Homeಮುಖಪುಟಜಾತ್ಯತೀತ ಸಂವಿಧಾನದಡಿ 'ಹಿಂದೂ ರಾಷ್ಟ್ರ' ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ : ಹಿರಿಯ ವಕೀಲೆ ಇಂದಿರಾ ಜೈಸಿಂಗ್

ಜಾತ್ಯತೀತ ಸಂವಿಧಾನದಡಿ ‘ಹಿಂದೂ ರಾಷ್ಟ್ರ’ ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ : ಹಿರಿಯ ವಕೀಲೆ ಇಂದಿರಾ ಜೈಸಿಂಗ್

- Advertisement -
- Advertisement -

ಸಂವಿಧಾನವನ್ನು ಎತ್ತಿ ಹಿಡಿಯಬೇಕಾದ ಜವಾಬ್ದಾರಿಯುತ ವ್ಯಕ್ತಿಗಳಿಂದಲೇ ಸಂವಿಧಾನಕ್ಕೆ ಅಪಾಯ ಎದುರಾಗಿದೆ ಎಂದು ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಶುಕ್ರವಾರ (ಫೆ.21) ಹೇಳಿದ್ದಾರೆ.

ನ್ಯಾಯಮೂರ್ತಿ ಸುನಂದಾ ಭಂಡಾರೆ ಪ್ರತಿಷ್ಠಾನ ನವದೆಹಲಿಯಲ್ಲಿ ಹಮ್ಮಿಕೊಂಡಿದ್ದ ಸುನಂದಾ ಭಂಡಾರೆ ಸ್ಮಾರಕ 29ನೇ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ.

“ಭಾರತದ ಸಂವಿಧಾನವನ್ನು ಎತ್ತಿ ಹಿಡಿಯಬೇಕಾದ ಜವಾಬ್ದಾರಿಯುತ ವ್ಯಕ್ತಿಗಳು ಅದನ್ನು ತಿರಸ್ಕರಿಸುವುದನ್ನು ನಾವು ನೋಡುತ್ತಿದ್ದೇವೆ. ಇದನ್ನು ಔಪಚಾರಿಕ ಮತ್ತು ಅನೌಪಚಾರಿಕವಾಗಿ ಹಲವು ವಿಧಗಳಲ್ಲಿ ಮಾಡಲಾಗುತ್ತಿದೆ. ಔಪಚಾರಿಕ ವಿಧಕ್ಕೆ ಪೌರತ್ವ ಕಾಯ್ದೆಯ ತಿದ್ದುಪಡಿ ಒಂದು ಉದಾಹರಣೆ. ಈ ಕಾಯ್ದೆ ಕೆಲವು ಧಾರ್ಮಿಕ ಸಮುದಾಯಗಳಿಗೆ ಮಾತ್ರ ತ್ವರಿತ ಪೌರತ್ವವನ್ನು ನೀಡುತ್ತದೆ” ಎಂದು ಇಂದಿರಾ ಜೈಸಿಂಗ್ ಹೇಳಿದ್ದಾರೆ.

“ಜಾತ್ಯತೀತ ಸಂವಿಧಾನದ ಅಡಿಯಲ್ಲಿ ಹಿಂದೂ ರಾಷ್ಟ್ರ ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ. ಬಹುಸಂಖ್ಯಾತರ ಸಿದ್ಧಾಂತಕ್ಕೆ ಅನುಗುಣವಾಗಿ ಕಾಯ್ದೆಗಳನ್ನು ಮರು ವ್ಯಾಖ್ಯಾನಿಸುವುದು ಭಾರತದ ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ವ್ಯವಸ್ಥೆಗೆ ಅಪಾಯಕಾರಿ. ಧರ್ಮ, ಶ್ರದ್ಧೆಗಳು ಕಾನೂನು ವ್ಯವಸ್ಥೆಯ ಆಧಾರವಾಗಲು ಸಾಧ್ಯವಿಲ್ಲ. ಭಾರತಕ್ಕೆ ಭದ್ರತೆ ಮತ್ತು ಸಮಗ್ರತೆಯನ್ನು ಕಲ್ಪಿಸುವ ಏಕೈಕ ಖಾತರಿ ಜಾತ್ಯತೀತತೆ ಆಗಿರುವುದರಿಂದ ಅದನ್ನು ಅಳವಡಿಸಿಕೊಳ್ಳಲಾಗಿದೆ ಎಂಬುದು ನನ್ನ ಅಭಿಪ್ರಾಯ” ಎಂದಿದ್ದಾರೆ.

ಮೂರು ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್), ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌) ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮವನ್ನು (ಬಿಎಸ್‌ಎ) ಟೀಕಿಸಿದ ಇಂದಿರಾ ಜೈಸಿಂಗ್, “ವೈವಾಹಿಕ ಅತ್ಯಾಚಾರದಂತಹ ವಿಷಯಗಳನ್ನು ‘ವಸಾಹತುಶಾಹಿಯಿಂದ ಮುಕ್ತಗೊಳಿಸುವಲ್ಲಿ’ ಹೊಸ ಕಾನೂನುಗಳು ವಿಫಲವಾಗಿವೆ” ಎಂದು ಹೇಳಿದ್ದಾರೆ. ಅಲ್ಪಸಂಖ್ಯಾತ ಸಮುದಾಯಗಳನ್ನು ವಿಶೇಷವಾಗಿ ಗುರಿಯಾಗಿಟ್ಟುಕೊಂಡು ದೇಶದಾದ್ಯಂತ ಜಾರಿಗೆ ತರಲಾದ ಮತಾಂತರ ವಿರೋಧಿ ಕಾನೂನುಗಳ ಬಗ್ಗೆಯೂ ಹಿರಿಯ ವಕೀಲೆ ಕಳವಳ ವ್ಯಕ್ತಪಡಿಸಿದ್ದಾರೆ.

ಭಾರತೀಯ ನ್ಯಾಯಾಲಯಗಳಲ್ಲಿ ಇತ್ತೀಚೆಗೆ ಕಾಣುತ್ತಿರುವ ನ್ಯಾಯಯುತತೆ ಮತ್ತು ನಿಷ್ಪಕ್ಷಪಾತದ ಕೊರತೆಯ ಬಗ್ಗೆ ಗಮನಸೆಳೆದ ಇಂದಿರಾ ಜೈಸಿಂಗ್, “ಅಲಹಾಬಾದ್ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶ ಶೇಖರ್ ಯಾದವ್ ಮಾಡಿದ ದ್ವೇಷ ಭಾಷಣ, ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆ ಗರ್ಭಪಾತಕ್ಕೆ ಅನುಮತಿ ಕೋರಿದಾಗ, “ನಿನ್ನ ಅಜ್ಜಿ ನಿನ್ನ ವಯಸ್ಸಿನಲ್ಲಿ ಹೇಗೆ ಹೆರಿಗೆ ಮಾಡಿಸುತ್ತಿದ್ದರು ಎಂದು ಕೇಳಿ ಬಾ” ಎಂಬುವುದಾಗಿ ಗುಜರಾತ್ ಹೈಕೋರ್ಟ್‌ ನ್ಯಾಯಾಧೀಶರೊಬ್ಬರು ಹೇಳಿರುವುದು ಇತ್ಯಾದಿ ಸೇರಿವೆ” ಎಂದಿದ್ದಾರೆ.

ಮುಂದುವರಿದು, “ನ್ಯಾಯಾಧೀಶರು ತಮ್ಮ ನಿರ್ಧಾರಗಳನ್ನು ತೆಗೆದುಕೊಳ್ಳಲು ದೈವಿಕ ಮಾರ್ಗದರ್ಶನವನ್ನು ಹುಡುಕುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಇದು ಸಂವಿಧಾನ ವಿರೋಧಿಯಾಗಿದೆ. ನಾನು ಭಾರತದ ಸಂವಿಧಾನವನ್ನು ದೃಢೀಕರಿಸಲು ಇಲ್ಲಿ ನಿಂತಿದ್ದೇನೆ ಎಂದು ಹೇಳುವ ಮೂಲಕ ಮಾತು ಮುಗಿಸಲು ಬಯಸುತ್ತೇನೆ” ಎಂದು ಇಂದಿರಾ ಜೈಸಿಂಗ್ ಭಾಷಣ ಕೊನೆಗೊಳಿಸಿದ್ದಾರೆ.

‘ಭಾರತದ ಆಧುನಿಕ ಸಾಂವಿಧಾನಿಕತೆ’ ಎಂಬ ಉಪನ್ಯಾಸದ ವಿಷಯವನ್ನು ‘ಅತ್ಯಂತ ಮಹತ್ವದ್ದು’ ಎಂದು ಕರೆದ ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ, “ಸಂವಿಧಾನವನ್ನು ಹೊಂದಿರುವುದು ಮತ್ತು ಸಾಂವಿಧಾನಿಕತೆಯನ್ನು ಆಚರಿಸುವುದರ ನಡುವೆ ವ್ಯತ್ಯಾಸವನ್ನು ಕಂಡುಹಿಡಿಯುವ ಅವಶ್ಯಕತೆಯಿದೆ” ಎಂದು ಹೇಳಿದ್ದಾರೆ.

ಕಾನೂನಿನ ಆಳ್ವಿಕೆಯ ಮಹತ್ವವನ್ನು ಒತ್ತಿ ಹೇಳಿದ ನ್ಯಾಯಮೂರ್ತಿ ಉಪಾಧ್ಯಾಯ, “ಸರ್ವಾಧಿಕಾರಿ ಆಡಳಿತಗಳು ಕೂಡ ಸಂವಿಧಾನವನ್ನು ಹೊಂದಿವೆ. ಆದರೆ, ಅವುಗಳಿಗೆ ಸಾಂವಿಧಾನಿಕತೆಯ ಕೊರತೆಯಿದೆ. ನನ್ನ ತಿಳುವಳಿಕೆಯಲ್ಲಿ, ಈ ಎರಡನ್ನೂ ಪ್ರತ್ಯೇಕಿಸುವುದು ಕಾನೂನಿನ ನಿಯಮ. ಸರ್ವಾಧಿಕಾರಿ ಆಡಳಿತಗಳು ಸಂವಿಧಾನವನ್ನು ಹೊಂದಿರಬಹುದು, ಆದರೆ, ಸಾಂವಿಧಾನಿಕತೆಯಿಲ್ಲ. ಜರ್ಮನಿಯಲ್ಲಿ ಮೊದಲ ಮಹಾಯುದ್ಧದ ನಂತರ ಹಿಟ್ಲರ್ ಮುನ್ನಲೆಗೆ ಬಂದಿರುವುದು ಇದಕ್ಕೆ ಅತ್ಯುತ್ತಮ ಉದಾಹರಣೆ” ಎಂದಿದ್ದಾರೆ.

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ವಿಭು ಭಕ್ರು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

‘ಎಲ್ಲಾ ಮುಸ್ಲಿಮರು ಭಯೋತ್ಪಾದಕರು’ ಎಂದ ಪ್ರಕರಣ : ಬಿಜೆಪಿ ನಾಯಕ ಪಿ.ಸಿ ಜಾರ್ಜ್‌ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...