Homeಕರ್ನಾಟಕಮುಸ್ಲಿಮರಿಗೆ ಮಕ್ಕಳು ಹುಟ್ಟಿಸುವುದೆ ಕೆಲಸ - ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ

ಮುಸ್ಲಿಮರಿಗೆ ಮಕ್ಕಳು ಹುಟ್ಟಿಸುವುದೆ ಕೆಲಸ – ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಮುಸ್ಲಿಮರಿಗೆ ಪುರುಸೊತ್ತಿಲ್ಲದೆ ಮಕ್ಕಳನ್ನು ಹುಟ್ಟಿಸುವುದು ಬಿಟ್ಟರೆ ಬೇರೇನೂ ಕೆಲಸವಿಲ್ಲ, ಹೀಗೆ ಮಾಡುತ್ತಾ ಸಂಖ್ಯೆಯನ್ನು ಜಾಸ್ತಿ ಮಾಡಿ, ಬೇರೆಯವರ ಮೇಲೆ ಭಯದ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ ಎಂದು ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸೋಮವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮುಸ್ಲಿಮರಿಗೆ ಮಕ್ಕಳು

ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣದ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, “ಮುಸ್ಲಿಮರಿಗೆ 1947ರಲ್ಲಿ ಅವರ ಧರ್ಮದ ಆಧಾರದಲ್ಲಿ ಅವರಿಗೆ ಪ್ರತ್ಯೇಕ ರಾಷ್ಟ್ರವನ್ನು ನಾವು ಕೊಟ್ಟಾಗೋಯ್ತು. ಇಲ್ಲಿನ ಕಾನೂನು ವ್ಯವಸ್ಥೆಗೆ, ಸಂವಿಧಾನಕ್ಕೆ ಗೌರವ ಕೊಡುವುದಿಲ್ಲ ಎಂದಾರೆ, ಅವತ್ತೆ ಅವರು ತೊಲಗಿಬಿಡಬಹುದಿತ್ತು. ಆದರೆ ಅವರು ಇಲ್ಲೆ ಉಳಿದುಕೊಂಡುಬಿಟ್ಟಿದ್ದಾರೆ. ಪುರುಸೊತ್ತಿಲ್ಲದೆ ಮಕ್ಕಳನ್ನು ಹುಟ್ಟಿಸುವುದು ಬಿಟ್ಟರೆ ಇನ್ನೇನೂ ವೃತ್ತಿಯಿಲ್ಲ. ಹೀಗೆ ಮಾಡುತ್ತಾ ಸಂಖ್ಯೆಯನ್ನು ಜಾಸ್ತಿ ಮಾಡಿ, ಬೇರೆಯವರ ಮೇಲೆ ಭಯದ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ. ಮುಸ್ಲಿಮರಿಗೆ ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮೈಸೂರಿನ ಉದಯಗಿರಿ ಗಲಭೆಗೆ ಕಾರಣಕರ್ತನಾದ ಆರೋಪಿಗೆ ಬೆಂಬಲ ನೀಡಿದ ಅವರು, “ಅವಹೇಳನಕಾರಿ ಪೋಸ್ಟ್‌ ಮಾಡಿದ ಒಬ್ಬ ಬಹುಸಂಖ್ಯಾತ ಸಮಾಜಕ್ಕೆ ಸೇರಿದ ವ್ಯಕ್ತಿಗೆ ನೀವು ಇಲ್ಲಿ ಇರಬೇಡಿ, ಕಷ್ಟವಾಗುತ್ತದೆ, ಜೀವ ಬೆದರಿಕೆ ಇದೆ ಎಂದು ಮಾಹಿತಿ ನೀಡುತ್ತಿದ್ದಾರೆ ಎಂದಾದರೆ, ಇಲ್ಲಿ ಕಾನೂನು ಸುವ್ಯವಸ್ಥೆ ಎನ್ನುವುದು ಇಲ್ಲವೆ? ಕಾನೂನಿಗೆ ಬೆಲೆ ಇಲ್ಲವೆ?” ಎಂದು ಕೇಳಿದ್ದಾರೆ.

“ಮುಸ್ಲಿಮರಿಗೆ ಹೆದರಿ ಹೀಗೆ ಒಬ್ಬೊಬ್ಬರಾಗಿ ಹೋಗುತ್ತಾ ಇದ್ದರೆ, ಉಳಿದಿರುವ ಈ ದೇಶವನ್ನು ಕೂಡಾ ನಾವು ಸಾಬ್ರಿಗೆ ಬರೆದುಕೊಟ್ಟುಬಿಡುವುದಾ? ಸಾಬ್ರಿಗೆ ಹೆದರಿ ಉದಯಗಿರಿ, ಕಲ್ಯಾಣಗಿರಿ ಭಾಗದವರು ಖಾಲಿ ಮಾಡಿ ಎನ್ನುತ್ತೀರಿ. ಮುಂದೆ ನರಸಿಂಹರಾಜ ಕ್ಷೇತ್ರವನ್ನೂ ಖಾಲಿ ಮಾಡಿ ಎನ್ನುತ್ತಾ ಬರುತ್ತಾ ಇರುತ್ತಾರೆ. ಹೀಗಾದರೆ ಹಿಂದೂಗಳು ಎಲ್ಲಿಗೆ ಹೋಗಬೇಕು? ಅವರಿಗೆ ರಕ್ಷಣೆ ನೀಡಲು ಸಾಧ್ಯ ಇಲ್ಲವೆ?” ಎಂದು ಹೇಳಿದ್ದಾರೆ.

“ರಕ್ಷಣೆ ನೀಡುವುದು ಬಿಡಿ, ಈ ರೀತಿಯ ಕೃತ್ಯವನ್ನು ಮಾಡಿದವರನ್ನು ಬಂಧಿಸಿ, ದಂಡಿಸಿದ್ದರೆ ಈ ರೀತಿಯ ಕೃತ್ಯಗಳು ನಿಂತು ಹೋಗುತ್ತವೆ. ಉತ್ತರ ಪ್ರದೇಶದಲ್ಲಿ 20%ಕ್ಕಿಂತ ಹೆಚ್ಚು ಮುಸ್ಲಿಮರಿದ್ದಾರೆ. ಒಬ್ಬ ಯೋಗಿ ಆದಿತ್ಯನಾಥ್ ಮುಸ್ಲಿಮರನ್ನು, ಪುಂಡ ಮುಸಲ್ಮಾನರನ್ನು ಬಾಯಿ ಮುಚ್ಚಿಸಿದ್ದಾರೆ” ಎಂದು ಹೇಳಿದ್ದಾರೆ.

ಇದೇ ವೇಳೆ ಅವರು 2002ರ ಗುಜರಾತ್ ಗಲಭೆಯಲ್ಲಿ ಮುಸ್ಲಿಮರ ಮಾರಣಹೋಮವನ್ನು ಸಮರ್ಥಿಸಿಕೊಂಡಿದ್ದಾರೆ. “ಗುಜರಾತ್‌ನಲ್ಲಿ 2002ರ ಹಿಂಸಾಚಾರದ ನಂತರ ಗುಜರಾತಿಗಳು ಅವರಿಗೆ ವಾಪಾಸು ಪಾಠ ಕಲಿಸಿದ ನಂತರ, ಅಲ್ಲಿ ಇವತ್ತಿನ ವರೆಗೂ ಅಲ್ಲಿ ಒಂದೇ ಒಂದು ಘಟನೆ ಸಂಭವಿಸಿಲ್ಲ. ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವಿಸ್ ಬಂದ ನಂತರ ಬಾಲ ಒಳಗಡೆ ಇಟ್ಟುಕೊಂಡಿದ್ದಾರೆ. ಈ ರೀತಿಯಾಗಿ ಕರ್ನಾಟಕದಲ್ಲಿ ಯಾವಾಗ ಮಾಡುವುದು?” ಎಂದು ಅವರು ಕೇಳಿದ್ದಾರೆ.

“ಮುಸ್ಲಿಮರಿಗೆ ಹೆದರಿ ಹಿಂದೂಗಳು ಅವರ ಮನೆಯನ್ನು ಖಾಲಿ ಮಾಡಿಕೊಂಡು ಹೋಗ್ತಾ ಇರಬೇಕಾದರೆ, ಹಿಂದೂಗಳು ಎಲ್ಲಿಗೆ ಹೋಗಬೇಕು ಕೊನೆಗೆ? ಅವರಿಗೆ ಯಾವ ರಾಷ್ಟ್ರವಿದೆ? ಮುಸ್ಲಿಮರಿಗೆ 57 ಇಸ್ಲಾಮಿಕ್ ರಾಷ್ಟ್ರಗಳಿವೆ. ನಮಗೆ ಯಾವ ರಾಷ್ಟ್ರವಿದೆ? ಮುಸ್ಲಿಮರ ಭಯಕ್ಕೆ ಒಬ್ಬ ಹಿಂದೂ ಯಾಕೆ ಮನೆ ಖಾಲಿ ಮಾಡಬೇಕು? ಯಾಕೆ ಊರನ್ನು ಬಿಡಬೇಕು? ಮುಸ್ಲಿಮರಿಗೆ ಫ್ರೀ ಪರ್ಮಿಟ್ ಕೊಟ್ಟಿರುವ ವ್ಯಕ್ತಿ, ತಾಲೀಬಾನಿ ಸರ್ಕಾರ ನಡೆಸುತ್ತಿರುವ ವ್ಯಕ್ತಿ ಈ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ನನ್ನ ಜಮೀನಿನ ಸರ್ವೆ ಹಿಂದೆ ಕಾಂಗ್ರೆಸ್ ರಾಜಕೀಯ ದ್ವೇಷವಿದೆ: ಎಚ್‌ಡಿ ಕುಮಾರಸ್ವಾಮಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...