Homeಮುಖಪುಟಕುಂಭಮೇಳ | ಗಂಗಾ ತೀರದಲ್ಲಿ ಮಲವಿಸರ್ಜನೆ; ಉತ್ತರ ಪ್ರದೇಶ ಸರ್ಕಾರ ಪ್ರತಿಕ್ರಿಯೆ ಕೇಳಿದ ಎನ್‌ಜಿಟಿ

ಕುಂಭಮೇಳ | ಗಂಗಾ ತೀರದಲ್ಲಿ ಮಲವಿಸರ್ಜನೆ; ಉತ್ತರ ಪ್ರದೇಶ ಸರ್ಕಾರ ಪ್ರತಿಕ್ರಿಯೆ ಕೇಳಿದ ಎನ್‌ಜಿಟಿ

- Advertisement -
- Advertisement -

ಉತ್ತರ ಪ್ರದೇಶದ ಪ್ರಯಾಗರಜ್‌ನಲ್ಲಿ ನಡೆಯುತ್ತಿರುವ 2025ರ ಮಹಾ ಕುಂಭಮೇಳದಲ್ಲಿ ಸಮರ್ಪಕ ನೈರ್ಮಲ್ಯ ಸೌಲಭ್ಯಗಳು ಒದಗಿಸದ ಕಾರಣಕ್ಕಾಗಿ ಗಂಗಾ ನದಿಯ ದಡದಲ್ಲಿ ಬಯಲು ಮಲವಿಸರ್ಜನೆ ಮಾಡಲಾಗಿದೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಉತ್ತರ ಪ್ರದೇಶ ಸರ್ಕಾರ, ಪ್ರಯಾಗ್‌ರಾಜ್ ಮೇಳ ಪ್ರಾಧಿಕಾರ ಮತ್ತು ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿ (UP PCB)ಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT)ಯು ನೋಟಿಸ್ ಜಾರಿ ಮಾಡಿದೆ. ಕುಂಭಮೇಳ

ನ್ಯಾಯಮಂಡಳಿಯ ಅಧ್ಯಕ್ಷ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಮತ್ತು ತಜ್ಞ ಸದಸ್ಯ ಡಾ. ಎ. ಸೆಂಥಿಲ್ ವೆಲ್ ಅವರ ಪೀಠವು ಅಧಿಕಾರಿಗಳಿಂದ ಪ್ರತಿಕ್ರಿಯೆಗಳನ್ನು ಕೋರಿದ್ದು, ಮುಂದಿನ ವಿಚಾರಣೆಗೆ ಒಂದು ವಾರ ಮೊದಲು ತಮ್ಮ ಉತ್ತರಗಳನ್ನು ಸಲ್ಲಿಸುವಂತೆ ನಿರ್ದೇಶಿಸಿದೆ. ಪ್ರಕರಣದ ವಿಚಾರಣೆ ಫೆಬ್ರವರಿ 24 ರಂದು ನಡೆಯಲಿದೆ. ಕುಂಭಮೇಳ

“ಸಾಕಷ್ಟು ಸೌಲಭ್ಯಗಳ ಕೊರತೆಯಿಂದಾಗಿ ಲಕ್ಷಾಂತರ ಸಾಮಾನ್ಯ ಜನರು ಮತ್ತು ಕುಟುಂಬಗಳು ಗಂಗಾ ನದಿಯ ದಡದಲ್ಲಿ ಬಯಲು ಮಲವಿಸರ್ಜನೆ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಮೂಲ ಅರ್ಜಿಯಲ್ಲಿ ಅರ್ಜಿದಾರರು ವೀಡಿಯೊಗಳನ್ನು ಹೊಂದಿರುವ ಪೆನ್ ಡ್ರೈವ್ ಅನ್ನು ಲಗತ್ತಿಸಿದ್ದಾರೆ” ಎಂದು ನ್ಯಾಯಮಂಡಳಿಯು ಹೇಳಿದೆ.

ಕುಂಭಮೇಳ ಸ್ಥಳದಲ್ಲಿ ನೈರ್ಮಲ್ಯ ಸೌಲಭ್ಯಗಳ ಕಳಪೆ ನಿಯೋಜನೆಯಿಂದಾಗಿ ದೊಡ್ಡ ಪ್ರಮಾಣದ ಮಾಲಿನ್ಯವನ್ನು ತಡೆಗಟ್ಟಲು ರಾಜ್ಯ ವಿಫಲವಾಗಿದೆ ಎಂಬ ಕಾರಣಕ್ಕೆ ಉತ್ತರ ಪ್ರದೇಶ ಸರ್ಕಾರದಿಂದ ₹10 ಕೋಟಿ ಪರಿಸರ ಪರಿಹಾರವನ್ನು ಕೋರಿ ನಿಪುಣ್ ಭೂಷಣ್ ಎಂಬವರು ಅರ್ಜಿಯನ್ನು ಸಲ್ಲಿಸಿದ್ದಾರೆ.

ಪರಿಹಾರಕ್ಕಾಗಿ ಸಲ್ಲಿಸಿದ್ದ ತನ್ನ ಬೇಡಿಕೆಯಲ್ಲಿ ಅರ್ಜಿದಾರ ಭೂಷಣ್ ಅವರು, ಮಾಲಿನ್ಯಕಾರಕ ಪಾವತಿ ತತ್ವವನ್ನು ಪ್ರಸ್ತಾಪಿಸಿದ್ದಾರೆ. ಈ ತತ್ವವೂ ಪರಿಸರ ಕಾನೂನಿನಲ್ಲಿ ವ್ಯಾಪಕವಾಗಿ ಗುರುತಿಸಲ್ಪಟ್ಟ ತತ್ವವಾಗಿದ್ದು, ಮಾಲಿನ್ಯದಿಂದ ಪರಿಸರಕ್ಕೆ ಉಂಟಾಗುವ ಹಾನಿಯ ವೆಚ್ಚವನ್ನು ಭರಿಸಲು ಮಾಲಿನ್ಯಕಾರಕ ಪಾವತಿಯನ್ನು ಕಡ್ಡಾಯ ಮಾಡುತ್ತದೆ.

ಸಂವಿಧಾನದ 48A ವಿಧಿಯ ಅಡಿಯಲ್ಲಿ ಕರ್ತವ್ಯ ಲೋಪವನ್ನು ಕೂಡಾ ಅರ್ಜಿಯು ಆರೋಪಿಸಿದ್ದು, ಈ ವಿಧಿಯು ಪರಿಸರವನ್ನು ರಕ್ಷಿಸಲು ಮತ್ತು ಸುಧಾರಿಸಲು ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳುತ್ತದೆ. ಸಾಮೂಹಿಕ ಬಯಲು ಮಲವಿಸರ್ಜನೆಗೆ ಅವಕಾಶ ನೀಡುವುದು ಮತ್ತು ಮಾಲಿನ್ಯವನ್ನು ತಡೆಗಟ್ಟಲು ವಿಫಲವಾಗುವುದು ಸಾಂವಿಧಾನಿಕ ಆದೇಶವನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿಯನ್ನು ದೂರಲಾಗಿದೆ.

ಜೈವಿಕ ಶೌಚಾಲಯಗಳನ್ನು ಸ್ಥಾಪಿಸುವ ಸರ್ಕಾರಿ ಭರವಸೆಗಳ ಹೊರತಾಗಿಯೂ, ಸಾವಿರಾರು ಯಾತ್ರಿಕರು ಸ್ವಚ್ಛ ಅಥವಾ ಕ್ರಿಯಾತ್ಮಕ ಸೌಲಭ್ಯಗಳ ಕೊರತೆಯಿಂದಾಗಿ ಬಯಲಿನಲ್ಲಿ ಮಲವಿಸರ್ಜನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ನಿಯೋಜಿಸಲಾದ 1.5 ಲಕ್ಷ ಜೈವಿಕ ಶೌಚಾಲಯಗಳು ಕಾರ್ಯನಿರ್ವಹಿಸುತ್ತಿದ್ದರೂ ಸಹ, ಜನರ ಬೃಹತ್ ಗುಂಪಿಗೆ ಅವು ಸಾಕಾಗುವುದಿಲ್ಲ ಎಂದು ಅವರು ವಾದಿಸಿದಿದ್ದಾರೆ.

ಕುಂಭಮೇಳದ ಸಂದರ್ಶಕರು ದಾಖಲಿಸಿದ ವೀಡಿಯೊಗಳಲ್ಲಿ ನದಿ ದಡದಲ್ಲಿ ಮಾನವ ತ್ಯಾಜ್ಯ ಸಂಗ್ರಹವಾಗುವುದನ್ನು ತೋರಿಸುತ್ತವೆ. ಇದು ಸಾರ್ವಜನಿಕ ಆರೋಗ್ಯ ಮತ್ತು ಪರಿಸರ ಸುರಕ್ಷತೆಯ ಬಗ್ಗೆ ಗಂಭೀರ ಆತಂಕವನ್ನು ಹುಟ್ಟುಹಾಕುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಅಷ್ಟೆ ಅಲ್ಲದೆ, ಅರ್ಜಿಯು ನವೆಂಬರ್ 2024 ರ ನೀರಿನ ಗುಣಮಟ್ಟದ ಪರೀಕ್ಷೆಯನ್ನು ಸಹ ಉಲ್ಲೇಖಿಸಿದೆ. ಈ ಗುಣಮಟ್ಟದ ವರದಿಯಲ್ಲಿ, ನದಿ ನೀರಿನಲ್ಲಿ ಮಲದಲ್ಲಿ ಕಂಡುಬರುವ ಬ್ಯಾಕ್ಟೀರಿಯಾ ಇರುವುದನ್ನು ಸೂಚಿಸಲಾಗಿತ್ತು. ಅಂತಹ ಮಾಲಿನ್ಯಕಾರಕವು ಕಾಲರಾ, ಹೆಪಟೈಟಿಸ್ ಎ ಮತ್ತು ಪೋಲಿಯೊದಂತಹ ಕಾಯಿಲೆಗಳಿಗೆ ಕಾರಣವಾಗಲಿದೆ. ಹಾಗಾಗಿ ಇದು ಗಂಗಾದಲ್ಲಿ ಪವಿತ್ರ ಸ್ನಾನ ಮಾಡುವ ಲಕ್ಷಾಂತರ ಭಕ್ತರಿಗೆ ಅಪಾಯವನ್ನುಂಟುಮಾಡುತ್ತದೆ ಎಂದು ವಾದಿಸಲಾಗಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಜಸ್ಥಾನ | ಮದುವೆಯ ದಿನವೆ ಹಣದೊಂದಿಗೆ ನಾಪತ್ತೆಯಾದ ಸಾಮೂಹಿಕ ವಿವಾಹದ ಆಯೋಜಕರು!

ರಾಜಸ್ಥಾನ | ಮದುವೆಯ ದಿನವೆ ಹಣದೊಂದಿಗೆ ನಾಪತ್ತೆಯಾದ ಸಾಮೂಹಿಕ ವಿವಾಹದ ಆಯೋಜಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಭರವಸೆಯನ್ನು ಒಳಮೀಸಲಾತಿ ಹೋರಾಟಗಾರರು ಹೊಂದಿದ್ದರು.  ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಎರಡು ವರ್ಷಗಳಿಂದ ನಿರಂತರವಾಗಿ...

ನೇಪಾಳದ ನೂತನ ಪ್ರಧಾನಿಯಾಗಿ 35ವರ್ಷದ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ

ಕಠ್ಮಂಡು: 'ಬಾಲೆನ್' ಎಂದು ಪ್ರೀತಿಯಿಂದ ಕರೆಯಲ್ಪಡುವ ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಹಿಮಾಲಯನ್ ರಾಷ್ಟ್ರದಲ್ಲಿ ಉನ್ನತ ಕಾರ್ಯಕಾರಿ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗಿ ಬಾಲೆನ್...

ಶಿವನ ಅವತಾರ ಎಂದು ಹೇಳಿಕೊಳ್ಳುತ್ತಿದ್ದ ಋುಷಿಕೇಶ್ ವೈದ್ಯ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ: ಎಫ್‌ಐಆರ್ ನಂತರ ದೇವಮಾನವ ಪರಾರಿ

ವಸಾಯಿ: ಶಿವನ ಅವತಾರ ಎಂದು ಹೇಳಿಕೊಂಡು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಋಷಿಕೇಶ್ ವೈದ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ವಸಾಯಿ-ವಿರಾರ್ ಪ್ರದೇಶ...

ಜ್ಯೋತಿಷಿ ಅಶೋಕ್ ಖರತ್ ಲೈಂಗಿಕ ದೌರ್ಜನ್ಯ; ಸಂತ್ರಸ್ತರ ವಿಡಿಯೋ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್: ದೇವೇಂದ್ರ ಫಡ್ನವೀಸ್

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರಿಂದ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯರ ಅಶ್ಲೀಲ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ...

ಕ್ಷಿಪಣಿಗಳ ಮೇಲೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಧನ್ಯವಾದ ಸಂದೇಶ ಬರೆದ ಇರಾನ್

ಯುನೈಟೆಡ್ ಸ್ಟೇಟ್ಸ್-ಇಸ್ರೇಲ್ ವಿರುದ್ಧದ ಯುದ್ಧದ ಮಧ್ಯೆ ಇರಾನ್‌ನೊಂದಿಗೆ ಒಗ್ಗಟ್ಟನ್ನು ತೋರಿಸಿದ ರಾಷ್ಟ್ರಗಳಿಗೆ ಇರಾನ್‌ ತನ್ನ ಕ್ಷಿಪಣಿಗಳು ಕೃತಜ್ಞತಾ ಸಂದೇಶ ಬರೆದಿದೆ. ಕ್ಷಿಪಣಿಗಳ ಮೇಲೆ ಬರೆಯಲಾದ ಸಂದೇಶಗಲ್ಲಿ "ಭಾರತದ ಜನರಿಗೆ ಧನ್ಯವಾದಗಳು" ಎಂದು ಕಂಡುಬಂದಿದೆ. ಜೊತೆಗೆ,...

ಬಿಜೆಪಿಗೆ ಉಳಿದೆಲ್ಲಾ ಪಕ್ಷಗಳಿಗಿಂತ 10 ಪಟ್ಟು ಹೆಚ್ಚು ದೇಣಿಗೆ: ವರದಿ

2024–25ರ ಆರ್ಥಿಕ ವರ್ಷದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ( ಬಿಜೆಪಿ ) ಇತರ ಎಲ್ಲಾ ರಾಷ್ಟ್ರೀಯ ಪಕ್ಷಗಳು ಒಟ್ಟು ಸೇರಿಸಿ ಪಡೆದ ದೇಣಿಗೆಗಿಂತ ಸುಮಾರು ಹತ್ತು ಪಟ್ಟು ಹೆಚ್ಚು ದೇಣಿಗೆ ಪಡೆದಿದೆ...

ವಿಶಾಖಪಟ್ಟಣ| ಕುಡಿದ ಮತ್ತಿನಲ್ಲಿ ಎಪಿಎಸ್‌ಆರ್‌ಟಿಸಿ ಬಸ್‌ ಅಪಹರಿಸಿದ ವ್ಯಕ್ತಿ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಎಪಿಎಸ್‌ಆರ್‌ಟಿಸಿ ಬಸ್ಸನ್ನು ಅಪಹರಿಸಿ ಸುಮಾರು ಒಂದು ಕಿಲೋಮೀಟರ್ ಅಜಾಗರೂಕತೆಯಿಂದ ಚಲಾಯಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆಘಾತಕಾರಿ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಪ್ರತ್ಯಕ್ಷ್ಯದರ್ಶಿಗಳ ಪ್ರಕಾರ, ಮಾರ್ಚ್ 26 ರ ಗುರುವಾರ ಬಸ್...

ಕರ್ನಾಟಕ ವಿಧಾನಸಭೆಯಲ್ಲಿ ಐಪಿಎಲ್ ಟಿಕೆಟ್ ವಿವಾದ; ಶಾಸಕರನ್ನು ಟೀಕಿಸಿದ ತೇಜಸ್ವಿ ಸೂರ್ಯ ವಿರುದ್ಧ ಡಿಕೆಶಿ ವಾಗ್ದಾಳಿ

ಶಾಸಕರಿಗೆ ಐಪಿಎಲ್ 2026 ಟಿಕೆಟ್ ಹಂಚಿಕೆ ವಿವಾದದ ನಡುವೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ತೇಜಸ್ವಿ ಸೂರ್ಯ ವಿರುದ್ಧ ಕಿಡಿಕಾರಿದ್ದಾರೆ  ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳಿಗೆ ವಿಐಪಿ ಟಿಕೆಟ್‌ಗಳಿಗೆ...

ವಿಚಾರಣೆಯ ನಂತರವೂ 8 ಲಕ್ಷ ಮತದಾರರ ಹೆಸರು ಅಳಿಸಲಾಗಿದೆ; ಬಂಗಾಳದಲ್ಲಿ ಎನ್.ಆರ್.ಸಿ ಇಲ್ಲ: ಮಮತಾ ಬ್ಯಾನರ್ಜಿ

ಮೊದಲ ಪೂರಕ ಮತದಾರರ ಪಟ್ಟಿ ಪ್ರಕಟವಾದ ನಂತರ ಎಂಟು ಲಕ್ಷ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಇದು ರಾಜ್ಯದಲ್ಲಿ ಚುನಾವಣಾ ಪಾರದರ್ಶಕತೆಯ ಬಗ್ಗೆ ಗಂಭೀರ...

ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ

ಜಾಗತಿಕ ತೈಲ ಬೆಲೆಗಳ ಏರಿಕೆಯ ಪರಿಣಾಮವನ್ನು ತಗ್ಗಿಸುವ ಪ್ರಯತ್ನದಲ್ಲಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 10 ರೂ.ಗಳಷ್ಟು ಕಡಿಮೆ ಮಾಡಿದೆ, ಇದರಿಂದಾಗಿ ಪೆಟ್ರೋಲ್‌ಗೆ 3 ರೂ.ಗಳಷ್ಟು...