Homeಮುಖಪುಟಚೆನ್ನೈ: ಚಾಕು ತೋರಿಸಿ ಒಡಿಶಾ ಮಹಿಳೆಯ ಮೇಲೆ ಅತ್ಯಾಚಾರ; ಬಿಹಾರದ 3 ವಲಸೆ ಕಾರ್ಮಿಕರ ಬಂಧನ

ಚೆನ್ನೈ: ಚಾಕು ತೋರಿಸಿ ಒಡಿಶಾ ಮಹಿಳೆಯ ಮೇಲೆ ಅತ್ಯಾಚಾರ; ಬಿಹಾರದ 3 ವಲಸೆ ಕಾರ್ಮಿಕರ ಬಂಧನ

- Advertisement -
- Advertisement -

ಚೆನ್ನೈ: 27 ವರ್ಷದ ಮಹಿಳೆಯ ಮೇಲೆ ಚಾಕು ತೋರಿಸಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಿಹಾರದ ಅಪ್ರಾಪ್ತ ವಯಸ್ಕ ಸೇರಿದಂತೆ ಮೂವರು ಕಾರ್ಮಿಕರನ್ನು ಬುಧವಾರ ತಮಿಳುನಾಡಿನ ತಿರುಪುರದಲ್ಲಿ ಬಂಧಿಸಲಾಗಿದೆ. ಆಕೆಯ ಗಂಡನನ್ನು ಕಟ್ಟಿಹಾಕಿ ಮಗುವಿನ ಕತ್ತು ಕತ್ತರಿಸುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತ ಕುಟುಂಬವು ಫೆಬ್ರವರಿ 17ರಂದು ತಿರುಪುರ ರೈಲ್ವೆ ನಿಲ್ದಾಣದ ಬಳಿ ಈ ಆರೋಪಿಗಳನ್ನು ಭೇಟಿಯಾಯಿತು. ಸ್ಥಳೀಯ ಉಡುಪು ಉತ್ಪಾದನಾ ಘಟಕಗಳಲ್ಲಿನ ತಮ್ಮ ಕೆಲಸದಲ್ಲಿ ಅತೃಪ್ತಿ ಹೊಂದಿ ಒಡಿಶಾಗೆ ಮರಳಲು ಯೋಚಿಸುತ್ತಿದ್ದಾಗ ಅವರು ಆರೋಪಿಗಳನ್ನು ಭೇಟಿಯಾದರು ಎಂದು ತಿರುಪುರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಯಾದವ್ ಗಿರೀಶ್ ಹೇಳಿದರು.

“ಆರೋಪಿಗಳು ತಾವು ಕೆಲಸ ಮಾಡುತ್ತಿದ್ದ ಕಾರ್ಖಾನೆಯಲ್ಲಿ ಕೆಲಸ ನೀಡುವುದಾಗಿ ಭರವಸೆ ನೀಡಿ ಕುಟುಂಬವನ್ನು ತಮ್ಮ ಕೋಣೆಗೆ ಕರೆದೊಯ್ದರು. ರಾತ್ರಿಯ ಸಮಯದಲ್ಲಿ ಅವರು ಆಕೆಯ ಗಂಡನನ್ನು ಹಗ್ಗದಿಂದ ಕಟ್ಟಿ ಹಾಕಿ, ಮಹಿಳೆಯ ಮೇಲೆ ಚಾಕು ತೋರಿಸಿ ಅತ್ಯಾಚಾರ ನಡೆಸಿದರು. ಮಹಿಳೆ ವಿರೋಧಿಸಿದಾಗ, ಆರೋಪಿಗಳು ಚಾಕುವಿನಿಂದ ಮಗುವಿನ ಕತ್ತು ಕತ್ತರಿಸುವುದಾಗಿ ಬೆದರಿಕೆ ಹಾಕಿದರು” ಎಂದು ಗಿರೀಶ್ ಹೇಳಿದರು.

ಮಂಗಳವಾರ ಸಂಜೆ ತಿರುಪ್ಪೂರು ಉತ್ತರ ಮಹಿಳಾ ಪೊಲೀಸ್ ಠಾಣೆಯಲ್ಲಿ ದಂಪತಿ ದೂರು ದಾಖಲಿಸಿದ್ದು, ಪೊಲೀಸರು ಮೊಹಮ್ಮದ್ ನದೀಮ್, ಮೊಹಮ್ಮದ್ ಡ್ಯಾನಿಶ್ ಮತ್ತು 17 ವರ್ಷದ ಬಾಲಕನನ್ನು ಬಂಧಿಸಲಾಗಿದೆ. ಮಹಿಳೆಯನ್ನು ತಿರುಪ್ಪೂರಿನ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗಿರೀಶ್ ಹೇಳಿದರು.

ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಏಳು ಕಾಲೇಜು ವಿದ್ಯಾರ್ಥಿಗಳನ್ನು ಬಂಧಿಸಿದ ಒಂದು ದಿನದ ನಂತರ ಇದು ಸಂಭವಿಸಿದೆ. ಈ ಘಟನೆಯು ರಾಜ್ಯಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ವಿರೋಧ ಪಕ್ಷವಾದ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಮಂಗಳವಾರ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಹೆಚ್ಚುತ್ತಿರುವ ಲೈಂಗಿಕ ಅಪರಾಧಗಳ ವಿರುದ್ಧ ಪ್ರತಿಭಟಿಸಲು ಬೀದಿಗಿಳಿದಿದೆ.

“ತಮಿಳುನಾಡಿನಲ್ಲಿ ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯವಿಲ್ಲದ ಒಂದು ದಿನವೂ ಇಲ್ಲ. ಬಂಧನಗಳ ಬಗ್ಗೆ ಹೆಮ್ಮೆ ಪಡುವ ಬದಲು ಅಂತಹ ಅಪರಾಧಗಳನ್ನು ತಡೆಯುವುದು ತಮ್ಮ ಪ್ರಾಥಮಿಕ ಕರ್ತವ್ಯ ಎಂದು ಪೊಲೀಸರು ಮತ್ತು ಅಧಿಕಾರಿಗಳು ಯಾವಾಗ ಅರಿತುಕೊಳ್ಳುತ್ತಾರೆ?” ಎಂದು ಪಟ್ಟಾಳಿ ಮಕ್ಕಳ್ ಕಚ್ಚಿ (ಪಿಎಂಕೆ) ಸಂಸ್ಥಾಪಕ ಡಾ. ಎಸ್. ರಾಮದಾಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಹಿಂದಿನ ಎಐಎಡಿಎಂಕೆ ಆಡಳಿತದ ಸಮಯದಲ್ಲಿ ನಡೆದ ಅಪರಾಧಗಳಿಗಿಂತ ಭಿನ್ನವಾಗಿ, ನಮ್ಮ ಆಡಳಿತದಲ್ಲಿ ಈ ಅಪರಾಧಗಳನ್ನು ವರದಿ ಮಾಡಲು ಸಂತ್ರಸ್ತ್ರರು ಈಗ ಆತ್ಮವಿಶ್ವಾಸ ಹೊಂದಿದ್ದಾರೆ” ಎಂದು ದ್ರಾವಿಡ ಮುನ್ನೇತ್ರ ಕಳಗಂ ನಾಯಕ ಮತ್ತು ರಾಜ್ಯ ಕಾನೂನು ಸಚಿವ ಸೇವುಗನ್ ರೆಗುಪತಿ ಹೇಳಿದರು. ಆಗ, ಪೊಲ್ಲಾಚಿಯಲ್ಲಿ ಲೈಂಗಿಕ ದೌರ್ಜನ್ಯದ ಸಂತ್ರಸ್ತ್ರರು ದೂರುಗಳನ್ನು ದಾಖಲಿಸಲು ಹೆದರಿದ್ದರು ಮತ್ತು ಎಫ್‌ಐಆರ್ ಅನ್ನು ಎರಡು ವಾರಗಳ ನಂತರವೇ ದಾಖಲಿಸಲಾಯಿತು.” ಎಂದಿದ್ದಾರೆ.

ಡಿಸೆಂಬರ್‌ನಲ್ಲಿ ಚೆನ್ನೈನ ಅನ್ನಾ ವಿಶ್ವವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಯಿತು. ಎರಡು ವಾರಗಳ ಹಿಂದೆ, ಕೃಷ್ಣಗಿರಿಯಲ್ಲಿ ಮೂವರು ಶಿಕ್ಷಕರನ್ನು ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿಸಲಾಯಿತು. ಸೇಲಂನಲ್ಲಿ, ಹನ್ನೊಂದನೇ ತರಗತಿಯ ಮೂವರು ಹುಡುಗರನ್ನು ಕ್ಯಾಂಪಸ್‌ನಲ್ಲಿ ತಮ್ಮ ಜೂನಿಯರ್ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿಸಲಾಗಿದೆ. ಕಳೆದ ವಾರ ಪೊಲ್ಲಾಚಿಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರು ಮತ್ತು ಒಬ್ಬ ಹುಡುಗನ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಮೊಬೈಲ್ ಫೋನ್‌ಗಳಲ್ಲಿ ಕೃತ್ಯಗಳನ್ನು ಚಿತ್ರೀಕರಿಸಿದ ಆರೋಪದ ಮೇಲೆ ಮೂವರು ಅಪ್ರಾಪ್ತ ಬಾಲಕರು ಮತ್ತು 18 ವರ್ಷದ ಯುವಕನನ್ನು ಬಂಧಿಸಲಾಗಿದೆ.

ಮುಡಾ ಪ್ರಕರಣ| ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ಲೋಕಾಯುಕ್ತರಿಂದ ‘ಕ್ಲೀನ್ ಚಿಟ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...