Homeಮುಖಪುಟ’ಸಮಾನ ಕೆಲಸಕ್ಕೆ ಸಮಾನ ವೇತನ’ ಜಾರಿ ಕುರಿತು ಇಲಾಖೆಗಳ ಅಭಿಪ್ರಾಯ ಕೇಳಿದ ಕೇಂದ್ರ

’ಸಮಾನ ಕೆಲಸಕ್ಕೆ ಸಮಾನ ವೇತನ’ ಜಾರಿ ಕುರಿತು ಇಲಾಖೆಗಳ ಅಭಿಪ್ರಾಯ ಕೇಳಿದ ಕೇಂದ್ರ

- Advertisement -
- Advertisement -

ಸರ್ಕಾರದ ವಿವಿಧ ಇಲಾಖೆಗಳಲ್ಲಿ ತಾತ್ಕಾಲಿಕವಾಗಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ’ಸಮಾನ ಕೆಲಸಕ್ಕೆ ಸಮಾನ ವೇತನ’ ಖಾತರಿ ನೀಡುವ 2017ರ ಸುಪ್ರೀಂಕೋರ್ಟ್‌ ಆದೇಶವನ್ನು ಜಾರಿಗೆ ತರಲು ಕೇಂದ್ರ ಸರ್ಕಾರ, ತನ್ನ ಸಚಿವಾಲಯ ಮತ್ತು ಇಲಾಖೆಗಳ ಅಭಿಪ್ರಾಯ ಕೇಳಿದೆ.

’ಸಮಾನ ಕೆಲಸಕ್ಕೆ ಸಮಾನ ವೇತನ’ ಜಾರಿಯಾದರೆ ಇದು ಸರ್ಕಾರದ ಸಂಪೂರ್ಣ ಅವಧಿಯ ಕೆಲಸಗಾರರು ಮತ್ತು ತಾತ್ಕಾಲಿಕ ನೇಮಕಾತಿದಾರರು ಸೇರಿದಂತೆ ಲಕ್ಷಾಂತರ ಕಾರ್ಮಿಕರ ಮೇಲೆ ಸಕರಾತ್ಮಕ ಪರಿಣಾಮ ಬೀರಲಿದೆ.

ಅಕ್ಟೋಬರ್ 7 ರಂದು ಹೊರಡಿಸಲಾದ ಕಚೇರಿ ಜ್ಞಾಪಕ ಪತ್ರದಲ್ಲಿ, ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ), ಎಲ್ಲಾ ಸಚಿವಾಲಯಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಿಗೆ (ಪಿಎಸ್‌ಯು) ’ಸಮಾನ ಕೆಲಸಕ್ಕೆ ಸಮಾನ ವೇತನ’ದ ಸುಪ್ರೀಂಕೋರ್ಟ್ ಆದೇಶವನ್ನು ಜಾರಿಗೆ ತರಲು ಯಾವ ಕ್ರಮ ಕೈಗೊಂಡಿದ್ದೀರಿ ಎಂದು ಕೇಳಿದ್ದು, ವರದಿ ನೀಡುವಂತೆ ನಿರ್ದೇಶಿಸಿದೆ.

ಎಷ್ಟು ಕಾರ್ಮಿಕರನ್ನು ನೇಮಕ ಮಾಡಲಾಗಿದೆ ಎಂಬ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ತಾತ್ಕಾಲಿಕ ಅಥವಾ ಯೋಜನೆ ಆಧಾರಿತ ಹೆಚ್ಚಿನ ಸಂಖ್ಯೆಯ ಕಾರ್ಯಗಳಿಗಾಗಿ ತಾತ್ಕಾಲಿಕ ಕೆಲಸಗಾರರನ್ನು ನೇಮಿಸಿಕೊಳ್ಳಲು ಸರ್ಕಾರ ಆದ್ಯತೆ ನೀಡುತ್ತಿದೆ. ಬಡ್ತಿ, ಪಿಂಚಣಿಯಂತಹ ಜೀವಮಾನದ ಪ್ರಯೋಜನಗಳಿಗೆ ಅರ್ಹರಾಗಿರುವ ಶಾಶ್ವತ ಸಿಬ್ಬಂದಿಯ ಬದಲು ತಾತ್ಕಾಲಿಕ ಕೆಲಸಗಾರರ ನೇಮಕಕ್ಕೆ ಸರ್ಕಾರ ಆದ್ಯತೆ ನೀಡುತ್ತದೆ. ಸೆಪ್ಟೆಂಬರ್‌ನಲ್ಲಿ ಡಿಒಪಿಟಿ ಹೊರಡಿಸಿದ ಮತ್ತೊಂದು ಜ್ಞಾಪಕ ಪತ್ರದಲ್ಲಿ, ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳು ಸುಪ್ರೀಂ ಕೋರ್ಟ್‌ನ ಆದೇಶವನ್ನು ಜಾರಿಗೆ ತರಲು ಉತ್ಸಾಹ ತೋರಿವೆ.

ಇನ್ನು ತಾತ್ಕಾಲಿಕ ಅಥವಾ ಒಪ್ಪಂದದ ಕೆಲಸ ಮಾಡುತ್ತಿರುವವರಿಗೆ ‘ಸಮಾನ ಕೆಲಸಕ್ಕೆ ಸಮಾನ ವೇತನ’ ನಿಯಮವನ್ನು ವಿಸ್ತರಿಸಬೇಕು ಎಂದು ಸುಪ್ರೀಂಕೋರ್ಟ್ 2017 ರಲ್ಲಿ ತೀರ್ಪು ನೀಡಿತ್ತು. ಇದರಿಂದ ಗುಲಾಮಗಿರಿ, ಶೋಷಣೆ, ದಬ್ಬಾಳಿಕೆಯನ್ನು ನಿಗ್ರಹಿಸಲು ಸಾಧ್ಯ ಎಂದು ನ್ಯಾಯಾಲಯ ಹೇಳಿತ್ತು.

ಇನ್ನು ಸರ್ಕಾರಿ ಇಲಾಖೆ ಮತ್ತು ಸಚಿವಾಲಯಗಳು ಸುಪ್ರೀಂ ಆದೇಶವನ್ನು ಜಾರಿಗೆ ತರುವ ಬಗ್ಗೆ ವರದಿ ಸಲ್ಲಿಸುವಂತೆ ದೆಹಲಿ ಹೈಕೋರ್ಟ್, ಮಾರ್ಚ್‌ನಲ್ಲಿ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿತ್ತು. ಸಿಡಬ್ಲ್ಯುಸಿ ಸೇರಿದಂತೆ ಕೇಂದ್ರ ಸರ್ಕಾರದ ಅಡಿಯಲ್ಲಿರುವ ಎಲ್ಲಾ ಸರ್ಕಾರಿ ಇಲಾಖೆಗಳು / ಪಿಎಸ್ಯುಗಳು / ನಿಗಮಗಳು ಸುಪ್ರೀಂ ಕೋರ್ಟ್ ಘೋಷಿಸಿದ ಕಾನೂನನ್ನು ಅನುಸರಿಸುತ್ತವೆಯೇ ಎಂಬ ಬಗ್ಗೆ ಅಫಿಡವಿಟ್‌ನಲ್ಲಿ ವರದಿ ಸಲ್ಲಿಸುವಂತೆ ಹೈಕೋರ್ಟ್, ಕೇಂದ್ರ ಸರ್ಕಾರಕ್ಕೆ ತಿಳಿಸಿತ್ತು.

ದೆಹಲಿ ಹೈಕೋರ್ಟ್‌ನ ಸೂಚನೆಯ ನಂತರ, ಸೆಪ್ಟೆಂಬರ್‌ನಲ್ಲಿ ಜ್ಞಾಪಕ ಪತ್ರದ ಮೂಲಕ ಡಿಒಪಿಟಿ,  ಕಾರ್ಮಿಕರು ಮತ್ತು ತಾತ್ಕಾಲಿಕ ಉದ್ಯೋಗಿಗಳಿಗೆ ವಹಿಸಿಕೊಟ್ಟ ಕೆಲಸದ ಸ್ವರೂಪ ಒಂದೇ ಆಗಿದ್ದರೆ, ಕಾರ್ಮಿಕರಿಗೆ 1/30 ನೇ ದರದಲ್ಲಿ ಸಂಬಳ ನೀಡಬಹುದು ಸಂಬಂಧಿತ ವೇತನ ಪ್ರಮಾಣದ ಕನಿಷ್ಠ ವೇತನ ಮತ್ತು ದಿನಕ್ಕೆ 8 ಗಂಟೆಗಳ ಕೆಲಸಕ್ಕೆ ಭತ್ಯೆ ನೀಡುವುದಾಗಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಹೊರಗುತ್ತಿಗೆ ಪದ್ದತಿ ಮೊದಲು ಬಂದ್ ಮಾಡಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ನೇರೆ ವೇತನ ನೀಡಬೇಕು, ಹೊರಗುತ್ತಿಗೆ ಪಡೆದ ಸಂಸ್ಥೆಯವರು ಸೌಕ್ಯವಾಗಿ ಜೀವನ ನೆಡಸುತ್ತಿದ್ದು ಅವರಿಗೆ ತಿಂಗಳಿಗೆ ಕೆಲಸ ಕಾರ್ಯಮಾಡದೇ ಸೇವೆ ತೆರಿಗೆ, ಸಿಬ್ಬಂದಿಗಳಿಗೆ ಕಡಿಮೆ ವೇತನ ನೀಡಿ ಕರ್ತವ್ಯ ನಿರ್ವಹಣೆಯ ಮಾಡಿಸುತ್ತಿದ್ದಾರೆ, ಸರ್ಕಾರ ದಲ್ಲಿ ಇರುವ ಮುಖ್ಯಕಾರ್ಯದರ್ಶಿಗಳು ಯಾವರೀತಿ ಇದೇ ಈ ಪದ್ದತಿ ಅನ್ನೂವದರ ಬಗ್ಗೆ ಒಂದು ಸಲನೂ ನೋಡೇಯಿಲ್ಲ ಮೊದಲು ಈ ಪದ್ದತಿ ರದ್ದ ಮಾಡಬೇಕು.

  2. ಪ್ರತಿ ವರ್ಷ ಬೇರೆ ಬೇರೆ ಎಜೆನ್ಸಿಗೆ ಟೆಂಡರ ಕೊಟ್ಟು ತಮ್ಮ ಲಾಭವನ್ನ ಅನುಭವಿಸುತ್ತಾರೆ . ನಮ್ಮಂತ ಯುವ ಬಡ ಹುಡಗರು 10000=00 ಅಥವಾ 12000=00 ರೂಪಾಯಿ ದಿನ ಜಂಜಾಟದಲ್ಲಿ ಅಧಿಕಾರಿಯ ಆಳ್ವಿಕೆಯಲ್ಲಿ ನಾವುಗಳು ನಾಯಿಯ ತರ ಕಾಣುತ್ತಿದ್ದೇವೆ ನಾನೇ 2013-14 ಸಾಲಿನ ಒಂದು ವರ್ಷದ ವೇತನ ಕೊಟ್ಟಿಲ್ಲ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...