Homeಕರ್ನಾಟಕಮಾಧುಸ್ವಾಮಿ ಹೇಳಿಕೆ ವಿರೋಧಿಸಿ ಕುರುಬ ಸಮುದಾಯ ಕರೆಕೊಟ್ಟ ಹುಳಿಯಾರ್‌ ಬಂ‌ದ್‌ಗೆ ವ್ಯಾಪಕ ಬೆಂಬಲ.. ವಿಡಿಯೋ ನೋಡಿ

ಮಾಧುಸ್ವಾಮಿ ಹೇಳಿಕೆ ವಿರೋಧಿಸಿ ಕುರುಬ ಸಮುದಾಯ ಕರೆಕೊಟ್ಟ ಹುಳಿಯಾರ್‌ ಬಂ‌ದ್‌ಗೆ ವ್ಯಾಪಕ ಬೆಂಬಲ.. ವಿಡಿಯೋ ನೋಡಿ

- Advertisement -
- Advertisement -

ಈಶ್ವರಾನಂದಪುರಿ ಸ್ವಾಮಿಗಳ ಬಗ್ಗೆ ತುಚ್ಚವಾಗಿ ಮಾತನಾಡಿರುವ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರನ್ನು ಸಂಪುಟದಿಂದ ವಜಾಮಾಡುವಂತೆ ಒತ್ತಾಯಿಸಿ ಕುರುಬ ಸಮುದಾಯದ ಸಂಘಟನೆಗಳು ಕರೆನೀಡಿರುವ ಚಿಕ್ಕನಾಯನಹಳ್ಳಿಯ ಹುಳಿಯಾರ್ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ಬಂದ್ ಗೆ ಬೆಂಬಲ ನೀಡಿದ್ದಾರೆ.

ಹುಳಿಯಾರಿನ ಹೊಸದುರ್ಗರಸ್ತೆಯಲ್ಲಿರುವ ವೃತ್ತಕ್ಕೆ ಕನಕದಾಸರ ಹೆಸರನ್ನು ಇಡುವ ವಿಚಾರದಲ್ಲಿ ಸಚಿವ ಮಾಧುಸ್ವಾಮಿ ಕುರುಬ ಸಮುದಾಯದ ಸ್ವಾಮೀಜಿಗೆ ಏಕವಚನದಲ್ಲಿ ಮಾತನಾಡಿದ್ದರು. ಕನಕ ವೃತ್ತವೆಂದು ನಾಮಕರಣ ಮಾಡಲು ಸಚಿವರು ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ಆಕ್ರೋಶ ವ್ಯಕ್ತಪಡಿಸಿರುವ ಕುರುಬ ಸಮುದಾಯದ ಸಂಘಟನೆಗಳು ಹಾಲುಮತ ಮಹಾಸಭಾ ನೇತೃತ್ವದಲ್ಲಿ ಹುಳಿಯಾರಿನಲ್ಲಿ ಪ್ರತಿಭಟನೆ ನಡಸಲಾಯಿತು.

ಬಂದ್ ಹಿನ್ನೆಲೆಯಲ್ಲಿ ಬಸ್, ಆಟೋ ಸಂಚಾರ ಸಂಪೂರ್ಣವಾಗಿ ಸ್ಥಗಿತವಾಗಿತ್ತು. ಅಂಗಡಿ ಮುಂಗಟ್ಟುಗಳು ಸಂಪೂರ್ಣವಾಗಿ ಮುಚ್ಚಿದ್ದವು. ಹುಳಿಯಾರಿನ ರಸ್ತೆಗಳು ಜನರ ಓಡಾಟವಿಲ್ಲದೆ ಖಾಲಿ ರಸ್ತೆಗಳು ಕಂಡುಬಂದವು. ಹುಳಿಯಾರು ಹೋಬಳಿ ಕೇಂದ್ರದಲ್ಲಿ ಸಚಿವ ಮಾಧುಸ್ವಾಮಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಚಿವರು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಾವು ಹೋರಾಟವನ್ನು ಮುಂದುವರೆಸುತ್ತೇವೆಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಮಾಜಿ ಶಾಸಕ ಮತ್ತು ಕುರುಬ ಸಮುದಾಯದ ಮುಖಂಡ ಸುರೇಶ್ ಬಾಬು ಮಾತನಾಡಿ, ಸಚಿವರು ಶಾಂತಿಸಭೆ ಕರೆದು ಅಶಾಂತಿ ಸೃಷ್ಟಿಸಿದ್ದಾರೆ. ಕಾನೂನು ಪಾಲಿಸಬೇಕಾದ ಕಾನೂನು ಸಚಿವರೇ ಜನರನ್ನು ಪ್ರಚೋದನೆಗೆ ಒಳಪಡಿಸಿದ್ದಾರೆ. ಸಚಿವರ ಉದ್ದಟತನದ ನಡವಳಿಕೆಯಿಂದ ಇಷ್ಟೆಲ್ಲ ಅನಾಹುತ ನಡೆಯಲು ಕಾರಣ. ಶಾಂತಿಸಭೆಯಲ್ಲಿ ಎಲ್ಲರನ್ನೂ ಸಮಾಧಾನ ಮಾಡಿದ್ದರೆ ಸಮಸ್ಯೆ ಉದ್ಭವಿಸುತ್ತಿರಲಿಲ್ಲ. ಗುರುಗಳು ಮತ್ತು ಜನಪ್ರತಿನಿಧಿಗಳನ್ನು ಕೇವಲವಾಗಿ ಕಂಡ ಕಾರಣ ಬೇಸರ ವ್ಯಕ್ತವಾಗಿದೆ. ಸಚಿವ ಜೆ.ಸಿ.ಮಾಧುಸ್ವಾಮಿ ಉದ್ಧಟತನದಿಂದ ಮುಖ್ಯಮಂತ್ರಿಗಳು ಕ್ಷಮೆ ಕೋರುವಂತಾಯಿತು. ನಮಗೆ ಮುಖ್ಯಮಂತ್ರಿಗಳು ಕ್ಷಮೆ ಕೋರುವ ಅವಶ್ಯಕತೆ ಇಲ್ಲ. ಸಚಿವರೇ ಕ್ಷಮೆ ಕೇಳಬೇಕು. ಇಂಥವರು ಸಂಪುಟದಲ್ಲಿದ್ದರೆ ಮುಖ್ಯಮಂತ್ರಿಗಳಿಗೆ ಶೋಭೆ ತರುವುದಿಲ್ಲ. ಹೀಗಾಗಿ ಸಂಪುಟದಿಂದ ತೆಗೆದುಹಾಕಿ ಎಂದು ಆಗ್ರಹಿಸಿದರು.

ಸಮುದಾಯದ ಮುಖಂಡರು ಮಾತನಾಡಿ ಹಿಂದಿನಿಂದಲೂ ಹಿಂದುಳಿದ ವರ್ಗದ ಜನರನ್ನು ಕಂಡರೆ ಅವರಿಗೆ ಆಗುವುದಿಲ್ಲ. ಅದೇ ಉದ್ಧಟ ತನದಿಂದ ನಮ್ಮ ಸಮುದಾಯದ ಸ್ವಾಮಿಗಳ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಕಾನೂನು ಗೌರವಿಸಬೇಕಾದ ಸಚಿವರೇ ಹೀಗೆ ನಡೆದುಕೊಂಡರೆ ಸಾಮಾನ್ಯರ ಪಾಡೇನು? ಸಂವಿಧಾನಬದ್ಧವಾಗಿ ಪ್ರಮಾಣವಚನ ಸ್ವೀಕರಿಸಿ ಈಗ ಒಂದು ಸಮುದಾಯದ ಸಚಿವರಂತೆ ವರ್ತಿಸುತ್ತಿರುವುದು ನಾಚಿಕೆಗೇಡಿನ ಸಂಗತಿ. ಸಮ್ಮ ಸಮುದಾಯದ ಸ್ವಾಮೀಜಿಗೆ ಅವಮಾನ ಮಾಡಿದ್ದು ಕೂಡಲೇ ಅವರನ್ನು ವಜಾ ಮಾಢಬೇಕು. ಮಾಧುಸ್ವಾಮಿ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಬಸವಣ್ಣ ಮತ್ತು ಕನಕದಾಸರು ಅನಿಷ್ಠ ಜಾತಿಪದ್ದತಿಯನ್ನು ಕಿತ್ತೊಗೆಯಬೇಕು. ಅದರಿಂದ ಹೊರಬರಬೇಕು ಎಂದು ಹೇಳಿದ್ದಾರೆ. ಆದರೆ ಸಚಿವರು ಜಾತಿಗೆ ಅಂಟಿಕೊಂಡು ಕುಳಿತಿದ್ದಾರೆ. ಸಚಿವರ ಬದಲಿಗೆ ಮುಖ್ಯಮಂತ್ರಿಗಳು ಕ್ಷಮೆ ಕೋರಿರುವುದು ಶ್ಲಾಘನೀಯ. 2010ರಲ್ಲೇ ಕನಕ ವೃತ್ತ ಎಂದು ಗ್ರಾಮ ಪಂಚಾಯಿತಿ ಸಭೆಯಲ್ಲೇ ತೀರ್ಮಾನ ಮಾಡಲಾಗಿದೆ. ಆದರೆ ಹೀಗೆ ಸಚಿವರು ಅದನ್ನು ಉಲ್ಲಂಘಿಸಲು ಹೊರಟಿರುವು ಕಿಡಿಗೇಡಿತನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಂದ್ ಗೆ 18ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದವು. ಬಂದ್ ಪ್ರತಿಭಟನೆಯಲ್ಲಿ ಕುರುಬರ ಮುಖಂಡರಾದ ಶಿವಮೂರ್ತಿ, ಮಹಾಲಿಂಗಯ್ಯ ಮೊದಲಾದವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...