Homeಮುಖಪುಟಪ್ರಯಾಗ್‌ರಾಜ್ ನದಿ ನೀರು ಸ್ನಾನಕ್ಕೆ ಯೋಗ್ಯವಲ್ಲ : ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ

ಪ್ರಯಾಗ್‌ರಾಜ್ ನದಿ ನೀರು ಸ್ನಾನಕ್ಕೆ ಯೋಗ್ಯವಲ್ಲ : ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ

- Advertisement -
- Advertisement -

ಪ್ರಯಾಗ್‌ರಾಜ್‌ ನದಿ ನೀರಿನಲ್ಲಿ ಮಾನವ ಹಾಗೂ ಪ್ರಾಣಿಗಳ ಮಲದಲ್ಲಿ ಸಾಮಾನ್ಯವಾಗಿ ಕಂಡು ಬರುವ ಕೋಲಿಫಾರ್ಮ್ ಬ್ಯಾಕ್ಟೀರಿಯಾಗಳ ಮಟ್ಟ ಅಧಿಕವಾಗಿರುವುದರಿಂದ ಸ್ನಾನಕ್ಕೆ ಯೋಗ್ಯವಾಗಿಲ್ಲ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ತಿಳಿಸಿದೆ.

ಸಿಪಿಸಿಬಿ ಜನವರಿ 12 ಮತ್ತು 13ರಂದು ಗಂಗಾ ನದಿಯ ನೀರಿನ ಸ್ಯಾಂಪಲ್ ಸಂಗ್ರಹಿಸಿ ಪರೀಕ್ಷೆ ನಡೆಸಿತ್ತು. ಅದು ತನ್ನ ವರದಿಯನ್ನು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣಕ್ಕೆ (ಎನ್‌ಜಿಟಿ) ಸೋಮವಾರ (ಫೆ.17) ಸಲ್ಲಿಸಿದೆ.

ಪ್ರಯಾಗ್‌ರಾಜ್‌ನಲ್ಲಿ ಗಂಗಾ ಹಾಗೂ ಯಮುನಾ ನದಿಗಳಿಗೆ ಒಳ ಚರಂಡಿ ನೀರು ಬಿಡುವುದನ್ನು ತಡೆಯುವ ಕ್ರಮಗಳ ಕುರಿತು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯ (ಎನ್‌ಜಿಟಿ) ಅಧ್ಯಕ್ಷರಾಗಿರುವ ಪ್ರಕಾಶ್ ಶ್ರೀವಾತ್ಸವ ನೇತೃತ್ವದ ಸಮಿತಿ ಪರಿಶೀಲನೆ ನಡೆಸಿದೆ. ನೀರಿನ ಗುಣಮಟ್ಟವನ್ನು ಕಾಪಾಡದೇ ಇರುವುದರ ಕುರಿತು ಸಿಪಿಸಿಬಿ ಫೆಬ್ರವರಿ 3ರಂದು ನೀಡಿದ ವರದಿಯಲ್ಲಿ ಉಲ್ಲೇಖಿಸಿರುವುದನ್ನು ಸಮಿತಿ ಗಮನಿಸಿದೆ. ಪರಿಶೀಲಿಸಲಾದ ಎಲ್ಲಾ ಸ್ಥಳಗಳು ಕೋಲಿಫಾರ್ಮ್ ಬ್ಯಾಕ್ಟೀರಿಯಾಗಳಿಂದ ಕಲುಷಿತವಾಗಿರುವುದರಿಂದ ನದಿ ನೀರು ಸ್ನಾನ ಯೋಗ್ಯವಾಗಿಲ್ಲ ಎಂದು ಸಿಪಿಸಿಬಿ ವರದಿ ಹೇಳಿದೆ.

ಪುಣ್ಯ ಸ್ನಾನದ ದಿನಗಳು ಸೇರಿದಂತೆ ಮಹಾಕುಂಭ ಮೇಳದ ಸಂದರ್ಭ ದೊಡ್ಡ ಸಂಖ್ಯೆಯ ಜನರು ನದಿಯಲ್ಲಿ ಸ್ನಾನ ಮಾಡಿರುವುದು ನೀರಿನಲ್ಲಿ ಫೀಕಲ್ ಕೋಲಿಫಾರ್ಮ್ ಬ್ಯಾಕ್ಟೀರಿಯಾಗಳ ಸಂಖ್ಯೆಯಲ್ಲಿ ಏರಿಕೆಯಾಗಲು ಕಾರಣವಾಗಿದೆ ಎಂದು ವರದಿ ತಿಳಿಸಿದೆ.

ಪ್ರಯಾಗ್‌ರಾಜ್‌ನಲ್ಲಿ ನೀರಿನ ಗುಣಮಟ್ಟ ಸುಧಾರಿಸಲು ‘ಕ್ರಮ ಕೈಗೊಂಡ ವರದಿ’ (ಎಟಿಆರ್‌) ಸಲ್ಲಿಸಲು ವಿಫಲವಾದ ಕಾರಣ ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿ (ಯುಪಿಪಿಸಿಬಿ) ಅಧಿಕಾರಿಗಳಿಗೆ ವರ್ಚುವಲ್ ಆಗಿ ವಿಚಾರಣೆಗೆ ಹಾಜರಾಗುವಂತೆ ಎನ್‌ಜಿಟಿ ಸಮನ್ಸ್ ಜಾರಿ ಮಾಡಿದೆ.

ಎನ್‌ಜಿಟಿ ಪ್ರಧಾನ ಪೀಠವು ಡಿಸೆಂಬರ್ 24,2024 ರಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಮತ್ತು ಯುಪಿಪಿಸಿಬಿ ಎರಡಕ್ಕೂ ನೀರಿನ ಮಾದರಿಗಳನ್ನು ತೆಗೆದುಕೊಂಡು, ಫಲಿತಾಂಶವನ್ನು ತಮ್ಮ ವೆಬ್‌ಸೈಟ್‌ನಲ್ಲಿ ಪ್ರದರ್ಶಿಸಲು ಮತ್ತು ಜನವರಿ 31 ಮತ್ತು ಫೆಬ್ರವರಿ 28ರಂದು ಎನ್‌ಜಿಟಿ ರಿಜಿಸ್ಟ್ರಾರ್ ಜನರಲ್‌ಗೆ ವರದಿಯನ್ನು ಕಳುಹಿಸಲು ನಿರ್ದೇಶಿಸಿತ್ತು.

“ಸಮಗ್ರ ಕ್ರಮ ಕೈಗೊಂಡ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದ ನ್ಯಾಯಮಂಡಳಿಯ ಆದೇಶವನ್ನು ಯುಪಿಪಿಸಿಬಿ ಪಾಲಿಸಿಲ್ಲ” ಎಂದು ಅಧ್ಯಕ್ಷ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ, ನ್ಯಾಯಾಂಗ ಸದಸ್ಯ ನ್ಯಾಯಮೂರ್ತಿ ಸುಧೀರ್ ಅಗರ್ವಾಲ್ ಮತ್ತು ತಜ್ಞ ಸದಸ್ಯ ಎ ಸೆಂಥಿಲ್ ವೆಲ್ ಅವರನ್ನು ಒಳಗೊಂಡ ಎನ್‌ಜಿಟಿ ಪ್ರಧಾನ ಪೀಠದ ತಿಳಿಸಿದೆ.

“ಯುಪಿಪಿಸಿಬಿ ಸದಸ್ಯ ಕಾರ್ಯದರ್ಶಿ ಮತ್ತು ಪ್ರಯಾಗ್‌ರಾಜ್‌ನಲ್ಲಿ ಗಂಗಾ ನದಿಯಲ್ಲಿ ನೀರಿನ ಗುಣಮಟ್ಟವನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ಹೊತ್ತಿರುವ ರಾಜ್ಯ ಪ್ರಾಧಿಕಾರಕ್ಕೆ ಫೆಬ್ರವರಿ 19 ರಂದು ಮುಂದಿನ ವಿಚಾರಣೆಯ ದಿನಾಂಕದಂದು ವರ್ಚುವಲ್ ಆಗಿ ಹಾಜರಾಗಲು ನಿರ್ದೇಶಿಸಲಾಗಿದೆ” ಎಂದು ಎನ್‌ಜಿಟಿ ಪ್ರಧಾನ ಪೀಠದ ಆದೇಶ ಹೇಳಿದೆ.

ಈ ಹಿಂದೆ ನಿರ್ದೇಶಿಸಿದಂತೆ ತೆಗೆದುಕೊಂಡ ಕ್ರಮಗಳ ಕುರಿತ ವಿಸ್ತೃತ ವರದಿ ಸಲ್ಲಿಸಲು ಯುಪಿಪಿಸಿಬಿ ವಿಫಲವಾಗಿರುವ ಕುರಿತು ಎನ್‌ಜಿಟಿ ಸಮಿತಿ ಗಮನಿಸಿದೆ. ವರದಿ ಬದಲು ಅದು ನೀರಿನ ಪರೀಕ್ಷೆಯ ಫಲಿತಾಂಶದೊಂದಿಗೆ ಪತ್ರವನ್ನು ಸಲ್ಲಿಸಿದೆ ಎಂದು ಎನ್‌ಜಿಟಿ ಸಮಿತಿ ಹೇಳಿದೆ.

ಸಿಪಿಸಿಬಿ ವರದಿಯ ಪ್ರಕಾರ, ಜನವರಿ 12, 13, 15, 19, 20 ಮತ್ತು 24 ರಂದು ಗಂಗಾ ಮತ್ತು ಯಮುನಾ ನದಿಯ ವಿವಿಧ ಸ್ಥಳಗಳಿಂದ ನೀರಿನ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಅದರ ವರದಿಯು ಜಿಯೋಸಿಂಥೆಟಿಕ್ ಡೀವಾಟರಿಂಗ್ ಟ್ಯೂಬ್‌ಗಳಲ್ಲಿನ ಅನುಸರಣೆಯ ಕೊರತೆಯನ್ನು ಸಹ ಎತ್ತಿ ತೋರಿಸಿದೆ.

ಪ್ರಮುಖ ಚರಂಡಿಗಳ ಒಳಹರಿವು ಮತ್ತು ಹೊರಹರಿವು ಬಿಂದುಗಳಲ್ಲಿ ಹರಿವಿನ ಮೀಟರ್‌ಗಳು ಇಲ್ಲದಿರುವುದನ್ನು ವರದಿಯು ವಿವರಿಸಿದೆ. ಪ್ರಯಾಗ್‌ರಾಜ್‌ನಲ್ಲಿ ಒಟ್ಟು 340 ಎಂಎಲ್‌ಡಿ ಸಂಸ್ಕರಣಾ ಸಾಮರ್ಥ್ಯವಿರುವ 10 ಕಾರ್ಯಾಚರಣಾ ಎಸ್‌ಟಿಪಿಗಳಿವೆ ಎಂದು ವರದಿ ತಿಳಿಸಿದೆ. ಏಳು ಎಸ್‌ಟಿಪಿಗಳು ಸಂಸ್ಕರಿಸಿದ ತ್ಯಾಜ್ಯ ನೀರನ್ನು ಗಂಗಾ ನದಿಗೆ ಮತ್ತು ಮೂರು ಯಮುನಾ ನದಿಗೆ ಬಿಡುತ್ತಿವೆ ಎಂದಿದೆ.

ನದಿ ನೀರು ಸ್ನಾನಕ್ಕೆ ಯೋಗ್ಯವಾಗಿಲ್ಲ ಎಂದು ವರದಿ ಬರುವ ಮುನ್ನವೇ ಲಕ್ಷಾಂತರ ಜನರು ಮಹಾಕುಂಭಮೇಳದ ಪ್ರಯುಕ್ತ ಪವಿತ್ರ ಸ್ನಾನ ಮಾಡಿದ್ದಾರೆ. ಕಲುಷಿತ ನೀರಿನಿಂದ ಅವರಿಗೆ ಚರ್ಮ ರೋಗ ಬರಬಹುದು ಎಂದು ತಜ್ಞರನ್ನು ಉಲ್ಲೇಖಿಸಿ ವರದಿಗಳು ಹೇಳಿವೆ.

ಕೊಳದ ಮೇಲೆ ಅಕ್ರಮ ಮದರಸಾ ನಿರ್ಮಾಣ ಆರೋಪ: ಭಾರೀ ಪೊಲೀಸ್ ಬಂದೋಬಸ್ತಿನೊಂದಿಗೆ ಸಂಪೂರ್ಣ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...