Homeಮುಖಪುಟ'ಸಂವಿಧಾನದ ಆಶಯಕ್ಕೆ ವಿರುದ್ಧ': ತರಾತುರಿಯಲ್ಲಿ ಮುಖ್ಯ ಚು.ಆಯುಕ್ತರ ನೇಮಕಕ್ಕೆ ಕಾಂಗ್ರೆಸ್ ಟೀಕೆ

‘ಸಂವಿಧಾನದ ಆಶಯಕ್ಕೆ ವಿರುದ್ಧ’: ತರಾತುರಿಯಲ್ಲಿ ಮುಖ್ಯ ಚು.ಆಯುಕ್ತರ ನೇಮಕಕ್ಕೆ ಕಾಂಗ್ರೆಸ್ ಟೀಕೆ

- Advertisement -
- Advertisement -

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ (ಸಿಇಸಿ) ಮತ್ತು ಹರಿಯಾಣದ ಮುಖ್ಯ ಕಾರ್ಯದರ್ಶಿ ಡಾ. ವಿವೇಕ್ ಜೋಶಿ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಿರುವುದು ‘ನಮ್ಮ ಸಂವಿಧಾನದ ಆಶಯ ಮತ್ತು ಸುಪ್ರೀಂ ಕೋರ್ಟ್ ತೀರ್ಪುಗಳಿಗೆ ವಿರುದ್ಧವಾದ ಮಧ್ಯರಾತ್ರಿಯ ಆತುರದ ನಡೆ’ ಎಂದು ಕಾಂಗ್ರೆಸ್ ಟೀಕಿಸಿದೆ.

ಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ನಿರ್ಧರಿಸುವವರೆಗೆ ನೇಮಕಾತಿ ಮುಂದೂಡುವಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ರಾಹುಲ್ ಗಾಂಧಿ ಮನವಿ ಮಾಡಿದ್ದರು. ಇದಾದ ಕೆಲವೇ ಗಂಟೆಗಳ ನಂತರ ಹೊಸ ಆಯುಕ್ತರ ನೇಮಕ ಆಗಿದೆ. ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಬುಧವಾರ (ಫೆ.19) ನಡೆಯಲಿದೆ.

“ಇದು ನಮ್ಮ ಸಂವಿಧಾನದ ಆಶಯಕ್ಕೆ ವಿರುದ್ಧವಾದ ನಡೆ. ಚುನಾವಣಾ ಪ್ರಕ್ರಿಯೆಯು ಸರಿಯಾಗಿ ನಡೆಯಬೇಕಾದರೆ, ಮುಖ್ಯ ಚುನಾವಣಾ ಆಯುಕ್ತ ನಿಷ್ಪಕ್ಷಪಾತ ಪಾಲುದಾರರಾಗಿರಬೇಕು ಎಂದು ಸುಪ್ರೀಂ ಕೋರ್ಟ್ ಹಲವು ಪ್ರಕರಣಗಳಲ್ಲಿ ಪುನರುಚ್ಚರಿಸಿದೆ” ಎಂದು ಕಾಂಗ್ರೆಸ್ ಸಂಸದ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ ವೇಣುಗೋಪಾಲ್ ಹೇಳಿದ್ದಾರೆ.

“ತಿದ್ದುಪಡಿ ಮಾಡಿದ ಕಾನೂನಿನಲ್ಲಿ ಮುಖ್ಯ ಚುನಾವಣಾ ಆಯುಕ್ತರ ಆಯ್ಕೆ ಸಮಿತಿಯಿಂದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನು ಹೊರಗಿಡಲಾಗಿದೆ. ಸರ್ಕಾರ ಮುಖ್ಯ ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಮೊದಲು ಫೆಬ್ರವರಿ 19ರಂದು ನಡೆಯುವ ಸುಪ್ರೀಂ ಕೋರ್ಟ್‌ನ ವಿಚಾರಣೆಯವರೆಗೆ ಕಾಯಬೇಕಿತ್ತು” ಎಂದಿದ್ದಾರೆ.

“ಇಂದು ತರಾತುರಿಯಲ್ಲಿ ಸಭೆ ನಡೆಸಿ ಹೊಸ ಚುನಾವಣಾ ಆಯುಕ್ತರನ್ನು ನೇಮಿಸುವ ಅವರ (ಸರ್ಕಾರದ) ನಿರ್ಧಾರವು ಸುಪ್ರೀಂ ಕೋರ್ಟ್‌ನ ಪರಿಶೀಲನೆಯನ್ನು ತಪ್ಪಿಸಲು ಮತ್ತು ಸ್ಪಷ್ಟ ಆದೇಶ ಬರುವ ಮೊದಲು ನೇಮಕಾತಿಯನ್ನು ಪೂರ್ಣಗೊಳಿಸಲು ಅವರು ಉತ್ಸುಕರಾಗಿದ್ದಾರೆಂದು ತೋರಿಸುತ್ತದೆ” ಎಂದು ವೇಣುಗೋಪಾಲ್ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

“ಇಂತಹ ನಡವಳಿಕೆಯು, ಆಡಳಿತ ನಡೆಸುತ್ತಿರುವ ಸರ್ಕಾರವು ಚುನಾವಣಾ ಪ್ರಕ್ರಿಯೆಯನ್ನು ಹೇಗೆ ನಾಶಪಡಿಸುತ್ತಿದೆ ಮತ್ತು ನಿಯಮಗಳನ್ನು ತನ್ನ ಲಾಭಕ್ಕಾಗಿ ಹೇಗೆ ಬದಲಾಯಿಸುತ್ತಿದೆ ಎಂಬುದರ ಬಗ್ಗೆ ಅನೇಕರು ವ್ಯಕ್ತಪಡಿಸಿರುವ ಅನುಮಾನಗಳನ್ನು ದೃಢಪಡಿಸುತ್ತದೆ. ಅದು ನಕಲಿ ಮತದಾರರ ಪಟ್ಟಿಗಳಾಗಿರಬಹುದು, ಬಿಜೆಪಿಗೆ ಅನುಕೂಲಕರವಾದ ವೇಳಾಪಟ್ಟಿಯಾಗಿರಬಹುದು ಅಥವಾ ಇವಿಎಂ ಹ್ಯಾಕಿಂಗ್ ಬಗ್ಗೆ ಕಳವಳಗಳಾಗಿರಬಹುದು – ಸರ್ಕಾರ ಮತ್ತು ಅದು ನೇಮಿಸುವ ಚುನಾವಣಾ ಆಯುಕ್ತರು ಇಂತಹ ಘಟನೆಗಳಿಂದಾಗಿ ಆಳವಾದ ಅನುಮಾನಕ್ಕೆ ಒಳಗಾಗುತ್ತಾರೆ” ಎಂದು ಹೇಳಿದ್ದಾರೆ.

“ವಿರೋಧ ಪಕ್ಷದ ನಾಯಕರು ಸರಿಯಾಗಿಯೇ ಹೇಳಿದಂತೆ, ಸುಪ್ರೀಂ ಕೋರ್ಟ್ ಸಂವಿಧಾನಕ್ಕೆ ಅನುಗುಣವಾಗಿ ಈ ವಿಷಯವನ್ನು ನಿರ್ಧರಿಸುವವರೆಗೆ ಈ ನಿರ್ಧಾರವನ್ನು ಪಕ್ಕಕ್ಕೆ ಇಡಬೇಕಾಗಿತ್ತು” ಎಂದಿದ್ದಾರೆ.

ನೂತನ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಬುಧವಾರ (ಫೆ.19) ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಹಾಲಿ ಆಯುಕ್ತ ರಾಜೀವ್ ಕುಮಾರ್ ಮಂಗಳವಾರ (ಫೆ.18) ನಿವೃತ್ತರಾಗಲಿದ್ದಾರೆ.

ಮೂಲಗಳ ಪ್ರಕಾರ, 30 ನಿಮಿಷದ ಸಭೆಯಲ್ಲಿ ಹೊಸ ಮುಖ್ಯ ಚುನಾವಣಾ ಆಯುಕ್ತ ಮತ್ತು ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡಲಾದ ಐದು ಹೆಸರುಗಳ ಪಟ್ಟಿಯನ್ನು ಸಮಿತಿಯ ಮುಂದೆ ಪರಿಗಣನೆಗೆ ಇಡಲಾಗಿತ್ತು.

ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ಸಚೇತಕ ಮಾಣಿಕ್ಕಂ ಟ್ಯಾಗೋರ್ ಕೂಡ ವೇಣುಗೋಪಾಲ್ ಹೇಳಿದ್ದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಆಯುಕ್ತರ ಈ ನೇಮಕ ‘ನಮ್ಮ ಸಂವಿಧಾನದ ಆಶಯ ಮತ್ತು ಮುಕ್ತ ಚುನಾವಣೆಗಳನ್ನು ದುರ್ಬಲಗೊಳಿಸುತ್ತದೆ’ ಎಂದಿದ್ದಾರೆ.

“ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದಂತೆ, ಫೆಬ್ರವರಿ 19ರಂದು ನಡೆಯುವ ಸುಪ್ರೀಂ ಕೋರ್ಟ್ ವಿಚಾರಣೆಯವರೆಗೆ ಕಾಯಬೇಕಿತ್ತು. ಆದರೆ, ಅವಸರದಿಂದ ನೇಮಕ ಮಾಡಿರುವುದು ಪರಿಶೀಲನೆಯನ್ನು ತಪ್ಪಿಸುವ ಅವರ ಉದ್ದೇಶವನ್ನು ತೋರಿಸುತ್ತದೆ. ಪ್ರಜಾಪ್ರಭುತ್ವವು ಇದಕ್ಕಿಂತ ಉತ್ತಮವಾದುದಕ್ಕೆ ಅರ್ಹವಾಗಿದೆ” ಎಂದು ಟ್ಯಾಗೋರ್ ಹೇಳಿದ್ದಾರೆ.

ರಿಲಯನ್ಸ್ ವಿರುದ್ಧದ ವಂಚನೆ ಆರೋಪಗಳನ್ನು ಮರುಸ್ಥಾಪಿಸಿದ ದೆಹಲಿ ಹೈಕೋರ್ಟ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆಕ್ರಮಣ ಮಾಡುವ ಉದ್ದೇಶವಿಲ್ಲ..’; ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷರು

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ನೆರೆಯ ರಾಷ್ಟ್ರಗಳಿಗೆ ಶನಿವಾರ ಕ್ಷಮೆಯಾಚಿಸಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ದಾಳಿಗಳಿಗೆ ಟೆಹ್ರಾನ್ ಇತರ ರಾಷ್ಟ್ರಗಳನ್ನು ಆಕ್ರಮಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಇರಾನ್ ಸಾರ್ವಜನಿಕರನ್ನು...

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...

ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ ಕೇಂದ್ರ ಆದೇಶ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದ ಕುರಿತು ಟಿವಿ ನ್ಯೂಸ್‌ ಚಾನೆಲ್‌ಗಳು ಅನಗತ್ಯ ಯುದ್ಧೋನ್ಮಾದ ಸೃಷ್ಟಿಸುತ್ತಿರುವ ಹಾಗೂ ಸುಳ್ಳು ವರದಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನೆಲೆ, ಮುಂದಿನ ನಾಲ್ಕು ವಾರಗಳ ಕಾಲ...

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...