Homeಕರ್ನಾಟಕವರ್ಷ ಕಳೆದರೂ ದೇವರಾಜ ಅರಸು ಪ್ರಶಸ್ತಿ ಪ್ರಕಟಿಸದ ಬಿಜೆಪಿ ಸರ್ಕಾರ : ಏನಿರಬಹುದು ಹುನ್ನಾರ?

ವರ್ಷ ಕಳೆದರೂ ದೇವರಾಜ ಅರಸು ಪ್ರಶಸ್ತಿ ಪ್ರಕಟಿಸದ ಬಿಜೆಪಿ ಸರ್ಕಾರ : ಏನಿರಬಹುದು ಹುನ್ನಾರ?

ಸಮಿತಿಯನ್ನು ರಚಿಸಲಾಗಿದ್ದು ಸಮಿತಿಯು ಹೆಸರನ್ನು ಅಂತಿಮಗೊಳಿಸಿದೆ. ಆದರೆ ಫೈಲ್‌ ಅನುಮೋದನೆಗಾಗಿ ನಮ್ಮ ಬಳಿ ಇನ್ನೂ ಬಂದಿಲ್ಲ" ಎನ್ನುತ್ತಾರೆ ಹಿಂದುಳಿದ ವರ್ಗಗಳ ಇಲಾಖೆಯ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹಿಸನ್‌.

- Advertisement -
- Advertisement -

ಪ್ರತಿ ವರ್ಷ ರಾಜ್ಯ ಸರ್ಕಾರ ದೇವರಾಜ ಅರಸು ಹೆಸರಿನಲ್ಲಿ ಕೊಡುತ್ತಿದ್ದ ಪ್ರಶಸ್ತಿಯನ್ನು ಈ ಬಾರಿ ವರ್ಷ ಮುಗಿದರೂ ಈ ಸರ್ಕಾರ ನೆನಪಿಸಿಕೊಂಡಂತಿಲ್ಲ. ಇದಕ್ಕಾಗಿ ಅದು ಕೊಡುತ್ತಿರುವ ಕಾರಣ, ರಾಜ್ಯದಲ್ಲಿ ನೆರೆಹಾವಳಿಯಿಂದಾಗಿ ಪ್ರಶಸ್ತಿ ಕೊಡಲು ಸರ್ಕಾರದ ಬಳಿ ಸಮಯ ಮತ್ತು ಹಣವಿಲ್ಲವಂತೆ. ಅದು ಎಷ್ಟು ಎಂದರೆ ಕೇವಲ ಐದು ಲಕ್ಷ…!

ಪ್ರತಿ ವರ್ಷ ದೇವರಾಜು ಅರಸುರವರ ಜನ್ಮದಿನವಾದ ಆಗಸ್ಟ್‌ 20ರಂದು ಸರ್ಕಾರ ಈ ಪ್ರಶಸ್ತಿಯನ್ನು ನೀಡುತ್ತಿತ್ತು. ಕಳೆದ ಬಾರಿ ಬರಗೂರು ರಾಮಚಂದ್ರಪ್ಪನವರ ನೇತೃತ್ವದ ಸಮಿತಿ ಸಾಮಾಜಿಕ ಹೋರಾಟಗಾರ ಶಿವಾಜಿ ಕಾಗುಣಿಕಾರರಿನ್ನು ಆರಿಸಿತ್ತು. ಅಟಲ್‌ ಬಿಹಾರಿ ವಾಜಪೇಯಿಯವರು ನಿಧನದ ಕಾರಣದಿಂದ ಡಿಸೆಂಬರ್‌ನಲ್ಲಿ ಪ್ರಶಸ್ತಿ ನೀಡಲಾಗಿತ್ತು. ಈ ಮೊದಲು ಬಿ.ಎ ಮೋಹಿದ್ದೀನ್, ದಿನೇಶ್ ಅಮೀನ್ ಮಟ್ಟು, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಮಹತ್ವದ ಸಾಧಕರಿಗೆ ಈ ಪ್ರಶಸ್ತಿ ಒಲಿದಿದೆ.

ಈ ಬಾರಿ ಆಗಸ್ಟ್‌ ಕಳೆದು ನವೆಂಬರ್‌ ಮುಗಿಯುತ್ತಾ ಬಂದಿದೆ. ಇನ್ನೊಂದು ತಿಂಗಳಲ್ಲಿ ಈ ವರ್ಷವೆ ಮುಗಿದುಬಿಡಲಿದೆ. ಆದರೂ ಸರ್ಕಾರ ಪ್ರಶಸ್ತಿ ನೀಡುವುದನ್ನು ಮರೆತಿದೆಯೋ ಅಥವಾ ಬೇಕಂತಲೇ ವಿಳಂಬ ಮಾಡುತ್ತಿದೆಯೋ?

ಈ ವರ್ಷ ಜುಲೈ 26 ರಂದೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತಲ್ಲದೇ ಯಡಿಯೂರಪ್ಪನವರು ಮುಖ್ಯಮಂತ್ರಿಗಳಾದರು. ಆಗಸ್ಟ್‌ ಅಂತ್ಯದೊಳಗೆ ಸಚಿವ ಸಂಪುಟವನ್ನು ರಚಿಸಿದರು. ಸೆಪ್ಟಂಬರ್‌, ಅಕ್ಟೋಬರ್‌, ನವೆಂಬರ್‌ ಮೂರು ತಿಂಗಳು ಕಳೆದರೂ ಅವರ್‍ಯಾರು ಈ ಪ್ರಶಸ್ತಿಯ ಬಗ್ಗೆ ಸೊಲೆತ್ತಿಲ್ಲ.

ಈ ಕುರಿತು ಮಾಹಿತಿ ಪಡೆಯಲು ಹಿಂದುಳಿದ ವರ್ಗಗಳ ಇಲಾಖೆಯ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹಿಸನ್‌ರವರನ್ನು ಸಂಪರ್ಕಿಸಿಲಾಯಿತು. ಆಗ ಅವರು “ಕುವೆಂಪು ವಿ.ವಿಯ ನಿವೃತ್ತ ಕುಲಪತಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು ಸಮಿತಿಯು ಹೆಸರನ್ನು ಅಂತಿಮಗೊಳಿಸಿದೆ. ಆದರೆ ಫೈಲ್‌ ಅನುಮೋದನೆಗಾಗಿ ನಮ್ಮ ಬಳಿ ಇನ್ನೂ ಬಂದಿಲ್ಲ” ಎನ್ನುತ್ತಾರೆ.

ಸರ್ಕಾರದ ಈ ಧೋರಣೆಯು ಭೂಸುಧಾರಣೆಯ ಶಿಲ್ಪಿ, ಸಾಮಾಜಿಕ ನ್ಯಾಯದ ಹರಿಕಾರ, ಹಿಂದುಳಿದ ವರ್ಗಗಳ ನೇತಾರ ಎಂದೇ ಪ್ರಖ್ಯಾತರಾದ ದೇವರಾಜು ಅರಸುರವರ ಬಗ್ಗೆ ಗೌರವವಿಲ್ಲವೆಂಬುದನ್ನು ತೋರಿಸುತ್ತದೆ.

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಸಂಬಂಧಪಟ್ಟ ಹೋರಾಟಗಾರನ್ನು ಮಾತನಾಡಿಸಿತು. ಅವರು ಏನು ಹೇಳಿದ್ದಾರೆ ಇಲ್ಲಿದೆ ನೋಡಿ.

ಡಾ. ಸಿ.ಎಸ್‌ ದ್ವಾರಕನಾಥ್‌, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರು.

“ನೆರೆಯ ಕಾರಣ ಹೇಳಿ ಪ್ರಶಸ್ತಿ ನೀಡುವುದನ್ನು ತಪ್ಪಿಸುವುದಾದರೆ ತಪ್ಪಿಸಲಿ. ಅದರೆ ಬಹಳಷ್ಟು ಪ್ರಶಸ್ತಿಗಳನ್ನು ಈಗಾಗಲೇ ಪ್ರಕಟ ಮಾಡಿ, ದೇವರಾಜ್ ಅರಸ್ ಅವರ ಪ್ರಶಸ್ತಿಯನ್ನು ಮಾತ್ರ ತಪ್ಪಿಸುತ್ತಾರೆ ಅಂದರೆ ಏನರ್ಥ..? ಮೊನ್ನೆಯಷ್ಟೇ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ನೀಡಿದರು. ಆದರೆ ದೇವರಾಜ್‌ ಅರಸ್ ಅವರ ಪ್ರಶಸ್ತಿ ಮಾತ್ರ ತಪ್ಪಿಸಿರುವುದರ ಹಿಂದಿನ ಹುನ್ನಾರವಾದರೂ ಏನು..? ಎಲ್ಲಾ ಪ್ರಶಸ್ತಿಗಳನ್ನು ನೀಡಿ, ಕೇವಲ ಅರಸ್ ಅವರ ಪ್ರಶಸ್ತಿ ಮಾತ್ರ ನೀಡದಿರುವುದು ಆಶ್ಚರ್ಯಕರ ಸಂಗತಿಯಾಗಿದೆ.

==========

ಕೆ.ಎಸ್‌ ಶಿವರಾಂ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ವೇದಿಕೆ, ಮೈಸೂರು.

“ದೇವರಾಜ್‌ ಅರಸ್‌ ಅವರು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದವರು. ತಳ ಸಮುದಾಯದವರಿಗೆ ಅನೇಕ ಸವಲತ್ತುಗಳನ್ನು ನೀಡಿ, ಮುಖ್ಯವಾಹಿನಿಗೆ ತಂದಂತವರು ಅರಸ್. ಆದರೆ ಬಿಜೆಪಿಗೆ ಸಮಾನತೆ, ಮತ್ತು ಸಾಮಾಜಿಕ ನ್ಯಾಯ ಬೇಕಾಗಿಲ್ಲ. ಬಿಜೆಪಿ ಸರ್ಕಾರ ಹಿಂದುತ್ವ, ಕೋಮುಶಕ್ತಿಗಳನ್ನು ಮುಂದಿಟ್ಟುಕೊಂಡು ಅಧಿಕಾರಕ್ಕೆ ಬಂದಿದೆ. ಹಾಗಾಗಿಯೇ ಹಿಂದುಳಿದ ವರ್ಗದ ಹಿತಾಸಕ್ತಿಗೆ ದುಡಿದವರ ಬಗ್ಗೆ ಬಿಜೆಪಿ ತಾತ್ಸಾರ ಮಾಡುತ್ತಿದೆ. ಸಾವರ್ಕರ್‌ ಅಂತವರನ್ನು ವಿಜೃಂಭಿಸಿ, ಸಾಮಾಜಿಕ ನ್ಯಾಯದ ಪರ ದುಡಿದ ಅಂಬೇಡ್ಕರ್‌ ಮತ್ತು ಅರಸ್‌ರಂತವರನ್ನು ಜನಮಾನಸದಿಂದ ತೆಗೆದು ಹಾಕಲು ಬಿಜೆಪಿ ಸರ್ಕಾರ ಹೀಗೆ ಮಾಡುತ್ತಿದೆ. ಆರ್‌ಎಸ್‌ಎಸ್‌ನ್ನು ವಿಜೃಂಭಿಸಲು ಹೀಗೆಲ್ಲಾ ಮಾಡ್ತಿದ್ದಾರೆ. ಇದೆಲ್ಲಾ ಬಿಜೆಪಿ ರಚಿಸಿರುವ ಹುನ್ನಾರ. ಈ ಕೂಡಲೇ ದೇವರಾಜ್‌ ಅರಸ್‌ ಪ್ರಶಸ್ತಿ ಪ್ರಕಟ ಮಾಡಬೇಕು, ಇಲ್ಲದಿದ್ದರೆ ಹೋರಾಟ ಅನಿವಾರ್ಯ.

================

ರಮೇಶ್‌ ಅಭಿಮನ್ಯು, ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷರು ಮತ್ತು ಪತ್ರಕರ್ತರು

“ದೇವರಾಜ್‌ ಅರಸ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಹೋದ ಸಿಎಂ ಯಡಿಯೂರಪ್ಪನವರು ಪ್ರಶಸ್ತಿ ಬಗ್ಗೆ ಮಾತನಾಡಲೇ ಇಲ್ಲ. ಹಿಂದುಳಿದ ಹಾಗೂ ತಳ ಸಮುದಾಯದ ನಾಯಕನನ್ನು ಬಿಜೆಪಿ ಸರ್ಕಾರ ನಿರ್ಲಕ್ಷ್ಯ ಮಾಡಿದೆ. ಇದನ್ನು ನಾವು ಖಂಡತುಂಡವಾಗಿ ಖಂಡಿಸುತ್ತೇವೆ. ಬಿಜೆಪಿ ಸರ್ಕಾರ ಕೇವಲ ಅಧಿಕಾರ, ಆಪರೇಷನ್ ಕಮಲ ಮಾಡುವುದರಲ್ಲಿ ಬ್ಯುಸಿಯಾಗಿದೆ. ಹಿಂದುಳಿದ ಸಮುದಾಯಗಳನ್ನು ಮರೆತಿದ್ದಾರೆ. ದೇವರಾಜ್‌ ಅರಸ್ ಅವರಂತಹ ಮಹಾನ್‌ ನಾಯಕನನ್ನು ಆದರ್ಶವಾಗಿಟ್ಟುಕೊಂಡು ಬಿಜೆಪಿ ಅಧಿಕಾರ ನಡೆಸಬೇಕಿತ್ತು. ಆದರೆ ಅಂತಹ ನಾಯಕನಿಗೆ ಬಿಜೆಪಿ ಅವಮಾನ ಮಾಡಿದೆ”.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...