Homeಮುಖಪುಟಉನ್ನತ ಶಿಕ್ಷಣ ಸಚಿವರ ಎರಡನೇ ಸಮಾವೇಶ : ಯುಜಿಸಿ ಕರಡು ನಿಯಮಗಳ ವಿರುದ್ಧ ಜಂಟಿ ನಿರ್ಣಯ

ಉನ್ನತ ಶಿಕ್ಷಣ ಸಚಿವರ ಎರಡನೇ ಸಮಾವೇಶ : ಯುಜಿಸಿ ಕರಡು ನಿಯಮಗಳ ವಿರುದ್ಧ ಜಂಟಿ ನಿರ್ಣಯ

- Advertisement -
- Advertisement -

ಬಿಜೆಪಿಯೇತರ ಆಡಳಿತದ ದಕ್ಷಿಣ ರಾಜ್ಯಗಳ ಸಚಿವರು ಭಾಗವಹಿಸಿದ್ದ ಕೇರಳ ಸರ್ಕಾರ ಪ್ರಾಯೋಜಿತ ‘ಯುಜಿಸಿ ಕರಡು ನಿಯಮಗಳು- 2025’ರ ರಾಷ್ಟ್ರೀಯ ಸಮಾವೇಶದಲ್ಲಿ, ರಾಜ್ಯಗಳ ಅಧಿಕಾರವನ್ನು ಮೊಟಕುಗೊಳಿಸುವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದ ನಿಯಮಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ 15 ಅಂಶಗಳ ನಿರ್ಣಯವನ್ನು ಅಂಗೀಕರಿಸಲಾಗಿದೆ.

ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಯುಜಿಸಿ ಕರಡು ನಿಯಮಗಳು ಉನ್ನತ ಶಿಕ್ಷಣದಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ದುರ್ಬಲಗೊಳಿಸುವ, ಧಾರ್ಮಿಕ ಮತ್ತು ಕೋಮು ಸಿದ್ಧಾಂತಗಳನ್ನು ಉತ್ತೇಜಿಸುವವರ ನಿಯಂತ್ರಣದಲ್ಲಿ ಶಿಕ್ಷಣ ವಲಯವನ್ನು ಇರಿಸುವ ಪ್ರಯತ್ನದ ಭಾಗ” ಎಂದಿದ್ದಾರೆ.

“ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಕಾನೂನು ರಚಿಸುವ ರಾಜ್ಯಗಳ ಅಧಿಕಾರವನ್ನು ಯುಜಿಸಿ ಕರಡು ನಿಯಮಗಳು ಕಿತ್ತುಕೊಳ್ಳಲಿದೆ. ಈ ಮೂಲಕ ಇದು ದೇಶದ ಒಕ್ಕೂಟ ವ್ಯವಸ್ಥೆಯ ಅಡಿಪಾಯವನ್ನೇ ಹಾಳು ಮಾಡಲಿದೆ” ಎಂದು ಹೇಳಿದ್ದಾರೆ.

“ಕೇಂದ್ರ ಸರ್ಕಾರ ಮತ್ತು ಯುಜಿಸಿ ರಾಜ್ಯ ಸರ್ಕಾರಗಳನ್ನು ವಿಶ್ವವಿದ್ಯಾಲಯಗಳ ಆಡಳಿತದಿಂದ ಹೊರಗಿಡಲು ಪ್ರಯತ್ನಿಸುತ್ತಿವೆ. ಹೊಸ ನಿಯಮಗಳು ಜಾರಿಯಾದರೆ, ರಾಜ್ಯ ವಿಧಾನಸಭೆಗಳು ಜಾರಿಗೆ ತಂದ ಕಾನೂನುಗಳಿಂದ ಸ್ಥಾಪಿಸಲಾದ ಮತ್ತು ರಾಜ್ಯಗಳ ಹಣಕಾಸು ಮತ್ತು ಆಡಳಿತ ಸಂಪನ್ಮೂಲಗಳನ್ನು ಬಳಸಿಕೊಂಡು ನಡೆಸುವ ವಿಶ್ವವಿದ್ಯಾಲಯಗಳ ಮೇಲೆ ರಾಜ್ಯಗಳು ನಿಯಂತ್ರಣ ಕಳೆದುಕೊಳ್ಳಲಿವೆ” ಎಂದಿದ್ದಾರೆ.

ಸಮಾವೇಶವ ಆಯೋಜಿಸಿದಕ್ಕೆ ಸರ್ಕಾರವನ್ನು ಶ್ಲಾಘಿಸಿದ ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ ಡಿ ಸತೀಶನ್, “ಯುಜಿಸಿ ತನ್ನ ಸಾಂವಿಧಾನಿಕ ವ್ಯಾಪ್ತಿಯೊಳಗೆ ಕಾರ್ಯನಿರ್ವಹಿಸಬೇಕು” ಎಂದು ಹೇಳಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉನ್ನತ ಶಿಕ್ಷಣ ಸಚಿವೆ ಆರ್. ಬಿಂದು ಅವರು “ಕರಡು ನಿಯಮಗಳು ಸಾಂವಿಧಾನಿಕ ನಿಬಂಧನೆಗಳನ್ನು ಉಲ್ಲಂಘಿಸುವುದಲ್ಲದೆ, ರಾಜ್ಯ ವಿಶ್ವವಿದ್ಯಾಲಯಗಳಲ್ಲಿ ಶೈಕ್ಷಣಿಕ ಗುಣಮಟ್ಟವನ್ನು ದುರ್ಬಲಗೊಳಿಸುವ ಅಪಾಯವನ್ನು ಸೂಚಿಸುತ್ತಿವೆ” ಎಂದು ತಿಳಿಸಿದ್ದಾರೆ.

ತೆಲಂಗಾಣ ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಮಾತನಾಡಿ, “ಯುಜಿಸಿ ಕರಡು ನಿಯಮಗಳು ಜಾರಿಯಾದರೆ, ರಾಜ್ಯಗಳನ್ನು ತಮ್ಮದೇ ವಿಶ್ವವಿದ್ಯಾಲಯಗಳಲ್ಲಿ ಕೇವಲ ವೀಕ್ಷಕರಾಗಿ ಮಾತ್ರ ಉಳಿಯಲಿವೆ” ಎಂದು ಎಚ್ಚರಿಸಿದ್ದಾರೆ.

ಕೇಂದ್ರ ಸರ್ಕಾರ ಮತ್ತು ಯುಜಿಸಿಯ ಕರಡು ನಿಯಮಗಳ ವಿರುದ್ಧ ಇದೇ ರೀತಿಯ ಅಭಿಪ್ರಾಯಗಳನ್ನು ಕರ್ನಾಟಕದ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ಮತ್ತು ತಮಿಳುನಾಡಿ ಉನ್ನತ ಶಿಕ್ಷಣ ಸಚಿವ ಗೋವಿ ಚೆಝಿಯಾನ್ ವ್ಯಕ್ತಪಡಿಸಿದ್ದಾರೆ.

ಯುಜಿಸಿ ಕರಡು ನಿಯಮಗಳ ವಿರುದ್ದ ಫೆ.5ರಂದು ಬೆಂಗಳೂರಿನಲ್ಲಿ ಮೊದಲ ಉನ್ನತ ಶಿಕ್ಷಣ ಸಚಿವರ ಸಭೆ ನಡೆದಿತ್ತು. ಈ ಸಭೆಯಲ್ಲಿ 15 ಅಂಶಗಳ ನಿರ್ಣಯವನ್ನು ಅಂಗೀಕರಿಸಲಾಗಿದೆ. ಅದೇ ಅಂಶಗಳೊಂದಿಗೆ ಕೇರಳದಲ್ಲಿ ನಡೆದ ಎರಡನೇ ಸಭೆಯಲ್ಲೂ ನಿರ್ಣಯ ಅಂಗೀಕರಿಸಲಾಗಿದೆ.

ಶಿಕ್ಷಣ ಸಂಸ್ಥೆಗಳ ಹೆಸರಿನಿಂದ ಜಾತಿ ಸೂಚಕವನ್ನು ಏಕೆ ತೆಗೆದುಹಾಕಬಾರದು? : ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...