Homeಫ್ಯಾಕ್ಟ್‌ಚೆಕ್FACT CHECK | ಕುಂಭಮೇಳದ ರೈಲಿನ ಮೇಲೆ ಹಿಂದೂ ವಿರೋಧಿಗಳಿಂದ ದಾಳಿ? ವೈರಲ್ ವಿಡಿಯೋದ ಅಸಲಿಯತ್ತೇನು?

FACT CHECK | ಕುಂಭಮೇಳದ ರೈಲಿನ ಮೇಲೆ ಹಿಂದೂ ವಿರೋಧಿಗಳಿಂದ ದಾಳಿ? ವೈರಲ್ ವಿಡಿಯೋದ ಅಸಲಿಯತ್ತೇನು?

- Advertisement -
- Advertisement -

ಕುಂಭಮೇಳದಿಂದ ಹಿಂದಿರುಗುತ್ತಿದ್ದ ಜನರನ್ನು ಹೊತ್ತ ರೈಲಿನ ಮೇಲೆ ‘ಹಿಂದೂ ವಿರೋಧಿಗಳು’ ದೆಹಲಿಯಲ್ಲಿ ದಾಳಿ ನಡೆಸಿದ್ದಾರೆ ಎಂಬ ಹೇಳಿಕೆಯೊಂದಿಗೆ ಯುವಕರ ಗುಂಪೊಂದು ರೈಲಿನ ಕಿಟಕಿ ಗಾಜುಗಳನ್ನು ಒಡೆದು ಹಾಕುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಫೆಬ್ರವರಿ 12ರಂದು ಆರ್‌ಎನ್‌ಎಸ್‌ ಎಂಬ ಫೇಸ್‌ಬುಕ್ ಖಾತೆಯಲ್ಲಿ ರೈಲಿನ ಕಿಟಕಿ ಗಾಜನ್ನು ಯುವಕರ ಗುಂಪು ಒಡೆದು ಹಾಕುತ್ತಿರುವ ವಿಡಿಯೋ ಹಂಚಿಕೊಂಡು “ಕುಂಭಮೇಳದಿಂದ ಹಿಂದಿರುಗುತ್ತಿದ್ದ ಹಿಂದೂಗಳೇ ತುಂಬಿದ್ದ ಸ್ವಾಂತಂತ್ರ್ಯ ಸೇನಾನಿ ಎಕ್ಸ್‌ಪ್ರೆಸ್ ರೈಲು ದೆಹಲಿಗೆ ಬಂದು ತಲುಪಿದಾಗ ಹಿಂದೂ ವಿರೋಧಿಗಳು ರೈಲಿನ ಗಾಜು ಒಡೆಯುತ್ತಿರುವ ದೃಶ್ಯ. ಯಾರಿರಬಹುದು ನೀವೆ ಊಹಿಸಿ. ಇದೇ ಮಾದರಿಯಲ್ಲಿ ಅಯೋಧ್ಯೆಯಿಂದ ಹಿಂದಿರುಗುತ್ತಿದ್ದ ಕರಸೇವಕರಿದ್ದ ರೈಲಿನ ಬೋಗಿಗೆ ಬೆಂಕಿ ಹಂಚಿ ಜೀವಂತ ಸುಟ್ಟು ಹಾಕಿದ ಘಟನೆ ನೆನಪಿಸಿಕೊಳ್ಳಿ” ಎಂದು ಬರೆಯಲಾಗಿತ್ತು.

ಮೇಲಿನ ಪೋಸ್ಟ್‌ನಲ್ಲಿ ಅಯೋಧ್ಯೆ ಘಟನೆಯನ್ನು ಉಲ್ಲೇಖಿಸುವ ಮೂಲಕ ದೆಹಲಿಯಲ್ಲಿ ರೈಲಿನ ಮೇಲೆ ದಾಳಿ ನಡೆಸಿದವರು ಮುಸ್ಲಿಮರು ಎಂದು ಪರೋಕ್ಷವಾಗಿ ಆರೋಪಿಸಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಕುಂಭಮೇಳದಿಂದ ಹಿಂದಿರುಗುತ್ತಿದ್ದ ಜನರಿದ್ದ ರೈಲಿನ ಮೇಲೆ ದೆಹಲಿಯಲ್ಲಿ ದಾಳಿ ನಡೆದಿದೆ ಎಂಬ ಹೇಳಿಕೆ ಸುಳ್ಳು ಎಂದು ಗೊತ್ತಾಗಿದೆ. ಅಸಲಿಗೆ ಈ ಘಟನೆ ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ತುಂಬಿದ್ದ ರೈಲನ್ನು ಏರಲು ಜನರು ಮುಂದಾದಾಗ ನಡೆದಿದೆ.

ಫೆಬ್ರವರಿ 11ರಂದು ‘ಆಧಾನ್ ಹಿಂದಿ‘ ಎಂಬ ಯೂಟ್ಯೂಬ್ ಚಾನೆಲ್ ಪ್ರಕಟಿಸಿದ ವಿಡಿಯೋ ವರದಿಯಲ್ಲಿ ಯುವಕರು ರೈಲಿನ ಕಿಟಕಿ ಗಾಜನ್ನು ಒಡೆದು ಹಾಕುತ್ತಿರುವ ದೃಶ್ಯಗಳು ಗೂಗಲ್ ರಿವರ್ಸ್ ಇಮೇಜ್ ಹುಡುಕಾಟದ ವೇಳೆ ಕಂಡು ಬಂದಿವೆ.

“ಬಿಹಾರದ ಜಯನಗರದಿಂದ ದೆಹಲಿಗೆ ತೆರಳುತ್ತಿದ್ದ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ರೈಲು ಬಿಹಾರದ ಮಧುಬನಿ ನಿಲ್ದಾಣಕ್ಕೆ ಬಂದಾಗ, ಪ್ರಯಾಗ್ ರಾಜ್ ಕುಂಭಮೇಳಕ್ಕೆ ಹೊರಟ್ಟಿದ್ದ ನೂರಾರು ಜನರು ಆ ರೈಲನ್ನು ಏರಲು ಮುಂದಾಗಿದ್ದಾರೆ. ಆದರೆ, ರೈಲು ಮಿತಿ ಮೀರಿ ತುಂಬಿದ್ದರಿಂದ ಅವರು ರೈಲು ಹತ್ತಲು ಸಾಧ್ಯವಾಗಿಲ್ಲ. ಈ ಕೋಪದಲ್ಲಿ ರೈಲಿನ ಕಿಟಕಿ ಗಾಜು ಒಡೆದು ರೈಲು ಹತ್ತಲು ಪ್ರಯತ್ನಿಸಿದ್ದಾರೆ” ಎಂದು ವಿಡಿಯೋ ವರದಿಯಲ್ಲಿ ಹೇಳಲಾಗಿದೆ.

ಫೆಬ್ರವರಿ 11ರಂದು ನ್ಯೂಸ್ 18 ರಾಜಸ್ಥಾನ ಪ್ರಕಟಿಸಿದ ವಿಡಿಯೋ ವರದಿಯಲ್ಲಿಯೂ ಯುವಕರು ರೈಲಿನ ಗಾಜು ಒಡೆದಿರುವ ದೃಶ್ಯಗಳು ಕಂಡು ಬಂದಿವೆ. ವರದಿಯ ಪ್ರಕಾರ, ಕುಂಭಮೇಳಕ್ಕೆ ಹೊರಟಿದ್ದ ಜನರು ರೈಲು ಹತ್ತಲು ಸಾಧ್ಯವಾಗದೆ ನಿರಾಶೆಗೊಂಡು ಬಿಹಾರದ ಮಧುಬನಿ ಮತ್ತು ಸಮಸ್ತಿಪುರ ರೈಲು ನಿಲ್ದಾಣಗಳಲ್ಲಿ ಸ್ವತಂತ್ರ ಸೇನಾನಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನ ಗಾಜುಗಳನ್ನು ಧ್ವಂಸ ಮಾಡಿದ್ದಾರೆ. ಸುಮಾರು 12 ಎಸಿ ಬೋಗಿಗಳ ಕಿಟಕಿ ಗಾಜುಗಳನ್ನು ಆಕ್ರೋಶಿತರು ಒಡೆದು ಹಾಕಿದ್ದಾರೆ. ಇದರಿಂದ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ದೃಢೀಕರಣಕ್ಕಾಗಿ, ನಾವು ಆಧಾನ್ ಹಿಂದಿ ಮತ್ತು ನ್ಯೂಸ್ 18 ರಾಜಸ್ಥಾನದ ವಿಡಿಯೋ ವರದಿಗಳೊಂದಿಗೆ ವೈರಲ್ ಕ್ಲಿಪ್ ಅನ್ನು ಕೂಡ ಸೂಕ್ಷ್ಮವಾಗಿ ಪರಿಶೀಲಿಸಿದ್ದೇವೆ. ನಮ್ಮ ಪರಿಶೀಲನೆಯಲ್ಲಿ ರೈಲಿನ ಬೋಗಿಗಳ ಮೇಲೆ ಅದು ಜಯನಗರದಿಂದ ನವದೆಹಲಿಗೆ ಪ್ರಯಾಣಿಸುತ್ತಿದೆ ಎಂದು ಸೂಚಿಸುವ ಬೋರ್ಡ್ ಇರುವುದು ಕಂಡು ಬಂದಿದೆ.

ಘಟನೆಯ ಕುರಿತು ಇತರ ಮಾಧ್ಯಮ ವರದಿಗಳನ್ನು ನಾವು ಹುಡುಕಾಡಿದ್ದೇವೆ. ಈ ವೇಳೆ ಎನ್‌ಡಿವಿ ಪ್ರಕಟಿಸಿದ ವರದಿ ಲಭ್ಯವಾಗಿದೆ. ವರದಿಯ ಪ್ರಕಾರ, ಬಿಹಾರದ ಜಯನಗರದಿಂದ ಪ್ರಯಾಗರಾಜ್ ಮೂಲಕ ನವದೆಹಲಿಗೆ ತೆರಳುತ್ತಿದ್ದ ಸ್ವತಂತ್ರ ಸೇನಾನಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಬಿಹಾರದ ಮಧುಬನಿ ನಿಲ್ದಾಣಕ್ಕೆ ತಲುಪಿದಾಗ ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳಕ್ಕೆ ತೆರಳಲು ಸಿದ್ದರಾಗಿದ್ದ ಪ್ರಯಾಣಿಕರ ದೊಡ್ಡ ಗುಂಪು ರೈಲು ಹತ್ತಲು ಮುಂದಾಗಿದೆ. ಆದರೆ, ರೈಲು ತುಂಬಿದ್ದರಿಂದ ಅವರಿಗೆ ಹತ್ತಲು ಸಾಧ್ಯವಾಗದೆ ಇದ್ದಾಗ ಆಕ್ರೋಶಗೊಂಡು ರೈಲಿನ ಮೇಲೆ ಕಲ್ಲು ಎಸೆದು, ಎಸಿ ವಿಭಾಗಗಳ ಕಿಟಕಿ ಗಾಜುಗಳನ್ನು ಒಡೆದು ಹಾಕಿದ್ದಾರೆ.

ರೈಲಿನ ಹೊರಗೆ ಕಾಯುತ್ತಿದ್ದ ಮತ್ತು ಒಳಗೆ ಕುಳಿತಿದ್ದ ಹೆಚ್ಚಿನ ಪ್ರಯಾಣಿಕರು ಮಹಾ ಕುಂಭಮೇಳಕ್ಕಾಗಿ ಪ್ರಯಾಗ್‌ರಾಜ್‌ಗೆ ಪ್ರಯಾಣಿಸುತ್ತಿದ್ದರು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಫೆಬ್ರವರಿ 10ರ ರಾತ್ರಿ, ಮಹಾ ಕುಂಭಮೇಳಕ್ಕೆ ಹೋಗಲು ಮುಂದಾಗಿದ್ದ ಕೋಪಗೊಂಡ ಪ್ರಯಾಣಿಕರ ಗುಂಪೊಂದು ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ರೈಲಿನ ಮೇಲೆ ದಾಳಿ ನಡೆಸಿದೆ. ರೈಲು ಹತ್ತಲು ಸಾಧ್ಯವಾಗದ ಕಾರಣ ಹತಾಶೆಗೊಂಡು ಕಲ್ಲು ತೂರಿದ ಜನರು, ರೈಲಿನ ಕಿಟಕಿ ಗಾಜುಗಳನ್ನು ಒಡೆದು ಹಾಕಿದ್ದಾರೆ ಎಂದು ದಿ ಹಿಂದೂ, ದಿ ಇಂಡಿಯನ್ ಎಕ್ಸ್‌ಪ್ರೆಸ್ ಮತ್ತು ದಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಆದ್ದರಿಂದ, ಕುಂಭಮೇಳದಿಂದ ಹಿಂತಿರುಗುತ್ತಿದ್ದ ಜನರಿದ್ದ ರೈಲಿನ ಮೇಲೆ ದೆಹಲಿಯಲ್ಲಿ ಹಿಂದೂ ವಿರೋಧಿಗಳು ದಾಳಿ ನಡೆಸಿದ್ದಾರೆ ಎಂಬ ಹೇಳಿಕೆ ಸುಳ್ಳು ಎಂಬುವುದು ಖಚಿತವಾಗಿದೆ.

FACT CHECK | ಕುಂಭಮೇಳದಲ್ಲಿ ಸಾಧುವಿನ ವೇಷ ಧರಿಸಿ ಬಂಧಿತನಾದ ಮುಸ್ಲಿಂ ಯುವಕ ಎಂದು ಪ್ರತಿಪಾದಿಸುವ ಈ ಚಿತ್ರ AI ರಚಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...