Homeಮುಖಪುಟಜಾತ್ಯತೀತ ಸಂವಿಧಾನದಡಿ 'ಹಿಂದೂ ರಾಷ್ಟ್ರ' ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ : ಹಿರಿಯ ವಕೀಲೆ ಇಂದಿರಾ ಜೈಸಿಂಗ್

ಜಾತ್ಯತೀತ ಸಂವಿಧಾನದಡಿ ‘ಹಿಂದೂ ರಾಷ್ಟ್ರ’ ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ : ಹಿರಿಯ ವಕೀಲೆ ಇಂದಿರಾ ಜೈಸಿಂಗ್

- Advertisement -
- Advertisement -

ಸಂವಿಧಾನವನ್ನು ಎತ್ತಿ ಹಿಡಿಯಬೇಕಾದ ಜವಾಬ್ದಾರಿಯುತ ವ್ಯಕ್ತಿಗಳಿಂದಲೇ ಸಂವಿಧಾನಕ್ಕೆ ಅಪಾಯ ಎದುರಾಗಿದೆ ಎಂದು ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಶುಕ್ರವಾರ (ಫೆ.21) ಹೇಳಿದ್ದಾರೆ.

ನ್ಯಾಯಮೂರ್ತಿ ಸುನಂದಾ ಭಂಡಾರೆ ಪ್ರತಿಷ್ಠಾನ ನವದೆಹಲಿಯಲ್ಲಿ ಹಮ್ಮಿಕೊಂಡಿದ್ದ ಸುನಂದಾ ಭಂಡಾರೆ ಸ್ಮಾರಕ 29ನೇ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ.

“ಭಾರತದ ಸಂವಿಧಾನವನ್ನು ಎತ್ತಿ ಹಿಡಿಯಬೇಕಾದ ಜವಾಬ್ದಾರಿಯುತ ವ್ಯಕ್ತಿಗಳು ಅದನ್ನು ತಿರಸ್ಕರಿಸುವುದನ್ನು ನಾವು ನೋಡುತ್ತಿದ್ದೇವೆ. ಇದನ್ನು ಔಪಚಾರಿಕ ಮತ್ತು ಅನೌಪಚಾರಿಕವಾಗಿ ಹಲವು ವಿಧಗಳಲ್ಲಿ ಮಾಡಲಾಗುತ್ತಿದೆ. ಔಪಚಾರಿಕ ವಿಧಕ್ಕೆ ಪೌರತ್ವ ಕಾಯ್ದೆಯ ತಿದ್ದುಪಡಿ ಒಂದು ಉದಾಹರಣೆ. ಈ ಕಾಯ್ದೆ ಕೆಲವು ಧಾರ್ಮಿಕ ಸಮುದಾಯಗಳಿಗೆ ಮಾತ್ರ ತ್ವರಿತ ಪೌರತ್ವವನ್ನು ನೀಡುತ್ತದೆ” ಎಂದು ಇಂದಿರಾ ಜೈಸಿಂಗ್ ಹೇಳಿದ್ದಾರೆ.

“ಜಾತ್ಯತೀತ ಸಂವಿಧಾನದ ಅಡಿಯಲ್ಲಿ ಹಿಂದೂ ರಾಷ್ಟ್ರ ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ. ಬಹುಸಂಖ್ಯಾತರ ಸಿದ್ಧಾಂತಕ್ಕೆ ಅನುಗುಣವಾಗಿ ಕಾಯ್ದೆಗಳನ್ನು ಮರು ವ್ಯಾಖ್ಯಾನಿಸುವುದು ಭಾರತದ ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ವ್ಯವಸ್ಥೆಗೆ ಅಪಾಯಕಾರಿ. ಧರ್ಮ, ಶ್ರದ್ಧೆಗಳು ಕಾನೂನು ವ್ಯವಸ್ಥೆಯ ಆಧಾರವಾಗಲು ಸಾಧ್ಯವಿಲ್ಲ. ಭಾರತಕ್ಕೆ ಭದ್ರತೆ ಮತ್ತು ಸಮಗ್ರತೆಯನ್ನು ಕಲ್ಪಿಸುವ ಏಕೈಕ ಖಾತರಿ ಜಾತ್ಯತೀತತೆ ಆಗಿರುವುದರಿಂದ ಅದನ್ನು ಅಳವಡಿಸಿಕೊಳ್ಳಲಾಗಿದೆ ಎಂಬುದು ನನ್ನ ಅಭಿಪ್ರಾಯ” ಎಂದಿದ್ದಾರೆ.

ಮೂರು ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್), ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌) ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮವನ್ನು (ಬಿಎಸ್‌ಎ) ಟೀಕಿಸಿದ ಇಂದಿರಾ ಜೈಸಿಂಗ್, “ವೈವಾಹಿಕ ಅತ್ಯಾಚಾರದಂತಹ ವಿಷಯಗಳನ್ನು ‘ವಸಾಹತುಶಾಹಿಯಿಂದ ಮುಕ್ತಗೊಳಿಸುವಲ್ಲಿ’ ಹೊಸ ಕಾನೂನುಗಳು ವಿಫಲವಾಗಿವೆ” ಎಂದು ಹೇಳಿದ್ದಾರೆ. ಅಲ್ಪಸಂಖ್ಯಾತ ಸಮುದಾಯಗಳನ್ನು ವಿಶೇಷವಾಗಿ ಗುರಿಯಾಗಿಟ್ಟುಕೊಂಡು ದೇಶದಾದ್ಯಂತ ಜಾರಿಗೆ ತರಲಾದ ಮತಾಂತರ ವಿರೋಧಿ ಕಾನೂನುಗಳ ಬಗ್ಗೆಯೂ ಹಿರಿಯ ವಕೀಲೆ ಕಳವಳ ವ್ಯಕ್ತಪಡಿಸಿದ್ದಾರೆ.

ಭಾರತೀಯ ನ್ಯಾಯಾಲಯಗಳಲ್ಲಿ ಇತ್ತೀಚೆಗೆ ಕಾಣುತ್ತಿರುವ ನ್ಯಾಯಯುತತೆ ಮತ್ತು ನಿಷ್ಪಕ್ಷಪಾತದ ಕೊರತೆಯ ಬಗ್ಗೆ ಗಮನಸೆಳೆದ ಇಂದಿರಾ ಜೈಸಿಂಗ್, “ಅಲಹಾಬಾದ್ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶ ಶೇಖರ್ ಯಾದವ್ ಮಾಡಿದ ದ್ವೇಷ ಭಾಷಣ, ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆ ಗರ್ಭಪಾತಕ್ಕೆ ಅನುಮತಿ ಕೋರಿದಾಗ, “ನಿನ್ನ ಅಜ್ಜಿ ನಿನ್ನ ವಯಸ್ಸಿನಲ್ಲಿ ಹೇಗೆ ಹೆರಿಗೆ ಮಾಡಿಸುತ್ತಿದ್ದರು ಎಂದು ಕೇಳಿ ಬಾ” ಎಂಬುವುದಾಗಿ ಗುಜರಾತ್ ಹೈಕೋರ್ಟ್‌ ನ್ಯಾಯಾಧೀಶರೊಬ್ಬರು ಹೇಳಿರುವುದು ಇತ್ಯಾದಿ ಸೇರಿವೆ” ಎಂದಿದ್ದಾರೆ.

ಮುಂದುವರಿದು, “ನ್ಯಾಯಾಧೀಶರು ತಮ್ಮ ನಿರ್ಧಾರಗಳನ್ನು ತೆಗೆದುಕೊಳ್ಳಲು ದೈವಿಕ ಮಾರ್ಗದರ್ಶನವನ್ನು ಹುಡುಕುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಇದು ಸಂವಿಧಾನ ವಿರೋಧಿಯಾಗಿದೆ. ನಾನು ಭಾರತದ ಸಂವಿಧಾನವನ್ನು ದೃಢೀಕರಿಸಲು ಇಲ್ಲಿ ನಿಂತಿದ್ದೇನೆ ಎಂದು ಹೇಳುವ ಮೂಲಕ ಮಾತು ಮುಗಿಸಲು ಬಯಸುತ್ತೇನೆ” ಎಂದು ಇಂದಿರಾ ಜೈಸಿಂಗ್ ಭಾಷಣ ಕೊನೆಗೊಳಿಸಿದ್ದಾರೆ.

‘ಭಾರತದ ಆಧುನಿಕ ಸಾಂವಿಧಾನಿಕತೆ’ ಎಂಬ ಉಪನ್ಯಾಸದ ವಿಷಯವನ್ನು ‘ಅತ್ಯಂತ ಮಹತ್ವದ್ದು’ ಎಂದು ಕರೆದ ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ, “ಸಂವಿಧಾನವನ್ನು ಹೊಂದಿರುವುದು ಮತ್ತು ಸಾಂವಿಧಾನಿಕತೆಯನ್ನು ಆಚರಿಸುವುದರ ನಡುವೆ ವ್ಯತ್ಯಾಸವನ್ನು ಕಂಡುಹಿಡಿಯುವ ಅವಶ್ಯಕತೆಯಿದೆ” ಎಂದು ಹೇಳಿದ್ದಾರೆ.

ಕಾನೂನಿನ ಆಳ್ವಿಕೆಯ ಮಹತ್ವವನ್ನು ಒತ್ತಿ ಹೇಳಿದ ನ್ಯಾಯಮೂರ್ತಿ ಉಪಾಧ್ಯಾಯ, “ಸರ್ವಾಧಿಕಾರಿ ಆಡಳಿತಗಳು ಕೂಡ ಸಂವಿಧಾನವನ್ನು ಹೊಂದಿವೆ. ಆದರೆ, ಅವುಗಳಿಗೆ ಸಾಂವಿಧಾನಿಕತೆಯ ಕೊರತೆಯಿದೆ. ನನ್ನ ತಿಳುವಳಿಕೆಯಲ್ಲಿ, ಈ ಎರಡನ್ನೂ ಪ್ರತ್ಯೇಕಿಸುವುದು ಕಾನೂನಿನ ನಿಯಮ. ಸರ್ವಾಧಿಕಾರಿ ಆಡಳಿತಗಳು ಸಂವಿಧಾನವನ್ನು ಹೊಂದಿರಬಹುದು, ಆದರೆ, ಸಾಂವಿಧಾನಿಕತೆಯಿಲ್ಲ. ಜರ್ಮನಿಯಲ್ಲಿ ಮೊದಲ ಮಹಾಯುದ್ಧದ ನಂತರ ಹಿಟ್ಲರ್ ಮುನ್ನಲೆಗೆ ಬಂದಿರುವುದು ಇದಕ್ಕೆ ಅತ್ಯುತ್ತಮ ಉದಾಹರಣೆ” ಎಂದಿದ್ದಾರೆ.

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ವಿಭು ಭಕ್ರು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

‘ಎಲ್ಲಾ ಮುಸ್ಲಿಮರು ಭಯೋತ್ಪಾದಕರು’ ಎಂದ ಪ್ರಕರಣ : ಬಿಜೆಪಿ ನಾಯಕ ಪಿ.ಸಿ ಜಾರ್ಜ್‌ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...