Homeಕರ್ನಾಟಕಮದ್ದೂರು | ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಮಿಕಲ್ ಸ್ಫೋಟ : ಕಾರ್ಮಿಕರು ಆಸ್ಪತ್ರೆಗೆ ದಾಖಲು

ಮದ್ದೂರು | ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಮಿಕಲ್ ಸ್ಫೋಟ : ಕಾರ್ಮಿಕರು ಆಸ್ಪತ್ರೆಗೆ ದಾಖಲು

ಕಾರ್ಖಾನೆ ಆಡಳಿತದ ಬೇಜವಾಬ್ದಾರಿಗೆ ಕಾರ್ಮಿಕರ ಜೀವನ ಬಲಿ

- Advertisement -
- Advertisement -

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜೆಲಗೆರೆ ಕೈಗಾರಿಕಾ ಪ್ರದೇಶದ ಗಾರ್ಮೆಂಟ್ಸ್ ಕಾರ್ಖಾನೆಯೊಂದರ ಬೇಜವಾಬ್ದಾರಿಯಿಂದಾಗಿ ಕಾರ್ಮಿಕರು ಆಸ್ಪತ್ರೆ ಸೇರಿ ನರಳುವಂತಾಗಿದೆ.

ಗುರುವಾರ (ಫೆ.20) ಕಾರ್ಖಾನೆಯಲ್ಲಿ ನಡೆದ ಎರಡು ಪ್ರತ್ಯೇಕ ಅವಘಡಗಳಲ್ಲಿ ಮೂವರು ಕಾರ್ಮಿಕರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಪೈಕಿ ಒಬ್ಬರು ಚಿಕಿತ್ಸೆ ಪಡೆದು ಮನೆಗೆ ಮರಳಿದ್ದು, ಇನ್ನಿಬ್ಬರು ಆಸ್ಪತ್ರೆಯಲ್ಲೇ ಇದ್ದಾರೆ. ಇವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ.

ಗುರುವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕಾರ್ಖಾನೆಯಲ್ಲಿ ಮೊದಲ ಅವಘಡ ಸಂಭವಿಸಿದೆ. ಪ್ರಿಂಟಿಂಗ್ ವಿಭಾಗದಲ್ಲಿ ಸ್ಪಾಟ್ ಲಿಕ್ಕರ್ (ಸ್ಪ್ರೇ ಬಾಟಲ್) ನಿಂದ ಕೆಮಿಕಲ್ ಸ್ಪೋಟಗೊಂಡ ಪರಿಣಾಮ ಅಲ್ಲೇ ಕೆಲಸ ಮಾಡುತ್ತಿದ್ದ ಕಾರ್ಮಿಕರಾದ ಶಿವಕುಮಾರ್ ಮತ್ತು ಪ್ರಸನ್ನ ಎಂಬವರಿಗೆ ತೀವ್ರ ತರಹದ ಸುಟ್ಟ ಗಾಯಗಳಾಗಿವೆ. ಇನ್ನೊಬ್ಬರು ಮಹಿಳಾ ಕಾರ್ಮಿಕರಾದ ಲಕ್ಷ್ಮೀ ಎಂಬವರು ಪ್ರಜ್ಞಾಹೀನರಾಗಿದ್ದರು. ಪ್ರಥಮ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದಾರೆ.

ತೀವ್ರತರದ ಸುಟ್ಟ ಗಾಯಗಳಿಂದ ನರಳುತ್ತಿರುವ ಕಾರ್ಮಿಕ ಶಿವಕುಮಾರ್

ಅವಘಡದಲ್ಲಿ ಶಿವಕುಮಾರ್ ಮತ್ತು ಪ್ರಸನ್ನ ಅವರ ಕೈಗಳು ಮತ್ತು ಮುಖ ಸುಟ್ಟಿದೆ. ದುರಂತ ನಡೆದಾಗ ಗಂಭೀರ ಸ್ಥಿತಿಯಲ್ಲಿದ್ದ ಇವರಿಬ್ಬರನ್ನೂ ತಕ್ಷಣ ಆಸ್ಪತ್ರೆಗೆ ಕರೆದೊಯ್ಯದ ಕಾರ್ಖಾನೆ ಆಡಳಿತ, ತುಂಬಾ ಹೊತ್ತು ಕಾಯಿಸಿ, ಬಳಿಕ ಮದ್ದೂರಿನ ಸಿದ್ದೇಗೌಡ ಆಸ್ಪತ್ರೆಗೆ ಕರೆದುಕೊಂಡು ಹೋಗಿದೆ. ಅಲ್ಲಿ ಚಿಕಿತ್ಸೆ ಕೊಡಿಸಿ ಆಂಬ್ಯುಲೆನ್ಸ್‌ನಲ್ಲಿ ವಾಪಸ್ ಕಾರ್ಖಾನೆಗೆ ಕರೆತಂದು ಆಂಬ್ಯುಲೆನ್ಸ್‌ನಲ್ಲೇ ಒಂದು ಗಂಟೆ ಕಾಲ ಇರಿಸಿ, ನಂತರ ಮನೆಗೆ ಕರೆದುಕೊಂಡು ಹೋಗಿ ಬಿಟ್ಟಿದ್ದಾರೆ ಎಂದು ಕರ್ನಾಟಕ ಇಂಡಿಪೆಂಡೆಂಟ್ ಗಾರ್ಮೆಂಟ್ ವರ್ಕರ್ಸ್ ಯೂನಿಯನ್ (ಕೆಐಜಿಡಬ್ಲ್ಯುಯು) ಪ್ರಧಾನ ಕಾರ್ಯದರ್ಶಿ ಜಯರಾಮ್ ಎ.ಹೆಚ್ ದೂರಿದ್ದಾರೆ.

ಕಾರ್ಮಿಕ ಪ್ರಸನ್ನ ಅವರಿಗೆ ಗಾಯಗಳಾಗಿರುವುದು

ಶಿವಕುಮಾರ್ ಅವರ ಪರಿಸ್ಥಿತಿ ಗಂಭೀರವಾಗಿರುವುದನ್ನು ಗಮನಿಸಿದ ಮನೆಯವರು ಮಂಡ್ಯ ಜಿಲ್ಲಾಸ್ಪತ್ರೆ ಮಿಮ್ಸ್‌ಗೆ ದಾಖಲಿಸಿದ್ದಾರೆ. ಅಲ್ಲಿ ತುರ್ತು ಚಿಕಿತ್ಸೆ ನೀಡಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕಳಿಸಿದ್ದಾರೆ ಎಂದು ಜಯರಾಮ್ ತಿಳಿಸಿದ್ದಾರೆ.

ಶಿವಕುಮಾರ್ ಅವರನ್ನು ಮಿಮ್ಸ್‌ನಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯುತ್ತಿರುವುದು

ಕೆಮಿಕಲ್ ಬ್ಲಾಸ್ಟ್ ಅವಘಡದ ಸ್ವಲ್ಪ ಹೊತ್ತಿನ ಬಳಿಕ ಕಾರ್ಖಾನೆಯಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ಇದರಲ್ಲಿ ಫ್ಲೋರ್ ಕಟ್ಟಿಂಗ್ ವೇಳೆ ಎಂ. ಅವಿನಾಶ್ ಎಂಬ ಕಾರ್ಮಿಕನ ಎಡಗೈನ ಮುಂಗೈಗೆ ತೀವ್ರವಾದ ಪೆಟ್ಟು ಬಿದ್ದಿದೆ. ಇವರನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಚಿಕಿತ್ಸೆ ನೀಡಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜೆಎಸ್‌ಎಸ್‌ ಆಸ್ಪತ್ರೆಗೆ ಕಳುಹಿಸಿದ್ದಾರೆ. ಅವಿನಾಶ್ ಅವರಿಗೆ ತೀವ್ರ ಪೆಟ್ಟಾಗಿರುವ ಕಾರಣ ಪ್ಲಾಸ್ಟಿಕ್ ಸರ್ಜರಿ ಮಾಡಬೇಕಾಗಿದೆ ಎಂದು ವೈದ್ಯರು ತಿಳಿಸಿದ್ದಾಗಿ ಕೆಐಜಿಡಬ್ಲ್ಯುಯು ಸಂಘಟನಾ ಕಾರ್ಯದರ್ಶಿ ಉಮೇಶ್ ಮಾಹಿತಿ ನೀಡಿದ್ದಾರೆ.

ಗಾಯಗೊಂಡ ಅವಿನಾಶ್ ಅವರದ್ದು ವೆಲ್ಡಿಂಗ್ ಕೆಲಸ. ಆದರೆ, ಕಾರ್ಖಾನೆಯ ಸೂಪರ್ ವೈಝರ್ ಯಾವುದೇ ಸುರಕ್ಷಾ ಕ್ರಮಗಳಿಲ್ಲದೆ ಅವರು ಮಾಡದೇ ಇರುವ ಫ್ಲೋರ್ ಕಟ್ಟಿಂಗ್ ಕೆಲಸ ಮಾಡಿಸಿದ್ದಾರೆ ಎಂದು ಉಮೇಶ್ ಆರೋಪಿಸಿದ್ದಾರೆ.

ಮದ್ದೂರಿನ ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಆಗಾಗ ಈ ರೀತಿಯ ಅವಘಡಗಳು ನಡೆಯುತ್ತಲೇ ಇರುತ್ತವೆ. ಅಲ್ಲಿ ಕಾರ್ಮಿಕರನ್ನು ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ ದುಡಿಸಲಾಗುತ್ತಿದೆ. ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲದಂತಾಗಿದೆ. ಕೆಲ ತಿಂಗಳ ಹೀಟಿಂಗ್ ಮೆಷಿನ್ ಇಟ್ಟಿದ ಟೇಬಲ್‌ನ ಕಬ್ಬಿಣದ ಕಂಬಗಳು ತುಕ್ಕು ಹಿಡಿದು ತುಂಡಾದ ಕಾರಣ, ಮೆಷಿನ್ ಕೆಳಗೆ ಬಿದ್ದಿತ್ತು. ಈ ವೇಳೆ ಮಹಿಳಾ ಕಾರ್ಮಿಕರೊಬ್ಬರ ಕಾಲಿಗೆ ಗಾಯವಾಗಿದೆ. ಅದೃಷ್ಟವಶಾತ್ ದೊಡ್ಡ ಮಟ್ಟದ ಅವಘಡ ತಪ್ಪಿದೆ. ಕಾರ್ಖಾನೆ ಆಡಳಿತ ಗಾಯಗೊಂಡವರನ್ನು ಬೆದರಿಸಿ ಶೌಚಾಲಯದಲ್ಲಿ ಬಿದ್ದು ಗಾಯವಾಗಿದೆ ಎಂದು ಹೇಳಿಸಿದೆ. ಕಂಬಗಳು ತುಕ್ಕು ಹಿಡಿದ ಬಗ್ಗೆ ಕಾರ್ಮಿಕರು ಸಂಬಂಧಪಟ್ಟವರ ಗಮನಕ್ಕೆ ತಂದಿದ್ದರೂ ಅವರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಉಮೇಶ್ ತಿಳಿಸಿದ್ದಾರೆ.

ಮತ್ತೊಂದು ಘಟನೆಯಲ್ಲಿ ಪ್ರಿಂಟಿಂಗ್ ವಿಭಾಗದಲ್ಲಿ ಕಾರ್ಮಿರೊಬ್ಬರ ಹೊಟ್ಟೆಯ ಭಾಗಕ್ಕೆ ಮೆಷಿನ್ ತಾಗಿತ್ತು. ಅವರು ಸ್ವಲ್ಪದರಲ್ಲಿ ಅಪಾಯದಿಂದ ಪಾರಾಗಿದ್ದರು. ಈ ರೀತಿಯ ಘಟನೆಗಳು ಪದೇ ಪದೇ ನಡೆಯುತ್ತಿದ್ದರೂ ಕಾರ್ಖಾನೆ ಅಡಳಿತ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ ಎಂದು ಉಮೇಶ್ ದೂರಿದ್ದಾರೆ.

ಗುರುವಾರ ನಡೆದ ಅವಘಡದಲ್ಲಿ ಗಾಯಗೊಂಡ ಕಾರ್ಮಿಕರಿಗೆ ಕಾನೂನು ಪ್ರಕಾರ ಸಿಗಬೇಕಾದ ಸೌಲಭ್ಯಗಳನ್ನು ದೊರಕಿಸಿಕೊಡಬೇಕು ಮತ್ತು ಕಾರ್ಖಾನೆ ಅಡಳಿತ ತಾವು ಮಾಡಬೇಕಾದ ಜವಾಬ್ದಾರಿಯನ್ನು ನಿರ್ವಹಿಸಬೇಕೆಂದು ಆಗ್ರಹಿಸಿದ್ದೇವೆ. ಅವರು ನಿರ್ಲಕ್ಷ್ಯ ವಹಿಸಿದರೆ ಮುಂದಿನ ನಡೆಯ ಬಗ್ಗೆ ಯೋಚಿಸುತ್ತೇವೆ ಎಂದು ಉಮೇಶ್ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಬಣದ ಸಚಿವರೇ ರಾಜ್ಯ ಕಾಂಗ್ರೆಸ್‌ನ ಮುಂದಿನ ಅಧ್ಯಕ್ಷ – ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...