Homeಮುಖಪುಟವಾಟ್ಸಾಪ್ ಗುಂಪಲ್ಲಿರುವುದು ಅಪರಾಧವಲ್ಲ: ದೆಹಲಿ ಹೈಕೋರ್ಟ್‌ಗೆ ಉಮರ್ ಖಾಲಿದ್

ವಾಟ್ಸಾಪ್ ಗುಂಪಲ್ಲಿರುವುದು ಅಪರಾಧವಲ್ಲ: ದೆಹಲಿ ಹೈಕೋರ್ಟ್‌ಗೆ ಉಮರ್ ಖಾಲಿದ್

- Advertisement -
- Advertisement -

ಕೇವಲ ವಾಟ್ಸಾಪ್ ಗುಂಪಿನಲ್ಲಿ ಇದ್ದೇನೆ ಎಂದ ಮಾತ್ರಕ್ಕೆ ಅದನ್ನು ತಪ್ಪಿನ ಪುರಾವೆಯಾಗಿ ಪರಿಗಣಿಸಬಾರದು ಎಂದು 2020 ರ ದೆಹಲಿ ಗಲಭೆ ಪ್ರಕರಣದಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಗುರುವಾರ ಹೈಕೋರ್ಟ್‌ಗೆ ತಿಳಿಸಿದ್ದಾರೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ವಾಟ್ಸಾಪ್ ಗುಂಪಲ್ಲಿರುವುದು

“ಒಂದು ಗುಂಪಿನಲ್ಲಿದ್ದ ಮಾತ್ರಕ್ಗೆಕ ತಪ್ಪು ಮಾಡಿರುವುದರ ಸೂಚನೆಯಲ್ಲ. ಅಲ್ಲಿ ನಾನು ಏನನ್ನೂ ಹೇಳಿಲ್ಲ. ಯಾರೊ ಒಬ್ಬರು ಪ್ರತಿಭಟನಾ ಸ್ಥಳದ ಬಗ್ಗೆ ಕೇಳಿದಾಗ ನಾನು ಅಲ್ಲಿನ ಲೊಕೇಶನ್ ಮಾತ್ರ ಹಂಚಿಕೊಂಡಿದ್ದೇನೆ. ಯಾರೋ ಒಬ್ಬರು ನನಗೆ ಮೆಸೇಜ್ ಮಾಡಿದರು, ನಾನು ಅದರನ್ನು ತಿಳಿಸಿದೆ. ಅಷ್ಟಕ್ಕೂ ಅದು ತಪ್ಪಲ್ಲ, ನಾನು ಹಾಕಿದ್ದ ಸಂದೇಶದಲ್ಲಿ ಯಾವುದೇ ಅಪರಾಧವಿಲ್ಲ.” ಎಂದು ಉಮರ್ ಖಾಲಿದ್ ಅವರ ಪರ ವಕೀಲರು ಹೇಳಿದ್ದಾರೆ.

ವಾಟ್ಸಾಪ್ ಗುಂಪಿನಲ್ಲಿ ಉಮರ್ ಖಾಲಿದ್ ಇದ್ದಾರೆ ಎಂಬ ಕಾರಣಕ್ಕೆ ಅದನ್ನು ಕ್ರಿಮಿನಲ್ ಪಿತೂರಿಯ ಪುರಾವೆಯಾಗಿ ದೆಹಲಿ ಪೊಲೀಸರು ಉಲ್ಲೇಖಿಸಿದ್ದಕ್ಕೆ ವಕೀಲ ತ್ರಿದೀಪ್ ಪೈಸ್ ನ್ಯಾಯಾಲಯದಲ್ಲಿ ಪ್ರತಿಕ್ರಿಯಿಸುತ್ತಿದ್ದರು. ವಾಟ್ಸಾಪ್ ಗುಂಪಲ್ಲಿರುವುದು

ಪೊಲೀಸರು ಸಲ್ಲಿಸಿದ್ದ ಆರೋಪಪಟ್ಟಿಯಲ್ಲಿ, ಉಮರ್ ಖಾಲಿದ್ ಪ್ರಸ್ತುತ ಸರ್ಕಾರಿ ವಿರೋಧಿಗಳ ಒಕ್ಕೂಟವನ್ನು ಒಟ್ಟುಗೂಡಿಸಿದ್ದು ವಾಟ್ಸಾಪ್‌ನಲ್ಲಿ ದೆಹಲಿಯ ಪ್ರತಿಭಟನೆ ಬೆಂಬಲಿಗರ ಗುಂಪು ರಚನೆಗೆ ಕಾರಣವಾಯಿತು ಎಂದು ಆರೋಪಿಸಿದ್ದರು.

ಅಲ್ಲದೆ, ”ಜೆಎನ್‌ಯು [ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ]ದ ಮುಸ್ಲಿಂ ವಿದ್ಯಾರ್ಥಿಗಳು” ಎಂಬ ವಿದ್ಯಾರ್ಥಿಗಳ ಗುಂಪಿಗೆ ಮತ್ತೊಬ್ಬ ಹೋರಾಟಗಾರ ಶಾರ್ಜೀಲ್ ಇಮಾಮ್ ಸಹಾಯದಿಂದ ಉಮರ್ ಖಾಲಿದ್ ಮಾರ್ಗದರ್ಶನ ನೀಡಿದ ಕಾರಣಕ್ಕೆ ಈ ವಾಟ್ಸಾಪ್ ಗುಂಪನ್ನು ರಚಿಸಲಾಗಿದೆ ಎಂದು ಪೊಲೀಸರು ಆರೋಪಿಸಿದ್ದರು.

ದೆಹಲಿ ಕಾಂಗ್ರೆಸ್‌ನ ಮಾಜಿ ಕೌನ್ಸಿಲರ್ ಇಶ್ರತ್ ಜಹಾನ್ ಮತ್ತು ಹೋರಾಟಗಾರ್ತಿ ದೇವಾಂಗನಾ ಕಲಿತಾ ಅವರಂತಹ ಇತರರು “ನನಗಿಂತ ಹೆಚ್ಚಿನ ಪಾತ್ರಗಳನ್ನು ಹೊಂದಿದ್ದಾರೆ”, ಆದರೆ ಅವರು ಇನ್ನೂ ಜಾಮೀನಿನ ಮೇಲೆ ಹೊರಗಿದ್ದಾರೆ ಎಂದು ಪೈಸ್ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯ ಬೆಂಬಲಿಗರು ಮತ್ತು ಅದನ್ನು ವಿರೋಧಿಸುವವರ ನಡುವೆ 2020 ರ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 2020 ರಲ್ಲಿ ಖಾಲಿದ್ ಅವರನ್ನು ಬಂಧಿಸಲಾಯಿತು. ಈ ಗಲಭೆಯಲ್ಲಿ 53 ಜನರು ಸಾವನ್ನಪ್ಪಿದರು. ಕೊಲ್ಲಲ್ಪಟ್ಟವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದಾರೆ.

ಉಮರ್ ಖಾಲಿದ್ ಮತ್ತು ಇತರ ಹಲವಾರು ಹೋರಾಟಗಾರರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ, ಭಾರತೀಯ ದಂಡ ಸಂಹಿತೆ, ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಅಪರಾಧಗಳಿಗಾಗಿ ಪ್ರಕರಣ ದಾಖಲಿಸಲಾಗಿದೆ.

ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರವು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಮಸಿ ಬಳಿಯುವ ದೊಡ್ಡ ಪಿತೂರಿಯ ಭಾಗವಾಗಿ ನಡೆಸಲಾಗಿದ್ದು, ತಿದ್ದುಪಡಿ ಮಾಡಿದ ಪೌರತ್ವ ಕಾಯ್ದೆಯ ವಿರುದ್ಧ ಪ್ರತಿಭಟನೆಗಳನ್ನು ಆಯೋಜಿಸಿದವರು ಹಾಗೂ ಉಮರ್‌ ಖಾಲಿದ್ ಸೇರಿದಂತೆ ಇತರರು ಇದನ್ನು ಯೋಜಿಸಿದ್ದರು ಎಂದು ದೆಹಲಿ ಪೊಲೀಸರು ಹೇಳಿಕೊಂಡಿದ್ದಾರೆ.

ಪ್ರತಿಭಟನಾಕಾರರು ಪ್ರತ್ಯೇಕತಾವಾದಿ ಉದ್ದೇಶಗಳನ್ನು ಹೊಂದಿದ್ದು, ಸರ್ಕಾರವನ್ನು ಅಸ್ಥಿರಗೊಳಿಸಲು “ನಾಗರಿಕ ಅಸಹಕಾರದ ಮುಖಭಾವ” ವನ್ನು ಬಳಸುತ್ತಿದ್ದರು ಎಂದು ಪೊಲೀಸರು ಹೇಳಿಕೊಂಡಿದ್ದಾರೆ.

ನವೆಂಬರ್ 2020 ರಲ್ಲಿ ಸಲ್ಲಿಸಲಾದ 200 ಪುಟಗಳ ಆರೋಪಪಟ್ಟಿಯಲ್ಲಿ, ಉಮರ್ ಖಾಲಿದ್ ದೆಹಲಿ ಗಲಭೆಯನ್ನು “ಕೂತಲ್ಲಿಂದಲೆ ನಿಯಂತ್ರಿಸಿದರು” ಎಂದು ಪೊಲೀಸರು ನಿರ್ದಿಷ್ಟವಾಗಿ ಆರೋಪಿಸಿದ್ದಾರೆ. ಈ ಗಲಭೆ ವೇಳೆ ಉಮರ್ ಖಾಲಿದ್ ಅರು “ರಹಸ್ಯ ಸಭೆ” ನಡೆಸಿದ್ದಾರೆ, ಅಲ್ಲಿ ಅವರು ಗಲಭೆ ನಡೆಸಲು ವಿವರಗಳನ್ನು ವಿವರಿಸಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ. ಮಾರ್ಚ್ 4 ರಂದು ಹೈಕೋರ್ಟ್ ಈ ಪ್ರಕರಣದ ಮುಂದಿನ ವಿಚಾರಣೆ ನಡೆಸಲಿದೆ.

ಇದನ್ನೂಓದಿ:  ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಪೋಸ್ಟರ್‌ಗಳ ಪ್ರದರ್ಶಿಸಿ ವಿಜಯೋತ್ಸವ ಆಚರಿಸಿದ ಬಿಜೆಪಿ

ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಪೋಸ್ಟರ್‌ಗಳ ಪ್ರದರ್ಶಿಸಿ ವಿಜಯೋತ್ಸವ ಆಚರಿಸಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಭರವಸೆಯನ್ನು ಒಳಮೀಸಲಾತಿ ಹೋರಾಟಗಾರರು ಹೊಂದಿದ್ದರು.  ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಎರಡು ವರ್ಷಗಳಿಂದ ನಿರಂತರವಾಗಿ...

ನೇಪಾಳದ ನೂತನ ಪ್ರಧಾನಿಯಾಗಿ 35ವರ್ಷದ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ

ಕಠ್ಮಂಡು: 'ಬಾಲೆನ್' ಎಂದು ಪ್ರೀತಿಯಿಂದ ಕರೆಯಲ್ಪಡುವ ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಹಿಮಾಲಯನ್ ರಾಷ್ಟ್ರದಲ್ಲಿ ಉನ್ನತ ಕಾರ್ಯಕಾರಿ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗಿ ಬಾಲೆನ್...

ಶಿವನ ಅವತಾರ ಎಂದು ಹೇಳಿಕೊಳ್ಳುತ್ತಿದ್ದ ಋುಷಿಕೇಶ್ ವೈದ್ಯ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ: ಎಫ್‌ಐಆರ್ ನಂತರ ದೇವಮಾನವ ಪರಾರಿ

ವಸಾಯಿ: ಶಿವನ ಅವತಾರ ಎಂದು ಹೇಳಿಕೊಂಡು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಋಷಿಕೇಶ್ ವೈದ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ವಸಾಯಿ-ವಿರಾರ್ ಪ್ರದೇಶ...

ಜ್ಯೋತಿಷಿ ಅಶೋಕ್ ಖರತ್ ಲೈಂಗಿಕ ದೌರ್ಜನ್ಯ; ಸಂತ್ರಸ್ತರ ವಿಡಿಯೋ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್: ದೇವೇಂದ್ರ ಫಡ್ನವೀಸ್

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರಿಂದ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯರ ಅಶ್ಲೀಲ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ...

ಕ್ಷಿಪಣಿಗಳ ಮೇಲೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಧನ್ಯವಾದ ಸಂದೇಶ ಬರೆದ ಇರಾನ್

ಯುನೈಟೆಡ್ ಸ್ಟೇಟ್ಸ್-ಇಸ್ರೇಲ್ ವಿರುದ್ಧದ ಯುದ್ಧದ ಮಧ್ಯೆ ಇರಾನ್‌ನೊಂದಿಗೆ ಒಗ್ಗಟ್ಟನ್ನು ತೋರಿಸಿದ ರಾಷ್ಟ್ರಗಳಿಗೆ ಇರಾನ್‌ ತನ್ನ ಕ್ಷಿಪಣಿಗಳು ಕೃತಜ್ಞತಾ ಸಂದೇಶ ಬರೆದಿದೆ. ಕ್ಷಿಪಣಿಗಳ ಮೇಲೆ ಬರೆಯಲಾದ ಸಂದೇಶಗಲ್ಲಿ "ಭಾರತದ ಜನರಿಗೆ ಧನ್ಯವಾದಗಳು" ಎಂದು ಕಂಡುಬಂದಿದೆ. ಜೊತೆಗೆ,...

ಬಿಜೆಪಿಗೆ ಉಳಿದೆಲ್ಲಾ ಪಕ್ಷಗಳಿಗಿಂತ 10 ಪಟ್ಟು ಹೆಚ್ಚು ದೇಣಿಗೆ: ವರದಿ

2024–25ರ ಆರ್ಥಿಕ ವರ್ಷದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ( ಬಿಜೆಪಿ ) ಇತರ ಎಲ್ಲಾ ರಾಷ್ಟ್ರೀಯ ಪಕ್ಷಗಳು ಒಟ್ಟು ಸೇರಿಸಿ ಪಡೆದ ದೇಣಿಗೆಗಿಂತ ಸುಮಾರು ಹತ್ತು ಪಟ್ಟು ಹೆಚ್ಚು ದೇಣಿಗೆ ಪಡೆದಿದೆ...

ವಿಶಾಖಪಟ್ಟಣ| ಕುಡಿದ ಮತ್ತಿನಲ್ಲಿ ಎಪಿಎಸ್‌ಆರ್‌ಟಿಸಿ ಬಸ್‌ ಅಪಹರಿಸಿದ ವ್ಯಕ್ತಿ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಎಪಿಎಸ್‌ಆರ್‌ಟಿಸಿ ಬಸ್ಸನ್ನು ಅಪಹರಿಸಿ ಸುಮಾರು ಒಂದು ಕಿಲೋಮೀಟರ್ ಅಜಾಗರೂಕತೆಯಿಂದ ಚಲಾಯಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆಘಾತಕಾರಿ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಪ್ರತ್ಯಕ್ಷ್ಯದರ್ಶಿಗಳ ಪ್ರಕಾರ, ಮಾರ್ಚ್ 26 ರ ಗುರುವಾರ ಬಸ್...

ಕರ್ನಾಟಕ ವಿಧಾನಸಭೆಯಲ್ಲಿ ಐಪಿಎಲ್ ಟಿಕೆಟ್ ವಿವಾದ; ಶಾಸಕರನ್ನು ಟೀಕಿಸಿದ ತೇಜಸ್ವಿ ಸೂರ್ಯ ವಿರುದ್ಧ ಡಿಕೆಶಿ ವಾಗ್ದಾಳಿ

ಶಾಸಕರಿಗೆ ಐಪಿಎಲ್ 2026 ಟಿಕೆಟ್ ಹಂಚಿಕೆ ವಿವಾದದ ನಡುವೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ತೇಜಸ್ವಿ ಸೂರ್ಯ ವಿರುದ್ಧ ಕಿಡಿಕಾರಿದ್ದಾರೆ  ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳಿಗೆ ವಿಐಪಿ ಟಿಕೆಟ್‌ಗಳಿಗೆ...

ವಿಚಾರಣೆಯ ನಂತರವೂ 8 ಲಕ್ಷ ಮತದಾರರ ಹೆಸರು ಅಳಿಸಲಾಗಿದೆ; ಬಂಗಾಳದಲ್ಲಿ ಎನ್.ಆರ್.ಸಿ ಇಲ್ಲ: ಮಮತಾ ಬ್ಯಾನರ್ಜಿ

ಮೊದಲ ಪೂರಕ ಮತದಾರರ ಪಟ್ಟಿ ಪ್ರಕಟವಾದ ನಂತರ ಎಂಟು ಲಕ್ಷ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಇದು ರಾಜ್ಯದಲ್ಲಿ ಚುನಾವಣಾ ಪಾರದರ್ಶಕತೆಯ ಬಗ್ಗೆ ಗಂಭೀರ...

ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ

ಜಾಗತಿಕ ತೈಲ ಬೆಲೆಗಳ ಏರಿಕೆಯ ಪರಿಣಾಮವನ್ನು ತಗ್ಗಿಸುವ ಪ್ರಯತ್ನದಲ್ಲಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 10 ರೂ.ಗಳಷ್ಟು ಕಡಿಮೆ ಮಾಡಿದೆ, ಇದರಿಂದಾಗಿ ಪೆಟ್ರೋಲ್‌ಗೆ 3 ರೂ.ಗಳಷ್ಟು...