Homeಕರ್ನಾಟಕಯುವಜನತೆ ಸಂವಿಧಾನ ರಕ್ಷಿಸಿಕೊಳ್ಳುವ ನಾಯಕರಾಗಬೇಕು: ಮನೋಜ್ ಆಜಾದ್

ಯುವಜನತೆ ಸಂವಿಧಾನ ರಕ್ಷಿಸಿಕೊಳ್ಳುವ ನಾಯಕರಾಗಬೇಕು: ಮನೋಜ್ ಆಜಾದ್

- Advertisement -
- Advertisement -

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತದಿಂದ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುತ್ತೇವೆಂದು ಬಿಜೆಪಿಯ ಹಲವು ನಾಯಕರು ಹೇಳಿದ್ದರು, ಜೊತೆಗೆ ಅವರು ಈಗಲೂ ಅಂತಹದೇ ಕುತಂತ್ರಗಳ್ನು ಮುಂದುವರೆಸಿದ್ದಾರೆ. ಆದುದರಿಂದ ಯುವಜನತೆ ಕೋಮುವಾದಿಗಳಿಂದ ಸಂವಿಧಾನವನ್ನು ರಕ್ಷಿಸಿಕೊಳ್ಳುವ ನಾಯಕರಾಬೇಕಿದೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ನಾಯಕ, ಪತ್ರಕರ್ತ ಮನೋಜ್ ಆಜಾದ್ ಶನಿವಾರ ಕರೆ ನೀಡಿದ್ದಾರೆ. ಯುವಜನತೆ ಸಂವಿಧಾನ

ಬೆಂಗಳೂರು ವಿಶ್ವವಿದ್ಯಾನಿಲಯದ ಕೇಂದ್ರೀಯ ಗ್ರಂಥಾಲಯ ಆವರಣದಲ್ಲಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಮತ್ತು ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ವತಿಯಿಂದ ಚಿಂತಕ ಶಿವಸುಂದರ್ ರಚಿಸಿರುವ ‘ಸಂವಿಧಾನ ಮತ್ತು ಸಂಘಿಗಳ ಸುಳ್ಳು ಅಭಿಯಾನ’ ಕೃತಿ ಓದುವ ಅಭಿಯಾನದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಸಮಾಜದಲ್ಲಿ ಶಾಂತಿ-ಸೌಹಾರ್ಧತೆಯಿಂದ ಜೀವಿಸಲು ಸಾಮಾಜಿಕವಾಗಿ, ಆರ್ಥಿಕವಾಗಿ ಪ್ರಬಲರಾಗಿ ಬದುಕಲು, ಜನರಿಗೆ ಸಾಮಾಜಿಕ ನ್ಯಾಯ ಒದಗಿಸಲು ಸಂವಿಧಾನ ಅತ್ಯವಶ್ಯಕ. ಪ್ರತಿಯೊಂದು ಧರ್ಮವೂ ತಮ್ಮದೇ ಆದ ಧರ್ಮ ಗ್ರಂಥ ಹೊಂದಿದೆ. ಆದರೆ ಅದೆಲ್ಲವನ್ನೂ ಮೀರಿದ ಮತ್ತು ಎಲ್ಲ ಧರ್ಮದವರಿಗೂ ಅನ್ವಯಿಸುವ ಮಹಾಗ್ರಂಥವೇ ಸಂವಿಧಾನ. ಅದನ್ನು ಉಳಿಸಿ ರಕ್ಷಿಸುವುದು ಮತ್ತು ಪಾಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಅವರು ಹೇಳಿದ್ದಾರೆ.

ಅಂಬೇಡ್ಕರ್‌ ಅವರ ನಿಜವಾದ ಅನುಯಾಯಿಗಳು ನಾವೇ ಎಂದು ಹೇಳುತ್ತಿರುವ ಸಂಘಪರಿವಾರದವರು, ಜನರನ್ನು ನಂಬಿಸುವ ಸಲುವಾಗಿ ಹಲವಾರು ಸುಳ್ಳುಗಳನ್ನು ಹೇಳುತ್ತಾ, ಅರ್ಧ ಸತ್ಯಗಳನ್ನು ಹೇಳುತ್ತಾ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಹಿಂದುತ್ವದ ಬಗ್ಗೆ ಅಂಬೇಡ್ಕರ್‌ ಅವರಿಗೆ ಇದ್ದ ನಿಜವಾದ ಅಭಿಪ್ರಾಯಗಳನ್ನು ಮರೆಮಾಚಲು ಸಂವಿಧಾನ ವಿರೋಧಿ ಕುತಂತ್ರಗಳನ್ನು ಮಾಡುತ್ತಿದ್ದಾರೆ. ಯುವಜನತೆ ಅಧ್ಯಯನ, ಸಂಶೋಧನೆಗಳ ಮೂಲಕ ನಿಜ ಏನೆಂದರು ಅರ್ಥ ಮಾಡಿಕೊಳ್ಳಬೇಕು. ಆ ನಿಟ್ಟಿನಲ್ಲಿ ಶಿವಸುಂದರ್ ರಚಿಸಿರುವ ಕೃತಿ ನೆರವಾಗಲಿದೆ ಎಂದು ಮನೋಜ್ ಅಭಿಪ್ರಾಯಪಟ್ಟಿದ್ದಾರೆ.

ಕೆವಿಎಸ್ ಪದಾಧಿಕಾರಿ ಗುರುಬಸವ ಮಾತನಾಡಿ, ಸಂವಿಧಾನದ ಆಶಯವನ್ನು ಅರ್ಥ ಮಾಡಿಕೊಳ್ಳುವುದು ಇದೆಂದಿಗಿಂತಲು ಮಹತ್ವದ್ದಾಗಿದೆ. ನಮ್ಮ ಸಂವಿಧಾನ ಇತರೇ ದೇಶಗಳ ಸಂವಿಧಾನದಂತಲ್ಲ. ಸ್ವಾತಂತ್ರ್ಯ ಪೂರ್ವ, ಸ್ವಾತಂತ್ರದ ಸಂದರ್ಭದಲ್ಲಿ ಹಾಗೂ ನಂತರದ ವಿದ್ಯಮಾನಗಳನ್ನು ಅರ್ಥಮಾಡಿಕೊಳ್ಳಬೇಕೆಂದರೆ ಭಾರತದ ಇತಿಹಾಸವನ್ನು ಮತ್ತು ಅಂಬೇಡ್ಕರ್ ಜೀವನ ಚರಿತ್ರೆಯನ್ನು ಓದಿಕೊಳ್ಳಬೇಕು. ಇಲ್ಲವಾದರೆ ಸಂವಿಧಾನದ ಮಹತ್ವ ತಿಳಿಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಅಭಿಯಾನದಲ್ಲಿ ಸಂಶೋಧನಾ ವಿದ್ಯಾರ್ಥಿ ಒಕ್ಕೂಟದ ಪದಾಧಿಕಾರಿಗಳಾದ ಸುಗುಣಾ, ನಾಗಪ್ಪ, ಗೌತಮ್, ನಾಗರಾಜ, ಅಭಿ, ಶ್ರೀನಿವಾಸ್ ಸೇರಿದಂತೆ ಹಲವು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಜಸ್ಥಾನ | ಮದುವೆಯ ದಿನವೆ ಹಣದೊಂದಿಗೆ ನಾಪತ್ತೆಯಾದ ಸಾಮೂಹಿಕ ವಿವಾಹದ ಆಯೋಜಕರು!

ರಾಜಸ್ಥಾನ | ಮದುವೆಯ ದಿನವೆ ಹಣದೊಂದಿಗೆ ನಾಪತ್ತೆಯಾದ ಸಾಮೂಹಿಕ ವಿವಾಹದ ಆಯೋಜಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...