Homeಕರ್ನಾಟಕಮದ್ದೂರು | ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಮಿಕಲ್ ಸ್ಫೋಟ : ಕಾರ್ಮಿಕರು ಆಸ್ಪತ್ರೆಗೆ ದಾಖಲು

ಮದ್ದೂರು | ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಮಿಕಲ್ ಸ್ಫೋಟ : ಕಾರ್ಮಿಕರು ಆಸ್ಪತ್ರೆಗೆ ದಾಖಲು

ಕಾರ್ಖಾನೆ ಆಡಳಿತದ ಬೇಜವಾಬ್ದಾರಿಗೆ ಕಾರ್ಮಿಕರ ಜೀವನ ಬಲಿ

- Advertisement -
- Advertisement -

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜೆಲಗೆರೆ ಕೈಗಾರಿಕಾ ಪ್ರದೇಶದ ಗಾರ್ಮೆಂಟ್ಸ್ ಕಾರ್ಖಾನೆಯೊಂದರ ಬೇಜವಾಬ್ದಾರಿಯಿಂದಾಗಿ ಕಾರ್ಮಿಕರು ಆಸ್ಪತ್ರೆ ಸೇರಿ ನರಳುವಂತಾಗಿದೆ.

ಗುರುವಾರ (ಫೆ.20) ಕಾರ್ಖಾನೆಯಲ್ಲಿ ನಡೆದ ಎರಡು ಪ್ರತ್ಯೇಕ ಅವಘಡಗಳಲ್ಲಿ ಮೂವರು ಕಾರ್ಮಿಕರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಪೈಕಿ ಒಬ್ಬರು ಚಿಕಿತ್ಸೆ ಪಡೆದು ಮನೆಗೆ ಮರಳಿದ್ದು, ಇನ್ನಿಬ್ಬರು ಆಸ್ಪತ್ರೆಯಲ್ಲೇ ಇದ್ದಾರೆ. ಇವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ.

ಗುರುವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕಾರ್ಖಾನೆಯಲ್ಲಿ ಮೊದಲ ಅವಘಡ ಸಂಭವಿಸಿದೆ. ಪ್ರಿಂಟಿಂಗ್ ವಿಭಾಗದಲ್ಲಿ ಸ್ಪಾಟ್ ಲಿಕ್ಕರ್ (ಸ್ಪ್ರೇ ಬಾಟಲ್) ನಿಂದ ಕೆಮಿಕಲ್ ಸ್ಪೋಟಗೊಂಡ ಪರಿಣಾಮ ಅಲ್ಲೇ ಕೆಲಸ ಮಾಡುತ್ತಿದ್ದ ಕಾರ್ಮಿಕರಾದ ಶಿವಕುಮಾರ್ ಮತ್ತು ಪ್ರಸನ್ನ ಎಂಬವರಿಗೆ ತೀವ್ರ ತರಹದ ಸುಟ್ಟ ಗಾಯಗಳಾಗಿವೆ. ಇನ್ನೊಬ್ಬರು ಮಹಿಳಾ ಕಾರ್ಮಿಕರಾದ ಲಕ್ಷ್ಮೀ ಎಂಬವರು ಪ್ರಜ್ಞಾಹೀನರಾಗಿದ್ದರು. ಪ್ರಥಮ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದಾರೆ.

ತೀವ್ರತರದ ಸುಟ್ಟ ಗಾಯಗಳಿಂದ ನರಳುತ್ತಿರುವ ಕಾರ್ಮಿಕ ಶಿವಕುಮಾರ್

ಅವಘಡದಲ್ಲಿ ಶಿವಕುಮಾರ್ ಮತ್ತು ಪ್ರಸನ್ನ ಅವರ ಕೈಗಳು ಮತ್ತು ಮುಖ ಸುಟ್ಟಿದೆ. ದುರಂತ ನಡೆದಾಗ ಗಂಭೀರ ಸ್ಥಿತಿಯಲ್ಲಿದ್ದ ಇವರಿಬ್ಬರನ್ನೂ ತಕ್ಷಣ ಆಸ್ಪತ್ರೆಗೆ ಕರೆದೊಯ್ಯದ ಕಾರ್ಖಾನೆ ಆಡಳಿತ, ತುಂಬಾ ಹೊತ್ತು ಕಾಯಿಸಿ, ಬಳಿಕ ಮದ್ದೂರಿನ ಸಿದ್ದೇಗೌಡ ಆಸ್ಪತ್ರೆಗೆ ಕರೆದುಕೊಂಡು ಹೋಗಿದೆ. ಅಲ್ಲಿ ಚಿಕಿತ್ಸೆ ಕೊಡಿಸಿ ಆಂಬ್ಯುಲೆನ್ಸ್‌ನಲ್ಲಿ ವಾಪಸ್ ಕಾರ್ಖಾನೆಗೆ ಕರೆತಂದು ಆಂಬ್ಯುಲೆನ್ಸ್‌ನಲ್ಲೇ ಒಂದು ಗಂಟೆ ಕಾಲ ಇರಿಸಿ, ನಂತರ ಮನೆಗೆ ಕರೆದುಕೊಂಡು ಹೋಗಿ ಬಿಟ್ಟಿದ್ದಾರೆ ಎಂದು ಕರ್ನಾಟಕ ಇಂಡಿಪೆಂಡೆಂಟ್ ಗಾರ್ಮೆಂಟ್ ವರ್ಕರ್ಸ್ ಯೂನಿಯನ್ (ಕೆಐಜಿಡಬ್ಲ್ಯುಯು) ಪ್ರಧಾನ ಕಾರ್ಯದರ್ಶಿ ಜಯರಾಮ್ ಎ.ಹೆಚ್ ದೂರಿದ್ದಾರೆ.

ಕಾರ್ಮಿಕ ಪ್ರಸನ್ನ ಅವರಿಗೆ ಗಾಯಗಳಾಗಿರುವುದು

ಶಿವಕುಮಾರ್ ಅವರ ಪರಿಸ್ಥಿತಿ ಗಂಭೀರವಾಗಿರುವುದನ್ನು ಗಮನಿಸಿದ ಮನೆಯವರು ಮಂಡ್ಯ ಜಿಲ್ಲಾಸ್ಪತ್ರೆ ಮಿಮ್ಸ್‌ಗೆ ದಾಖಲಿಸಿದ್ದಾರೆ. ಅಲ್ಲಿ ತುರ್ತು ಚಿಕಿತ್ಸೆ ನೀಡಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕಳಿಸಿದ್ದಾರೆ ಎಂದು ಜಯರಾಮ್ ತಿಳಿಸಿದ್ದಾರೆ.

ಶಿವಕುಮಾರ್ ಅವರನ್ನು ಮಿಮ್ಸ್‌ನಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯುತ್ತಿರುವುದು

ಕೆಮಿಕಲ್ ಬ್ಲಾಸ್ಟ್ ಅವಘಡದ ಸ್ವಲ್ಪ ಹೊತ್ತಿನ ಬಳಿಕ ಕಾರ್ಖಾನೆಯಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ಇದರಲ್ಲಿ ಫ್ಲೋರ್ ಕಟ್ಟಿಂಗ್ ವೇಳೆ ಎಂ. ಅವಿನಾಶ್ ಎಂಬ ಕಾರ್ಮಿಕನ ಎಡಗೈನ ಮುಂಗೈಗೆ ತೀವ್ರವಾದ ಪೆಟ್ಟು ಬಿದ್ದಿದೆ. ಇವರನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಚಿಕಿತ್ಸೆ ನೀಡಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜೆಎಸ್‌ಎಸ್‌ ಆಸ್ಪತ್ರೆಗೆ ಕಳುಹಿಸಿದ್ದಾರೆ. ಅವಿನಾಶ್ ಅವರಿಗೆ ತೀವ್ರ ಪೆಟ್ಟಾಗಿರುವ ಕಾರಣ ಪ್ಲಾಸ್ಟಿಕ್ ಸರ್ಜರಿ ಮಾಡಬೇಕಾಗಿದೆ ಎಂದು ವೈದ್ಯರು ತಿಳಿಸಿದ್ದಾಗಿ ಕೆಐಜಿಡಬ್ಲ್ಯುಯು ಸಂಘಟನಾ ಕಾರ್ಯದರ್ಶಿ ಉಮೇಶ್ ಮಾಹಿತಿ ನೀಡಿದ್ದಾರೆ.

ಗಾಯಗೊಂಡ ಅವಿನಾಶ್ ಅವರದ್ದು ವೆಲ್ಡಿಂಗ್ ಕೆಲಸ. ಆದರೆ, ಕಾರ್ಖಾನೆಯ ಸೂಪರ್ ವೈಝರ್ ಯಾವುದೇ ಸುರಕ್ಷಾ ಕ್ರಮಗಳಿಲ್ಲದೆ ಅವರು ಮಾಡದೇ ಇರುವ ಫ್ಲೋರ್ ಕಟ್ಟಿಂಗ್ ಕೆಲಸ ಮಾಡಿಸಿದ್ದಾರೆ ಎಂದು ಉಮೇಶ್ ಆರೋಪಿಸಿದ್ದಾರೆ.

ಮದ್ದೂರಿನ ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಆಗಾಗ ಈ ರೀತಿಯ ಅವಘಡಗಳು ನಡೆಯುತ್ತಲೇ ಇರುತ್ತವೆ. ಅಲ್ಲಿ ಕಾರ್ಮಿಕರನ್ನು ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ ದುಡಿಸಲಾಗುತ್ತಿದೆ. ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲದಂತಾಗಿದೆ. ಕೆಲ ತಿಂಗಳ ಹೀಟಿಂಗ್ ಮೆಷಿನ್ ಇಟ್ಟಿದ ಟೇಬಲ್‌ನ ಕಬ್ಬಿಣದ ಕಂಬಗಳು ತುಕ್ಕು ಹಿಡಿದು ತುಂಡಾದ ಕಾರಣ, ಮೆಷಿನ್ ಕೆಳಗೆ ಬಿದ್ದಿತ್ತು. ಈ ವೇಳೆ ಮಹಿಳಾ ಕಾರ್ಮಿಕರೊಬ್ಬರ ಕಾಲಿಗೆ ಗಾಯವಾಗಿದೆ. ಅದೃಷ್ಟವಶಾತ್ ದೊಡ್ಡ ಮಟ್ಟದ ಅವಘಡ ತಪ್ಪಿದೆ. ಕಾರ್ಖಾನೆ ಆಡಳಿತ ಗಾಯಗೊಂಡವರನ್ನು ಬೆದರಿಸಿ ಶೌಚಾಲಯದಲ್ಲಿ ಬಿದ್ದು ಗಾಯವಾಗಿದೆ ಎಂದು ಹೇಳಿಸಿದೆ. ಕಂಬಗಳು ತುಕ್ಕು ಹಿಡಿದ ಬಗ್ಗೆ ಕಾರ್ಮಿಕರು ಸಂಬಂಧಪಟ್ಟವರ ಗಮನಕ್ಕೆ ತಂದಿದ್ದರೂ ಅವರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಉಮೇಶ್ ತಿಳಿಸಿದ್ದಾರೆ.

ಮತ್ತೊಂದು ಘಟನೆಯಲ್ಲಿ ಪ್ರಿಂಟಿಂಗ್ ವಿಭಾಗದಲ್ಲಿ ಕಾರ್ಮಿರೊಬ್ಬರ ಹೊಟ್ಟೆಯ ಭಾಗಕ್ಕೆ ಮೆಷಿನ್ ತಾಗಿತ್ತು. ಅವರು ಸ್ವಲ್ಪದರಲ್ಲಿ ಅಪಾಯದಿಂದ ಪಾರಾಗಿದ್ದರು. ಈ ರೀತಿಯ ಘಟನೆಗಳು ಪದೇ ಪದೇ ನಡೆಯುತ್ತಿದ್ದರೂ ಕಾರ್ಖಾನೆ ಅಡಳಿತ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ ಎಂದು ಉಮೇಶ್ ದೂರಿದ್ದಾರೆ.

ಗುರುವಾರ ನಡೆದ ಅವಘಡದಲ್ಲಿ ಗಾಯಗೊಂಡ ಕಾರ್ಮಿಕರಿಗೆ ಕಾನೂನು ಪ್ರಕಾರ ಸಿಗಬೇಕಾದ ಸೌಲಭ್ಯಗಳನ್ನು ದೊರಕಿಸಿಕೊಡಬೇಕು ಮತ್ತು ಕಾರ್ಖಾನೆ ಅಡಳಿತ ತಾವು ಮಾಡಬೇಕಾದ ಜವಾಬ್ದಾರಿಯನ್ನು ನಿರ್ವಹಿಸಬೇಕೆಂದು ಆಗ್ರಹಿಸಿದ್ದೇವೆ. ಅವರು ನಿರ್ಲಕ್ಷ್ಯ ವಹಿಸಿದರೆ ಮುಂದಿನ ನಡೆಯ ಬಗ್ಗೆ ಯೋಚಿಸುತ್ತೇವೆ ಎಂದು ಉಮೇಶ್ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಬಣದ ಸಚಿವರೇ ರಾಜ್ಯ ಕಾಂಗ್ರೆಸ್‌ನ ಮುಂದಿನ ಅಧ್ಯಕ್ಷ – ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...