Homeಕರ್ನಾಟಕಮುಸ್ಲಿಮರಿಗೆ ಮಕ್ಕಳು ಹುಟ್ಟಿಸುವುದೆ ಕೆಲಸ - ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ

ಮುಸ್ಲಿಮರಿಗೆ ಮಕ್ಕಳು ಹುಟ್ಟಿಸುವುದೆ ಕೆಲಸ – ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಮುಸ್ಲಿಮರಿಗೆ ಪುರುಸೊತ್ತಿಲ್ಲದೆ ಮಕ್ಕಳನ್ನು ಹುಟ್ಟಿಸುವುದು ಬಿಟ್ಟರೆ ಬೇರೇನೂ ಕೆಲಸವಿಲ್ಲ, ಹೀಗೆ ಮಾಡುತ್ತಾ ಸಂಖ್ಯೆಯನ್ನು ಜಾಸ್ತಿ ಮಾಡಿ, ಬೇರೆಯವರ ಮೇಲೆ ಭಯದ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ ಎಂದು ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸೋಮವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮುಸ್ಲಿಮರಿಗೆ ಮಕ್ಕಳು

ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣದ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, “ಮುಸ್ಲಿಮರಿಗೆ 1947ರಲ್ಲಿ ಅವರ ಧರ್ಮದ ಆಧಾರದಲ್ಲಿ ಅವರಿಗೆ ಪ್ರತ್ಯೇಕ ರಾಷ್ಟ್ರವನ್ನು ನಾವು ಕೊಟ್ಟಾಗೋಯ್ತು. ಇಲ್ಲಿನ ಕಾನೂನು ವ್ಯವಸ್ಥೆಗೆ, ಸಂವಿಧಾನಕ್ಕೆ ಗೌರವ ಕೊಡುವುದಿಲ್ಲ ಎಂದಾರೆ, ಅವತ್ತೆ ಅವರು ತೊಲಗಿಬಿಡಬಹುದಿತ್ತು. ಆದರೆ ಅವರು ಇಲ್ಲೆ ಉಳಿದುಕೊಂಡುಬಿಟ್ಟಿದ್ದಾರೆ. ಪುರುಸೊತ್ತಿಲ್ಲದೆ ಮಕ್ಕಳನ್ನು ಹುಟ್ಟಿಸುವುದು ಬಿಟ್ಟರೆ ಇನ್ನೇನೂ ವೃತ್ತಿಯಿಲ್ಲ. ಹೀಗೆ ಮಾಡುತ್ತಾ ಸಂಖ್ಯೆಯನ್ನು ಜಾಸ್ತಿ ಮಾಡಿ, ಬೇರೆಯವರ ಮೇಲೆ ಭಯದ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ. ಮುಸ್ಲಿಮರಿಗೆ ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮೈಸೂರಿನ ಉದಯಗಿರಿ ಗಲಭೆಗೆ ಕಾರಣಕರ್ತನಾದ ಆರೋಪಿಗೆ ಬೆಂಬಲ ನೀಡಿದ ಅವರು, “ಅವಹೇಳನಕಾರಿ ಪೋಸ್ಟ್‌ ಮಾಡಿದ ಒಬ್ಬ ಬಹುಸಂಖ್ಯಾತ ಸಮಾಜಕ್ಕೆ ಸೇರಿದ ವ್ಯಕ್ತಿಗೆ ನೀವು ಇಲ್ಲಿ ಇರಬೇಡಿ, ಕಷ್ಟವಾಗುತ್ತದೆ, ಜೀವ ಬೆದರಿಕೆ ಇದೆ ಎಂದು ಮಾಹಿತಿ ನೀಡುತ್ತಿದ್ದಾರೆ ಎಂದಾದರೆ, ಇಲ್ಲಿ ಕಾನೂನು ಸುವ್ಯವಸ್ಥೆ ಎನ್ನುವುದು ಇಲ್ಲವೆ? ಕಾನೂನಿಗೆ ಬೆಲೆ ಇಲ್ಲವೆ?” ಎಂದು ಕೇಳಿದ್ದಾರೆ.

“ಮುಸ್ಲಿಮರಿಗೆ ಹೆದರಿ ಹೀಗೆ ಒಬ್ಬೊಬ್ಬರಾಗಿ ಹೋಗುತ್ತಾ ಇದ್ದರೆ, ಉಳಿದಿರುವ ಈ ದೇಶವನ್ನು ಕೂಡಾ ನಾವು ಸಾಬ್ರಿಗೆ ಬರೆದುಕೊಟ್ಟುಬಿಡುವುದಾ? ಸಾಬ್ರಿಗೆ ಹೆದರಿ ಉದಯಗಿರಿ, ಕಲ್ಯಾಣಗಿರಿ ಭಾಗದವರು ಖಾಲಿ ಮಾಡಿ ಎನ್ನುತ್ತೀರಿ. ಮುಂದೆ ನರಸಿಂಹರಾಜ ಕ್ಷೇತ್ರವನ್ನೂ ಖಾಲಿ ಮಾಡಿ ಎನ್ನುತ್ತಾ ಬರುತ್ತಾ ಇರುತ್ತಾರೆ. ಹೀಗಾದರೆ ಹಿಂದೂಗಳು ಎಲ್ಲಿಗೆ ಹೋಗಬೇಕು? ಅವರಿಗೆ ರಕ್ಷಣೆ ನೀಡಲು ಸಾಧ್ಯ ಇಲ್ಲವೆ?” ಎಂದು ಹೇಳಿದ್ದಾರೆ.

“ರಕ್ಷಣೆ ನೀಡುವುದು ಬಿಡಿ, ಈ ರೀತಿಯ ಕೃತ್ಯವನ್ನು ಮಾಡಿದವರನ್ನು ಬಂಧಿಸಿ, ದಂಡಿಸಿದ್ದರೆ ಈ ರೀತಿಯ ಕೃತ್ಯಗಳು ನಿಂತು ಹೋಗುತ್ತವೆ. ಉತ್ತರ ಪ್ರದೇಶದಲ್ಲಿ 20%ಕ್ಕಿಂತ ಹೆಚ್ಚು ಮುಸ್ಲಿಮರಿದ್ದಾರೆ. ಒಬ್ಬ ಯೋಗಿ ಆದಿತ್ಯನಾಥ್ ಮುಸ್ಲಿಮರನ್ನು, ಪುಂಡ ಮುಸಲ್ಮಾನರನ್ನು ಬಾಯಿ ಮುಚ್ಚಿಸಿದ್ದಾರೆ” ಎಂದು ಹೇಳಿದ್ದಾರೆ.

ಇದೇ ವೇಳೆ ಅವರು 2002ರ ಗುಜರಾತ್ ಗಲಭೆಯಲ್ಲಿ ಮುಸ್ಲಿಮರ ಮಾರಣಹೋಮವನ್ನು ಸಮರ್ಥಿಸಿಕೊಂಡಿದ್ದಾರೆ. “ಗುಜರಾತ್‌ನಲ್ಲಿ 2002ರ ಹಿಂಸಾಚಾರದ ನಂತರ ಗುಜರಾತಿಗಳು ಅವರಿಗೆ ವಾಪಾಸು ಪಾಠ ಕಲಿಸಿದ ನಂತರ, ಅಲ್ಲಿ ಇವತ್ತಿನ ವರೆಗೂ ಅಲ್ಲಿ ಒಂದೇ ಒಂದು ಘಟನೆ ಸಂಭವಿಸಿಲ್ಲ. ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವಿಸ್ ಬಂದ ನಂತರ ಬಾಲ ಒಳಗಡೆ ಇಟ್ಟುಕೊಂಡಿದ್ದಾರೆ. ಈ ರೀತಿಯಾಗಿ ಕರ್ನಾಟಕದಲ್ಲಿ ಯಾವಾಗ ಮಾಡುವುದು?” ಎಂದು ಅವರು ಕೇಳಿದ್ದಾರೆ.

“ಮುಸ್ಲಿಮರಿಗೆ ಹೆದರಿ ಹಿಂದೂಗಳು ಅವರ ಮನೆಯನ್ನು ಖಾಲಿ ಮಾಡಿಕೊಂಡು ಹೋಗ್ತಾ ಇರಬೇಕಾದರೆ, ಹಿಂದೂಗಳು ಎಲ್ಲಿಗೆ ಹೋಗಬೇಕು ಕೊನೆಗೆ? ಅವರಿಗೆ ಯಾವ ರಾಷ್ಟ್ರವಿದೆ? ಮುಸ್ಲಿಮರಿಗೆ 57 ಇಸ್ಲಾಮಿಕ್ ರಾಷ್ಟ್ರಗಳಿವೆ. ನಮಗೆ ಯಾವ ರಾಷ್ಟ್ರವಿದೆ? ಮುಸ್ಲಿಮರ ಭಯಕ್ಕೆ ಒಬ್ಬ ಹಿಂದೂ ಯಾಕೆ ಮನೆ ಖಾಲಿ ಮಾಡಬೇಕು? ಯಾಕೆ ಊರನ್ನು ಬಿಡಬೇಕು? ಮುಸ್ಲಿಮರಿಗೆ ಫ್ರೀ ಪರ್ಮಿಟ್ ಕೊಟ್ಟಿರುವ ವ್ಯಕ್ತಿ, ತಾಲೀಬಾನಿ ಸರ್ಕಾರ ನಡೆಸುತ್ತಿರುವ ವ್ಯಕ್ತಿ ಈ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ನನ್ನ ಜಮೀನಿನ ಸರ್ವೆ ಹಿಂದೆ ಕಾಂಗ್ರೆಸ್ ರಾಜಕೀಯ ದ್ವೇಷವಿದೆ: ಎಚ್‌ಡಿ ಕುಮಾರಸ್ವಾಮಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...