Homeಮುಖಪುಟಭಾರತದಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಅಮೆರಿಕದ ನಿಧಿ ಆರೋಪ : ಶ್ವೇತಪತ್ರ ಹೊರಡಿಸಲು ಕಾಂಗ್ರೆಸ್ ಆಗ್ರಹ

ಭಾರತದಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಅಮೆರಿಕದ ನಿಧಿ ಆರೋಪ : ಶ್ವೇತಪತ್ರ ಹೊರಡಿಸಲು ಕಾಂಗ್ರೆಸ್ ಆಗ್ರಹ

- Advertisement -
- Advertisement -

ಭಾರತದಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಅಮೆರಿಕದಿಂದ ಹಣಕಾಸಿನ ನೆರವು ಪಡೆಯಲಾಗಿದೆ ಎಂಬ ಆರೋಪ ಸಂಬಂಧ, ಭಾರತದ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳಿಗೆ ನೀಡಲಾಗಿರುವ ಯುಎಸ್‌ ನಿಧಿಯ ನೆರವಿನ ವಿವರಗಳನ್ನು ಒಳಗೊಂಡ ಶ್ವೇತಪತ್ರ ಹೊರಡಿಸಬೇಕು ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

“ಭಾರತದ ಚುನಾವಣೆಯಲ್ಲಿ ಬೇರೆ ಯಾರನ್ನೋ ಆಯ್ಕೆ ಮಾಡಲು 21 ಮಿಲಿಯ ಡಾಲರ್ ನೆರವನ್ನು ಉಪಯೋಗಿಸಿರುವ ಸಾಧ್ಯತೆ ಇದೆ” ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಆರೋಪವನ್ನು ‘ಅಸಂಬದ್ಧ’ ಎಂದು ಕಾಂಗ್ರೆಸ್ ಹೇಳಿದೆ.

“ಭಾರತದ ಮತದಾನಕ್ಕಾಗಿ ನಾವೇಕೆ 21 ಮಿಲಿಯನ್ ಡಾಲರ್ ಹಣ ಖರ್ಚು ಮಾಡಬೇಕಾಗಿತ್ತು? ಅವರು ಬೇರೆ ಯಾರನ್ನೋ ಆಯ್ಕೆ ಮಾಡಲು ಪ್ರಯತ್ನಿಸುತ್ತಿದ್ದರು ಎಂದು ನಾನು ಭಾವಿಸುತ್ತೇನೆ” ಎಂಬುವುದಾಗಿ ಟ್ರಂಪ್ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮಾಧ್ಯಮ ವಿಭಾಗದ ಮುಖ್ಯಸ್ಥ ಜೈರಾಮ್ ರಮೇಶ್ “ಇದೀಗ ಯುಎಸ್‌ ನಿಧಿ (USAID) ಭಾರೀ ಸುದ್ದಿಯಲ್ಲಿದೆ. ಅದನ್ನು 1961 ನವೆಂಬರ್ 3ರಂದು ಸ್ಥಾಪಿಸಲಾಯಿತು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡುತ್ತಿರುವ ಹೇಳಿಕೆಗಳು ‘ಅತ್ಯಂತ ಅಸಂಬದ್ಧ’ ಎಂದಷ್ಟೇ ಹೇಳಬಹುದಾಗಿದೆ. ಹಾಗಿದ್ದರೂ, ಭಾರತದ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳಿಗೆ ದಶಕಗಳಿಂದ ನೀಡಲಾಗಿರುವ ಯುಎಸ್‌ನಿಧಿ ನೆರವಿನ ವಿವರಗಳನ್ನು ಒಳಗೊಂಡ ಶ್ವೇತಪತ್ರವೊಂದನ್ನು ಭಾರತ ಸರ್ಕಾರ ಎಷ್ಟು ಸಾಧ್ಯವೋ ಅಷ್ಟು ಬೇಗ ಹೊರಡಿಸಬೇಕು” ಎಂದಿದ್ದಾರೆ.

ಫೆಬ್ರವರಿ 16 ರಂದು, ಬಿಲಿಯನೇರ್ ಸ್ಪೇಸ್‌ಎಕ್ಸ್ ಸಿಇಒ ಎಲಾನ್ ಮಸ್ಕ್ ನೇತೃತ್ವದ ಅಮೆರಿಕದ ಸರ್ಕಾರಿ ದಕ್ಷತೆ ಇಲಾಖೆ (ಡಿಒಜಿಇ), ಯುಎಸ್ ತೆರಿಗೆದಾರರ ಹಣವನ್ನು ಯಾವುದಕ್ಕೆಲ್ಲ ಖರ್ಚು ಮಾಡಲಾಗುತ್ತಿದೆ ಎಂದು ಪಟ್ಟಿ ಮಾಡಿದೆ. ಆ ಪಟ್ಟಿಯಲ್ಲಿ ಭಾರತದ ಮತದಾನಕ್ಕಾಗಿ 21 ಮಿಲಿಯನ್ ಯುಎಸ್ ಡಾಲರ್ ಖರ್ಚು ಮಾಡಿರುವುದೂ ಸೇರಿದೆ.

ಡಿಒಜಿಇ ಮಾಡಿರುವ ಪಟ್ಟಿಯಲ್ಲಿ ಬಾಂಗ್ಲಾದೇಶದ ರಾಜಕೀಯ ಬಲಪಡಿಸಲು 29 ಮಿಲಿಯನ್ ಡಾಲರ್, ಹಣಕಾಸು ಒಕ್ಕೂಟಕ್ಕೆ 20 ಮಿಲಿಯನ್ ಡಾಲರ್, ನೇಪಾಳದಲ್ಲಿ ಜೀವವೈವಿಧ್ಯ ಸಂರಕ್ಷಣೆಗಾಗಿ 19 ಮಿಲಿಯನ್ ಡಾಲರ್ ಹಾಗೂ ಏಷ್ಯಾದಲ್ಲಿ ಕಲಿಕಾ ಫಲಿತಾಂಶಗಳನ್ನು ಸುಧಾರಿಸಲು 47 ಮಿಲಿಯನ್ ಡಾಲರ್ ನೀಡುತ್ತಿರುವುದು ಸೇರಿದೆ.

ಡಿಒಜಿಇ ಈ ಎಲ್ಲಾ ನೆರವುಗಳನ್ನು ರದ್ದುಗೊಳಿಸಿದೆ ಎಂದು ವರದಿಯಾಗಿದೆ.

ಕಳೆದ ಮಂಗಳವಾರ ಮಾರ್-ಎ-ಲಾಗೊದಲ್ಲಿ ಕಾರ್ಯಕಾರಿ ಆದೇಶಗಳಿಗೆ ಸಹಿ ಹಾಕಿ ಮಾತನಾಡಿದ ಟ್ರಂಪ್, “ಭಾರತದ ಚುನಾವಣೆಗೆ ನಾವೇಕೆ 21 ಮಿಲಿಯನ್ ಡಾಲರ್ ಖರ್ಚು ಮಾಡಬೇಕು. ನಮಗೆ ಗೊತ್ತಿರುವಂತೆ ಭಾರತ ಅತಿ ಹೆಚ್ಚು ತೆರಿಗೆ ಸಂಗ್ರಹಿಸುವ ರಾಷ್ಟ್ರಗಳಲ್ಲಿ ಒಂದು. ಅವರು ಹಲವು ರೀತಿಯ ಸುಂಕಗಳನ್ನು ವಿಧಿಸುತ್ತಿದ್ದಾರೆ. ಹಾಗಾಗಿ, ನಾವು ಹಣ ನೀಡುವುದು ಸರಿಯಲ್ಲ” ಎಂದಿದ್ದಾರೆ.

ಚುನಾವಣಾ ಆಯೋಗ ನಿಲುವು ಸ್ಪಷ್ಟಪಡಿಸಬೇಕು : ಉಮರ್ ಅಬ್ದುಲ್ಲಾ

ಭಾರತದಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಅಮೆರಿಕ 21 ಮಿಲಿಯನ್ ಡಾಲರ್ ವೆಚ್ಚ ಮಾಡಿದೆ ಎಂಬ ವರದಿ ಕುರಿತು ಚುನಾವಣಾ ಆಯೋಗ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಅವರು ಗುರುವಾರ (ಫೆ.29) ಆಗ್ರಹಿಸಿದ್ದಾರೆ.

ಇದು (ವಿದೇಶಿ ಹಸ್ತಕ್ಷೇಪ) ಸಂಭವಿಸಬಾರದು. ಇದುವರೆಗೆ ವಿದೇಶಿ ಹಸ್ತಕ್ಷೇಪದ ಕುರಿತು ಯಾವುದೇ ಪುರಾವೆ ಇಲ್ಲ. ನಮ್ಮ ಚುನಾವಣೆಯಲ್ಲಿ ವಿದೇಶಿ ಹಸ್ತಕ್ಷೇಪ ನಡೆದಿದೆಯೇ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಬೇಕು. ಯಾಕೆಂದರೆ, ಇಂದಿನವರೆಗೆ ನಾವು ನಮ್ಮ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಯುತ ರೀತಿಯಲ್ಲಿ ನಡೆಸಲಾಗಿದೆ ಎಂದು ನಂಬಿದ್ದೇವೆ’’ ಎಂದು ಅಬ್ದುಲ್ಲಾ ಹೇಳಿದ್ದಾರೆ.

‘ಈ ವ್ಯವಸ್ಥೆಯಿಂದ ನೀವು ನಲುಗಿ ಹೋಗಿದ್ದೀರಿ’ : ದಲಿತ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಸಂವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...