Homeಮುಖಪುಟರಾಜಸ್ಥಾನ | ಮದುವೆಯ ದಿನವೆ ಹಣದೊಂದಿಗೆ ನಾಪತ್ತೆಯಾದ ಸಾಮೂಹಿಕ ವಿವಾಹದ ಆಯೋಜಕರು!

ರಾಜಸ್ಥಾನ | ಮದುವೆಯ ದಿನವೆ ಹಣದೊಂದಿಗೆ ನಾಪತ್ತೆಯಾದ ಸಾಮೂಹಿಕ ವಿವಾಹದ ಆಯೋಜಕರು!

- Advertisement -
- Advertisement -

ಸಾಮೂಹಿಕ ವಿವಾಹ ಆಯೋಜಿಸಿದ್ದ ಆಯೋಜಕರು ಮದುವೆ ದಿನದಂದೆ ಮದುವೆಯ ಹಣದೊಂದಿಗೆ ಪರಾರಿಯಾಗಿರುವ ಅಘಾತಕಾರಿ ಘಟನೆ ರಾಜಸ್ಥಾನದ ರಾಜ್‌ಕೋಟ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಋಷಿವಂಶಿ ಸಮಾಜದ ಹೆಸರಿನಲ್ಲಿ ಆಯೋಜಿಸಲಾಗಿದ್ದ ಈ ಸಮಾರಂಭದಲ್ಲಿ ಎಲ್ಲಾ ಜಾತಿಗಳ 28 ಯುವತಿಯರ ಸಾಮೂಹಿಕ ವಿವಾಹ ನಡೆಸುವುದಾಗಿ ನಿರ್ಧರಿಸಲಾಗಿತ್ತು ಎಂದು ವರದಿಯಾಗಿದೆ. ರಾಜಸ್ಥಾನ

ಸಮಾರಂಭವು ಸುಗಮವಾಗಿ ನಡೆಯುತ್ತದೆ ಎಂದು ನಂಬಿ ಪ್ರತಿ ಕುಟುಂಬಗಳು ವಧು-ವರರ ಪರವಾಗಿ ಸುಮಾರು 40,000 ರೂ.ಗಳನ್ನು ಪಾವತಿಸಿದ್ದರು. ಆಯೋಜಕರು ನಾಪತ್ತೆಯಾಗಿರುವ ಸುದ್ದಿ ಸಿಗುತ್ತಿದ್ದಂತೆ ಗೊಂದಲವೇರ್ಪಟ್ಟಿದ್ದು, ಈ ವೇಳೆ ರಾಜ್‌ಕೋಟ್ ಪೊಲೀಸರು ಮಧ್ಯಪ್ರವೇಶಿಸಿ, ವಿವಾಹಗಳನ್ನು ಶಾಸ್ತ್ರೋಕ್ತವಾಗಿ ನಡೆಸುವಂತೆ ನೋಡಿಕೊಂಡರು ಎಂದು ವರದಿ ಹೇಳಿದೆ. ರಾಜಸ್ಥಾನ

ರಾಜ್‌ಕೋಟ್‌ನಲ್ಲಿ ಋಷಿವಂಶಿ ಸಮಾಜದ ಹೆಸರಿನಲ್ಲಿ ಆಯೋಜಿಸಲಾಗಿದ್ದ ಎಲ್ಲಾ ಜಾತಿಗಳ 28 ಹುಡುಗಿಯರ ಸಾಮೂಹಿಕ ವಿವಾಹ ಸಮಾರಂಭಕ್ಕೆ ವಧು-ವರದ ಕಡೆಯವರು 15,000 ರೂ.ಗಳಿಂದ 40,000 ರೂ.ಗಳವರೆಗೆ ಹಣವನ್ನು ಪಾವತಿಸಿದ್ದರು. ಮದುವೆಯ ದಿನ ಕುಟುಂಬಗಳು ಮಧಾಪರ್ ಬಳಿಯ ಮದುವೆಯ ಸ್ಥಳಕ್ಕೆ ಆಗಮಿಸಿದಾಗ ಯಾವುದೇ ವ್ಯವಸ್ಥೆಗಳು ಕಂಡುಬಂದಿರಲಿಲ್ಲ.

ರಾಜ್‌ಕೋಟ್ ಮತ್ತು ಹತ್ತಿರದ ಜಿಲ್ಲೆಗಳಿಂದ ಬಂದಿದ್ದ ಕುಟುಂಬಗಳು ತಾವು ಮೋಸ ಹೋಗಿರುವುದನ್ನು ತಿಳಿಯುತ್ತಿದ್ದಂತೆ ಆತಂಕಕ್ಕೆ ಒಳಗಾಗಿ ಕಣ್ಣೀರು ಹಾಕಿದ್ದಾರೆ. ಇದರ ನಂತರ ವಧುಗಳು ಹಿಂತಿರುಗಲು ಸಿದ್ಧರಾಗುತ್ತಿದ್ದಂತೆ, ಪೊಲೀಸರು ಸ್ಥಳಕ್ಕೆ ತಲುಪಿ, ಸ್ಥಗಿತಗೊಂಡ ವಿವಾಹಗಳನ್ನು ನಡೆಸಿಕೊಟ್ಟಿದ್ದಾರೆ.

“ಸಾಮೂಹಿಕ ವಿವಾಹದ ಹೆಸರಿನಲ್ಲಿ ಇದು ಎಂದಿಗೂ ಸಂಭವಿಸಬಾರದು” ಎಂದು ರಾಜ್‌ಕೋಟ್‌ನಿಂದ ತನ್ನ ಮಗನ ಮದುವೆಗೆ ಆಗಮಿಸಿದ ವಿಠ್ಠಲಭಾಯಿ ವಿಷಾದಿಸಿದ್ದಾರೆ. “ಆಯೋಜಕರು ನಮ್ಮಿಂದ 40,000 ರೂ.ಗಳನ್ನು ತೆಗೆದುಕೊಂಡು ಕಣ್ಮರೆಯಾಗಿದ್ದಾರೆ. ಆದರೆ ಯಾವುದೇ ವ್ಯವಸ್ಥೆಗಳು ಕಂಡುಬಂದಿಲ್ಲ. ಇದರಿಂದಾಗಿ ಜನರು ಸಿಲುಕಿಕೊಂಡರು. ವಂಚನೆ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

“ಆಯೋಜಕರು ಎರಡೂ ಕಡೆಯಿಂದ 15,000 ರೂ.ಗಳನ್ನು ತೆಗೆದುಕೊಂಡು, ವರದಕ್ಷಿಣೆಯೊಂದಿಗೆ ಅದ್ಧೂರಿ ವಿವಾಹವನ್ನು ಮಾಡುವುದಾಗಿ ಭರವಸೆ ನೀಡಿದ್ದರು” ಎಂದು ತಮ್ಮ ಸೋದರ ಮಾವನ ಮಗಳ ಮದುವೆಗೆ ಹಾಜರಾದ ಶಿಲ್ಪಾಬೆನ್ ಬಗ್ಥಾರಿಯಾ ಹೇಳಿದ್ದಾರೆ.

“ಬೆಳಿಗ್ಗೆ 6 ಗಂಟೆಯೊಳಗೆ ಎಲ್ಲವೂ ಸಿದ್ಧವಾಗಲಿದೆ ಎಂದು ಅವರು ನಮಗೆ ಹೇಳಿದ್ದರು. ಆದರೆ ನಾವು ಬಂದಾಗ, ಯಾವುದೇ ವ್ಯವಸ್ಥೆಗಳು ಇರಲಿಲ್ಲ, ಸಂಘಟಕರು ಇರಲಿಲ್ಲ ಮತ್ತು ಮದುವೆ ನಡೆಸಬೇಕಾಗಿದ್ದ ಬ್ರಾಹ್ಮಣರು ಸಹ ಹೊರಟು ಹೋಗಿದ್ದರು” ಎಂದು ಅವರು ನಿರಾಶೆಯನ್ನು ವಿವರಿಸಿದ್ದಾರೆ.

ವಿವಾಹ ಸ್ಥಳದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದ್ದಂತೆ ರಾಜ್‌ಕೋಟ್ ಎಸಿಪಿ ರಾಧಿಕಾ ಭರೈ ನೇತೃತ್ವದ ಪೊಲೀಸ್ ಬೆಂಗಾವಲು ಪಡೆ ಪರಿಸ್ಥಿತಿಯನ್ನು ನಿಯಂತ್ರಿಸಲು ಸ್ಥಳಕ್ಕೆ ಧಾವಿಸಿದೆ. ಆ ಹೊತ್ತಿಗೆ, ಕೆಲವು ವರರು ಈಗಾಗಲೇ ಹತಾಶೆಯಿಂದ ಹೊರಟುಹೋಗಿದ್ದರು, ಇದು ತೊಂದರೆಯನ್ನು ಮತ್ತಷ್ಟು ಹೆಚ್ಚಿಸಿತ್ತು.

ನಂತರ, ಪೊಲೀಸರು ಪರಿಸ್ಥಿತಿಯನ್ನು ಕೈಗೆತ್ತಿಕೊಂಡು ಮದುವೆಗಳು ನಡೆಯುವಂತೆ ನೋಡಿಕೊಳ್ಳಲು ಮುಂದಾದರು. ಈ ವೇಳೆ ಅವರು ಹೊರಟುಹೋದ ವರರನ್ನು ಸಂಪರ್ಕಿಸಿ, ಮದುವೆ ನಡೆಸುವುದಾಗಿ ಮತ್ತು ಹಿಂತಿರುಗುವಂತೆ ಒತ್ತಾಯಿಸಿದ್ದಾರೆ. “ಆಯೋಜಕರು ಕಣ್ಮರೆಯಾಗಿರುವುದರಿಂದ, ಪೊಲೀಸರು ಮದುವೆಗಳ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಮುಂದಾದರು” ಎಂದು ರಾಜ್‌ಕೋಟ್ ನಗರದ ಎಸಿಪಿ ರಾಧಿಕಾ ಭರೈ ಹೇಳಿದ್ದಾರೆ. “ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಲಾಗುವುದು” ಎಂದು ಅವರು ಇದೇ ವೇಳೆ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೈಸೂರು | ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆ : ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್

ಮೈಸೂರು | ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆ : ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...