Homeಮುಖಪುಟಕುಂಭಮೇಳ ಪ್ರಾರಂಭಕ್ಕಿಂತಲೂ ಮುಂಚಿನ ನೀರಿನ ಮಾದರಿಯ ವರದಿ ಹಂಚಿಕೆ - ಯುಪಿ ಸರ್ಕಾರದ ವಿರುದ್ಧ ನ್ಯಾಯಮಂಡಳಿ...

ಕುಂಭಮೇಳ ಪ್ರಾರಂಭಕ್ಕಿಂತಲೂ ಮುಂಚಿನ ನೀರಿನ ಮಾದರಿಯ ವರದಿ ಹಂಚಿಕೆ – ಯುಪಿ ಸರ್ಕಾರದ ವಿರುದ್ಧ ನ್ಯಾಯಮಂಡಳಿ ಕಿಡಿ

- Advertisement -
- Advertisement -

ಪ್ರಯಾಗ್‌ರಾಜ್‌ನ ಮಹಾಕುಂಭ ಸ್ಥಳದಲ್ಲಿ ನದಿ ನೀರಿನ ಗುಣಮಟ್ಟದ ಕುರಿತು ಹಳೆಯ ಮಾದರಿಗಳನ್ನು ಆಧರಿಸಿ ವರದಿ ಸಲ್ಲಿಸಿದ್ದಕ್ಕಾಗಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಬುಧವಾರ ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಪ್ರಶ್ನಿಸಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಕುಂಭಮೇಳ ಪ್ರಾರಂಭಕ್ಕಿಂತಲೂ

ಯಾತ್ರೆ ಪ್ರಾರಂಭವಾಗುವ ಒಂದು ದಿನ ಮೊದಲು ಜನವರಿ 12 ರಂದು ಈ ಮಾದರಿಗಳನ್ನು ಪಡೆಯಲಾಗಿದೆ ಎಂದು ನ್ಯಾಯಮಂಡಳಿ ಹೇಳಿದೆ. “ಹಾಗಾದರೆ ನೀವು ಇಷ್ಟು ದೊಡ್ಡ ದಾಖಲೆಯನ್ನು ಏಕೆ ಸಲ್ಲಿಸಿದ್ದೀರಿ? ನಮ್ಮ ಸಮಯವನ್ನು ವ್ಯರ್ಥ ಮಾಡಲಲೆ” ಎಂದು ಅದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಕೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಪ್ರತಿನಿಧಿಸುವ ರಾಜ್ಯ ಹೆಚ್ಚುವರಿ ಅಡ್ವೊಕೇಟ್ ಜನರಲ್, ಇತ್ತೀಚಿನ ಮಾದರಿಗಳನ್ನು ಪರೀಕ್ಷಿಸಿದ್ದು, ಅವುಗಳನ್ನು ದಾಖಲೆಯಲ್ಲಿ ಇಡುವುದಾಗಿ ನ್ಯಾಯಮಂಡಳಿಗೆ ತಿಳಿಸಿದ್ದಾರೆ. ಜಲ ಮಾಲಿನ್ಯವನ್ನು ಪರಿಹರಿಸಲು ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಹೇಳಿದೆ. ಕುಂಭಮೇಳ ಪ್ರಾರಂಭಕ್ಕಿಂತಲೂ

“ಪ್ರತಿಯೊಂದು ವಿಚಲನಕ್ಕೂ, ಮೇಲ್ವಿಚಾರಣೆ ಮತ್ತು ಸರಿಪಡಿಸುವ ಕ್ರಮ ನಡೆಯುತ್ತಿದೆ” ಎಂದು ರಾಜ್ಯ ಸರ್ಕಾರ ಹೇಳಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಮಹಾ ಕುಂಭದಲ್ಲಿನ ನೀರು ಸ್ನಾನಕ್ಕೆ ಯೋಗ್ಯವಾಗಿದೆ ಎಂದು ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿ ಬುಧವಾರ ಹೇಳಿಕೊಂಡಿದೆ. ಮಂಡಳಿಯ ಈ ಹೇಳಿಕೆ, ಫೆಬ್ರವರಿ 3 ರಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ವರದಿಗೆ ವಿರುದ್ಧವಾಗಿದೆ. ಕೇಂದ್ರ ಮಂಡಳಿಯು ತನ್ನ ವರದಿಯಲ್ಲಿ, ಗಂಗಾ ಮತ್ತು ಯಮುನಾ ನದಿ ನೀರಿನ ಗುಣಮಟ್ಟ ಸ್ನಾನಕ್ಕೆ ಯೋಗ್ಯವಲ್ಲ, ಅದರಲ್ಲಿ ಮಾನವ ಮತ್ತು ಪ್ರಾಣಿಗಳ ಮಲದಲ್ಲಿ ಸಾಮಾನ್ಯವಾಗಿ ಕಂಡುಬರುವ ಬ್ಯಾಕ್ಟೀರಿಯಾಗಳು ಹೆಚ್ಚಿನ ಮಟ್ಟದಲ್ಲಿದೆ ಎಂದು ಹೇಳಿತ್ತು.

ಬುಧವಾರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ರಾಜ್ಯ ವಿಧಾನಸಭೆಯಲ್ಲಿ ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ಸಂಗಮದಲ್ಲಿರುವ ನೀರು ಸ್ನಾನಕ್ಕೆ ಮಾತ್ರವಲ್ಲ, “ಆಚಮನ” ಅಥವಾ ಪವಿತ್ರ ನೀರನ್ನು ಕುಡಿಯುವ ಧಾರ್ಮಿಕ ಆಚರಣೆಗೂ ಯೋಗ್ಯವಾಗಿದೆ ಎಂದು ಹೇಳಿದ್ದಾರೆ. ನೀರಿನ ಮಾಲಿನ್ಯದ ವರದಿಗಳು ಮಹಾ ಕುಂಭದ ಅಪಖ್ಯಾತಿ ಮಾಡಬೇಕು ಎಂಬ ಪಿತೂರಿಯ ಭಾಗವಾಗಿದೆ ಎಂದು ಅವರು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದಾಗಿ ಕುಂಭದಲ್ಲಿನ ನೀರು ಕಲುಷಿತವಾಗಿದೆ ಎಂದು ಬೆಳಕಿಗೆ ಬಂದಿದೆ. ರಾಜ್ಯ ಸರ್ಕಾರ ಎಲ್ಲವೂ ನಿಯಂತ್ರಣದಲ್ಲಿದೆ ಎಂದು ಹೇಳಿಕೊಂಡಿದೆ. ಅದರ ಅರ್ಥ ಮಾಧ್ಯಮಗಳು ಈ ವಿಷಯದ ಬಗ್ಗೆ ವರದಿ ಮಾಡುತ್ತಿರುವುದು ನಿಯಂತ್ರಣದಲ್ಲಿದೆ ಎಂದು ಅವರು ಟೀಕಿಸಿದ್ದಾರೆ.

“‘ನ್ಯಾಯಾಲಯ ನಿಂದನೆಯಂತೆ ‘ಸರ್ಕಾರಿ ಮಂಡಳಿ ಅಥವಾ ಪ್ರಾಧಿಕಾರದ ನಿಂದನೆ’ ಮಾಡಿದ್ದಕ್ಕಾಗಿ ಯಾರೊಬ್ಬರ ವಿರುದ್ಧವೂ ಪ್ರಕರಣ ದಾಖಲಿಸಬಹುದೇ ಎಂದು ಸಾರ್ವಜನಿಕರು ಕೇಳುತ್ತಿದ್ದಾರೆ” ಎಂದು ಅವರು ಕೇಳಿದ್ದಾರೆ.

ಮಹಾ ಕುಂಭಮೇಳವು ಜನವರಿ 13 ರಂದು ಪ್ರಾರಂಭವಾಯಿತು ಮತ್ತು ಫೆಬ್ರವರಿ 26 ರವರೆಗೆ ನಡೆಯಲಿದೆ. ತೀರ್ಥಯಾತ್ರೆಯ ಈ ಸಮಯದಲ್ಲಿ ಪ್ರತಿದಿನ ಸರಾಸರಿ ಒಂದು ಕೋಟಿಗೂ ಹೆಚ್ಚು ಜನರು ಗಂಗಾ ಮತ್ತು ಯಮುನಾ ನದಿಗಳಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿಕೊಂಡಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಹೇಳಿದೆ.

ಇದನ್ನೂಓದಿ:  ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ: ವಾರದೊಳಗೆ ಲೂಟಿ ಮಾಡಿದ 6,000 ಶಸ್ತ್ರಾಸ್ತ್ರ ಒಪ್ಪಿಸಿದಿದ್ದರೆ ಕಠಿಣ ಕ್ರಮ ಎಂದ ರಾಜ್ಯಪಾಲ

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ: ವಾರದೊಳಗೆ ಲೂಟಿ ಮಾಡಿದ 6,000 ಶಸ್ತ್ರಾಸ್ತ್ರ ಒಪ್ಪಿಸಿದಿದ್ದರೆ ಕಠಿಣ ಕ್ರಮ ಎಂದ ರಾಜ್ಯಪಾಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...