Homeಮುಖಪುಟಸಾಲ ವಸೂಲಿಗೆ ರೌಡಿಗಳ ಬಳಕೆ, ಬಲವಂತದ ವಸೂಲಿಗೆ ತಕ್ಷಣ ಬ್ರೇಕ್ ಹಾಕಿ: ಸಿ.ಎಂ ಖಡಕ್ ಸೂಚನೆ

ಸಾಲ ವಸೂಲಿಗೆ ರೌಡಿಗಳ ಬಳಕೆ, ಬಲವಂತದ ವಸೂಲಿಗೆ ತಕ್ಷಣ ಬ್ರೇಕ್ ಹಾಕಿ: ಸಿ.ಎಂ ಖಡಕ್ ಸೂಚನೆ

- Advertisement -
- Advertisement -

ಸುಗ್ರೀವಾಜ್ಞೆಯ ಉದ್ದೇಶ ವಿಫಲವಾಗಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

ನೋಂದಣಿ ಆಗಿರದ ಅಕ್ರಮ ಫೈನಾನ್ಸ್ ಕಂಪನಿಗಳು ತಕ್ಷಣ ಬಂದ್ ಆಗಬೇಕು: ಸಿಎಂ

ಮೈಕ್ರೋ ಫೈನಾನ್ಸ್‌ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಸಾಲ ವಸೂಲಿಗೆ ರೌಡಿಗಳ ಬಳಕೆ, ಬಲವಂತದ ವಸೂಲಿಗೆ ತಕ್ಷಣ ಬ್ರೇಕ್ ಹಾಕಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಈ ಸಂವಾದದಲ್ಲಿ ಮುಖ್ಯಮಂತ್ರಿಯು ಅಧಿಕಾರಿಗಳಿಗೆ ಈ ಕೆಳಗಿನಂತೆ ಸೂಚನೆ ನೀಡಿದ್ದಾರೆ.

• ಸಾಲ ವಸೂಲಾತಿ ಸಂದರ್ಭದಲ್ಲಿ ಸಾಲ ಪಡೆದವರಿಗೆ ಯಾವುದೇ ಕಿರುಕುಳ ಉಂಟಾಗಬಾರದು ಎಂಬ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಕಾಯ್ದೆಯ ಎಲ್ಲಾ ಅಂಶಗಳನ್ನು ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು.

• ಪರವಾನಿಗೆ ಪಡೆಯದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಮೇಲೆ ನಿರಂತರ ನಿಗಾ ಇರಿಸಬೇಕು. ಪರವಾನಿಗೆ ಪಡೆದಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಆರ್‌ಬಿಐ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವುದನ್ನು ಖಾತ್ರಿಪಡಿಸಬೇಕು. ಬಲವಂತದ ವಸೂಲಾತಿ ಮಾಡುವವರ ವಿರುದ್ದ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು.

• ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಸಹಾಯವಾಣಿ ಪ್ರಾರಂಭಿಸಲು ಸೂಚಿಸಲಾಗಿದ್ದು, ಬಲವಂತದ ಸಾಲ ವಸೂಲಾತಿ ಮಾಡುವ ಪ್ರಕರಣಗಳಲ್ಲಿ ಸ್ವಯಂಪ್ರೇರಿತವಾಗಿ ಮೊಕದ್ದಮೆ ದಾಖಲಿಸಬೇಕು.

• ಸಾಲ ನೀಡುವವರಿಗೆ ತೊಂದರೆ ಉಂಟು ಮಾಡುವ ಯಾವುದೇ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೊಳಿಸಿಲ್ಲ. ಆದರೆ ಬಲವಂತದ ವಸೂಲಾತಿ, ಮಾನಹಾನಿ, ಕಿರುಕುಳದ ಮೂಲಕ ಸಾಲ ವಸೂಲಾತಿಯನ್ನು ತಡೆಯುವ ಉದ್ದೇಶದಿಂದ ಜಾರಿಗೆ ತರಲಾಗಿದೆ.

• ಯಾವುದೇ ಜಿಲ್ಲೆಗಳಲ್ಲಿ ಸಾಲಗಾರರ ಕಿರುಕುಳ ಮುಂದುವರೆದಿರುವುದು ಗಮನಕ್ಕೆ ಬಂದರೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಪೊಲೀಸ್‌ ವರಿಷ್ಠಾಧಿಕಾರಿ ಅವರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.

• ಕಾಯ್ದೆ ಜಾರಿಗೊಳಿಸಿದ ಬಳಿಕ ಹಲವು ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಮುಖವಾಗಿದ್ದು, ಕಟ್ಟುನಿಟ್ಟಿನಿಂದ ಕಾಯ್ದೆಯ ಅಂಶಗಳನ್ನು ಜಾರಿಗೊಳಿಸುವ ಮೂಲಕ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ಕಾನೂನು ಸಚಿವ ಹೆಚ್.ಕೆ.ಪಾಟೀಲ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ನಸೀರ್‌ ಅಹ್ಮದ್‌, ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ದರ್ಶಿ ಎಲ್.ಕೆ.ಅತೀಕ್‌, ಕಾನೂನು ಸಲಹೆಗಾರ ಎ.ಎಸ್.‌ ಪೊನ್ನಣ್ಣ, ಅಡ್ವಕೇಟ್‌ ಜನರಲ್‌ ಶಶಿಕಿರಣ ಶೆಟ್ಟಿ, ಹ ಪೊಲೀಸ್‌ ಮಹಾ ನಿರ್ದೇಶಕ ಅಲೋಕ್‌ ಮೋಹನ್‌, ಬೆಂಗಳೂರು ನಗರ ಪೊಲೀಸ್‌ ಆಯುಕ್ತ ದಯಾನಂದ್‌ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

370ನೇ ವಿಧಿಯನ್ನು ಅಂಬೇಡ್ಕರ್ ಯಾಕೆ ಸೇರಿಸಿದರೆಂದು ಇತಿಹಾಸ ತಿಳಿಯಿರಿ: ಉಪರಾಷ್ಟ್ರಪತಿ ಧನ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಸಂಘರ್ಷ| ಇರಾನ್ ಮೇಲಿನ ದಾಳಿಗೆ ಅಮೆರಿಕಾ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ಹೇಳಿಕೆ ವೈರಲ್: ಭಾರತದ ಪ್ರತಿಕ್ರಿಯೆ ಏನು?

ಇರಾನ್ ಮೇಲೆ ನೌಕಾ ದಾಳಿ ನಡೆಸಲು ಅಮೆರಿಕ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ವೈರಲ್ ಹೇಳಿಕೆಗಳನ್ನು ಭಾರತ ಬಲವಾಗಿ ತಿರಸ್ಕರಿಸಿದೆ. ಅಲ್ಲದೇ ಈ ಆರೋಪಗಳನ್ನು "ನಕಲಿ"  ಮತ್ತು “ಆಧಾರರಹಿತ” ಎಂದು ಕರೆದಿದೆ. ಬುಧವಾರ ವಿದೇಶಾಂಗ...

ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ‘ಪ್ರಗತಿಪರ ಸೌಹಾರ್ದ ಸಂಘಟನೆಗಳ’ ಆಗ್ರಹ

ಚಿಕ್ಕಮಗಳೂರಿನ ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ಆಗ್ರಹಿಸಿದ ಕರ್ನಾಟಕ ಸಮಸ್ತ ಪ್ರಗತಿಪರ ಸೌಹಾರ್ದ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದು ಆಗ್ರಹಿಸಿದ್ದಾರೆ. ಚಿಕ್ಕಮಗಳೂರಿನ ಬಾಬಾ ಬುಡನ್‌...

ಖಮೇನಿ ನಿಧನಕ್ಕೆ ತಡವಾಗಿ ಸಂತಾಪ ಸೂಚಿಸಿದ ಭಾರತ; ಇರಾನ್‌ ರಾಯಭಾರ ಕಚೇರಿಯಲ್ಲಿನ ಪುಸ್ತಕದಲ್ಲಿ ವಿಕ್ರಮ್ ಮಿಶ್ರಿ ಸಹಿ

ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನಕ್ಕೆ ಭಾರತ ತಡವಾಗಿ ಸಂತಾಪ ಸೂಚಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಗುರುವಾರ ನವದೆಹಲಿಯ ಇರಾನಿನ ರಾಯಭಾರ ಕಚೇರಿಯಲ್ಲಿ ಸಂತಾಪ ಸೂಚಿಸುವ ಪುಸ್ತಕಕ್ಕೆ...

ಉಕ್ರೇನ್, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ತ್ವರಿತವಾಗಿ ಕೊನೆಗೊಳಿಸಲು ಬೆಂಬಲಿಸುತ್ತೇನೆ: ಫಿನ್ಲೆಂಡ್‌ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ಪಶ್ಚಿಮ ಏಷ್ಯಾ ಮತ್ತು ಉಕ್ರೇನ್‌ನಲ್ಲಿನ ಸಂಘರ್ಷಗಳಿಗೆ "ತ್ವರಿತ ಅಂತ್ಯ" ವನ್ನು ತರಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರೆ ನೀಡಿದ್ದಾರೆ, ಯಾವುದೇ ಸಮಸ್ಯೆಯನ್ನು ಮಿಲಿಟರಿ ಮುಖಾಮುಖಿಯ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು...

ಮಹಾರಾಷ್ಟ್ರ| ಬಣ್ಣ ಎರಚಿದ ಮೊಮ್ಮಗನ ಮೇಲೆ ಬಿಸಿ ನೀರು ಸುರಿದ ಮಹಿಳೆ; ಬಾಲಕನ ಸ್ಥಿತಿ ಗಂಭೀರ

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕೊರಾಡಿ ಪ್ರದೇಶದಲ್ಲಿ ಹೋಲಿ ಆಡುತ್ತಿದ್ದಾಗ ನಾಲ್ಕು ವರ್ಷದ ಮೊಮ್ಮಗ ತನ್ನ ಮೇಲೆ ಬಣ್ಣ ಎರಚಿದ್ದರಿಂದ ಕೋಪಗೊಂಡ ಅಜ್ಜಿ ಮಗುವಿನ ಮೇಲೆ ಕುದಿಯುವ ನೀರನ್ನು ಸುರಿದಿರುವ ವಿಡಿಯೋ ಇದೀಗ ವೈರಲ್...

ಭಾರತದ ಕಾಲ ಬುಡದಲ್ಲಿ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ : 100ರಷ್ಟು ಸಿಬ್ಬಂದಿ ಸಾವಿಗೀಡಾದರೂ ಮೋದಿ ಸರ್ಕಾರ ಮೌನ!

ಭಾರತದಿಂದ ಕೇವಲ 300 ಕಿಲೋ ಮೀಟರ್ ದೂರದಲ್ಲಿ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ 'ಐಆರ್‌ಐಎಸ್ ದೆನಾ' ಮೇಲೆ ಅಮೆರಿಕ ಜಲಾಂತರ್ಗಾಮಿ ಬುಧವಾರ (ಮಾ.4) ಭೀಕರ ದಾಳಿ ನಡೆಸಿದೆ. ಈ ಘಟನೆಯಲ್ಲಿ ಇರಾನ್‌ ನೌಕೆಯಲ್ಲಿದ್ದ 180 ಸಿಬ್ಬಂದಿಯ...

ಹಿಂದೂ ಮಹಾಸಾಗರದಲ್ಲಿ ಇರಾನ್ ನೌಕೆ ಮೇಲೆ ದಾಳಿ: ‘ರಾಜಿ ಮಾಡಿಕೊಂಡ ಪ್ರಧಾನಿ ಕಾರ್ಯತಂತ್ರದ ಸ್ವಾಯತ್ತತೆ ಬಿಟ್ಟುಕೊಟ್ಟರು: ರಾಹುಲ್ ಟೀಕೆ

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಐರಿಸ್ ದೇನಾದ ಮೇಲೆ ಅಮೆರಿಕಾ ದಾಳಿ ಮಾಡಿದ ಒಂದು ದಿನದ ನಂತರ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ...

ಟ್ರಂಪ್ ಬೆದರಿಕೆಗೆ ಹೆದರದ ಸ್ಪೇನ್ ಪ್ರಧಾನಿ; ಇರಾನ್ ಮೇಲಿನ ದಾಳಿಗೆ ಸೇನಾ ನೆಲೆ ಬಳಸಲು ಅನುಮತಿ ನಿರಾಕರಿಸಿದ ಪೆಡ್ರೊ ಸ್ಯಾಂಚೆಜ್

ಇರಾನ್ ಮೇಲೆ ದಾಳಿ ಮಾಡಲು ಅಮೆರಿಕದ ವಿಮಾನಗಳು ತನ್ನ ನೆಲೆಗಳನ್ನು ಬಳಸಲು ಅನುಮತಿಸಲು ಮ್ಯಾಡ್ರಿಡ್ ನಿರಾಕರಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಟೀಕೆಗಳಿಗೆ ಬುಧವಾರ ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ತಿರುಗೇಟು...

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...