Homeಅಂತರಾಷ್ಟ್ರೀಯಮ್ಯಾನ್ಮಾರ್‌ | ಸೈಬರ್ ಸ್ಕ್ಯಾಮ್ ಕಾಲ್ ಸೆಂಟರ್‌ಗಳಿಂದ ಭಾರತೀಯರು ಸೇರಿದಂತೆ ಸಾವಿರಾರು ಜನರ ರಕ್ಷಣೆ

ಮ್ಯಾನ್ಮಾರ್‌ | ಸೈಬರ್ ಸ್ಕ್ಯಾಮ್ ಕಾಲ್ ಸೆಂಟರ್‌ಗಳಿಂದ ಭಾರತೀಯರು ಸೇರಿದಂತೆ ಸಾವಿರಾರು ಜನರ ರಕ್ಷಣೆ

- Advertisement -
- Advertisement -

ಇತ್ತೀಚಿನ ವಾರಗಳಲ್ಲಿ ಮ್ಯಾನ್ಮಾರ್‌ನ ಸೈಬರ್-ಸ್ಕ್ಯಾಮ್ ಕಾಲ್ ಸೆಂಟರ್‌ಗಳಲ್ಲಿ ಕೆಲಸ ಮಾಡುತ್ತಿದ್ದ ಸಾವಿರಾರು ಜನರನ್ನು ರಕ್ಷಿಸಲಾಗಿದೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ. ಇದರಲ್ಲಿ ಹಲವಾರು ಭಾರತೀಯ ನಾಗರಿಕರು ಕೂಡಾ ಇದ್ದರು ಎಂದು ವರದಿ ಹೇಳಿದೆ. ಇಂತಹ ಸೈಬರ್‌ ಸ್ಕ್ಯಾಮ್‌ ಕಾಲ್‌ ಸೆಂಟರ್‌ಗಳ ವಿರುದ್ಧ ಥಾಯ್ಲೆಂಡ್‌ನಲ್ಲಿ ಅಧಿಕಾರಿಗಳು ಕಠಿಣ ಕ್ರಮ ಕೈಗೊಂಡ ನಂತರ ಈ ಬೆಳವಣಿಗೆ ನಡೆದಿದೆ. ಮ್ಯಾನ್ಮಾರ್‌

ರಕ್ಷಿಸಲ್ಪಟ್ಟ ಜನರು ನಿರುದ್ಯೋಗಿಗಳಾಗಿದ್ದು, ಅವರನ್ನು ಕೆಲಸಕ್ಕೆಂದು ಕರೆಸಿ ಸೈಬರ್ ಸ್ಕ್ಯಾಮ್ ಕಾಲ್‌ ಸೆಂಟರ್‌ನಲ್ಲಿ ವಂಚನೆ ನಡೆಸುವ ಕೆಲಸ ಮಾಡುವಂತೆ ಒತ್ತಾಯಿಸಲಾಗುತ್ತಿತ್ತು ಎಂದು ವರದಿಯಾಗಿದೆ. ಇಲ್ಲಿ ಕಾರ್ಮಿಕರನ್ನು ಚಿತ್ರಹಿಂಸೆ ಮಾಡಲಾಗುತ್ತಿತ್ತು ಎಂದು ವರದಿ ಹೇಳಿದೆ. ಪ್ರತಿದಿನ 20 ಗಂಟೆಗಳ ಕಾಲ ಕೆಲಸ ಮಾಡಲು ಒತ್ತಾಯಿಸಲಾಗುತ್ತಿತ್ತು ಮತ್ತು ತಮಗೆ ನೀಡಿದ್ದ ವಂಚನೆಯ ಗುರಿಗಳನ್ನು ಸಾಧಿಸಲು ಸಾಧ್ಯವಾಗದಿದ್ದಾಗ ಥಳಿಸಲಾಗುತ್ತಿತ್ತು ಎಂದು ಸಂತ್ರಸ್ತರು ಎಂದು ಹೇಳಿದ್ದಾರೆ. ಮ್ಯಾನ್ಮಾರ್‌

ಹಗರಣ ನಡೆಸುವ ಈ ರೀತಿಯ ಸೈಬರ್ ಸ್ಕ್ಯಾಮ್‌ ಕಾಲ್‌ ಸೆಂಟರ್‌ಗಳ ವಿರುದ್ಧ ನಡೆಯುತ್ತಿರುವ ಕಾರ್ಯಾಚರಣೆಯ ಭಾಗವಾಗಿ, ಮ್ಯಾನ್ಮಾರ್‌ನ ಮೈವಾಡಿಯಲ್ಲಿರುವ ಕೇಂದ್ರಗಳಿಂದ 140 ಭಾರತೀಯ ನಾಗರಿಕರನ್ನು ರಕ್ಷಿಸಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ಬುಧವಾರ ವರದಿ ಮಾಡಿದೆ. ಭಾರತ ಸರ್ಕಾರವು ಅವರನ್ನು ಸ್ವದೇಶಕ್ಕೆ ಹಿಂದಿರುಗಿಸಲು ಅನುಕೂಲ ಮಾಡಿಕೊಡುತ್ತಿದೆ ಎಂದು ವರದಿ ಹೇಳಿದೆ.

ಫೆಬ್ರವರಿ 19 ರಂದು ಥಾಯ್ಲೆಂಡ್‌ ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ಅವರು ಮ್ಯಾನ್ಮಾರ್‌ನಲ್ಲಿರುವ ಅಕ್ರಮ ಕಾಲ್ ಸೆಂಟರ್‌ಗಳಿಂದ ಸುಮಾರು 7,000 ಜನರನ್ನು ರಕ್ಷಿಸಲಾಗಿದ್ದು, ಅವರನ್ನು ಗಡಿಯಾಚೆಗೆ ಥಾಯ್ಲೆಂಡ್‌ಗೆ ಕರೆತರಲು ಕಾಯುತ್ತಿದ್ದಾರೆ ಎಂದು ಹೇಳಿದ್ದರು.

ಇಂಹತ ಕೇಂದ್ರಗಳಿಂದ ರಕ್ಷಿಸಲ್ಪಟ್ಟ ಸುಮಾರು 10,000 ವಿದೇಶಿಯರನ್ನು ಸ್ವೀಕರಿಸಲು ಸಿದ್ಧತೆ ನಡೆಸುತ್ತಿರುವುದಾಗಿ ಥಾಯ್ಲೆಂಡ್‌ ಪೊಲೀಸರು ತಿಳಿಸಿದ್ದಾರೆ.

ಕಾಂಬೋಡಿಯನ್ ನಗರವಾದ ಪೊಯ್ಪೆಟ್‌ನಲ್ಲಿಯೂ ಕೂಡಾ, ಥಾಯ್ಲೆಂಡ್‌ ಅಧಿಕಾರಿಗಳು ಶಂಕಿತ ಸ್ಕ್ಯಾಮ್ ಕಾಲ್ ಸೆಂಟರ್‌ಗಳಿಗೆ ಗಡಿಯಾಚೆಗಿನ ದೂರಸಂಪರ್ಕ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ ಎಂದು ಕಾಂಬೋಜಾ ನ್ಯೂಸ್ ವರದಿ ಮಾಡಿದೆ. ಥಾಯ್ಲೆಂಡ್‌ನ ಈ ಕ್ರಮವು ಕಾಂಬೋಡಿಯನ್ ಕಾನೂನು ಜಾರಿ ಅಧಿಕಾರಿಗಳೊಂದಿಗೆ ವಿವಾದಕ್ಕೆ ಕಾರಣವಾಯಿತು. ಥೈಲ್ಯಾಂಡ್‌ನ ಈ ಕ್ರಮವು ಸ್ಥಳೀಯ ಅಧಿಕಾರಿಗಳ ಸಹಯೋಗಕ್ಕಿಂತ ಏಕಪಕ್ಷೀಯ ಕ್ರಮವಾಗಿದೆ ಎಂದು ಅವರು ಹೇಳಿದ್ದರು.

22 ವರ್ಷದ ಚೀನೀ ನಟನನ್ನು ಕರೆಯ ಮೂಲಕ ವಂಚಿಸಿ ಅಪಹರಿಸಿದ ನಂತರ ಥಾಯ್ಲೆಂಡ್‌ ಇಂತಹ ಕೇಂದ್ರಗಳ ವಿರುದ್ಧ ಕ್ರಮ ಕೈಗೊಳ್ಳಲು ಪ್ರಾರಂಭಿಸಿತು. ಚಲನಚಿತ್ರ ನಿರ್ಮಾಪಕರೊಂದಿಗೆ ಪಾತ್ರವರ್ಗದ ಸಭೆ ಎಂದು ಭಾವಿಸಿ ಥಾಯ್ಲೆಂಡ್‌ಗೆ ಬಂದ ನಂತರ ಈ ನಟನನ್ನು ಅಪಹರಿಸಲಾಗಿತ್ತು.

ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಸೈಬರ್ ವಂಚನೆಗಳು ತೀವ್ರವಾಗಿ ಹೆಚ್ಚಾಗಲು ಮ್ಯಾನ್ಮಾರ್‌ನಲ್ಲಿರುವಂತಹ ವಂಚನೆ ಜಾಲವು ಕಾರಣವಾಗಿದೆ ಎಂದು ಸ್ಕ್ರಾಲ್ ಡಾಟ್ ಇನ್ ವರದಿ ಮಾಡಿದೆ.

ಗೃಹ ಸಚಿವಾಲಯದ ಅಡಿಯಲ್ಲಿರುವ ಇಂಡಿಯನ್ ಸೈಬರ್ ಕ್ರೈಮ್ ಕೋಆರ್ಡಿನೇಷನ್ ಸೆಂಟರ್ ಪ್ರಕಾರ, ಕಳೆದ ವರ್ಷ ಕೇವಲ ಒಂಬತ್ತು ತಿಂಗಳಲ್ಲಿ ಭಾರತೀಯರು ಸೈಬರ್ ಹಗರಣಗಳ ಕಾರಣಕ್ಕೆ 11,333 ಕೋಟಿ ರೂ. ಅಥವಾ 1.3 ಬಿಲಿಯನ್ ಡಾಲರ್‌ಗಳನ್ನು ಕಳೆದುಕೊಂಡಿದ್ದಾರೆ.

ಮೇ ತಿಂಗಳಲ್ಲಿ, ಭಾರತದ ವಿದೇಶಾಂಗ ಸಚಿವಾಲಯವು ಕಾಂಬೋಡಿಯಾ ಮತ್ತು ಲಾವೋಸ್‌ನ ನಕಲಿ ಉದ್ಯೋಗಾವಕಾಶಗಳ ಬಗ್ಗೆ ಎಚ್ಚರಿಸಿತ್ತು. ಸರ್ಕಾರದಿಂದ ಅನುಮೋದಿಸಲ್ಪಟ್ಟ ಅಧಿಕೃತ ಏಜೆಂಟ್‌ಗಳ ಮೂಲಕ ಮಾತ್ರ ಉದ್ಯೋಗವನ್ನು ಪಡೆಯುವಂತೆ ಕೇಳಿಕೊಂಡಿತ್ತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  121 ಜನರು ಬಲಿಯಾಗಿದ್ದ ಹತ್ರಾಸ್ ಕಾಲ್ತುಳಿತ ಪ್ರಕರಣದಲ್ಲಿ ಭೋಲೆ ಬಾಬಾಗೆ ಕ್ಲೀನ್ ಚಿಟ್ : ವರದಿ 

121 ಜನರು ಬಲಿಯಾಗಿದ್ದ ಹತ್ರಾಸ್ ಕಾಲ್ತುಳಿತ ಪ್ರಕರಣದಲ್ಲಿ ಭೋಲೆ ಬಾಬಾಗೆ ಕ್ಲೀನ್ ಚಿಟ್ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಭರವಸೆಯನ್ನು ಒಳಮೀಸಲಾತಿ ಹೋರಾಟಗಾರರು ಹೊಂದಿದ್ದರು.  ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಎರಡು ವರ್ಷಗಳಿಂದ ನಿರಂತರವಾಗಿ...

ನೇಪಾಳದ ನೂತನ ಪ್ರಧಾನಿಯಾಗಿ 35ವರ್ಷದ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ

ಕಠ್ಮಂಡು: 'ಬಾಲೆನ್' ಎಂದು ಪ್ರೀತಿಯಿಂದ ಕರೆಯಲ್ಪಡುವ ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಹಿಮಾಲಯನ್ ರಾಷ್ಟ್ರದಲ್ಲಿ ಉನ್ನತ ಕಾರ್ಯಕಾರಿ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗಿ ಬಾಲೆನ್...

ಶಿವನ ಅವತಾರ ಎಂದು ಹೇಳಿಕೊಳ್ಳುತ್ತಿದ್ದ ಋುಷಿಕೇಶ್ ವೈದ್ಯ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ: ಎಫ್‌ಐಆರ್ ನಂತರ ದೇವಮಾನವ ಪರಾರಿ

ವಸಾಯಿ: ಶಿವನ ಅವತಾರ ಎಂದು ಹೇಳಿಕೊಂಡು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಋಷಿಕೇಶ್ ವೈದ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ವಸಾಯಿ-ವಿರಾರ್ ಪ್ರದೇಶ...

ಜ್ಯೋತಿಷಿ ಅಶೋಕ್ ಖರತ್ ಲೈಂಗಿಕ ದೌರ್ಜನ್ಯ; ಸಂತ್ರಸ್ತರ ವಿಡಿಯೋ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್: ದೇವೇಂದ್ರ ಫಡ್ನವೀಸ್

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರಿಂದ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯರ ಅಶ್ಲೀಲ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ...

ಕ್ಷಿಪಣಿಗಳ ಮೇಲೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಧನ್ಯವಾದ ಸಂದೇಶ ಬರೆದ ಇರಾನ್

ಯುನೈಟೆಡ್ ಸ್ಟೇಟ್ಸ್-ಇಸ್ರೇಲ್ ವಿರುದ್ಧದ ಯುದ್ಧದ ಮಧ್ಯೆ ಇರಾನ್‌ನೊಂದಿಗೆ ಒಗ್ಗಟ್ಟನ್ನು ತೋರಿಸಿದ ರಾಷ್ಟ್ರಗಳಿಗೆ ಇರಾನ್‌ ತನ್ನ ಕ್ಷಿಪಣಿಗಳು ಕೃತಜ್ಞತಾ ಸಂದೇಶ ಬರೆದಿದೆ. ಕ್ಷಿಪಣಿಗಳ ಮೇಲೆ ಬರೆಯಲಾದ ಸಂದೇಶಗಲ್ಲಿ "ಭಾರತದ ಜನರಿಗೆ ಧನ್ಯವಾದಗಳು" ಎಂದು ಕಂಡುಬಂದಿದೆ. ಜೊತೆಗೆ,...

ಬಿಜೆಪಿಗೆ ಉಳಿದೆಲ್ಲಾ ಪಕ್ಷಗಳಿಗಿಂತ 10 ಪಟ್ಟು ಹೆಚ್ಚು ದೇಣಿಗೆ: ವರದಿ

2024–25ರ ಆರ್ಥಿಕ ವರ್ಷದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ( ಬಿಜೆಪಿ ) ಇತರ ಎಲ್ಲಾ ರಾಷ್ಟ್ರೀಯ ಪಕ್ಷಗಳು ಒಟ್ಟು ಸೇರಿಸಿ ಪಡೆದ ದೇಣಿಗೆಗಿಂತ ಸುಮಾರು ಹತ್ತು ಪಟ್ಟು ಹೆಚ್ಚು ದೇಣಿಗೆ ಪಡೆದಿದೆ...

ವಿಶಾಖಪಟ್ಟಣ| ಕುಡಿದ ಮತ್ತಿನಲ್ಲಿ ಎಪಿಎಸ್‌ಆರ್‌ಟಿಸಿ ಬಸ್‌ ಅಪಹರಿಸಿದ ವ್ಯಕ್ತಿ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಎಪಿಎಸ್‌ಆರ್‌ಟಿಸಿ ಬಸ್ಸನ್ನು ಅಪಹರಿಸಿ ಸುಮಾರು ಒಂದು ಕಿಲೋಮೀಟರ್ ಅಜಾಗರೂಕತೆಯಿಂದ ಚಲಾಯಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆಘಾತಕಾರಿ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಪ್ರತ್ಯಕ್ಷ್ಯದರ್ಶಿಗಳ ಪ್ರಕಾರ, ಮಾರ್ಚ್ 26 ರ ಗುರುವಾರ ಬಸ್...

ಕರ್ನಾಟಕ ವಿಧಾನಸಭೆಯಲ್ಲಿ ಐಪಿಎಲ್ ಟಿಕೆಟ್ ವಿವಾದ; ಶಾಸಕರನ್ನು ಟೀಕಿಸಿದ ತೇಜಸ್ವಿ ಸೂರ್ಯ ವಿರುದ್ಧ ಡಿಕೆಶಿ ವಾಗ್ದಾಳಿ

ಶಾಸಕರಿಗೆ ಐಪಿಎಲ್ 2026 ಟಿಕೆಟ್ ಹಂಚಿಕೆ ವಿವಾದದ ನಡುವೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ತೇಜಸ್ವಿ ಸೂರ್ಯ ವಿರುದ್ಧ ಕಿಡಿಕಾರಿದ್ದಾರೆ  ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳಿಗೆ ವಿಐಪಿ ಟಿಕೆಟ್‌ಗಳಿಗೆ...

ವಿಚಾರಣೆಯ ನಂತರವೂ 8 ಲಕ್ಷ ಮತದಾರರ ಹೆಸರು ಅಳಿಸಲಾಗಿದೆ; ಬಂಗಾಳದಲ್ಲಿ ಎನ್.ಆರ್.ಸಿ ಇಲ್ಲ: ಮಮತಾ ಬ್ಯಾನರ್ಜಿ

ಮೊದಲ ಪೂರಕ ಮತದಾರರ ಪಟ್ಟಿ ಪ್ರಕಟವಾದ ನಂತರ ಎಂಟು ಲಕ್ಷ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಇದು ರಾಜ್ಯದಲ್ಲಿ ಚುನಾವಣಾ ಪಾರದರ್ಶಕತೆಯ ಬಗ್ಗೆ ಗಂಭೀರ...

ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ

ಜಾಗತಿಕ ತೈಲ ಬೆಲೆಗಳ ಏರಿಕೆಯ ಪರಿಣಾಮವನ್ನು ತಗ್ಗಿಸುವ ಪ್ರಯತ್ನದಲ್ಲಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 10 ರೂ.ಗಳಷ್ಟು ಕಡಿಮೆ ಮಾಡಿದೆ, ಇದರಿಂದಾಗಿ ಪೆಟ್ರೋಲ್‌ಗೆ 3 ರೂ.ಗಳಷ್ಟು...