Homeಮುಖಪುಟವಾಟ್ಸಾಪ್ ಗುಂಪಲ್ಲಿರುವುದು ಅಪರಾಧವಲ್ಲ: ದೆಹಲಿ ಹೈಕೋರ್ಟ್‌ಗೆ ಉಮರ್ ಖಾಲಿದ್

ವಾಟ್ಸಾಪ್ ಗುಂಪಲ್ಲಿರುವುದು ಅಪರಾಧವಲ್ಲ: ದೆಹಲಿ ಹೈಕೋರ್ಟ್‌ಗೆ ಉಮರ್ ಖಾಲಿದ್

- Advertisement -
- Advertisement -

ಕೇವಲ ವಾಟ್ಸಾಪ್ ಗುಂಪಿನಲ್ಲಿ ಇದ್ದೇನೆ ಎಂದ ಮಾತ್ರಕ್ಕೆ ಅದನ್ನು ತಪ್ಪಿನ ಪುರಾವೆಯಾಗಿ ಪರಿಗಣಿಸಬಾರದು ಎಂದು 2020 ರ ದೆಹಲಿ ಗಲಭೆ ಪ್ರಕರಣದಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಗುರುವಾರ ಹೈಕೋರ್ಟ್‌ಗೆ ತಿಳಿಸಿದ್ದಾರೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ವಾಟ್ಸಾಪ್ ಗುಂಪಲ್ಲಿರುವುದು

“ಒಂದು ಗುಂಪಿನಲ್ಲಿದ್ದ ಮಾತ್ರಕ್ಗೆಕ ತಪ್ಪು ಮಾಡಿರುವುದರ ಸೂಚನೆಯಲ್ಲ. ಅಲ್ಲಿ ನಾನು ಏನನ್ನೂ ಹೇಳಿಲ್ಲ. ಯಾರೊ ಒಬ್ಬರು ಪ್ರತಿಭಟನಾ ಸ್ಥಳದ ಬಗ್ಗೆ ಕೇಳಿದಾಗ ನಾನು ಅಲ್ಲಿನ ಲೊಕೇಶನ್ ಮಾತ್ರ ಹಂಚಿಕೊಂಡಿದ್ದೇನೆ. ಯಾರೋ ಒಬ್ಬರು ನನಗೆ ಮೆಸೇಜ್ ಮಾಡಿದರು, ನಾನು ಅದರನ್ನು ತಿಳಿಸಿದೆ. ಅಷ್ಟಕ್ಕೂ ಅದು ತಪ್ಪಲ್ಲ, ನಾನು ಹಾಕಿದ್ದ ಸಂದೇಶದಲ್ಲಿ ಯಾವುದೇ ಅಪರಾಧವಿಲ್ಲ.” ಎಂದು ಉಮರ್ ಖಾಲಿದ್ ಅವರ ಪರ ವಕೀಲರು ಹೇಳಿದ್ದಾರೆ.

ವಾಟ್ಸಾಪ್ ಗುಂಪಿನಲ್ಲಿ ಉಮರ್ ಖಾಲಿದ್ ಇದ್ದಾರೆ ಎಂಬ ಕಾರಣಕ್ಕೆ ಅದನ್ನು ಕ್ರಿಮಿನಲ್ ಪಿತೂರಿಯ ಪುರಾವೆಯಾಗಿ ದೆಹಲಿ ಪೊಲೀಸರು ಉಲ್ಲೇಖಿಸಿದ್ದಕ್ಕೆ ವಕೀಲ ತ್ರಿದೀಪ್ ಪೈಸ್ ನ್ಯಾಯಾಲಯದಲ್ಲಿ ಪ್ರತಿಕ್ರಿಯಿಸುತ್ತಿದ್ದರು. ವಾಟ್ಸಾಪ್ ಗುಂಪಲ್ಲಿರುವುದು

ಪೊಲೀಸರು ಸಲ್ಲಿಸಿದ್ದ ಆರೋಪಪಟ್ಟಿಯಲ್ಲಿ, ಉಮರ್ ಖಾಲಿದ್ ಪ್ರಸ್ತುತ ಸರ್ಕಾರಿ ವಿರೋಧಿಗಳ ಒಕ್ಕೂಟವನ್ನು ಒಟ್ಟುಗೂಡಿಸಿದ್ದು ವಾಟ್ಸಾಪ್‌ನಲ್ಲಿ ದೆಹಲಿಯ ಪ್ರತಿಭಟನೆ ಬೆಂಬಲಿಗರ ಗುಂಪು ರಚನೆಗೆ ಕಾರಣವಾಯಿತು ಎಂದು ಆರೋಪಿಸಿದ್ದರು.

ಅಲ್ಲದೆ, ”ಜೆಎನ್‌ಯು [ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ]ದ ಮುಸ್ಲಿಂ ವಿದ್ಯಾರ್ಥಿಗಳು” ಎಂಬ ವಿದ್ಯಾರ್ಥಿಗಳ ಗುಂಪಿಗೆ ಮತ್ತೊಬ್ಬ ಹೋರಾಟಗಾರ ಶಾರ್ಜೀಲ್ ಇಮಾಮ್ ಸಹಾಯದಿಂದ ಉಮರ್ ಖಾಲಿದ್ ಮಾರ್ಗದರ್ಶನ ನೀಡಿದ ಕಾರಣಕ್ಕೆ ಈ ವಾಟ್ಸಾಪ್ ಗುಂಪನ್ನು ರಚಿಸಲಾಗಿದೆ ಎಂದು ಪೊಲೀಸರು ಆರೋಪಿಸಿದ್ದರು.

ದೆಹಲಿ ಕಾಂಗ್ರೆಸ್‌ನ ಮಾಜಿ ಕೌನ್ಸಿಲರ್ ಇಶ್ರತ್ ಜಹಾನ್ ಮತ್ತು ಹೋರಾಟಗಾರ್ತಿ ದೇವಾಂಗನಾ ಕಲಿತಾ ಅವರಂತಹ ಇತರರು “ನನಗಿಂತ ಹೆಚ್ಚಿನ ಪಾತ್ರಗಳನ್ನು ಹೊಂದಿದ್ದಾರೆ”, ಆದರೆ ಅವರು ಇನ್ನೂ ಜಾಮೀನಿನ ಮೇಲೆ ಹೊರಗಿದ್ದಾರೆ ಎಂದು ಪೈಸ್ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯ ಬೆಂಬಲಿಗರು ಮತ್ತು ಅದನ್ನು ವಿರೋಧಿಸುವವರ ನಡುವೆ 2020 ರ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 2020 ರಲ್ಲಿ ಖಾಲಿದ್ ಅವರನ್ನು ಬಂಧಿಸಲಾಯಿತು. ಈ ಗಲಭೆಯಲ್ಲಿ 53 ಜನರು ಸಾವನ್ನಪ್ಪಿದರು. ಕೊಲ್ಲಲ್ಪಟ್ಟವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದಾರೆ.

ಉಮರ್ ಖಾಲಿದ್ ಮತ್ತು ಇತರ ಹಲವಾರು ಹೋರಾಟಗಾರರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ, ಭಾರತೀಯ ದಂಡ ಸಂಹಿತೆ, ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಅಪರಾಧಗಳಿಗಾಗಿ ಪ್ರಕರಣ ದಾಖಲಿಸಲಾಗಿದೆ.

ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರವು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಮಸಿ ಬಳಿಯುವ ದೊಡ್ಡ ಪಿತೂರಿಯ ಭಾಗವಾಗಿ ನಡೆಸಲಾಗಿದ್ದು, ತಿದ್ದುಪಡಿ ಮಾಡಿದ ಪೌರತ್ವ ಕಾಯ್ದೆಯ ವಿರುದ್ಧ ಪ್ರತಿಭಟನೆಗಳನ್ನು ಆಯೋಜಿಸಿದವರು ಹಾಗೂ ಉಮರ್‌ ಖಾಲಿದ್ ಸೇರಿದಂತೆ ಇತರರು ಇದನ್ನು ಯೋಜಿಸಿದ್ದರು ಎಂದು ದೆಹಲಿ ಪೊಲೀಸರು ಹೇಳಿಕೊಂಡಿದ್ದಾರೆ.

ಪ್ರತಿಭಟನಾಕಾರರು ಪ್ರತ್ಯೇಕತಾವಾದಿ ಉದ್ದೇಶಗಳನ್ನು ಹೊಂದಿದ್ದು, ಸರ್ಕಾರವನ್ನು ಅಸ್ಥಿರಗೊಳಿಸಲು “ನಾಗರಿಕ ಅಸಹಕಾರದ ಮುಖಭಾವ” ವನ್ನು ಬಳಸುತ್ತಿದ್ದರು ಎಂದು ಪೊಲೀಸರು ಹೇಳಿಕೊಂಡಿದ್ದಾರೆ.

ನವೆಂಬರ್ 2020 ರಲ್ಲಿ ಸಲ್ಲಿಸಲಾದ 200 ಪುಟಗಳ ಆರೋಪಪಟ್ಟಿಯಲ್ಲಿ, ಉಮರ್ ಖಾಲಿದ್ ದೆಹಲಿ ಗಲಭೆಯನ್ನು “ಕೂತಲ್ಲಿಂದಲೆ ನಿಯಂತ್ರಿಸಿದರು” ಎಂದು ಪೊಲೀಸರು ನಿರ್ದಿಷ್ಟವಾಗಿ ಆರೋಪಿಸಿದ್ದಾರೆ. ಈ ಗಲಭೆ ವೇಳೆ ಉಮರ್ ಖಾಲಿದ್ ಅರು “ರಹಸ್ಯ ಸಭೆ” ನಡೆಸಿದ್ದಾರೆ, ಅಲ್ಲಿ ಅವರು ಗಲಭೆ ನಡೆಸಲು ವಿವರಗಳನ್ನು ವಿವರಿಸಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ. ಮಾರ್ಚ್ 4 ರಂದು ಹೈಕೋರ್ಟ್ ಈ ಪ್ರಕರಣದ ಮುಂದಿನ ವಿಚಾರಣೆ ನಡೆಸಲಿದೆ.

ಇದನ್ನೂಓದಿ:  ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಪೋಸ್ಟರ್‌ಗಳ ಪ್ರದರ್ಶಿಸಿ ವಿಜಯೋತ್ಸವ ಆಚರಿಸಿದ ಬಿಜೆಪಿ

ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಪೋಸ್ಟರ್‌ಗಳ ಪ್ರದರ್ಶಿಸಿ ವಿಜಯೋತ್ಸವ ಆಚರಿಸಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...