Homeಕರ್ನಾಟಕಶೇ.90ರಷ್ಟು ಒಂದೇ ಜಾತಿಯವರು ಮಲ ಬಾಚುತ್ತಿರುವುದು ಏಕೆ: ನ್ಯಾ.ನಾಗಮೋಹನ್ ದಾಸ್

ಶೇ.90ರಷ್ಟು ಒಂದೇ ಜಾತಿಯವರು ಮಲ ಬಾಚುತ್ತಿರುವುದು ಏಕೆ: ನ್ಯಾ.ನಾಗಮೋಹನ್ ದಾಸ್

- Advertisement -
- Advertisement -

ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ (ಕೈನಿಂದ ಮಲ ಬಾಚುವುದು) ಮಾಡುತ್ತಿರುವವರು ಶೇ.90ರಷ್ಟು ಜನ ಒಂದೇ ಜಾತಿಯವರಾಗಿದ್ದಾರೆ. ಒಂದೇ ಜಾತಿಯವರು ಈ ಕೆಲಸ ಮಾಡುತ್ತಿರುವುದು ಏಕೆ ಎಂಬುವುದು ಪ್ರಶ್ನೆಯಾಗಿದೆ ಎಂದು ಪ್ರಶ್ನಿಸಿದ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್, “ಭಾರತದಲ್ಲಿ ಜಾರಿಗೆ ತಂದಿರುವ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡುತ್ತಿಲ್ಲ” ಎಂದು ಬೇಸರ ಹೊರಹಾಕಿದರು.

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ ವಿವಿಯ ಸಾಮಾಜಿಕ ಒಳಗೊಳ್ಳುವಿಕೆ ಅಧ್ಯಯನ ಕೇಂದ್ರ, ಸಫಾಯಿ ಕರ್ಮಚಾರಿ ಕಾವಲು ಸಮಿತಿ, ತಮಟೆ, ಸಖಿ ಟ್ರಸ್ಟ್ ಸಹಯೋಗದೊಂದಿಗೆ ಮಲ ಹೊರುವ ವೃತ್ತಿಯಲ್ಲಿ ನೇಮಕ ನಿಷೇಧ ಹಾಗೂ ಅವರ ಪುನರ್ವಸತಿ ಕಾಯ್ದೆ 2013ರ ಅನುಷ್ಠಾನ ಮತ್ತು ಸವಾಲುಗಳು ಕುರಿತ ‘ರಾಷ್ಟೀಯ ಸಮಾವೇಶ’ದಲ್ಲಿ ಅವರು ಮಾತನಾಡಿದರು.

“ಮ್ಯಾನುಯಲ್ ಸ್ಕ್ಯಾವೆಂಜರ್ ವೃತ್ತಿಗೂ ಮತ್ತು ಜಾತಿಗೆ ನೇರ ಸಂಬಂಧವಿದೆ; ವಂಶ ಪಾರಂಪರಿಕವಾಗಿ ಕೆಲವೇ ಕೆಲವು ಜಾತಿಗಳು ಈ ವೃತ್ತಿಯನ್ನುಮಾಡುತ್ತಿದ್ದಾರೆ. ಅದರಲ್ಲೂ, ಶೇ.90ರಷ್ಟು ಜನ ಒಂದೇ ಜಾತಿಯವರಾಗಿದ್ದಾರೆ. ಕೇವಲ ಒಂದೇ ಜಾತಿಯವರು ಈ ಕೆಲಸ ಮಾಡುತ್ತಿರುವುದು ಏಕೆ ಎಂಬುವುದು ಪ್ರಶ್ನೆಯಾಗಿದೆ” ಎಂದು ಹೇಳಿದರು.

“ದೇಶಕ್ಕೆ ಸ್ವಾತಂತ್ರ್ಯ ಬಂದು 76 ವರ್ಷಗಳಾಗಿದ್ದರೂ ಮಲಹೊರುವ ಪದ್ಧತಿ ಜೀವಂತವಾಗಿದೆ. ಇಂದು ಭಾರತವು ಎಲ್ಲ ರಂಗಗಳಲ್ಲಿ ಅಭಿವೃದ್ಧಿ ಯಾಗುತ್ತಿದ್ದರೂ ಈ ರೀತಿಯ ವೃತ್ತಿಗಳನ್ನು ಯಾಕೆ ಯಾಂತ್ರೀಕರಣಗೊಳಿಸುತ್ತಿಲ್ಲ? 2013ರ ಕಾಯ್ದೆ ಅನುಸಾರ ಸಮಗ್ರವಾದ ಸಮೀಕ್ಷೆಯನ್ನು ಸರಕಾರಗಳು ಕೈಗೊಳ್ಳಬೇಕು. ಕಾಯ್ದೆಯಡಿಯಲ್ಲಿ ಸಮಗ್ರ ಪುನರ್ವಸತಿಯನ್ನು ನೀಡಬೇಕು; ಜನರೂ ಸಹ ತಮ್ಮ ಆಲೋಚನೆಗಳನ್ನು ಬದಲಿಸಿಕೊಳ್ಳಬೇಕು. ಅನಿವಾರ್ಯತೆಗಳಿದ್ದರೂ ಈ ವೃತ್ತಿಯನ್ನು ಮಾಡಬಾರದು; ಇತರೆ ಉದ್ಯೋಗಳನ್ನು ಆಯ್ಕೆಮಾಡಿಕೊಳ್ಳಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಬೇಕು” ಎಂದು ಸಲಹೆ ನೀಡಿದರು.

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ತಜ್ಞೆ ಅಶ್ವಿನಿ ಕೆ.ಪಿ. ಮಾತನಾಡಿ, “ಮ್ಯಾನುಯಲ್ ಸ್ಕ್ಯಾವೆಂಜರ್ ಕುರಿತು ಅಂತರರಾಷ್ಟ್ರೀಯಮಟ್ಟದಲ್ಲಿ ಚರ್ಚಿಸಬೇಕಾಗುತ್ತದೆ; ನಾವೆಲ್ಲರೂ ಅದಕ್ಕೆ ಪೂರಕವಾಗಿ ಕೆಲಸ ಮಾಡೋಣ. ಭಾರತದಲ್ಲಿ ಜಾತಿ ಆಧಾರಿತ ವೃತ್ತಿಗಳಿಂದ ನಾವು ಹೊರ ಬರಬೇಕಾಗಿದೆ. ಅಂತರರಾಷ್ಟ್ರೀಯಮಟ್ಟದಲ್ಲಿ ಇದೇ ರೀತಿಯ ತಾರತಮ್ಯಗಳನ್ನು ಚರ್ಚಿಸಲಾಗುತ್ತದೆ. ಅದಕ್ಕೆ ಪೂರಕವಾಗಿ ನಾವು ಭಾರತದಲ್ಲಿರುವ ಜಾತಿ ಆಧಾರಿತವಿಷಯಗಳನ್ನು ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆಗಳಲ್ಲಿ ಮತ್ತು ವಿಶ್ವಸಂಸ್ಥೆಯಲ್ಲಿ ಚರ್ಚಿಸಲು ಪ್ರಯತ್ನಿಸಬೇಕಾಗಿದೆ” ಎಂದು ತಿಳಿಸಿದರು.

ಸಮಾವೇಶದಲ್ಲಿ ರಾಷ್ಟ್ರೀಯ ಕಾನೂನು ಶಾಲೆಯ ಸಾರ್ವಜನಿಕ ನೀತಿ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ಬಾಬು ಮ್ಯಾಥೂ, ಪ್ರಾಧ್ಯಾಪಕ ಚಂದ್ರಶೇಖರ್, ಹಿರಿಯ ಸಾಹಿತಿ ಡಾ.ಎಲ್.ಹನುಮಂತಯ್ಯ ಮತ್ತು ದು. ಸರಸ್ವತಿ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ; ಮುಡಾ ಪ್ರಕರಣ| ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ಲೋಕಾಯುಕ್ತರಿಂದ ‘ಕ್ಲೀನ್ ಚಿಟ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...