Homeಮುಖಪುಟಚೆನ್ನೈ: ಚಾಕು ತೋರಿಸಿ ಒಡಿಶಾ ಮಹಿಳೆಯ ಮೇಲೆ ಅತ್ಯಾಚಾರ; ಬಿಹಾರದ 3 ವಲಸೆ ಕಾರ್ಮಿಕರ ಬಂಧನ

ಚೆನ್ನೈ: ಚಾಕು ತೋರಿಸಿ ಒಡಿಶಾ ಮಹಿಳೆಯ ಮೇಲೆ ಅತ್ಯಾಚಾರ; ಬಿಹಾರದ 3 ವಲಸೆ ಕಾರ್ಮಿಕರ ಬಂಧನ

- Advertisement -
- Advertisement -

ಚೆನ್ನೈ: 27 ವರ್ಷದ ಮಹಿಳೆಯ ಮೇಲೆ ಚಾಕು ತೋರಿಸಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಿಹಾರದ ಅಪ್ರಾಪ್ತ ವಯಸ್ಕ ಸೇರಿದಂತೆ ಮೂವರು ಕಾರ್ಮಿಕರನ್ನು ಬುಧವಾರ ತಮಿಳುನಾಡಿನ ತಿರುಪುರದಲ್ಲಿ ಬಂಧಿಸಲಾಗಿದೆ. ಆಕೆಯ ಗಂಡನನ್ನು ಕಟ್ಟಿಹಾಕಿ ಮಗುವಿನ ಕತ್ತು ಕತ್ತರಿಸುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತ ಕುಟುಂಬವು ಫೆಬ್ರವರಿ 17ರಂದು ತಿರುಪುರ ರೈಲ್ವೆ ನಿಲ್ದಾಣದ ಬಳಿ ಈ ಆರೋಪಿಗಳನ್ನು ಭೇಟಿಯಾಯಿತು. ಸ್ಥಳೀಯ ಉಡುಪು ಉತ್ಪಾದನಾ ಘಟಕಗಳಲ್ಲಿನ ತಮ್ಮ ಕೆಲಸದಲ್ಲಿ ಅತೃಪ್ತಿ ಹೊಂದಿ ಒಡಿಶಾಗೆ ಮರಳಲು ಯೋಚಿಸುತ್ತಿದ್ದಾಗ ಅವರು ಆರೋಪಿಗಳನ್ನು ಭೇಟಿಯಾದರು ಎಂದು ತಿರುಪುರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಯಾದವ್ ಗಿರೀಶ್ ಹೇಳಿದರು.

“ಆರೋಪಿಗಳು ತಾವು ಕೆಲಸ ಮಾಡುತ್ತಿದ್ದ ಕಾರ್ಖಾನೆಯಲ್ಲಿ ಕೆಲಸ ನೀಡುವುದಾಗಿ ಭರವಸೆ ನೀಡಿ ಕುಟುಂಬವನ್ನು ತಮ್ಮ ಕೋಣೆಗೆ ಕರೆದೊಯ್ದರು. ರಾತ್ರಿಯ ಸಮಯದಲ್ಲಿ ಅವರು ಆಕೆಯ ಗಂಡನನ್ನು ಹಗ್ಗದಿಂದ ಕಟ್ಟಿ ಹಾಕಿ, ಮಹಿಳೆಯ ಮೇಲೆ ಚಾಕು ತೋರಿಸಿ ಅತ್ಯಾಚಾರ ನಡೆಸಿದರು. ಮಹಿಳೆ ವಿರೋಧಿಸಿದಾಗ, ಆರೋಪಿಗಳು ಚಾಕುವಿನಿಂದ ಮಗುವಿನ ಕತ್ತು ಕತ್ತರಿಸುವುದಾಗಿ ಬೆದರಿಕೆ ಹಾಕಿದರು” ಎಂದು ಗಿರೀಶ್ ಹೇಳಿದರು.

ಮಂಗಳವಾರ ಸಂಜೆ ತಿರುಪ್ಪೂರು ಉತ್ತರ ಮಹಿಳಾ ಪೊಲೀಸ್ ಠಾಣೆಯಲ್ಲಿ ದಂಪತಿ ದೂರು ದಾಖಲಿಸಿದ್ದು, ಪೊಲೀಸರು ಮೊಹಮ್ಮದ್ ನದೀಮ್, ಮೊಹಮ್ಮದ್ ಡ್ಯಾನಿಶ್ ಮತ್ತು 17 ವರ್ಷದ ಬಾಲಕನನ್ನು ಬಂಧಿಸಲಾಗಿದೆ. ಮಹಿಳೆಯನ್ನು ತಿರುಪ್ಪೂರಿನ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗಿರೀಶ್ ಹೇಳಿದರು.

ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಏಳು ಕಾಲೇಜು ವಿದ್ಯಾರ್ಥಿಗಳನ್ನು ಬಂಧಿಸಿದ ಒಂದು ದಿನದ ನಂತರ ಇದು ಸಂಭವಿಸಿದೆ. ಈ ಘಟನೆಯು ರಾಜ್ಯಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ವಿರೋಧ ಪಕ್ಷವಾದ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಮಂಗಳವಾರ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಹೆಚ್ಚುತ್ತಿರುವ ಲೈಂಗಿಕ ಅಪರಾಧಗಳ ವಿರುದ್ಧ ಪ್ರತಿಭಟಿಸಲು ಬೀದಿಗಿಳಿದಿದೆ.

“ತಮಿಳುನಾಡಿನಲ್ಲಿ ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯವಿಲ್ಲದ ಒಂದು ದಿನವೂ ಇಲ್ಲ. ಬಂಧನಗಳ ಬಗ್ಗೆ ಹೆಮ್ಮೆ ಪಡುವ ಬದಲು ಅಂತಹ ಅಪರಾಧಗಳನ್ನು ತಡೆಯುವುದು ತಮ್ಮ ಪ್ರಾಥಮಿಕ ಕರ್ತವ್ಯ ಎಂದು ಪೊಲೀಸರು ಮತ್ತು ಅಧಿಕಾರಿಗಳು ಯಾವಾಗ ಅರಿತುಕೊಳ್ಳುತ್ತಾರೆ?” ಎಂದು ಪಟ್ಟಾಳಿ ಮಕ್ಕಳ್ ಕಚ್ಚಿ (ಪಿಎಂಕೆ) ಸಂಸ್ಥಾಪಕ ಡಾ. ಎಸ್. ರಾಮದಾಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಹಿಂದಿನ ಎಐಎಡಿಎಂಕೆ ಆಡಳಿತದ ಸಮಯದಲ್ಲಿ ನಡೆದ ಅಪರಾಧಗಳಿಗಿಂತ ಭಿನ್ನವಾಗಿ, ನಮ್ಮ ಆಡಳಿತದಲ್ಲಿ ಈ ಅಪರಾಧಗಳನ್ನು ವರದಿ ಮಾಡಲು ಸಂತ್ರಸ್ತ್ರರು ಈಗ ಆತ್ಮವಿಶ್ವಾಸ ಹೊಂದಿದ್ದಾರೆ” ಎಂದು ದ್ರಾವಿಡ ಮುನ್ನೇತ್ರ ಕಳಗಂ ನಾಯಕ ಮತ್ತು ರಾಜ್ಯ ಕಾನೂನು ಸಚಿವ ಸೇವುಗನ್ ರೆಗುಪತಿ ಹೇಳಿದರು. ಆಗ, ಪೊಲ್ಲಾಚಿಯಲ್ಲಿ ಲೈಂಗಿಕ ದೌರ್ಜನ್ಯದ ಸಂತ್ರಸ್ತ್ರರು ದೂರುಗಳನ್ನು ದಾಖಲಿಸಲು ಹೆದರಿದ್ದರು ಮತ್ತು ಎಫ್‌ಐಆರ್ ಅನ್ನು ಎರಡು ವಾರಗಳ ನಂತರವೇ ದಾಖಲಿಸಲಾಯಿತು.” ಎಂದಿದ್ದಾರೆ.

ಡಿಸೆಂಬರ್‌ನಲ್ಲಿ ಚೆನ್ನೈನ ಅನ್ನಾ ವಿಶ್ವವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಯಿತು. ಎರಡು ವಾರಗಳ ಹಿಂದೆ, ಕೃಷ್ಣಗಿರಿಯಲ್ಲಿ ಮೂವರು ಶಿಕ್ಷಕರನ್ನು ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿಸಲಾಯಿತು. ಸೇಲಂನಲ್ಲಿ, ಹನ್ನೊಂದನೇ ತರಗತಿಯ ಮೂವರು ಹುಡುಗರನ್ನು ಕ್ಯಾಂಪಸ್‌ನಲ್ಲಿ ತಮ್ಮ ಜೂನಿಯರ್ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿಸಲಾಗಿದೆ. ಕಳೆದ ವಾರ ಪೊಲ್ಲಾಚಿಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರು ಮತ್ತು ಒಬ್ಬ ಹುಡುಗನ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಮೊಬೈಲ್ ಫೋನ್‌ಗಳಲ್ಲಿ ಕೃತ್ಯಗಳನ್ನು ಚಿತ್ರೀಕರಿಸಿದ ಆರೋಪದ ಮೇಲೆ ಮೂವರು ಅಪ್ರಾಪ್ತ ಬಾಲಕರು ಮತ್ತು 18 ವರ್ಷದ ಯುವಕನನ್ನು ಬಂಧಿಸಲಾಗಿದೆ.

ಮುಡಾ ಪ್ರಕರಣ| ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ಲೋಕಾಯುಕ್ತರಿಂದ ‘ಕ್ಲೀನ್ ಚಿಟ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...