Homeಮುಖಪುಟಗರ್ಭಿಣಿಯರು ಪರೀಕ್ಷೆಗೆ ಒಳಗಾದ ಆತಂಕಕಾರಿ 7 ವೀಡಿಯೊಗಳು ವೈರಲ್

ಗರ್ಭಿಣಿಯರು ಪರೀಕ್ಷೆಗೆ ಒಳಗಾದ ಆತಂಕಕಾರಿ 7 ವೀಡಿಯೊಗಳು ವೈರಲ್

- Advertisement -
- Advertisement -

ಅಹಮದಾಬಾದ್: ಆತಂಕಕಾರಿ ಘಟನೆಯೊಂದರಲ್ಲಿ ರಾಜ್‌ಕೋಟ್‌ನ ಖಾಸಗಿ ಆಸ್ಪತ್ರೆಯೊಳಗೆ ವೈದ್ಯರು ಗರ್ಭಿಣಿಯರನ್ನು ಪರೀಕ್ಷಿಸುತ್ತಿರುವ ಕನಿಷ್ಠ ಏಳು ಆಘಾತಕಾರಿ ಸಿಸಿಟಿವಿ ವೀಡಿಯೊಗಳು ಟೆಲಿಗ್ರಾಮ್ ಮತ್ತು ಯೂಟ್ಯೂಬ್‌ನಲ್ಲಿ ಸೋರಿಕೆಯಾಗಿವೆ ಎಂದು ಆರೋಪಿಸಲಾಗಿದೆ. ಗಂಭೀರ ಕಳವಳವನ್ನು ಹುಟ್ಟುಹಾಕಿರುವ ಈ ವೀಡಿಯೊಗಳು, ಗುಜರಾತ್ ಪೊಲೀಸರು ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಆಸ್ಪತ್ರೆಯೊಳಗೆ ವೈದ್ಯರು ಮಹಿಳಾ ರೋಗಿಗಳನ್ನು ಪರೀಕ್ಷಿಸುತ್ತಿರುವ ವೀಡಿಯೊಗಳು ಟೆಲಿಗ್ರಾಮ್ ಮತ್ತು ಯೂಟ್ಯೂಬ್‌ನಲ್ಲಿ ಪ್ರಸಾರವಾದ ನಂತರ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಗುಜರಾತ್ ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಪಿಟಿಐ ವರದಿಯ ಪ್ರಕಾರ, ಈ ವೀಡಿಯೊಗಳಲ್ಲಿ ಕೆಲವು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪ್ರಸಾರವಾಗಲು ಪ್ರಾರಂಭಿಸಿದ ನಂತರ ಸೈಬರ್ ಅಪರಾಧ ಶಾಖೆ ತನ್ನ ತನಿಖೆಯನ್ನು ಪ್ರಾರಂಭಿಸಿದೆ. ಸಿಸಿಟಿವಿ ದೃಶ್ಯಗಳಿಂದ ಬಂದಿರುವಂತೆ ಕಂಡುಬರುವ ವೀಡಿಯೊಗಳಲ್ಲಿ ಆಸ್ಪತ್ರೆಯ ಮುಚ್ಚಿದ ಕೋಣೆಯೊಳಗೆ ಮಹಿಳಾ ವೈದ್ಯರು ಮಹಿಳಾ ರೋಗಿಗಳನ್ನು ಪರೀಕ್ಷಿಸುತ್ತಿರುವುದನ್ನು ಅಥವಾ ನರ್ಸ್‌ನಿಂದ ಇಂಜೆಕ್ಷನ್ ನೀಡುತ್ತಿರುವುದನ್ನು ಕಾಣಬಹುದು.

ಪ್ರಾಥಮಿಕ ತನಿಖೆಯಲ್ಲಿ ಆರೋಪಿಯು ಯೂಟ್ಯೂಬ್ ಚಾನೆಲ್‌ಗೆ ಲಿಂಕ್ ಮಾಡಲಾದ ಟೆಲಿಗ್ರಾಮ್ ಗುಂಪನ್ನು ರಚಿಸಿದ್ದಾನೆ ಎಂದು ಸಹಾಯಕ ಪೊಲೀಸ್ ಆಯುಕ್ತ (ಸೈಬರ್ ಅಪರಾಧ) ಹಾರ್ದಿಕ್ ಮಕಾಡಿಯಾ ಹೇಳಿದ್ದಾರೆ.

ಟೈಮ್ಸ್ ಅಫ್ ಇಂಡಿಯಾದ ವರದಿಯ ಪ್ರಕಾರ, ‘ಮೇಘಾ MBBS’ ಎಂದು ಗುರುತಿಸಲ್ಪಟ್ಟ ಯೂಟ್ಯೂಬ್ ಚಾನೆಲ್, ವೀಡಿಯೊಗಳನ್ನು ಪ್ರಸಾರ ಮಾಡುವುದಲ್ಲದೆ, ಕಾಮೆಂಟ್‌ಗಳ ವಿಭಾಗದಲ್ಲಿ ಟೆಲಿಗ್ರಾಮ್ ಲಿಂಕ್‌ಗಳನ್ನು ಸಹ ಸೇರಿಸಿದೆ. ಇದರಿಂದಾಗಿ ವೀಕ್ಷಕರಿಗೆ ಹೆಚ್ಚುವರಿ ವಿಷಯವನ್ನು ಪ್ರವೇಶಿಸಲು ಅವಕಾಶ ದೊರೆತಿದೆ. ಲಿಂಕ್‌ಗಳಲ್ಲಿ ಇತರ ಸ್ಪಷ್ಟ ವಿಷಯವನ್ನು ವೀಕ್ಷಿಸಲು ಹಲವಾರು ಚಂದಾದಾರಿಕೆ ಕೊಡುಗೆಗಳನ್ನು ಸಹ ನೀಡಲಾಗಿದೆ. ಕಳೆದ ಒಂದು ತಿಂಗಳಿನಲ್ಲಿ ಈ ವೀಡಿಯೊಗಳು ಐದು ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿವೆ ಎಂದು ಮಕಾಡಿಯಾ ತಿಳಿಸಿದ್ದಾರೆ.

ಆರೋಪಿಯು ಯೂಟ್ಯೂಬ್ ಚಾನೆಲ್‌ನಲ್ಲಿ ಅಂತಹ ಏಳು ವೀಡಿಯೊಗಳನ್ನು ಅಪ್‌ಲೋಡ್ ಮಾಡಿದ್ದಾನೆ ಮತ್ತು ವಿವರಣೆಯಲ್ಲಿ ಟೆಲಿಗ್ರಾಮ್ ಗುಂಪಿನ ಲಿಂಕ್ ಅನ್ನು ನೀಡಿದ್ದಾನೆ. ಆ ಗುಂಪಿನ ಸದಸ್ಯರಿಗೆ ಇದೇ ರೀತಿಯ ವೀಡಿಯೊಗಳನ್ನು ವೀಕ್ಷಿಸಲು ಶುಲ್ಕವನ್ನು ಪಾವತಿಸಲು ಕೇಳಲಾಗಿದೆ. ಚಂದಾದಾರಿಕೆಯನ್ನು ಪಾವತಿಸಲು ಸದಸ್ಯರನ್ನು ಆಕರ್ಷಿಸಲು, ಆರೋಪಿಗಳು ಇದೇ ರೀತಿಯ ವೀಡಿಯೊಗಳ ಸ್ಕ್ರೀನ್‌ಗ್ರಾಬ್‌ಗಳನ್ನು ಹಂಚಿಕೊಂಡಿದ್ದಾರೆ ಎಂದು ಮಕಾಡಿಯಾ ಹೇಳಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಟೆಲಿಗ್ರಾಮ್ ಗುಂಪನ್ನು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಪ್ರಾರಂಭಿಸಲಾಯಿತು ಮತ್ತು ಈ ವರ್ಷದ ಜನವರಿಯಲ್ಲಿ ಯೂಟ್ಯೂಬ್ ಚಾನೆಲ್ ಅನ್ನು ಪ್ರಾರಂಭಿಸಲಾಯಿತು ಎಂದು ತಿಳಿದುಬಂದಿದೆ.

“ಈ ಚಾನೆಲ್ ಆಸ್ಪತ್ರೆಯೊಳಗಿನ ಹಾಸಿಗೆಯ ಮೇಲೆ ವೈದ್ಯರು ಮಹಿಳೆಯರನ್ನು ಪರೀಕ್ಷಿಸುತ್ತಿರುವ ಏಳು ವೀಡಿಯೊಗಳನ್ನು ಇದುವರೆಗೆ ಅಪ್‌ಲೋಡ್ ಮಾಡಿದೆ. ಆ ಚಾನೆಲ್ ಅನ್ನು ಪ್ರಚಾರ ಮಾಡುವ ಟೆಲಿಗ್ರಾಮ್ ಗುಂಪಿನಲ್ಲಿ 90ಕ್ಕೂ ಹೆಚ್ಚು ಸದಸ್ಯರಿದ್ದಾರೆ. ಈ ವೀಡಿಯೊಗಳು ಸಿಸಿಟಿವಿ ದೃಶ್ಯಾವಳಿಗಳಿಂದ ತೆಗೆದುಕೊಳ್ಳಲ್ಪಟ್ಟಂತೆ ಕಂಡುಬರುತ್ತವೆ. ಅಂತಹ ಒಂದು ವೀಡಿಯೊದಲ್ಲಿ ನರ್ಸ್ ಮತ್ತು ಮಹಿಳಾ ರೋಗಿಯು ಗುಜರಾತಿಯಲ್ಲಿ ಮಾತನಾಡುವುದನ್ನು ಕೇಳಬಹುದು. ಈ ವೀಡಿಯೊಗಳನ್ನು ಚಿತ್ರೀಕರಿಸಿದ ಆಸ್ಪತ್ರೆಯನ್ನು ನಾವು ಇನ್ನೂ ಗುರುತಿಸಿಲ್ಲ ಎಂದು ಮಕಾಡಿಯಾ ಹೇಳಿದ್ದಾರೆ.

ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಎಸಿಪಿ ತಿಳಿಸಿದ್ದಾರೆ.

ಈ ವೀಡಿಯೊಗಳು ರಾಜ್‌ಕೋಟ್‌ನ ಹೆರಿಗೆ ಆಸ್ಪತ್ರೆಯ ಹೆರಿಗೆ ಕೊಠಡಿಯಿಂದ ಬಂದಿವೆ ಎಂದು ಪಿಟಿಐ ವರದಿ ಮಾಡಿದೆ. ರಾಜ್‌ಕೋಟ್ ಪಶ್ಚಿಮ ಬಿಜೆಪಿ ಶಾಸಕಿ ಡಾ. ದರ್ಶಿತಾ ಶಾ ಅವರು ಈ ವಿಷಯದ ಬಗ್ಗೆ ತನಿಖೆ ನಡೆಸುವಂತೆ ಪೊಲೀಸರನ್ನು ಕೇಳಿಕೊಂಡಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

ಏತನ್ಮಧ್ಯೆ ರಾಜ್‌ಕೋಟ್‌ನ ಪಾಯಲ್ ಆಸ್ಪತ್ರೆಯ ಅಧಿಕಾರಿಯೊಬ್ಬರು “ಯಾರೋ ನಮ್ಮ ದೃಶ್ಯಗಳನ್ನು ಹ್ಯಾಕ್ ಮಾಡಿರಬೇಕು” ಎಂದು ವರದಿಗಾರರಿಗೆ ತಿಳಿಸಿದ್ದಾರೆ.

“ನಾವು ಯಾವುದೇ ತಪ್ಪು ಮಾಡಿಲ್ಲ. ಪೊಲೀಸರ ತನಿಖೆಯಲ್ಲಿ ನಾವು ಅವರೊಂದಿಗೆ ಸಹಕರಿಸುತ್ತೇವೆ” ಎಂದು ಆಸ್ಪತ್ರೆಯ ಅಧಿಕಾರಿ ಹೇಳಿದ್ದಾರೆ.

“ಇಂತಹ ವೀಡಿಯೊಗಳ ಪ್ರಸಾರವು ಗೌಪ್ಯತೆಯ ಗಂಭೀರ ಉಲ್ಲಂಘನೆಯಾಗಿದೆ. ಗೌಪ್ಯತೆ ಉಲ್ಲಂಘನೆ ಮತ್ತು ಆನ್‌ಲೈನ್‌ನಲ್ಲಿ ಅಶ್ಲೀಲ ವಿಷಯಗಳನ್ನು ಪ್ರಕಟಿಸುವುದನ್ನು ಉದ್ದೇಶಿಸಿ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66E ಮತ್ತು 67ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ” ಎಂದು ಅಹಮದಾಬಾದ್ ಸೈಬರ್ ಅಪರಾಧದ ಸಹಾಯಕ ಪೊಲೀಸ್ ಆಯುಕ್ತ (ACP) ಹಾರ್ದಿಕ್ ಮಕಾಡಿಯಾ TOI ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ಕೆಐಐಟಿ ವಿದ್ಯಾರ್ಥಿನಿ ಆತ್ಮಹತ್ಯೆ ಬಳಿಕ ತೀವ್ರಗೊಂಡ ಉದ್ವಿಗ್ನತೆ; ವಿವಿ ತೊರೆದ 500ಕ್ಕೂ ಹೆಚ್ಚು ನೇಪಾಳಿ ವಿದ್ಯಾರ್ಥಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...