Homeಫ್ಯಾಕ್ಟ್‌ಚೆಕ್FACT CHECK | ಕುಂಭಮೇಳದ ರೈಲಿನ ಮೇಲೆ ಹಿಂದೂ ವಿರೋಧಿಗಳಿಂದ ದಾಳಿ? ವೈರಲ್ ವಿಡಿಯೋದ ಅಸಲಿಯತ್ತೇನು?

FACT CHECK | ಕುಂಭಮೇಳದ ರೈಲಿನ ಮೇಲೆ ಹಿಂದೂ ವಿರೋಧಿಗಳಿಂದ ದಾಳಿ? ವೈರಲ್ ವಿಡಿಯೋದ ಅಸಲಿಯತ್ತೇನು?

- Advertisement -
- Advertisement -

ಕುಂಭಮೇಳದಿಂದ ಹಿಂದಿರುಗುತ್ತಿದ್ದ ಜನರನ್ನು ಹೊತ್ತ ರೈಲಿನ ಮೇಲೆ ‘ಹಿಂದೂ ವಿರೋಧಿಗಳು’ ದೆಹಲಿಯಲ್ಲಿ ದಾಳಿ ನಡೆಸಿದ್ದಾರೆ ಎಂಬ ಹೇಳಿಕೆಯೊಂದಿಗೆ ಯುವಕರ ಗುಂಪೊಂದು ರೈಲಿನ ಕಿಟಕಿ ಗಾಜುಗಳನ್ನು ಒಡೆದು ಹಾಕುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಫೆಬ್ರವರಿ 12ರಂದು ಆರ್‌ಎನ್‌ಎಸ್‌ ಎಂಬ ಫೇಸ್‌ಬುಕ್ ಖಾತೆಯಲ್ಲಿ ರೈಲಿನ ಕಿಟಕಿ ಗಾಜನ್ನು ಯುವಕರ ಗುಂಪು ಒಡೆದು ಹಾಕುತ್ತಿರುವ ವಿಡಿಯೋ ಹಂಚಿಕೊಂಡು “ಕುಂಭಮೇಳದಿಂದ ಹಿಂದಿರುಗುತ್ತಿದ್ದ ಹಿಂದೂಗಳೇ ತುಂಬಿದ್ದ ಸ್ವಾಂತಂತ್ರ್ಯ ಸೇನಾನಿ ಎಕ್ಸ್‌ಪ್ರೆಸ್ ರೈಲು ದೆಹಲಿಗೆ ಬಂದು ತಲುಪಿದಾಗ ಹಿಂದೂ ವಿರೋಧಿಗಳು ರೈಲಿನ ಗಾಜು ಒಡೆಯುತ್ತಿರುವ ದೃಶ್ಯ. ಯಾರಿರಬಹುದು ನೀವೆ ಊಹಿಸಿ. ಇದೇ ಮಾದರಿಯಲ್ಲಿ ಅಯೋಧ್ಯೆಯಿಂದ ಹಿಂದಿರುಗುತ್ತಿದ್ದ ಕರಸೇವಕರಿದ್ದ ರೈಲಿನ ಬೋಗಿಗೆ ಬೆಂಕಿ ಹಂಚಿ ಜೀವಂತ ಸುಟ್ಟು ಹಾಕಿದ ಘಟನೆ ನೆನಪಿಸಿಕೊಳ್ಳಿ” ಎಂದು ಬರೆಯಲಾಗಿತ್ತು.

ಮೇಲಿನ ಪೋಸ್ಟ್‌ನಲ್ಲಿ ಅಯೋಧ್ಯೆ ಘಟನೆಯನ್ನು ಉಲ್ಲೇಖಿಸುವ ಮೂಲಕ ದೆಹಲಿಯಲ್ಲಿ ರೈಲಿನ ಮೇಲೆ ದಾಳಿ ನಡೆಸಿದವರು ಮುಸ್ಲಿಮರು ಎಂದು ಪರೋಕ್ಷವಾಗಿ ಆರೋಪಿಸಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಕುಂಭಮೇಳದಿಂದ ಹಿಂದಿರುಗುತ್ತಿದ್ದ ಜನರಿದ್ದ ರೈಲಿನ ಮೇಲೆ ದೆಹಲಿಯಲ್ಲಿ ದಾಳಿ ನಡೆದಿದೆ ಎಂಬ ಹೇಳಿಕೆ ಸುಳ್ಳು ಎಂದು ಗೊತ್ತಾಗಿದೆ. ಅಸಲಿಗೆ ಈ ಘಟನೆ ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ತುಂಬಿದ್ದ ರೈಲನ್ನು ಏರಲು ಜನರು ಮುಂದಾದಾಗ ನಡೆದಿದೆ.

ಫೆಬ್ರವರಿ 11ರಂದು ‘ಆಧಾನ್ ಹಿಂದಿ‘ ಎಂಬ ಯೂಟ್ಯೂಬ್ ಚಾನೆಲ್ ಪ್ರಕಟಿಸಿದ ವಿಡಿಯೋ ವರದಿಯಲ್ಲಿ ಯುವಕರು ರೈಲಿನ ಕಿಟಕಿ ಗಾಜನ್ನು ಒಡೆದು ಹಾಕುತ್ತಿರುವ ದೃಶ್ಯಗಳು ಗೂಗಲ್ ರಿವರ್ಸ್ ಇಮೇಜ್ ಹುಡುಕಾಟದ ವೇಳೆ ಕಂಡು ಬಂದಿವೆ.

“ಬಿಹಾರದ ಜಯನಗರದಿಂದ ದೆಹಲಿಗೆ ತೆರಳುತ್ತಿದ್ದ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ರೈಲು ಬಿಹಾರದ ಮಧುಬನಿ ನಿಲ್ದಾಣಕ್ಕೆ ಬಂದಾಗ, ಪ್ರಯಾಗ್ ರಾಜ್ ಕುಂಭಮೇಳಕ್ಕೆ ಹೊರಟ್ಟಿದ್ದ ನೂರಾರು ಜನರು ಆ ರೈಲನ್ನು ಏರಲು ಮುಂದಾಗಿದ್ದಾರೆ. ಆದರೆ, ರೈಲು ಮಿತಿ ಮೀರಿ ತುಂಬಿದ್ದರಿಂದ ಅವರು ರೈಲು ಹತ್ತಲು ಸಾಧ್ಯವಾಗಿಲ್ಲ. ಈ ಕೋಪದಲ್ಲಿ ರೈಲಿನ ಕಿಟಕಿ ಗಾಜು ಒಡೆದು ರೈಲು ಹತ್ತಲು ಪ್ರಯತ್ನಿಸಿದ್ದಾರೆ” ಎಂದು ವಿಡಿಯೋ ವರದಿಯಲ್ಲಿ ಹೇಳಲಾಗಿದೆ.

ಫೆಬ್ರವರಿ 11ರಂದು ನ್ಯೂಸ್ 18 ರಾಜಸ್ಥಾನ ಪ್ರಕಟಿಸಿದ ವಿಡಿಯೋ ವರದಿಯಲ್ಲಿಯೂ ಯುವಕರು ರೈಲಿನ ಗಾಜು ಒಡೆದಿರುವ ದೃಶ್ಯಗಳು ಕಂಡು ಬಂದಿವೆ. ವರದಿಯ ಪ್ರಕಾರ, ಕುಂಭಮೇಳಕ್ಕೆ ಹೊರಟಿದ್ದ ಜನರು ರೈಲು ಹತ್ತಲು ಸಾಧ್ಯವಾಗದೆ ನಿರಾಶೆಗೊಂಡು ಬಿಹಾರದ ಮಧುಬನಿ ಮತ್ತು ಸಮಸ್ತಿಪುರ ರೈಲು ನಿಲ್ದಾಣಗಳಲ್ಲಿ ಸ್ವತಂತ್ರ ಸೇನಾನಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನ ಗಾಜುಗಳನ್ನು ಧ್ವಂಸ ಮಾಡಿದ್ದಾರೆ. ಸುಮಾರು 12 ಎಸಿ ಬೋಗಿಗಳ ಕಿಟಕಿ ಗಾಜುಗಳನ್ನು ಆಕ್ರೋಶಿತರು ಒಡೆದು ಹಾಕಿದ್ದಾರೆ. ಇದರಿಂದ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ದೃಢೀಕರಣಕ್ಕಾಗಿ, ನಾವು ಆಧಾನ್ ಹಿಂದಿ ಮತ್ತು ನ್ಯೂಸ್ 18 ರಾಜಸ್ಥಾನದ ವಿಡಿಯೋ ವರದಿಗಳೊಂದಿಗೆ ವೈರಲ್ ಕ್ಲಿಪ್ ಅನ್ನು ಕೂಡ ಸೂಕ್ಷ್ಮವಾಗಿ ಪರಿಶೀಲಿಸಿದ್ದೇವೆ. ನಮ್ಮ ಪರಿಶೀಲನೆಯಲ್ಲಿ ರೈಲಿನ ಬೋಗಿಗಳ ಮೇಲೆ ಅದು ಜಯನಗರದಿಂದ ನವದೆಹಲಿಗೆ ಪ್ರಯಾಣಿಸುತ್ತಿದೆ ಎಂದು ಸೂಚಿಸುವ ಬೋರ್ಡ್ ಇರುವುದು ಕಂಡು ಬಂದಿದೆ.

ಘಟನೆಯ ಕುರಿತು ಇತರ ಮಾಧ್ಯಮ ವರದಿಗಳನ್ನು ನಾವು ಹುಡುಕಾಡಿದ್ದೇವೆ. ಈ ವೇಳೆ ಎನ್‌ಡಿವಿ ಪ್ರಕಟಿಸಿದ ವರದಿ ಲಭ್ಯವಾಗಿದೆ. ವರದಿಯ ಪ್ರಕಾರ, ಬಿಹಾರದ ಜಯನಗರದಿಂದ ಪ್ರಯಾಗರಾಜ್ ಮೂಲಕ ನವದೆಹಲಿಗೆ ತೆರಳುತ್ತಿದ್ದ ಸ್ವತಂತ್ರ ಸೇನಾನಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಬಿಹಾರದ ಮಧುಬನಿ ನಿಲ್ದಾಣಕ್ಕೆ ತಲುಪಿದಾಗ ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳಕ್ಕೆ ತೆರಳಲು ಸಿದ್ದರಾಗಿದ್ದ ಪ್ರಯಾಣಿಕರ ದೊಡ್ಡ ಗುಂಪು ರೈಲು ಹತ್ತಲು ಮುಂದಾಗಿದೆ. ಆದರೆ, ರೈಲು ತುಂಬಿದ್ದರಿಂದ ಅವರಿಗೆ ಹತ್ತಲು ಸಾಧ್ಯವಾಗದೆ ಇದ್ದಾಗ ಆಕ್ರೋಶಗೊಂಡು ರೈಲಿನ ಮೇಲೆ ಕಲ್ಲು ಎಸೆದು, ಎಸಿ ವಿಭಾಗಗಳ ಕಿಟಕಿ ಗಾಜುಗಳನ್ನು ಒಡೆದು ಹಾಕಿದ್ದಾರೆ.

ರೈಲಿನ ಹೊರಗೆ ಕಾಯುತ್ತಿದ್ದ ಮತ್ತು ಒಳಗೆ ಕುಳಿತಿದ್ದ ಹೆಚ್ಚಿನ ಪ್ರಯಾಣಿಕರು ಮಹಾ ಕುಂಭಮೇಳಕ್ಕಾಗಿ ಪ್ರಯಾಗ್‌ರಾಜ್‌ಗೆ ಪ್ರಯಾಣಿಸುತ್ತಿದ್ದರು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಫೆಬ್ರವರಿ 10ರ ರಾತ್ರಿ, ಮಹಾ ಕುಂಭಮೇಳಕ್ಕೆ ಹೋಗಲು ಮುಂದಾಗಿದ್ದ ಕೋಪಗೊಂಡ ಪ್ರಯಾಣಿಕರ ಗುಂಪೊಂದು ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ರೈಲಿನ ಮೇಲೆ ದಾಳಿ ನಡೆಸಿದೆ. ರೈಲು ಹತ್ತಲು ಸಾಧ್ಯವಾಗದ ಕಾರಣ ಹತಾಶೆಗೊಂಡು ಕಲ್ಲು ತೂರಿದ ಜನರು, ರೈಲಿನ ಕಿಟಕಿ ಗಾಜುಗಳನ್ನು ಒಡೆದು ಹಾಕಿದ್ದಾರೆ ಎಂದು ದಿ ಹಿಂದೂ, ದಿ ಇಂಡಿಯನ್ ಎಕ್ಸ್‌ಪ್ರೆಸ್ ಮತ್ತು ದಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಆದ್ದರಿಂದ, ಕುಂಭಮೇಳದಿಂದ ಹಿಂತಿರುಗುತ್ತಿದ್ದ ಜನರಿದ್ದ ರೈಲಿನ ಮೇಲೆ ದೆಹಲಿಯಲ್ಲಿ ಹಿಂದೂ ವಿರೋಧಿಗಳು ದಾಳಿ ನಡೆಸಿದ್ದಾರೆ ಎಂಬ ಹೇಳಿಕೆ ಸುಳ್ಳು ಎಂಬುವುದು ಖಚಿತವಾಗಿದೆ.

FACT CHECK | ಕುಂಭಮೇಳದಲ್ಲಿ ಸಾಧುವಿನ ವೇಷ ಧರಿಸಿ ಬಂಧಿತನಾದ ಮುಸ್ಲಿಂ ಯುವಕ ಎಂದು ಪ್ರತಿಪಾದಿಸುವ ಈ ಚಿತ್ರ AI ರಚಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...