಕ ಬಾರಿ ಕರೆ ಮಾಡಿದ್ರೂ, ಸಂದೇಶ ಕಳುಹಿಸಿದ್ರೂ ಉತ್ತರಿಸಿಲ್ಲ.

ಇತ್ತ ಫಿರೋಜ್ ಖಾನ್ ವಿರುದ್ಧ ಸಂಸ್ಕೃತ ವಿಷಯದ 30 ವಿದ್ಯಾರ್ಥಿಗಳ ಗುಂಪು 12 ದಿನಗಳಿಂದ ಉಪಕುಲಪತಿ ರಾಕೇಶ್ ಭಟ್ನಾಗರ್ ಅವರ ಕಚೇರಿಯ ಹೊರಗೆ ಕುಳಿತು ಪ್ರತಿಭಟನೆ ನಡೆಸುತ್ತಿದೆ. ತಮ್ಮ ಬೇಡಿಕೆ ಈಡೇರುವವರೆಗೆ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ವಿದ್ಯಾರ್ಥಿಗಳಿಗೆ ಒಬ್ಬ ಪ್ರಾಧ್ಯಾಪಕರು ಪ್ರಚೋದನೆ ನೀಡುತ್ತಿದ್ದಾರೆ. ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ಎಬಿವಿಪಿ, ಹಿಂದೂ ಮಹಾಸಭಾ, ಹಿಂದೂ ಮುಖ್ಯವಾಹಿನಿಯೊಂದಿಗೆ ಸಂಬಂಧಪಟ್ಟವರು. ಇವರಿಗೆ ಪ್ರಚೋದನೆ ನೀಡಲಾಗ್ತಿದೆ ಅಂತಾ ಪ್ರೊಫೆಸರ್‌ ಅಹಿರ್ವಾರ್‌ ಹೇಳಿದ್ದಾರೆ.

ಅಂದಹಾಗೆ, ಪ್ರೊಫೆಸರ್ ಖಾನ್ ಮೂಲತಃ ರಾಜಸ್ಥಾನ ಮೂಲದವರು. ಅವರ ತಂದೆ ಸಂಸ್ಕೃತ ಅಧ್ಯಯನ ಮಾಡಿದವರು. ಅವರ ಮನೆಗೆ ಹತ್ತಿರವಿರುವ ದೇವಾಲಯದಲ್ಲಿ ಭಜನೆಯನ್ನು ಹಾಡಿದ್ದಾರೆ ಎಂದಯ ಟೈಮ್ಸ್ ಆಫ್ ಇಂಡಿಯಾದ ವರದಿಯಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...