Homeಮುಖಪುಟಒಡಿಶಾದ ಖಾಸಗಿ ವಿವಿಯಲ್ಲಿ ನೇಪಾಳಿ ವಿದ್ಯಾರ್ಥಿನಿ ಅಸಹಜ ಸಾವು : ಕ್ಯಾಂಪಸ್‌ನಲ್ಲಿ ಕೋಲಾಹಲ!

ಒಡಿಶಾದ ಖಾಸಗಿ ವಿವಿಯಲ್ಲಿ ನೇಪಾಳಿ ವಿದ್ಯಾರ್ಥಿನಿ ಅಸಹಜ ಸಾವು : ಕ್ಯಾಂಪಸ್‌ನಲ್ಲಿ ಕೋಲಾಹಲ!

- Advertisement -
- Advertisement -

ಒಡಿಶಾದ ಭುವನೇಶ್ವರದಲ್ಲಿರುವ ಕಳಿಂಗಾ ಕೈಗಾರಿಕಾ ತಂತ್ರಜ್ಞಾನ ಸಂಸ್ಥೆಯಲ್ಲಿ (ಕೆಐಐಟಿ) ನೇಪಾಳಿ ವಿದ್ಯಾರ್ಥಿನಿಯೊಬ್ಬರು ಭಾನುವಾರ (ಫೆ.16) ಸಂಜೆ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಮೂರನೇ ವರ್ಷದ ಬಿಟೆಕ್ ವ್ಯಾಸಂಗ ಮಾಡುತ್ತಿದ್ದ ಪ್ರಕೃತಿ ಲಾಮ್ಸಾಲ್ ಅಸಹಜವಾಗಿ ಸಾವಿಗೀಡಾದ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ.

ಈ ಘಟನೆಯಿಂದ ಕೆಐಐಟಿ ಕ್ಯಾಂಪಸ್‌ನಲ್ಲಿ ಕೋಲಾಹಲ ಸೃಷ್ಟಿಯಾಗಿದೆ. ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ಒದಗಿಸಿಕೊಡುವಂತೆ ಆಗ್ರಹಿಸಿ 500ಕ್ಕೂ ಹೆಚ್ಚು ನೇಪಾಳಿ ವಿದ್ಯಾರ್ಥಿಗಳು ಸಂಸ್ಥೆಯ ವಿರುದ್ಧ ಭಾನುವಾರ ರಾತ್ರಿಯೇ ದಿಢೀರ್ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಇದರಿಂದ ಕೋಪಗೊಂಡ ಕೆಐಐಟಿ ಆಡಳಿತ ಮಂಡಳಿ, ಪ್ರತಿಭಟನೆಗೆ ಮುಂದಾದ ವಿದ್ಯಾರ್ಥಿಗಳನ್ನು ಕ್ಯಾಂಪಸ್ ಖಾಲಿ ಮಾಡಿಸಿ ವಾಪಸ್ ಊರಿಗೆ ಹೋಗುವಂತೆ ಒತ್ತಾಯಿಸಿದೆ.

ಅಲ್ಲದೇ ಅವರೆಲ್ಲರನ್ನೂ ಬಸ್ ಹತ್ತಿಸಿ ಕ್ಯಾಂಪಸ್‌ನಿಂದ 30 ಕಿಲೋ ಮೀಟರ್ ದೂರದ ಕಟ್ಟಕ್ ರೈಲು ನಿಲ್ದಾಣದಲ್ಲಿ ಇಳಿಸಿದ್ದಾರೆ. ಹುಡುಗಿಯರು ಸೇರಿಂದಂತೆ ಹಲವು ವಿದ್ಯಾರ್ಥಿಗಳು ಟಿಕೆಟ್ ಸಿಗದೆ ರೈಲಿನಲ್ಲಿ ಊರಿಗೆ ಹೋಗಲಾಗದೆ ನಿಲ್ದಾಣದ ಹೊರಗಡೆಯೇ ಅತಂತ್ರರಾಗಿ ನಿಂತಿದ್ದಾರೆ.

ಈ ಬೆಳವಣಿಗೆ ಈಗ ಭಾರತ ಮತ್ತು ನೇಪಾಳ ನಡುವಿನ ರಾಜತಾಂತ್ರಿಕ ವಿಷಯವಾಗಿ ಮಾರ್ಪಟ್ಟಿದೆ. “ಒಡಿಶಾದಲ್ಲಿ ತೊಂದರೆಗೊಳಗಾದ ನೇಪಾಳಿ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ನವದೆಹಲಿಯಲ್ಲಿರುವ ನಮ್ಮ ರಾಯಭಾರ ಕಚೇರಿಯ ಇಬ್ಬರು ಅಧಿಕಾರಿಗಳನ್ನು ಕಳುಹಿಸಿದ್ದೇವೆ. ವಿದ್ಯಾರ್ಥಿಗಳು ಅವರ ಆದ್ಯತೆಯ ಮೇರೆಗೆ ತಮ್ಮ ಹಾಸ್ಟೆಲ್‌ನಲ್ಲಿ ಉಳಿಯುವ ಅಥವಾ ಮನೆಗೆ ಮರಳುವ ಆಯ್ಕೆಯನ್ನು ಹೊಂದಿದ್ದಾರೆ” ಎಂದು ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಆರಂಭದಲ್ಲಿ ವಿದ್ಯಾರ್ಥಿಗಳ ವಿಷಯದಲ್ಲಿ ಕಠಿಣ ನಿಲುವು ತಳೆದಿದ್ದ ಕೆಐಐಟಿ, ತನ್ನ ಕ್ರಮದ ವಿರುದ್ದ ವ್ಯಾಪಕ ಖಂಡನೆ ವ್ಯಕ್ತವಾದ ಹಿನ್ನೆಲೆ ಹಿಂದೆ ಸರಿದಿದೆ. “ಇನ್ನು ಮುಂದೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು. ಈಗ ನಡೆದಿರುವ ಪ್ರಕರಣದ ಬಗ್ಗೆ ಸುಗಮ ಮತ್ತು ಪಕ್ಷಪಾತವಿಲ್ಲದ ತನಿಖೆ ಕೈಗೊಳ್ಳಲು ಸಹಾಯವಾಗುವಂತೆ ನೇಪಾಳಿ ವಿದ್ಯಾರ್ಥಿಗಳು ಸ್ವಯಂಪ್ರೇರಣೆಯಿಂದ ತಮ್ಮ ಸ್ಥಳಗಳಿಗೆ ಮರಳಲು ಸೂಚಿಸಲಾಗಿದೆ” ಎಂದು ಹೇಳಿಕೆ ನೀಡಿದೆ.

“ನೇಪಾಳಿ ವಿದ್ಯಾರ್ಥಿಗಳು ಕ್ಯಾಂಪಸ್‌ಗೆ ಮರಳಲು ವ್ಯವಸ್ಥೆ ಮಾಡಲಾಗುವುದು. ಅವರು ಈ ಹಿಂದಿನಂತೆ ತರಗತಿಗಳಲ್ಲಿ ಭಾಗವಹಿಸಬಹುದು. ಅವರ ಶಿಕ್ಷಣಕ್ಕೆ ತೊಂದೆಯಾಗದಂತೆ ವಿಶ್ವವಿದ್ಯಾಲಯ ನೋಡಿಕೊಳ್ಳಲಿದೆ. ತರಗತಿಗಳು ಮತ್ತು ಹಾಸ್ಟೆಲ್‌ಗಳಿಂದ ಅವರನ್ನುಅಮಾನತು ಮಾಡಿರುವ ಆದೇಶ ತಕ್ಷಣದಿಂದಲೇ ಹಿಂತೆಗೆದುಕೊಳ್ಳಲಾಗಿದೆ” ಎಂದು ಕೆಐಐಟಿ ತಿಳಿಸಿದೆ.

ಇದಕ್ಕೂ ಮೊದಲು, ಕೆಐಐಟಿ ಹೊರಡಿಸಿದ ನೋಟಿಸ್‌ನಲ್ಲಿ, “ನೇಪಾಳದ ಎಲ್ಲಾ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯವು ಅನಿರ್ದಿಷ್ಟಾವಧಿಗೆ ಮುಚ್ಚಲ್ಪಟ್ಟಿದೆ. ಫೆಬ್ರವರಿ 17, 2025 ರಂದು ಇಂದು ವಿಶ್ವವಿದ್ಯಾಲಯದ ಕ್ಯಾಂಪಸ್ ಅನ್ನು ತಕ್ಷಣವೇ ಖಾಲಿ ಮಾಡುವಂತೆ ಅವರಿಗೆ ನಿರ್ದೇಶಿಸಲಾಗಿದೆ” ಎಂದು ಹೇಳಿತ್ತು.

ಪೊಲೀಸರ ಪ್ರಕಾರ, ವಿದ್ಯಾರ್ಥಿನಿ ಪ್ರಕೃತಿಗೆ ಕ್ಯಾಂಪಸ್‌ನಲ್ಲಿ ಸ್ಥಳೀಯ ವಿದ್ಯಾರ್ಥಿಯೊಬ್ಬ ಪೀಡಿಸುತ್ತಿದ್ದ. ಆದರೆ, ಪ್ರಕೃತಿ ಇನ್ನೊಬ್ಬ ಹುಡುಗನನ್ನು ಇಷ್ಟಪಟ್ಟಿದ್ದರು. ಪೀಡಿಸುತ್ತಿದ್ದ ಸ್ಥಳೀಯ ವಿದ್ಯಾರ್ಥಿಯ ಕಿರುಕುಳಕ್ಕೆ ಬೇಸತ್ತು ಅವರು ಫೆ.16ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

“ಫೆಬ್ರವರಿ 16ರಂದು ನೇಪಾಳಿ ವಿದ್ಯಾರ್ಥಿನಿಯ ಆತ್ಮಹತ್ಯೆಯ ಬಗ್ಗೆ ನಮಗೆ ದೂರು ಬಂದಿತ್ತು. ನಾವು ಹಾಸ್ಟೆಲ್ ಕೋಣೆಗೆ ಧಾವಿಸಿ ಘಟನೆಯಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳನ್ನು ಸಮಾಧಾನಪಡಿಸಲು ಪ್ರಯತ್ನಿಸಿದೆವು” ಎಂದು ಭುವನೇಶ್ವರದ ಉಪ ಪೊಲೀಸ್ ಆಯುಕ್ತ ಪಿನಾಕ್ ಮಿಶ್ರಾ ಹೇಳಿದ್ದಾರೆ.

ಭಾರತದ ಹೊಸ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. College administrative action is not good. after pressure coming from central govt. they accept all students to attend the classes. first find out the reason,

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...