Homeಮುಖಪುಟಉನ್ನತ ಶಿಕ್ಷಣ ಸಚಿವರ ಎರಡನೇ ಸಮಾವೇಶ : ಯುಜಿಸಿ ಕರಡು ನಿಯಮಗಳ ವಿರುದ್ಧ ಜಂಟಿ ನಿರ್ಣಯ

ಉನ್ನತ ಶಿಕ್ಷಣ ಸಚಿವರ ಎರಡನೇ ಸಮಾವೇಶ : ಯುಜಿಸಿ ಕರಡು ನಿಯಮಗಳ ವಿರುದ್ಧ ಜಂಟಿ ನಿರ್ಣಯ

- Advertisement -
- Advertisement -

ಬಿಜೆಪಿಯೇತರ ಆಡಳಿತದ ದಕ್ಷಿಣ ರಾಜ್ಯಗಳ ಸಚಿವರು ಭಾಗವಹಿಸಿದ್ದ ಕೇರಳ ಸರ್ಕಾರ ಪ್ರಾಯೋಜಿತ ‘ಯುಜಿಸಿ ಕರಡು ನಿಯಮಗಳು- 2025’ರ ರಾಷ್ಟ್ರೀಯ ಸಮಾವೇಶದಲ್ಲಿ, ರಾಜ್ಯಗಳ ಅಧಿಕಾರವನ್ನು ಮೊಟಕುಗೊಳಿಸುವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದ ನಿಯಮಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ 15 ಅಂಶಗಳ ನಿರ್ಣಯವನ್ನು ಅಂಗೀಕರಿಸಲಾಗಿದೆ.

ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಯುಜಿಸಿ ಕರಡು ನಿಯಮಗಳು ಉನ್ನತ ಶಿಕ್ಷಣದಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ದುರ್ಬಲಗೊಳಿಸುವ, ಧಾರ್ಮಿಕ ಮತ್ತು ಕೋಮು ಸಿದ್ಧಾಂತಗಳನ್ನು ಉತ್ತೇಜಿಸುವವರ ನಿಯಂತ್ರಣದಲ್ಲಿ ಶಿಕ್ಷಣ ವಲಯವನ್ನು ಇರಿಸುವ ಪ್ರಯತ್ನದ ಭಾಗ” ಎಂದಿದ್ದಾರೆ.

“ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಕಾನೂನು ರಚಿಸುವ ರಾಜ್ಯಗಳ ಅಧಿಕಾರವನ್ನು ಯುಜಿಸಿ ಕರಡು ನಿಯಮಗಳು ಕಿತ್ತುಕೊಳ್ಳಲಿದೆ. ಈ ಮೂಲಕ ಇದು ದೇಶದ ಒಕ್ಕೂಟ ವ್ಯವಸ್ಥೆಯ ಅಡಿಪಾಯವನ್ನೇ ಹಾಳು ಮಾಡಲಿದೆ” ಎಂದು ಹೇಳಿದ್ದಾರೆ.

“ಕೇಂದ್ರ ಸರ್ಕಾರ ಮತ್ತು ಯುಜಿಸಿ ರಾಜ್ಯ ಸರ್ಕಾರಗಳನ್ನು ವಿಶ್ವವಿದ್ಯಾಲಯಗಳ ಆಡಳಿತದಿಂದ ಹೊರಗಿಡಲು ಪ್ರಯತ್ನಿಸುತ್ತಿವೆ. ಹೊಸ ನಿಯಮಗಳು ಜಾರಿಯಾದರೆ, ರಾಜ್ಯ ವಿಧಾನಸಭೆಗಳು ಜಾರಿಗೆ ತಂದ ಕಾನೂನುಗಳಿಂದ ಸ್ಥಾಪಿಸಲಾದ ಮತ್ತು ರಾಜ್ಯಗಳ ಹಣಕಾಸು ಮತ್ತು ಆಡಳಿತ ಸಂಪನ್ಮೂಲಗಳನ್ನು ಬಳಸಿಕೊಂಡು ನಡೆಸುವ ವಿಶ್ವವಿದ್ಯಾಲಯಗಳ ಮೇಲೆ ರಾಜ್ಯಗಳು ನಿಯಂತ್ರಣ ಕಳೆದುಕೊಳ್ಳಲಿವೆ” ಎಂದಿದ್ದಾರೆ.

ಸಮಾವೇಶವ ಆಯೋಜಿಸಿದಕ್ಕೆ ಸರ್ಕಾರವನ್ನು ಶ್ಲಾಘಿಸಿದ ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ ಡಿ ಸತೀಶನ್, “ಯುಜಿಸಿ ತನ್ನ ಸಾಂವಿಧಾನಿಕ ವ್ಯಾಪ್ತಿಯೊಳಗೆ ಕಾರ್ಯನಿರ್ವಹಿಸಬೇಕು” ಎಂದು ಹೇಳಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉನ್ನತ ಶಿಕ್ಷಣ ಸಚಿವೆ ಆರ್. ಬಿಂದು ಅವರು “ಕರಡು ನಿಯಮಗಳು ಸಾಂವಿಧಾನಿಕ ನಿಬಂಧನೆಗಳನ್ನು ಉಲ್ಲಂಘಿಸುವುದಲ್ಲದೆ, ರಾಜ್ಯ ವಿಶ್ವವಿದ್ಯಾಲಯಗಳಲ್ಲಿ ಶೈಕ್ಷಣಿಕ ಗುಣಮಟ್ಟವನ್ನು ದುರ್ಬಲಗೊಳಿಸುವ ಅಪಾಯವನ್ನು ಸೂಚಿಸುತ್ತಿವೆ” ಎಂದು ತಿಳಿಸಿದ್ದಾರೆ.

ತೆಲಂಗಾಣ ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಮಾತನಾಡಿ, “ಯುಜಿಸಿ ಕರಡು ನಿಯಮಗಳು ಜಾರಿಯಾದರೆ, ರಾಜ್ಯಗಳನ್ನು ತಮ್ಮದೇ ವಿಶ್ವವಿದ್ಯಾಲಯಗಳಲ್ಲಿ ಕೇವಲ ವೀಕ್ಷಕರಾಗಿ ಮಾತ್ರ ಉಳಿಯಲಿವೆ” ಎಂದು ಎಚ್ಚರಿಸಿದ್ದಾರೆ.

ಕೇಂದ್ರ ಸರ್ಕಾರ ಮತ್ತು ಯುಜಿಸಿಯ ಕರಡು ನಿಯಮಗಳ ವಿರುದ್ಧ ಇದೇ ರೀತಿಯ ಅಭಿಪ್ರಾಯಗಳನ್ನು ಕರ್ನಾಟಕದ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ಮತ್ತು ತಮಿಳುನಾಡಿ ಉನ್ನತ ಶಿಕ್ಷಣ ಸಚಿವ ಗೋವಿ ಚೆಝಿಯಾನ್ ವ್ಯಕ್ತಪಡಿಸಿದ್ದಾರೆ.

ಯುಜಿಸಿ ಕರಡು ನಿಯಮಗಳ ವಿರುದ್ದ ಫೆ.5ರಂದು ಬೆಂಗಳೂರಿನಲ್ಲಿ ಮೊದಲ ಉನ್ನತ ಶಿಕ್ಷಣ ಸಚಿವರ ಸಭೆ ನಡೆದಿತ್ತು. ಈ ಸಭೆಯಲ್ಲಿ 15 ಅಂಶಗಳ ನಿರ್ಣಯವನ್ನು ಅಂಗೀಕರಿಸಲಾಗಿದೆ. ಅದೇ ಅಂಶಗಳೊಂದಿಗೆ ಕೇರಳದಲ್ಲಿ ನಡೆದ ಎರಡನೇ ಸಭೆಯಲ್ಲೂ ನಿರ್ಣಯ ಅಂಗೀಕರಿಸಲಾಗಿದೆ.

ಶಿಕ್ಷಣ ಸಂಸ್ಥೆಗಳ ಹೆಸರಿನಿಂದ ಜಾತಿ ಸೂಚಕವನ್ನು ಏಕೆ ತೆಗೆದುಹಾಕಬಾರದು? : ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...