Homeಮುಖಪುಟ'ಈ ವ್ಯವಸ್ಥೆಯಿಂದ ನೀವು ನಲುಗಿ ಹೋಗಿದ್ದೀರಿ' : ದಲಿತ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಸಂವಾದ

‘ಈ ವ್ಯವಸ್ಥೆಯಿಂದ ನೀವು ನಲುಗಿ ಹೋಗಿದ್ದೀರಿ’ : ದಲಿತ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಸಂವಾದ

- Advertisement -
- Advertisement -

ಸಂವಿಧಾನವನ್ನು ರೂಪಿಸುವಲ್ಲಿ ದಲಿತರ ಪಾತ್ರವನ್ನು ಶ್ಲಾಘಿಸಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಂವಿಧಾನ ದಲಿತರ ಸಿದ್ಧಾಂತವನ್ನು ಪ್ರತಿಬಿಂಬಿಸುತ್ತದೆಯಾದರೂ, ದಲಿತರು ವ್ಯವಸ್ಥಿತ ದಬ್ಬಾಳಿಕೆಯನ್ನು ಎದುರಿಸುತ್ತಿದ್ದಾರೆ ಹೇಳಿದ್ದಾರೆ.

ಉತ್ತರ ಪ್ರದೇಶದ ರಾಯ್ ಬರೇಲಿಯ ಬರ್ಗಡ್ ಚೌರಾಹಾ ಬಳಿಯ ‘ಮೂಲ್ ಭಾರತಿ’ ಹಾಸ್ಟೆಲ್‌ನಲ್ಲಿ ಅಮೇಥಿಯ ಕಾಂಗ್ರೆಸ್‌ ಸಂಸದ ಕಿಶೋರಿ ಲಾಲ್ ಶರ್ಮಾ ಮತ್ತು ಪಕ್ಷದ ಇತರ ಹಿರಿಯ ಜೊತೆ ದಲಿತ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಗುರುವಾರ (ಫೆ.20) ಸಂವಾದ ನಡೆಸಿದ್ದಾರೆ.

‘ಬಿಗ್ 500’ನ ಕೆಲವು ಉನ್ನತ ಖಾಸಗಿ ಕಂಪನಿಗಳ ಹೆಸರುಗಳನ್ನು ಹೇಳಿದ ರಾಹುಲ್ ಗಾಂಧಿ, “ಇವುಗಳಲ್ಲಿ ಎಷ್ಟು ಕಂಪನಿಗಳ ನೇತೃತ್ವವನ್ನು ದಲಿತ ಯುವಕರು ವಹಿಸಿದ್ದಾರೆ?” ಎಂದು ಪ್ರಶ್ನಿಸಿದ್ದಾರೆ.

ಒಬ್ಬ ಯುವಕ “ಯಾರೂ ಇಲ್ಲ” ಎಂದು ಉತ್ತರಿಸಿದಾಗ, ರಾಹುಲ್ ಗಾಂಧಿ “ಯಾಕೆ ಇಲ್ಲ?” ಎಂದು ಮರು ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ಮತ್ತೊಬ್ಬ ಯುವಕ “ನಮ್ಮಲ್ಲಿ ಸಾಕಷ್ಟು ಸೌಲಭ್ಯಗಳಿಲ್ಲದ ಕಾರಣ” ಎಂದಿದ್ದಾರೆ.

ಯುವಕನ ಉತ್ತರಕ್ಕೆ ಅಸಮ್ಮತಿ ವ್ಯಕ್ತಪಡಿಸಿದ ರಾಹುಲ್ ಗಾಂಧಿ, “ಡಾ.ಬಿಆರ್ ಅಂಬೇಡ್ಕರ್ ಅವರು ಯಾವುದೇ ಸೌಲಭ್ಯ ಇಲ್ಲದಿದ್ದರೂ, ತನ್ನ ಪ್ರಯತ್ನದಿಂದ ಒಬ್ಬಂಟಿಯಾಗಿ ದೇಶದ ರಾಜಕೀಯವನ್ನು ಅಲುಗಾಡಿಸಿದರು” ಎಂದಿದ್ದಾರೆ.

“ನಿಮಗೆ ವಿರುದ್ಧವಾಗಿರುವ ಮತ್ತು ನೀವು ಪ್ರಗತಿ ಹೊಂದುವುದನ್ನು ಬಯಸದ ಒಂದು ಇಡೀ ವ್ಯವಸ್ಥೆಯೇ ಇದೆ. ಈ ವ್ಯವಸ್ಥೆಯು ಪ್ರತಿದಿನ ನಿಮ್ಮ ಮೇಲೆ ದಾಳಿ ಮಾಡುತ್ತದೆ. ಅದು ನಿಮ್ಮ ಮೇಲೆ ಹೇಗೆ ದಾಳಿ ಮಾಡುತ್ತದೆ ಎಂದು ನಿಮಗೆ ತಿಳಿದಿರುವುದಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಮುಂದುವರಿದು, “ಸಂವಿಧಾನದ ಸಿದ್ಧಾಂತವೇ ನಿಮ್ಮ ಸಿದ್ಧಾಂತ ಎಂದು ನೀವು ಅರ್ಥಮಾಡಿಕೊಳ್ಳಬೇಕು. ಈ ದೇಶದಲ್ಲಿ ದಲಿತರು ಇಲ್ಲದಿದ್ದರೆ, ದೇಶಕ್ಕೆ ತನ್ನದೇ ಆದ ಸಂವಿಧಾನ ಸಿಗುತ್ತಿರಲಿಲ್ಲ ಎಂದು ನಾನು ನಿಮಗೆ ಖಚಿತವಾಗಿ ಹೇಳಬಲ್ಲೆ. ಸಂವಿಧಾನವೇ ನಿಮ್ಮ ಸಿದ್ಧಾಂತ. ಆದರೂ, ನೀವು ಈಗ ಎಲ್ಲಿಗೆ ಹೋದರೂ, ವ್ಯವಸ್ಥೆಯಿಂದ ನಲುಗಿ ಹೋಗುತ್ತೀರಿ” ಎಂದಿದ್ದಾರೆ.

ರಾಹುಲ್ ಗಾಂಧಿ ಗುರುವಾರ (ಫೆ.20) ತಮ್ಮ ಸಂಸದೀಯ ಕ್ಷೇತ್ರದಲ್ಲಿ ಎರಡು ದಿನಗಳ ಪ್ರವಾಸವನ್ನು ಪ್ರಾರಂಭಿಸಿದ್ದಾರೆ. ಈ ವೇಳೆ ಅವರು ರಾಯ್ ಬರೇಲಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಮತ್ತು ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ. ಕಾರ್ಮಿಕರೊಂದಿಗೂ ಅವರು ಸಂವಾದ ನಡೆಸಲಿದ್ದಾರೆ. ಮಹಿಳಾ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ರಣಬೇನಿ ಮಾಧವ್ ಸಿಂಗ್ ಸ್ಮಾರಕ ಇಂಟರ್ ಕಾಲೇಜಿನಲ್ಲಿ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ ಮತ್ತು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಉಂಚಹಾರ್ ಮತ್ತು ಸದರ್ ಕ್ಷೇತ್ರಗಳಿಗೆ ಅನಿರೀಕ್ಷಿತ ಭೇಟಿ ನೀಡಲಿದ್ದಾರೆ. ನಂತರ ಪಕ್ಷದ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ.

ಕೇಂದ್ರದ ಬಿಜೆಪಿ ಸರ್ಕಾರ ಬಂಡವಾಳಶಾಹಿಗಳನ್ನು ಉತ್ತೇಜಿಸುತ್ತಿದೆ – ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...