Homeಕರ್ನಾಟಕಮುಸ್ಲಿಮರಿಗೆ ಮಕ್ಕಳು ಹುಟ್ಟಿಸುವುದೆ ಕೆಲಸ - ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ

ಮುಸ್ಲಿಮರಿಗೆ ಮಕ್ಕಳು ಹುಟ್ಟಿಸುವುದೆ ಕೆಲಸ – ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಮುಸ್ಲಿಮರಿಗೆ ಪುರುಸೊತ್ತಿಲ್ಲದೆ ಮಕ್ಕಳನ್ನು ಹುಟ್ಟಿಸುವುದು ಬಿಟ್ಟರೆ ಬೇರೇನೂ ಕೆಲಸವಿಲ್ಲ, ಹೀಗೆ ಮಾಡುತ್ತಾ ಸಂಖ್ಯೆಯನ್ನು ಜಾಸ್ತಿ ಮಾಡಿ, ಬೇರೆಯವರ ಮೇಲೆ ಭಯದ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ ಎಂದು ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸೋಮವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮುಸ್ಲಿಮರಿಗೆ ಮಕ್ಕಳು

ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣದ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, “ಮುಸ್ಲಿಮರಿಗೆ 1947ರಲ್ಲಿ ಅವರ ಧರ್ಮದ ಆಧಾರದಲ್ಲಿ ಅವರಿಗೆ ಪ್ರತ್ಯೇಕ ರಾಷ್ಟ್ರವನ್ನು ನಾವು ಕೊಟ್ಟಾಗೋಯ್ತು. ಇಲ್ಲಿನ ಕಾನೂನು ವ್ಯವಸ್ಥೆಗೆ, ಸಂವಿಧಾನಕ್ಕೆ ಗೌರವ ಕೊಡುವುದಿಲ್ಲ ಎಂದಾರೆ, ಅವತ್ತೆ ಅವರು ತೊಲಗಿಬಿಡಬಹುದಿತ್ತು. ಆದರೆ ಅವರು ಇಲ್ಲೆ ಉಳಿದುಕೊಂಡುಬಿಟ್ಟಿದ್ದಾರೆ. ಪುರುಸೊತ್ತಿಲ್ಲದೆ ಮಕ್ಕಳನ್ನು ಹುಟ್ಟಿಸುವುದು ಬಿಟ್ಟರೆ ಇನ್ನೇನೂ ವೃತ್ತಿಯಿಲ್ಲ. ಹೀಗೆ ಮಾಡುತ್ತಾ ಸಂಖ್ಯೆಯನ್ನು ಜಾಸ್ತಿ ಮಾಡಿ, ಬೇರೆಯವರ ಮೇಲೆ ಭಯದ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ. ಮುಸ್ಲಿಮರಿಗೆ ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮೈಸೂರಿನ ಉದಯಗಿರಿ ಗಲಭೆಗೆ ಕಾರಣಕರ್ತನಾದ ಆರೋಪಿಗೆ ಬೆಂಬಲ ನೀಡಿದ ಅವರು, “ಅವಹೇಳನಕಾರಿ ಪೋಸ್ಟ್‌ ಮಾಡಿದ ಒಬ್ಬ ಬಹುಸಂಖ್ಯಾತ ಸಮಾಜಕ್ಕೆ ಸೇರಿದ ವ್ಯಕ್ತಿಗೆ ನೀವು ಇಲ್ಲಿ ಇರಬೇಡಿ, ಕಷ್ಟವಾಗುತ್ತದೆ, ಜೀವ ಬೆದರಿಕೆ ಇದೆ ಎಂದು ಮಾಹಿತಿ ನೀಡುತ್ತಿದ್ದಾರೆ ಎಂದಾದರೆ, ಇಲ್ಲಿ ಕಾನೂನು ಸುವ್ಯವಸ್ಥೆ ಎನ್ನುವುದು ಇಲ್ಲವೆ? ಕಾನೂನಿಗೆ ಬೆಲೆ ಇಲ್ಲವೆ?” ಎಂದು ಕೇಳಿದ್ದಾರೆ.

“ಮುಸ್ಲಿಮರಿಗೆ ಹೆದರಿ ಹೀಗೆ ಒಬ್ಬೊಬ್ಬರಾಗಿ ಹೋಗುತ್ತಾ ಇದ್ದರೆ, ಉಳಿದಿರುವ ಈ ದೇಶವನ್ನು ಕೂಡಾ ನಾವು ಸಾಬ್ರಿಗೆ ಬರೆದುಕೊಟ್ಟುಬಿಡುವುದಾ? ಸಾಬ್ರಿಗೆ ಹೆದರಿ ಉದಯಗಿರಿ, ಕಲ್ಯಾಣಗಿರಿ ಭಾಗದವರು ಖಾಲಿ ಮಾಡಿ ಎನ್ನುತ್ತೀರಿ. ಮುಂದೆ ನರಸಿಂಹರಾಜ ಕ್ಷೇತ್ರವನ್ನೂ ಖಾಲಿ ಮಾಡಿ ಎನ್ನುತ್ತಾ ಬರುತ್ತಾ ಇರುತ್ತಾರೆ. ಹೀಗಾದರೆ ಹಿಂದೂಗಳು ಎಲ್ಲಿಗೆ ಹೋಗಬೇಕು? ಅವರಿಗೆ ರಕ್ಷಣೆ ನೀಡಲು ಸಾಧ್ಯ ಇಲ್ಲವೆ?” ಎಂದು ಹೇಳಿದ್ದಾರೆ.

“ರಕ್ಷಣೆ ನೀಡುವುದು ಬಿಡಿ, ಈ ರೀತಿಯ ಕೃತ್ಯವನ್ನು ಮಾಡಿದವರನ್ನು ಬಂಧಿಸಿ, ದಂಡಿಸಿದ್ದರೆ ಈ ರೀತಿಯ ಕೃತ್ಯಗಳು ನಿಂತು ಹೋಗುತ್ತವೆ. ಉತ್ತರ ಪ್ರದೇಶದಲ್ಲಿ 20%ಕ್ಕಿಂತ ಹೆಚ್ಚು ಮುಸ್ಲಿಮರಿದ್ದಾರೆ. ಒಬ್ಬ ಯೋಗಿ ಆದಿತ್ಯನಾಥ್ ಮುಸ್ಲಿಮರನ್ನು, ಪುಂಡ ಮುಸಲ್ಮಾನರನ್ನು ಬಾಯಿ ಮುಚ್ಚಿಸಿದ್ದಾರೆ” ಎಂದು ಹೇಳಿದ್ದಾರೆ.

ಇದೇ ವೇಳೆ ಅವರು 2002ರ ಗುಜರಾತ್ ಗಲಭೆಯಲ್ಲಿ ಮುಸ್ಲಿಮರ ಮಾರಣಹೋಮವನ್ನು ಸಮರ್ಥಿಸಿಕೊಂಡಿದ್ದಾರೆ. “ಗುಜರಾತ್‌ನಲ್ಲಿ 2002ರ ಹಿಂಸಾಚಾರದ ನಂತರ ಗುಜರಾತಿಗಳು ಅವರಿಗೆ ವಾಪಾಸು ಪಾಠ ಕಲಿಸಿದ ನಂತರ, ಅಲ್ಲಿ ಇವತ್ತಿನ ವರೆಗೂ ಅಲ್ಲಿ ಒಂದೇ ಒಂದು ಘಟನೆ ಸಂಭವಿಸಿಲ್ಲ. ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವಿಸ್ ಬಂದ ನಂತರ ಬಾಲ ಒಳಗಡೆ ಇಟ್ಟುಕೊಂಡಿದ್ದಾರೆ. ಈ ರೀತಿಯಾಗಿ ಕರ್ನಾಟಕದಲ್ಲಿ ಯಾವಾಗ ಮಾಡುವುದು?” ಎಂದು ಅವರು ಕೇಳಿದ್ದಾರೆ.

“ಮುಸ್ಲಿಮರಿಗೆ ಹೆದರಿ ಹಿಂದೂಗಳು ಅವರ ಮನೆಯನ್ನು ಖಾಲಿ ಮಾಡಿಕೊಂಡು ಹೋಗ್ತಾ ಇರಬೇಕಾದರೆ, ಹಿಂದೂಗಳು ಎಲ್ಲಿಗೆ ಹೋಗಬೇಕು ಕೊನೆಗೆ? ಅವರಿಗೆ ಯಾವ ರಾಷ್ಟ್ರವಿದೆ? ಮುಸ್ಲಿಮರಿಗೆ 57 ಇಸ್ಲಾಮಿಕ್ ರಾಷ್ಟ್ರಗಳಿವೆ. ನಮಗೆ ಯಾವ ರಾಷ್ಟ್ರವಿದೆ? ಮುಸ್ಲಿಮರ ಭಯಕ್ಕೆ ಒಬ್ಬ ಹಿಂದೂ ಯಾಕೆ ಮನೆ ಖಾಲಿ ಮಾಡಬೇಕು? ಯಾಕೆ ಊರನ್ನು ಬಿಡಬೇಕು? ಮುಸ್ಲಿಮರಿಗೆ ಫ್ರೀ ಪರ್ಮಿಟ್ ಕೊಟ್ಟಿರುವ ವ್ಯಕ್ತಿ, ತಾಲೀಬಾನಿ ಸರ್ಕಾರ ನಡೆಸುತ್ತಿರುವ ವ್ಯಕ್ತಿ ಈ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ನನ್ನ ಜಮೀನಿನ ಸರ್ವೆ ಹಿಂದೆ ಕಾಂಗ್ರೆಸ್ ರಾಜಕೀಯ ದ್ವೇಷವಿದೆ: ಎಚ್‌ಡಿ ಕುಮಾರಸ್ವಾಮಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...