Homeಅಂತರಾಷ್ಟ್ರೀಯಮ್ಯಾನ್ಮಾರ್‌ | ಸೈಬರ್ ಸ್ಕ್ಯಾಮ್ ಕಾಲ್ ಸೆಂಟರ್‌ಗಳಿಂದ ಭಾರತೀಯರು ಸೇರಿದಂತೆ ಸಾವಿರಾರು ಜನರ ರಕ್ಷಣೆ

ಮ್ಯಾನ್ಮಾರ್‌ | ಸೈಬರ್ ಸ್ಕ್ಯಾಮ್ ಕಾಲ್ ಸೆಂಟರ್‌ಗಳಿಂದ ಭಾರತೀಯರು ಸೇರಿದಂತೆ ಸಾವಿರಾರು ಜನರ ರಕ್ಷಣೆ

- Advertisement -
- Advertisement -

ಇತ್ತೀಚಿನ ವಾರಗಳಲ್ಲಿ ಮ್ಯಾನ್ಮಾರ್‌ನ ಸೈಬರ್-ಸ್ಕ್ಯಾಮ್ ಕಾಲ್ ಸೆಂಟರ್‌ಗಳಲ್ಲಿ ಕೆಲಸ ಮಾಡುತ್ತಿದ್ದ ಸಾವಿರಾರು ಜನರನ್ನು ರಕ್ಷಿಸಲಾಗಿದೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ. ಇದರಲ್ಲಿ ಹಲವಾರು ಭಾರತೀಯ ನಾಗರಿಕರು ಕೂಡಾ ಇದ್ದರು ಎಂದು ವರದಿ ಹೇಳಿದೆ. ಇಂತಹ ಸೈಬರ್‌ ಸ್ಕ್ಯಾಮ್‌ ಕಾಲ್‌ ಸೆಂಟರ್‌ಗಳ ವಿರುದ್ಧ ಥಾಯ್ಲೆಂಡ್‌ನಲ್ಲಿ ಅಧಿಕಾರಿಗಳು ಕಠಿಣ ಕ್ರಮ ಕೈಗೊಂಡ ನಂತರ ಈ ಬೆಳವಣಿಗೆ ನಡೆದಿದೆ. ಮ್ಯಾನ್ಮಾರ್‌

ರಕ್ಷಿಸಲ್ಪಟ್ಟ ಜನರು ನಿರುದ್ಯೋಗಿಗಳಾಗಿದ್ದು, ಅವರನ್ನು ಕೆಲಸಕ್ಕೆಂದು ಕರೆಸಿ ಸೈಬರ್ ಸ್ಕ್ಯಾಮ್ ಕಾಲ್‌ ಸೆಂಟರ್‌ನಲ್ಲಿ ವಂಚನೆ ನಡೆಸುವ ಕೆಲಸ ಮಾಡುವಂತೆ ಒತ್ತಾಯಿಸಲಾಗುತ್ತಿತ್ತು ಎಂದು ವರದಿಯಾಗಿದೆ. ಇಲ್ಲಿ ಕಾರ್ಮಿಕರನ್ನು ಚಿತ್ರಹಿಂಸೆ ಮಾಡಲಾಗುತ್ತಿತ್ತು ಎಂದು ವರದಿ ಹೇಳಿದೆ. ಪ್ರತಿದಿನ 20 ಗಂಟೆಗಳ ಕಾಲ ಕೆಲಸ ಮಾಡಲು ಒತ್ತಾಯಿಸಲಾಗುತ್ತಿತ್ತು ಮತ್ತು ತಮಗೆ ನೀಡಿದ್ದ ವಂಚನೆಯ ಗುರಿಗಳನ್ನು ಸಾಧಿಸಲು ಸಾಧ್ಯವಾಗದಿದ್ದಾಗ ಥಳಿಸಲಾಗುತ್ತಿತ್ತು ಎಂದು ಸಂತ್ರಸ್ತರು ಎಂದು ಹೇಳಿದ್ದಾರೆ. ಮ್ಯಾನ್ಮಾರ್‌

ಹಗರಣ ನಡೆಸುವ ಈ ರೀತಿಯ ಸೈಬರ್ ಸ್ಕ್ಯಾಮ್‌ ಕಾಲ್‌ ಸೆಂಟರ್‌ಗಳ ವಿರುದ್ಧ ನಡೆಯುತ್ತಿರುವ ಕಾರ್ಯಾಚರಣೆಯ ಭಾಗವಾಗಿ, ಮ್ಯಾನ್ಮಾರ್‌ನ ಮೈವಾಡಿಯಲ್ಲಿರುವ ಕೇಂದ್ರಗಳಿಂದ 140 ಭಾರತೀಯ ನಾಗರಿಕರನ್ನು ರಕ್ಷಿಸಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ಬುಧವಾರ ವರದಿ ಮಾಡಿದೆ. ಭಾರತ ಸರ್ಕಾರವು ಅವರನ್ನು ಸ್ವದೇಶಕ್ಕೆ ಹಿಂದಿರುಗಿಸಲು ಅನುಕೂಲ ಮಾಡಿಕೊಡುತ್ತಿದೆ ಎಂದು ವರದಿ ಹೇಳಿದೆ.

ಫೆಬ್ರವರಿ 19 ರಂದು ಥಾಯ್ಲೆಂಡ್‌ ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ಅವರು ಮ್ಯಾನ್ಮಾರ್‌ನಲ್ಲಿರುವ ಅಕ್ರಮ ಕಾಲ್ ಸೆಂಟರ್‌ಗಳಿಂದ ಸುಮಾರು 7,000 ಜನರನ್ನು ರಕ್ಷಿಸಲಾಗಿದ್ದು, ಅವರನ್ನು ಗಡಿಯಾಚೆಗೆ ಥಾಯ್ಲೆಂಡ್‌ಗೆ ಕರೆತರಲು ಕಾಯುತ್ತಿದ್ದಾರೆ ಎಂದು ಹೇಳಿದ್ದರು.

ಇಂಹತ ಕೇಂದ್ರಗಳಿಂದ ರಕ್ಷಿಸಲ್ಪಟ್ಟ ಸುಮಾರು 10,000 ವಿದೇಶಿಯರನ್ನು ಸ್ವೀಕರಿಸಲು ಸಿದ್ಧತೆ ನಡೆಸುತ್ತಿರುವುದಾಗಿ ಥಾಯ್ಲೆಂಡ್‌ ಪೊಲೀಸರು ತಿಳಿಸಿದ್ದಾರೆ.

ಕಾಂಬೋಡಿಯನ್ ನಗರವಾದ ಪೊಯ್ಪೆಟ್‌ನಲ್ಲಿಯೂ ಕೂಡಾ, ಥಾಯ್ಲೆಂಡ್‌ ಅಧಿಕಾರಿಗಳು ಶಂಕಿತ ಸ್ಕ್ಯಾಮ್ ಕಾಲ್ ಸೆಂಟರ್‌ಗಳಿಗೆ ಗಡಿಯಾಚೆಗಿನ ದೂರಸಂಪರ್ಕ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ ಎಂದು ಕಾಂಬೋಜಾ ನ್ಯೂಸ್ ವರದಿ ಮಾಡಿದೆ. ಥಾಯ್ಲೆಂಡ್‌ನ ಈ ಕ್ರಮವು ಕಾಂಬೋಡಿಯನ್ ಕಾನೂನು ಜಾರಿ ಅಧಿಕಾರಿಗಳೊಂದಿಗೆ ವಿವಾದಕ್ಕೆ ಕಾರಣವಾಯಿತು. ಥೈಲ್ಯಾಂಡ್‌ನ ಈ ಕ್ರಮವು ಸ್ಥಳೀಯ ಅಧಿಕಾರಿಗಳ ಸಹಯೋಗಕ್ಕಿಂತ ಏಕಪಕ್ಷೀಯ ಕ್ರಮವಾಗಿದೆ ಎಂದು ಅವರು ಹೇಳಿದ್ದರು.

22 ವರ್ಷದ ಚೀನೀ ನಟನನ್ನು ಕರೆಯ ಮೂಲಕ ವಂಚಿಸಿ ಅಪಹರಿಸಿದ ನಂತರ ಥಾಯ್ಲೆಂಡ್‌ ಇಂತಹ ಕೇಂದ್ರಗಳ ವಿರುದ್ಧ ಕ್ರಮ ಕೈಗೊಳ್ಳಲು ಪ್ರಾರಂಭಿಸಿತು. ಚಲನಚಿತ್ರ ನಿರ್ಮಾಪಕರೊಂದಿಗೆ ಪಾತ್ರವರ್ಗದ ಸಭೆ ಎಂದು ಭಾವಿಸಿ ಥಾಯ್ಲೆಂಡ್‌ಗೆ ಬಂದ ನಂತರ ಈ ನಟನನ್ನು ಅಪಹರಿಸಲಾಗಿತ್ತು.

ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಸೈಬರ್ ವಂಚನೆಗಳು ತೀವ್ರವಾಗಿ ಹೆಚ್ಚಾಗಲು ಮ್ಯಾನ್ಮಾರ್‌ನಲ್ಲಿರುವಂತಹ ವಂಚನೆ ಜಾಲವು ಕಾರಣವಾಗಿದೆ ಎಂದು ಸ್ಕ್ರಾಲ್ ಡಾಟ್ ಇನ್ ವರದಿ ಮಾಡಿದೆ.

ಗೃಹ ಸಚಿವಾಲಯದ ಅಡಿಯಲ್ಲಿರುವ ಇಂಡಿಯನ್ ಸೈಬರ್ ಕ್ರೈಮ್ ಕೋಆರ್ಡಿನೇಷನ್ ಸೆಂಟರ್ ಪ್ರಕಾರ, ಕಳೆದ ವರ್ಷ ಕೇವಲ ಒಂಬತ್ತು ತಿಂಗಳಲ್ಲಿ ಭಾರತೀಯರು ಸೈಬರ್ ಹಗರಣಗಳ ಕಾರಣಕ್ಕೆ 11,333 ಕೋಟಿ ರೂ. ಅಥವಾ 1.3 ಬಿಲಿಯನ್ ಡಾಲರ್‌ಗಳನ್ನು ಕಳೆದುಕೊಂಡಿದ್ದಾರೆ.

ಮೇ ತಿಂಗಳಲ್ಲಿ, ಭಾರತದ ವಿದೇಶಾಂಗ ಸಚಿವಾಲಯವು ಕಾಂಬೋಡಿಯಾ ಮತ್ತು ಲಾವೋಸ್‌ನ ನಕಲಿ ಉದ್ಯೋಗಾವಕಾಶಗಳ ಬಗ್ಗೆ ಎಚ್ಚರಿಸಿತ್ತು. ಸರ್ಕಾರದಿಂದ ಅನುಮೋದಿಸಲ್ಪಟ್ಟ ಅಧಿಕೃತ ಏಜೆಂಟ್‌ಗಳ ಮೂಲಕ ಮಾತ್ರ ಉದ್ಯೋಗವನ್ನು ಪಡೆಯುವಂತೆ ಕೇಳಿಕೊಂಡಿತ್ತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  121 ಜನರು ಬಲಿಯಾಗಿದ್ದ ಹತ್ರಾಸ್ ಕಾಲ್ತುಳಿತ ಪ್ರಕರಣದಲ್ಲಿ ಭೋಲೆ ಬಾಬಾಗೆ ಕ್ಲೀನ್ ಚಿಟ್ : ವರದಿ 

121 ಜನರು ಬಲಿಯಾಗಿದ್ದ ಹತ್ರಾಸ್ ಕಾಲ್ತುಳಿತ ಪ್ರಕರಣದಲ್ಲಿ ಭೋಲೆ ಬಾಬಾಗೆ ಕ್ಲೀನ್ ಚಿಟ್ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...